Homeಮುಖಪುಟಅಸ್ಸಾಂ | ಬಾಲ್ಯವಿವಾಹ ಪ್ರಕರಣದಲ್ಲಿ ಒಂದೇ ದಿನ 416 ಮಂದಿಯ ಬಂಧನ

ಅಸ್ಸಾಂ | ಬಾಲ್ಯವಿವಾಹ ಪ್ರಕರಣದಲ್ಲಿ ಒಂದೇ ದಿನ 416 ಮಂದಿಯ ಬಂಧನ

- Advertisement -
- Advertisement -

ಶನಿವಾರ ರಾತ್ರಿ ರಾಜ್ಯಾದ್ಯಂತ ನಡೆದ ದಾಳಿಯಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳ 416 ಜನರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ. ಒಟ್ಟು 335 ಪ್ರಕರಣಗಳು ದಾಖಲಾಗಿದ್ದು, ಬಂಧಿತರನ್ನು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಸ್ಸಾಂ

“ಈ ಸಾಮಾಜಿಕ ಅನಿಷ್ಟವನ್ನು ಕೊನೆಗೊಳಿಸಲು ನಾವು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತೇವೆ” ಎಂದು ಮುಖ್ಯಮಂತ್ರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಆಪಾದಿತ ಬಾಲ್ಯವಿವಾಹಗಳ ವಿರುದ್ಧ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಪ್ರಾರಂಭಿಸಿದ ಮೂರನೇ ಕ್ರಮ ಇದಾಗಿದೆ. ಅಸ್ಸಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸೆಪ್ಟೆಂಬರ್ 11, 2023 ರಂದು, ಮೊದಲ ಸುತ್ತಿನ ದಾಳಿಯಲ್ಲಿ ಆ ವರ್ಷದ ಫೆಬ್ರವರಿಯಿಂದ 3,907 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರವು ವಿಧಾನಸಭೆಗೆ ತಿಳಿಸಿತ್ತು. ಇವರಲ್ಲಿ 3,319 ಮಂದಿಯನ್ನು ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ರ ಅಡಿಯಲ್ಲಿ ಬಂಧಿಸಲಾಗಿತ್ತು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ 1,000 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿತ್ತು.

ಜನವರಿ 2023 ರಲ್ಲಿ, ಅಸ್ಸಾಂ ಸರ್ಕಾರವು ಬಾಲ್ಯ ವಿವಾಹಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸುತ್ತಿದೆ ಮತ್ತು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಮತ್ತು 14 ರಿಂದ 18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ಬಂಧಿಸುತ್ತೇವೆ ಎಂದು ಶರ್ಮಾ ಘೋಷಿಸಿದ್ದರು.

ಫೆಬ್ರವರಿಯಲ್ಲಿ, 4,004 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದು, ಅಧಿಕಾರಿಗಳ ಮುಖ್ಯ ಗುರಿ ಬಾಲ್ಯ ವಿವಾಹಗಳನ್ನು ಪ್ರೋತ್ಸಾಹಿಸುವ “ಮುಲ್ಲಾಗಳು, ಕಾಜಿಗಳು ಮತ್ತು ಪೂಜಾರಿಗಳು” ಎಂದು ಹೇಳಿದ್ದಾರೆ. ಇದತ ತರುವಾಯ, ಗುವಾಹಟಿ ಹೈಕೋರ್ಟ್ ಪೊಲೀಸರ ಕ್ರಮವು ರಾಜ್ಯದಲ್ಲಿ ವಿನಾಶವನ್ನು ಉಂಟುಮಾಡುತ್ತಿದೆ ಎಂದು ಹೇಳಿದೆ. ಬಾಲ್ಯವಿವಾಹದ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಾಗ ನ್ಯಾಯಾಲಯವು ಈ ಹೇಳಿಕೆ ನೀಡಿದ್ದು, ಪೋಕ್ಸೊ ಕಾಯ್ದೆಯಡಿ ಆರೋಪಗಳನ್ನು ಸಮರ್ಥಿಸಲಾಗುವುದಿಲ್ಲ ಎಂದು ಹೇಳಿದೆ.

ಆಗಸ್ಟ್‌ನಲ್ಲಿ, ರಾಜ್ಯ ಅಸೆಂಬ್ಲಿಯು ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ಕಡ್ಡಾಯ ನೋಂದಣಿ ಮಸೂದೆಯನ್ನು ಅಂಗೀಕರಿಸಿತು. ಈ ಕಾಯ್ದೆಯು ಮುಸ್ಲಿಮರ ವಿವಾಹಗಳನ್ನು ಸರ್ಕಾರದಲ್ಲಿ ನೋಂದಾಯಿಸುವುದನ್ನು ಕಡ್ಡಾಯಗೊಳಿಸುತ್ತದೆ. ಈ ಮಸೂದೆಯು ಬ್ರಿಟಿಷರ ಕಾಲದ ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳ ನೋಂದಣಿ ಕಾಯಿದೆ, 1935 ಅನ್ನು ಬದಲಿಸಿ ಜಾರಿಗೆ ತರಲಾಗಿದ್ದು, ಕಾಯಿದೆ ಬದಲಾಗುವವರೆಗೆ ಬ್ರಿಟೀಷ್ ಕಾನೂನು ಜಾರಿಯಲ್ಲಿತ್ತು.

ಬಾಲ್ಯವಿವಾಹದ ವಿರುದ್ಧದ ಹೋರಾಟದಲ್ಲಿ ಮಸೂದೆಯ ಅಂಗೀಕಾರವು “ಐತಿಹಾಸಿಕ ದಿನ” ಎಂದು ಗುರುತಿಸಲಾಗಿದೆ ಎಂದು ಶರ್ಮಾ ಆ ಸಮಯದಲ್ಲಿ ಹೇಳಿದ್ದರು. “ಇದು ಹದಿಹರೆಯದ ಗರ್ಭಧಾರಣೆಯ ವಿರುದ್ಧ ಕಟ್ಟುನಿಟ್ಟಾದ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ನಮ್ಮ ಹುಡುಗಿಯರ ಒಟ್ಟಾರೆ ಬೆಳವಣಿಗೆಯನ್ನು ಸುಧಾರಿಸುತ್ತದೆ” ಎಂದು ಶರ್ಮಾ ಹೇಳಿದ್ದರು. ಇದೇ ವೇಳೆ ಅವರು, ಬಹುಪತ್ನಿತ್ವವನ್ನು ನಿಷೇಧಿಸುವುದು ತಮ್ಮ ಮುಂದಿನ ಗುರಿ ಎಂದು ಹೇಳಿದ್ದರು.

ಇದನ್ನೂ ಓದಿ: ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ

ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...