Homeಮುಖಪುಟಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

- Advertisement -
- Advertisement -

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.

“ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು ಮಾನನಷ್ಟಕರ ಆರೋಪಗಳನ್ನು ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ 500 ಕೋಟಿ ರೂ.ಗಳ ಪರಿಹಾರ ಕೋರಿ ನಾನು ಇಂದು ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ಆರೋಪಗಳನ್ನು ವಿವರಿಸದೆ ಸಿಎಂ ಶರ್ಮಾ ಮಂಗಳವಾರ (ಫೆ.10) ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಮತ್ತೊಂದೆಡೆ, ಅಸ್ಸಾಂ ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕುವಂತೆ ತೋರಿಸುವ ವಿಡಿಯೋ ಹಂಚಿಕೊಂಡಿದ್ದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಸಿಬಮೋನಿ ಬೋರಾ ಮತ್ತು ದಿಗಂತ ಬರ್ಮನ್ ಅವರು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಮರಿಗೆ ಗುಂಡಿಕ್ಕುವಂತೆ ತೋರಿಸುವ ವಿವಾದಾತ್ಮಕ ಮತ್ತು ಪ್ರಚೋದನಾಕಾರಿ ವಿಡಿಯೋವೊಂದನ್ನು 2026ರ ಫೆಬ್ರವರಿ 7ರಂದು ಅಸ್ಸಾಂ ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಈ ವಿಡಿಯೋದಲ್ಲಿ ಸಿಎಂ ಶರ್ಮಾ ಅವರು ರೈಫಲ್ ಹಿಡಿದು “ಪಾಯಿಂಟ್ ಬ್ಲಾಂಕ್ ಶೂಟ್” (ಅತಿ ಸಮೀಪದಿಂದ ಗುಂಡು ಹಾರಿಸುವುದು) ಎಂಬ ಶೀರ್ಷಿಕೆಯೊಂದಿಗೆ ಮುಸ್ಲಿಮರನ್ನು ಸಾಂಕೇತಿಕವಾಗಿ ಗುರಿ ಮಾಡುತ್ತಿರುವುದನ್ನು ತೋರಿಸಲಾಗಿತ್ತು” ಎಂಬುವುದಾಗಿ ದೂರಿನಲ್ಲಿ ತಿಳಿಸಲಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಂದುವರಿದು, “ಆ ವಿಡಿಯೋದಲ್ಲಿ ‘ವಿದೇಶಿ ಮುಕ್ತ ಅಸ್ಸಾಂ’ ‘ಯಾವುದೇ ಕರುಣೆ ಇಲ್ಲ’ ‘ನೀವು ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ?’ ಮತ್ತು ‘ಬಾಂಗ್ಲಾದೇಶಿಯರಿಗೆ ಕ್ಷಮೆಯಿಲ್ಲ’ ಎಂಬ ಬರಹಗಳನ್ನು ಬಳಸಲಾಗಿತ್ತು. ಈ ಬರಹಗಳು ಅಸ್ಸಾಂನ ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿತ್ತು” ಎಂದು ಹೇಳಲಾಗಿದೆ ಎಂದು ವರದಿ ವಿವರಿಸಿದೆ.

ದೂರಿನಲ್ಲಿ ಕಾಂಗ್ರೆಸ್ ನಾಯಕರು, “ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಹಂಚಲಾದ ವಿಡಿಯೋ ಅತ್ಯಂತ ಪ್ರಚೋದನಾಕಾರಿ ಮತ್ತು ಕೋಮು ದ್ವೇಷದಿಂದ ಕೂಡಿತ್ತು. ಇದು ಸಮಾಜದ ಜನರ ನಡುವೆ ಖಂಡಿತವಾಗಿಯೂ ಅಶಾಂತಿಯನ್ನು ಉಂಟುಮಾಡುತ್ತದೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡುತ್ತದೆ. ಆದ್ದರಿಂದ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿತ ದಂಡ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಮತ್ತು ಈ ಬಗ್ಗೆ ತಕ್ಷಣವೇ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...