Homeಮುಖಪುಟಬಿಜೆಪಿ ಪರ ಪ್ರಚಾರಕ್ಕೆ ತೆರಳಲು ಸಾರ್ವಜನಿಕ ಬೊಕ್ಕಸದ ಕೋಟ್ಯಾಂತರ ರೂ. ಹಣ ಬಳಸಿದ ಅಸ್ಸಾಂ ಸಿಎಂ:...

ಬಿಜೆಪಿ ಪರ ಪ್ರಚಾರಕ್ಕೆ ತೆರಳಲು ಸಾರ್ವಜನಿಕ ಬೊಕ್ಕಸದ ಕೋಟ್ಯಾಂತರ ರೂ. ಹಣ ಬಳಸಿದ ಅಸ್ಸಾಂ ಸಿಎಂ: ವರದಿ

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಸ್ಸಾಂ ರಾಜ್ಯದೊಳಗೆ ಮತ್ತು ಹೊರಗೆ ಬಿಜೆಪಿ ಪರ ಪ್ರಚಾರಕ್ಕೆ ಹೆಲಿಕಾಪ್ಟರ್‌ಗಳು ಮತ್ತು ಚಾರ್ಟರ್ಡ್ ವಿಮಾನಗಳನ್ನು ಬಾಡಿಗೆಗೆ ಪಡೆಯಲು ರಾಜ್ಯ ಸರ್ಕಾರದ ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ಹಣವನ್ನು ಬಳಸಿದ್ದಾರೆ ಎಂದು ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಯಾವುದೇ ಸರ್ಕಾರವು ಯಾವುದೇ ಸಾರ್ವಜನಿಕ ಹಣವನ್ನು ಅನಧಿಕೃತ ಕೆಲಸಗಳಿಗೆ ಖರ್ಚು ಮಾಡಬಾರದು. ಪಕ್ಷದ ಕೆಲಸ , ವೈಯ್ಯಕ್ತಿಕ ಕೆಲಸಗಳಿಗ ಸಾರ್ವಜನಿಕ ನಿಧಿಯಿಂದ ಹಣವನ್ನು ವೆಚ್ಚ ಮಾಡುವಂತಿಲ್ಲ. ಆದರೆ  ಆಗಸ್ಟ್ 26, 2022ರಂದು ‘ದಿ ಕ್ರಾಸ್ ಕರೆಂಟ್’ ಸಲ್ಲಿಸಿದ ಆರ್‌ಟಿಐ ಅರ್ಜಿಗೆ ಸಿಕ್ಕ ಪ್ರತಿಕ್ರಿಯೆಯಲ್ಲಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪಾರ್ಟಿ, ಸಭೆಗಳಲ್ಲದೆ ಹಲವಾರು ಮದುವೆಗಳಲ್ಲಿ ಭಾಗವಹಿಸಲು ತೆರಿಗೆದಾರರ ಹಣದಿಂದ ಚಾರ್ಟರ್ಡ್ ವಿಮಾನಗಳನ್ನು ಬಾಡಿಗೆಗೆ ಪಡೆದಿದ್ದಾರೆ ಎಂದು ಬಯಲಾಗಿದೆ.

ಸೆಪ್ಟೆಂಬರ್ 30, 2023ರಂದು, ಇಲಾಖೆಯ ಅಧೀನ ಕಾರ್ಯದರ್ಶಿ ಮತ್ತು ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರದೀಪ್ ಶರ್ಮಾ ಈ ಕುರಿತು ಕೆಲ ಮಾಹಿತಿಯನ್ನು ‘ದಿ ಕ್ರಾಸ್ ಕರೆಂಟ್‌’ಗೆ ನೀಡಿದ್ದರು. ಆರ್‌ಟಿಐ ಅರ್ಜಿಯು ಮೇ 10, 2021ರಿಂದ ಈವರೆಗಿನ ವಿವರಗಳನ್ನು ಕೋರಿಸಲ್ಲಿಸಿದ್ದರೂ, ಇಲಾಖೆಯು ಕೆಲವು ಮಾಹಿತಿಯನ್ನು ಮಾತ್ರ ನೀಡಿತ್ತು.

ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆಯ ಕಲಂ 7 (ಎ) ಪ್ರಕಾರ, ಸಚಿವರು ತಮ್ಮ ಅಧಿಕೃತ ಭೇಟಿಯನ್ನು ಚುನಾವಣಾ ಪ್ರಚಾರದ ಜೊತೆ ಮಾಡಬಾರದು ಮತ್ತು ಚುನಾವಣಾ ಕಾರ್ಯದ ಸಮಯದಲ್ಲಿ ಸರಕಾರದ ನಿಧಿ, ಸಿಬ್ಬಂದಿಗಳನ್ನು ಬಳಕೆ ಮಾಡಬಾರದು ಎಂದು ಹೇಳುತ್ತದೆ. ಸರ್ಕಾರ ಒದಗಿಸಿದ ಮಾಹಿತಿಯು ಕಡಿಮೆ ಆದರೂ  ಶರ್ಮಾ ಅವರ ಸ್ವಂತ ಸಾಮಾಜಿಕ ಮಾಧ್ಯಮ ಖಾತೆಗಳ ಛಾಯಾಚಿತ್ರದ ಪುರಾವೆಗಳು ಮುಖ್ಯಮಂತ್ರಿಗಳು ತಮ್ಮ ಪಕ್ಷದ ಮತ್ತು ಮಿತ್ರಪಕ್ಷಗಳ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಅಸ್ಸಾಂ ಸರ್ಕಾರದ ಅನುದಾನಿತ ಹೆಲಿಕಾಪ್ಟರ್‌ಗಳನ್ನು ಬಳಸಿಕೊಂಡಿದ್ದಾರೆ ಎನ್ನುವುದನ್ನು ಬಯಲು ಮಾಡಿದೆ.

ಆರ್‌ಟಿಐ ಮಾಹಿತಿ ಪ್ರಕಾರ, ಅಕ್ಟೋಬರ್ 17, 2021ರಂದು ಗುವಾಹಟಿಯಿಂದ ತಮುಲ್‌ಪುರಕ್ಕೆ ತೆರಳಲು ಮತ್ತು ಹಿಂತಿರುಗಲು ಶರ್ಮಾ ಅವರು  ರಾಜ್ಯದ ಬೊಕ್ಕಸದಿಂದ ಅನುದಾನಿತ ಹೆಲಿಕಾಪ್ಟನ್ನು ಬಳಸಿದ್ದಾರೆ.  ಶರ್ಮಾ ಅವರು ಬಿಜೆಪಿ ಮಿತ್ರಪಕ್ಷ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಅಭ್ಯರ್ಥಿ ಜೋಲೆನ್ ಡೈಮರಿ ಅವರ ಪರ ಪ್ರಚಾರಕ್ಕೆ ತೆರಳಿದ್ದರು.

ಅಕ್ಟೋಬರ್ 18, 2021ರಂದು ಗುವಾಹಟಿಯಿಂದ ಗೊಸ್ಸೈಗಾಂವ್‌ಗೆ ಪ್ರಯಾಣಿಸಲು ಶರ್ಮಾ ಮತ್ತೆ ರಾಜ್ಯ ಸರ್ಕಾರದಿಂದ ಪಾವತಿಸಿದ ಹೆಲಿಕಾಪ್ಟರ್‌ ಬಳಸಿದ್ದಾರೆ. ಆ ದಿನ ಅವರು ಅಸ್ಸಾಂನ ಆದಿವಾಸಿ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಜಸ್ಟಿನ್ ಲಾಕ್ರಾ ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಅಕ್ಟೋಬರ್ 19, 2021 ರಂದು ಗೊಸ್ಸೈಗಾಂವ್‌ನಲ್ಲಿ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಅಭ್ಯರ್ಥಿ ಜಿರೋನ್ ಪರ ಪ್ರಚಾರ ಮಾಡುವ ಕುರಿತ ಪೋಟೋಗಳನ್ನು ಸಿಎಂ ಸಾಮಾಜಿಕ ಜಾಲತಾಣದಲ್ಲಿ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಅಕ್ಟೋಬರ್ 30, 2021ರಂದು, ಗೊಸ್ಸೈಗಾಂವ್ ಮತ್ತು ತಮುಲ್ಪುರ್ ಜೊತೆಗೆ ಅಸ್ಸಾಂನ ಥೌರಾ, ಮರಿಯಾನಿ ಮತ್ತು ಭಬಾನಿಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳು ನಡೆದವು. ಶರ್ಮಾ ಆ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಪ್ರಚಾರಕ್ಕಾಗಿ ಹೆಲಿಕಾಪ್ಟರ್‌ಗಳನ್ನು ಬಳಸಿದರೆ, ರಾಜ್ಯದ ಸಾಮಾನ್ಯ ಆಡಳಿತ ಇಲಾಖೆಯು ಆ ಪ್ರಯಾಣದ ದಿನಾಂಕಗಳ ನಿರ್ದಿಷ್ಟ ಮಾಹಿತಿಯನ್ನು ಒದಗಿಸದ ಕಾರಣ ಅವರಿಗೆ ಯಾರು ಹಣ ನೀಡಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಫೆಬ್ರವರಿ 16, 2022ರಂದು ಬಿಜೆಪಿ ಅಭ್ಯರ್ಥಿ ಭುವನ್ ಗಮ್ ಅವರು ಮಜುಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು. ಸಿಎಂ ಶರ್ಮಾ ಅವರು ಮಜುಲಿಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದರು. ಶರ್ಮಾ ಸರ್ಕಾರದ ಆರ್‌ಟಿಐ ಉತ್ತರದಲ್ಲಿ ಮುಖ್ಯಮಂತ್ರಿಯವರು ಆ ದಿನ ಮಜುಲಿಗೆ ಸರ್ಕಾರದ ಅನುದಾನಿತ ಹೆಲಿಕಾಪ್ಟರ್ ಬಳಸಿ ಪ್ರಯಾಣ ನಡೆಸಿದ್ದರು.

 

ದೆಹಲಿ ಮುನ್ಸಿಪಲ್ ಚುನಾವಣೆ ಸೇರಿದಂತೆ ರಾಜ್ಯದ ಹೊರಗೆ ಬಿಜೆಪಿ ಪರ ಪ್ರಚಾರ ಮಾಡಲು ಶರ್ಮಾ ಸಾರ್ವಜನಿಕ ಹಣವನ್ನು ಬಳಸಿದ್ದಾರೆ ಎಂದು ಆರ್‌ಟಿಐ ಉತ್ತರಗಳಲ್ಲಿ ಉಲ್ಲೇಖಿಸಲಾದ ದಿನಾಂಕಗಳು ಬಹಿರಂಗಪಡಿಸುತ್ತವೆ.

ಜನವರಿ 30, 2023ರಂದು ಶರ್ಮಾ, ಬಾರ್ಡೋಲಿ ಕ್ಷೇತ್ರದಲ್ಲಿ ಮಾಣಿಕ್ ಸಹಾ ಅವರು ನಾಮಪತ್ರ ಸಲ್ಲಿಕೆ ವೇಳೆ ತ್ರಿಪುರಾಗೆ ತೆರಳಲು ಸರ್ಕಾರದಿಂದ ಹಣಕಾಸು ಪಡೆದ ಚಾರ್ಟರ್ಡ್ ಫ್ಲೈಟ್ ಬಳಸಿದ್ದಾರೆ. ಶರ್ಮಾ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದರು. ಬಿಜೆಪಿಯ ಪ್ರಾದೇಶಿಕ ನಾಯಕರು ನಾಮಪತ್ರ ಸಲ್ಲಿಸುವಾಗ ಅವರು ಆಗಾಗ್ಗೆ ಅಲ್ಲಿಗೆ ತೆರಳುತ್ತಿದ್ದರು. ಕರ್ನಾಟಕ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅವರು ಪಕ್ಷದ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದರು. ಚಾರ್ಟರ್ಡ್ ಫ್ಲೈಟ್‌ಗಳನ್ನು ಬಳಸಿಕೊಂಡು ತಮ್ಮ ಪಕ್ಷಕ್ಕಾಗಿ ಪ್ರಚಾರ ಮಾಡಲು ತೆರಳುತ್ತಿದ್ದರು. ಆದರೆ ಅವರ ಸರ್ಕಾರ ಸಲ್ಲಿಸಿದ ಮಾಹಿತಿಯು ಆ ಪ್ರಯಾಣಕ್ಕೆ ಯಾರು ಪಾವತಿಸಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುವುದಿಲ್ಲ ಎಂದು ದಿ ವೈರ್‌ ವರದಿ ತಿಳಿಸಿದೆ.

ಆರ್‌ಟಿಐ ಸೂಚಿಸಿದ ದಿನಾಂಕಗಳ ಪ್ರಕಾರ ರಾಜ್ಯ ಸರ್ಕಾರದ ಪಾವತಿಯಿಂದ  ಹೆಲಿಕಾಪ್ಟರ್‌ಗಳನ್ನು ಬಳಸಿ ಶರ್ಮಾ ಅವರು ಐದು ಮದುವೆಗಳಲ್ಲಿ ಭಾಗವಹಿಸಿದ್ದಾರೆ. ನವೆಂಬರ್ 11, 2022ರಂದು ನಾಗಾಲ್ಯಾಂಡ್ ಮುಖ್ಯಮಂತ್ರಿ ನೈಫು ರಿಯೊ ಅವರ ಮಗಳ ವಿವಾಹವನ್ನು ಒಳಗೊಂಡಿದೆ. ನಾಗಾಲ್ಯಾಂಡ್ ಪ್ರವಾಸಕ್ಕೆ ಅಸ್ಸಾಂನ ಬೊಕ್ಕಸಕ್ಕೆ 14,08,562 ರೂಪಾಯಿ ವೆಚ್ಚವಾಗಿದೆ ಎಂದು RTI ಉತ್ತರವು ತೋರಿಸಿದೆ.

 

ಜನವರಿ 31, 2023ರಂದು, ಶರ್ಮಾ ಅವರು ಲಕ್ನೋಗೆ ತೆರಳಲು ಅಸ್ಸಾಂ ಸರ್ಕಾರದ ಅನುದಾನಿತ ಚಾರ್ಟರ್ಡ್ ವಿಮಾನವನ್ನು ಬಳಸಿರುವುದು ಬಯಲಾಗಿದೆ. ಅಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಮಗಳ ಮದುವೆಯಲ್ಲಿ ಅವರು ಭಾಗವಹಿಸಿದ್ದರು. ಅದರಿಂದ ರಾಜ್ಯದ ಬೊಕ್ಕಸಕ್ಕೆ ಬರೊಬ್ಬರಿ 23,43,750 ರೂ.ವೆಚ್ಚವಾಗಿತ್ತು.

ಸೆಪ್ಟೆಂಬರ್ 22, 2021 ಮತ್ತು ಜನವರಿ 24, 2023ರ ನಡುವೆ ಅಸ್ಸಾಂ ರಾಜ್ಯ ಸರ್ಕಾರವು ಒದಗಿಸಿದ RTI ದತ್ತಾಂಶದ ಪ್ರಕಾರ ಶರ್ಮಾ ಹೈದರಾಬಾದ್‌ನಲ್ಲಿ ನಡೆದ ಬಿಜೆಪಿ ಸಭೆಗಳನ್ನು ಒಳಗೊಂಡಂತೆ ಬಿಜೆಪಿ ಸಭೆಗಳಲ್ಲಿ ಭಾಗವಹಿಸಲು ಕನಿಷ್ಠ 7 ಬಾರಿ ರಾಜ್ಯ ಅನುದಾನಿತ ಚಾರ್ಟರ್ಡ್ ವಿಮಾನಗಳನ್ನು ಬಳಸಿದ್ದಾರೆ.

 

ದಿ ಕ್ರಾಸ್‌ಕರೆಂಟ್‌ಗೆ ನೀಡಿದ ಆರ್‌ಟಿಐ ಉತ್ತರಗಳ ದಿನಾಂಕಗಳು ಅಸ್ಸಾಂನಲ್ಲಿ ಸಾರ್ವಜನಿಕ ಹಣವನ್ನು ಬಳಸಿಕೊಂಡು ಐದು ಪಕ್ಷದ ಸಭೆಗಳಲ್ಲಿ ಶರ್ಮಾ ಭಾಗವಹಿಸಿದ್ದರು ಎಂದು ತೋರಿಸಿದೆ. ಅವರು ಸೆಪ್ಟೆಂಬರ್ 22, 2021 ರಂದು ಗುವಾಹಟಿ ಬಳಿಯ ಅಮಿಂಗ್‌ಗಾವ್‌ನಲ್ಲಿದ್ದರು, ನವೆಂಬರ್ 25, 2021ರಂದು ಬೊಂಗೈಗಾಂವ್‌ನಲ್ಲಿ, ಡಿಸೆಂಬರ್ 10, 2021 ಮೊರಿಗಾಂವ್‌ನಲ್ಲಿದ್ದರು ಎಂಬುವುದನ್ನು ಸೂಚಿಸುತ್ತದೆ.

ರಾಜಕೀಯ ಪ್ರಚಾರ, ಪಕ್ಷದ ಸಭೆಗಳು ಮತ್ತು ಮದುವೆ ಪಾರ್ಟಿ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ತೆರಳಲು ಅಸ್ಸಾಂನ ಉನ್ನತ ನಾಯಕರಿಗೆ ಚಾರ್ಟರ್ಡ್ ಫ್ಲೈಟ್‌ಗಾಗಿ ಕೋಟಿಗಳನ್ನು ಖರ್ಚು ಮಾಡಿದೆ ಎಂದು ಆರ್‌ಟಿಐ ಮಾಹಿತಿಯು ತೋರಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್  ಡಿಸೆಂಬರ್‌ನಲ್ಲಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ಮಾಹಿತಿಯ ಪ್ರಕಾರ, ತರುಣ್ ಗೊಗೊಯ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುವವರೆಗೆ ಅಸ್ಸಾಂ ಸರ್ಕಾರವು 41,963 ಕೋಟಿ ರೂಪಾಯಿಗಳ ಸಾಲವನ್ನು ಬಾಕಿ ಉಳಿಸಿಕೊಂಡಿತ್ತು. ಈಶಾನ್ಯ ರಾಜ್ಯದಲ್ಲಿ ಬಿಜೆಪಿ ಆಡಳಿತದ ಕಳೆದ ಎಂಟು ವರ್ಷಗಳಲ್ಲಿ ಈ ಮೊತ್ತವು ದುಪ್ಪಟ್ಟು ಆಗಿದೆ.

ಇದನ್ನು ಓದಿ: ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...