Homeಮುಖಪುಟಅಸ್ಸಾಂ| ಅರಣ್ಯ ಇಲಾಖೆ ಸಿಬ್ಬಂದಿಯಿಂದ ಇಬ್ಬರು ಮುಸ್ಲಿಂ ಸಹೋದರರ ಹತ್ಯೆ: ಸರ್ಕಾರದ ವಿರುದ್ದ ಭುಗಿಲೆದ್ದ ಆಕ್ರೋಶ

ಅಸ್ಸಾಂ| ಅರಣ್ಯ ಇಲಾಖೆ ಸಿಬ್ಬಂದಿಯಿಂದ ಇಬ್ಬರು ಮುಸ್ಲಿಂ ಸಹೋದರರ ಹತ್ಯೆ: ಸರ್ಕಾರದ ವಿರುದ್ದ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಕಳ್ಳ ಬೇಟೆಗಾರರೆಂದು ಶಂಕಿಸಿ ನಾಗಾನ್ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಂ ಸಹೋದರರನ್ನು ಅರಣ್ಯ ಇಲಾಖೆ ಗಾರ್ಡ್‌ಗಳು ಹತ್ಯೆ ಮಾಡಿರುವ ಘಟನೆ ಅಸ್ಸಾಂನ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಅಧಿಕಾರಕ್ಕೇರಿದಾಗಿನಿಂದ ಸಿಎಂ ಶರ್ಮಾ ಮತ್ತು ಅವರ ಸರ್ಕಾರ ಮಾನವ ಹಕ್ಕುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತಿರುವುದು ಮತ್ತು ಕೋಮುವಾದ ಮಾಡುತ್ತಿರುವುದು ಗೊತ್ತೇ ಇದೆ. ಈ ಹತ್ಯೆಯ ಬಳಿಕ ರಾಜ್ಯದ ಹೋರಾಟಗಾರರು, ರಾಜಕಾರಣಿಗಳು ಮತ್ತು ಪ್ರತಿಪಕ್ಷಗಳಲ್ಲಿ ಕಳವಳ ಹೆಚ್ಚಾಗಿದೆ.

ನಾಗಾನ್ ಜಿಲ್ಲೆ ಲಾಖೋವಾ ಬುರ್ಹಾಚಪೋರಿ ವನ್ಯಜೀವಿ ಅಭಯಾರಣ್ಯದ ಗೋರಾಜನ್ ಅರಣ್ಯ ಪ್ರದೇಶದ ರೌಮರಿ ಬೀಲ್ ಬಳಿ ಜೂನ್ 22ರಂದು ಇಬ್ಬರು ಸಹೋದರರಾದ ಸೋಮರ್ ಉದ್ದೀನ್ (36) ಮತ್ತು ಅಬ್ದುಲ್ ಜಲೀಲ್ (44) ಎಂಬವರು ಹತ್ಯೆ ಮಾಡಲಾಗಿದೆ. ಸ್ಥಳೀಯ ಧಿಂಗ್ಬೋರಿ ಚಪೋರಿ ಗ್ರಾಮದ ನಿವಾಸಿಗಳಾದ ಇವರನ್ನು ಕಳ್ಳ ಬೇಟೆಗಾರರು ಎಂದು ಭಾವಿಸಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದಾರೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಆಲ್-ಅಸ್ಸಾಂ ಮೈನಾರಿಟಿ ಸ್ಟೂಡೆಂಟ್ಸ್ ಯೂನಿಯನ್ (ಎಎಎಂಎಸ್‌ಯು) ಗುರುವಾರ (ಜೂನ್ 27) ಸಿಎಂ ಶರ್ಮಾ ಅವರಿಗೆ ಮನವಿ ಪತ್ರ ಕಳುಹಿಸಿದ್ದು, ಇಬ್ಬರು ಮೃತ ಸಹೋದರರಿಗೆ ನ್ಯಾಯ ಕೊಡಿಸಬೇಕು ಮತ್ತು ಅವರ ಕುಟುಂಬಸ್ಥರಿಗೆ ನಗದು ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.

ಎಎಎಂಎಸ್‌ಯು ಈ ಸಂಬಂಧ ಜೂನ್ 24 ರಂದು ನಾಗಾನ್ ಜಿಲ್ಲೆಯ ಜುರಿಯಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಿದೆ. ಎಫ್‌ಐಆರ್‌ನಲ್ಲಿ ಎಎಎಂಎಸ್‌ಯು ಅರಣ್ಯ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಹೆಸರಿಸಿದ್ದು, ಅವರು ಇಬ್ಬರು ಸಹೋದರರನ್ನು ‘ಸಾಮಾನ್ಯ ಉದ್ದೇಶದಿಂದ’ ಕೊಂದಿದ್ದಾರೆ ಎಂದು ಆರೋಪಿಸಿದೆ.

ಎಎಎಂಎಸ್‌ಯುನ ಸಲಹೆಗಾರ ಐನುದ್ದೀನ್ ಅಹ್ಮದ್, “ಇಬ್ಬರು ಸಹೋದರರು ನಿರಾಯುಧರಾಗಿದ್ದರು. ಅವರ ಎದೆಗೆ ಗುಂಡಿಕ್ಕಿದ್ದಾರೆ. ಮೃತರು ಹತ್ತಿರದ ಹಳ್ಳಿಯ ರೈತರು, ಕಳ್ಳ ಬೇಟೆಗಾರರಲ್ಲ. ಇದು ಬಡ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಹತ್ಯೆ. ಸಿಎಂ ಶರ್ಮಾ ಅವರು ಬಹಳಷ್ಟು ವಿಷಯಗಳಿಗೆ ಉತ್ತರಿಸಬೇಕಿದೆ” ಎಂದಿದ್ದಾರೆ.

“ಇಬ್ಬರು ಸಹೋದರರು ಮಧ್ಯರಾತ್ರಿ ಅಕ್ರಮವಾಗಿ ಮೀನು ಹಿಡಿಯಲು ಅರಣ್ಯ ಪ್ರದೇಶ ಪ್ರವೇಶಿಸಿದ್ದರು. ಅರಣ್ಯ ಸಿಬ್ಬಂದಿ ಅವರನ್ನು ಗುರುತಿಸಿದಾಗ, ಸ್ಥಳದಿಂದ ಪಲಾಯನ ಮಾಡಲು ಪ್ರಯತ್ನಿಸಿದ್ದರು. ಈ ವೇಳೆ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರ ಎರಡು ಅನಾಮಧೇಯ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಘಟನೆಯ ಕುರಿತು ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವುದಾಗಿ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ನೀಟ್‌ ಮಾತ್ರವಲ್ಲ, ಯುಪಿ ಶಾಸಕ ಬೇಡಿ ರಾಮ್ ಮೇಲಿವೆ ಎಂಟು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...