Homeಮುಖಪುಟಅಸ್ಸಾಂ| ಅರಣ್ಯ ಇಲಾಖೆ ಸಿಬ್ಬಂದಿಯಿಂದ ಇಬ್ಬರು ಮುಸ್ಲಿಂ ಸಹೋದರರ ಹತ್ಯೆ: ಸರ್ಕಾರದ ವಿರುದ್ದ ಭುಗಿಲೆದ್ದ ಆಕ್ರೋಶ

ಅಸ್ಸಾಂ| ಅರಣ್ಯ ಇಲಾಖೆ ಸಿಬ್ಬಂದಿಯಿಂದ ಇಬ್ಬರು ಮುಸ್ಲಿಂ ಸಹೋದರರ ಹತ್ಯೆ: ಸರ್ಕಾರದ ವಿರುದ್ದ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಕಳ್ಳ ಬೇಟೆಗಾರರೆಂದು ಶಂಕಿಸಿ ನಾಗಾನ್ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಂ ಸಹೋದರರನ್ನು ಅರಣ್ಯ ಇಲಾಖೆ ಗಾರ್ಡ್‌ಗಳು ಹತ್ಯೆ ಮಾಡಿರುವ ಘಟನೆ ಅಸ್ಸಾಂನ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಅಧಿಕಾರಕ್ಕೇರಿದಾಗಿನಿಂದ ಸಿಎಂ ಶರ್ಮಾ ಮತ್ತು ಅವರ ಸರ್ಕಾರ ಮಾನವ ಹಕ್ಕುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತಿರುವುದು ಮತ್ತು ಕೋಮುವಾದ ಮಾಡುತ್ತಿರುವುದು ಗೊತ್ತೇ ಇದೆ. ಈ ಹತ್ಯೆಯ ಬಳಿಕ ರಾಜ್ಯದ ಹೋರಾಟಗಾರರು, ರಾಜಕಾರಣಿಗಳು ಮತ್ತು ಪ್ರತಿಪಕ್ಷಗಳಲ್ಲಿ ಕಳವಳ ಹೆಚ್ಚಾಗಿದೆ.

ನಾಗಾನ್ ಜಿಲ್ಲೆ ಲಾಖೋವಾ ಬುರ್ಹಾಚಪೋರಿ ವನ್ಯಜೀವಿ ಅಭಯಾರಣ್ಯದ ಗೋರಾಜನ್ ಅರಣ್ಯ ಪ್ರದೇಶದ ರೌಮರಿ ಬೀಲ್ ಬಳಿ ಜೂನ್ 22ರಂದು ಇಬ್ಬರು ಸಹೋದರರಾದ ಸೋಮರ್ ಉದ್ದೀನ್ (36) ಮತ್ತು ಅಬ್ದುಲ್ ಜಲೀಲ್ (44) ಎಂಬವರು ಹತ್ಯೆ ಮಾಡಲಾಗಿದೆ. ಸ್ಥಳೀಯ ಧಿಂಗ್ಬೋರಿ ಚಪೋರಿ ಗ್ರಾಮದ ನಿವಾಸಿಗಳಾದ ಇವರನ್ನು ಕಳ್ಳ ಬೇಟೆಗಾರರು ಎಂದು ಭಾವಿಸಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದಾರೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಆಲ್-ಅಸ್ಸಾಂ ಮೈನಾರಿಟಿ ಸ್ಟೂಡೆಂಟ್ಸ್ ಯೂನಿಯನ್ (ಎಎಎಂಎಸ್‌ಯು) ಗುರುವಾರ (ಜೂನ್ 27) ಸಿಎಂ ಶರ್ಮಾ ಅವರಿಗೆ ಮನವಿ ಪತ್ರ ಕಳುಹಿಸಿದ್ದು, ಇಬ್ಬರು ಮೃತ ಸಹೋದರರಿಗೆ ನ್ಯಾಯ ಕೊಡಿಸಬೇಕು ಮತ್ತು ಅವರ ಕುಟುಂಬಸ್ಥರಿಗೆ ನಗದು ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.

ಎಎಎಂಎಸ್‌ಯು ಈ ಸಂಬಂಧ ಜೂನ್ 24 ರಂದು ನಾಗಾನ್ ಜಿಲ್ಲೆಯ ಜುರಿಯಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಿದೆ. ಎಫ್‌ಐಆರ್‌ನಲ್ಲಿ ಎಎಎಂಎಸ್‌ಯು ಅರಣ್ಯ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಹೆಸರಿಸಿದ್ದು, ಅವರು ಇಬ್ಬರು ಸಹೋದರರನ್ನು ‘ಸಾಮಾನ್ಯ ಉದ್ದೇಶದಿಂದ’ ಕೊಂದಿದ್ದಾರೆ ಎಂದು ಆರೋಪಿಸಿದೆ.

ಎಎಎಂಎಸ್‌ಯುನ ಸಲಹೆಗಾರ ಐನುದ್ದೀನ್ ಅಹ್ಮದ್, “ಇಬ್ಬರು ಸಹೋದರರು ನಿರಾಯುಧರಾಗಿದ್ದರು. ಅವರ ಎದೆಗೆ ಗುಂಡಿಕ್ಕಿದ್ದಾರೆ. ಮೃತರು ಹತ್ತಿರದ ಹಳ್ಳಿಯ ರೈತರು, ಕಳ್ಳ ಬೇಟೆಗಾರರಲ್ಲ. ಇದು ಬಡ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಹತ್ಯೆ. ಸಿಎಂ ಶರ್ಮಾ ಅವರು ಬಹಳಷ್ಟು ವಿಷಯಗಳಿಗೆ ಉತ್ತರಿಸಬೇಕಿದೆ” ಎಂದಿದ್ದಾರೆ.

“ಇಬ್ಬರು ಸಹೋದರರು ಮಧ್ಯರಾತ್ರಿ ಅಕ್ರಮವಾಗಿ ಮೀನು ಹಿಡಿಯಲು ಅರಣ್ಯ ಪ್ರದೇಶ ಪ್ರವೇಶಿಸಿದ್ದರು. ಅರಣ್ಯ ಸಿಬ್ಬಂದಿ ಅವರನ್ನು ಗುರುತಿಸಿದಾಗ, ಸ್ಥಳದಿಂದ ಪಲಾಯನ ಮಾಡಲು ಪ್ರಯತ್ನಿಸಿದ್ದರು. ಈ ವೇಳೆ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರ ಎರಡು ಅನಾಮಧೇಯ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಘಟನೆಯ ಕುರಿತು ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವುದಾಗಿ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ನೀಟ್‌ ಮಾತ್ರವಲ್ಲ, ಯುಪಿ ಶಾಸಕ ಬೇಡಿ ರಾಮ್ ಮೇಲಿವೆ ಎಂಟು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...