Homeಮುಖಪುಟ’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು...

’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗೌಹಾಟಿಯಲ್ಲಿ ನಡೆದ ಬೃಹತ್ ರ್‍ಯಾಲಿಯಲ್ಲಿ ಮಾತನಾಡಿದ ಹಿಮಂತ ಬಿಸ್ವ ಶರ್ಮಾ, ’ಪ್ರಧಾನಿ ಅಮಿತ್ ಶಾರವರೆ ಮತ್ತು ಗೃಹ ಮಂತ್ರಿ ನರೇಂದ್ರ ಮೋದಿಯವರೆ’ ಎಂದು ಸಂಬೋಧಿಸಿ ಚರ್ಚೆಗೆ ಗ್ರಾಸವಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಲ್ಲದೆ, ಹಿಮಂತ ಶರ್ಮಾ ಬೇಕಂತಲೇ ಅಮಿತ್ ಶಾರವರನ್ನು ಪ್ರಧಾನಿ ಎಂದು ಕರೆದಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

2024ರ ಚುನಾವಣೆಗೆ ಗೃಹ ಸಚಿವ ಅಮಿತ್‌ ಶಾರವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ ಎಂಬ ಉಹಾಪೋಹಗಳ ನಡುವೆ ಅವರ ನಿಕಟವರ್ತಿಯಾದ ಅಸ್ಸಾಂ ಸಿಎಂ ಹಿಮಂತ ಶರ್ಮಾ ಈ ರೀತಿಯ ಹೇಳಿಕೆ ನೀಡಿದ್ದು ಅದಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು.

ಈ ಚರ್ಚೆ ಆರಂಭವಾಗುತ್ತಲೇ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ ಆ ಕುರಿತು ಪ್ರತಿಕ್ರಿಯಿಸಿದ್ದಾರೆ. ಹಿಮಂತ ಶರ್ಮಾ ಹೇಳಿಕೆ ನೀಡಿದ ಎರಡು ದಿನದ ನಂತರ ಗುಜರಾತ್‌ನಲ್ಲಿ ನಡೆದ ವರ್ಚುವಲ್ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ “ಮೂರನೇ ಅವಧಿಗೆ ಪ್ರಧಾನಿಯಾಗಲು ತಯಾರಿಯಾಗಿದ್ದು, ಶೇ.100 ರಷ್ಟು ಕೆಲಸಗಳನ್ನು ಮಾಡಲು 2024ರ ಚುನಾವಣೆಯಲ್ಲಿಯೂ ತಾನು ಪ್ರಧಾನಿ ಅಭ್ಯರ್ಥಿಯಾಗಿರುತ್ತೇನೆ” ಎಂಬ ಸಂದೇಶ ರವಾನಿಸಿದ್ದಾರೆ.

ಈ ವಿಷಯ ಪ್ರಸ್ತಾಪಿಸಿದ ಅವರು, “ಒಮ್ಮೆ ನಾನು ಗೌರವಿಸುವ ವಿರೋಧ ಪಕ್ಷದ ಹಿರಿಯ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕೆಲ ವಿಷಯಗಳನ್ನು ಮಾತನಾಡಿದ ನಂತರ, ಮೋದಿಜಿ ನಿಮಗೆ ಇನ್ನೇನು ಬೇಕು, ಈ ದೇಶ ನಿಮ್ಮನ್ನು ಎರಡು ಬಾರಿಗೆ ಪ್ರಧಾನಿಯನ್ನಾಗಿ ಮಾಡಿದೆ ಎಂದರು. ಎರಡು ಬಾರಿ ಪ್ರಧಾನಿಯಾಗುವುದು ದೊಡ್ಡ ಸಾಧನೆ ಎಂದು ಅವರು ಭಾವಿಸಿದ್ದರು. ಆದರೆ ಈ ಮೋದಿಯವರ ಮನಸ್ಸಿನಲ್ಲಿ ಬೇರೆ ಇದೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ಗುಜರಾತ್ ಮಣ್ಣಿನಲ್ಲಿ ಹುಟ್ಟಿಬಂದ ನಾನು ವಿಶ್ರಾಂತಿ ಪಡೆಯಬಹುದಾದಷ್ಟನ್ನು ಇನ್ನು ಸಾಧಿಸಿಲ್ಲ. ಎಲ್ಲಾ ಸರಿ ಇದೆ ಎಂದು ನಾನು ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ. ನನ್ನ ಕನಸುಗಳು ಮುಗಿದಿಲ್ಲ, 100% ಕೆಲಸ ಮಾಡಬೇಕಿದೆ” ಎಂದು ಮೋದಿ ಹೇಳಿದ್ದಾರೆ.

ಮೋದಿಯವರ ಆರೋಗ್ಯ ಸರಿ ಇಲ್ಲ, ಅವರಿಗೆ ರಕ್ಷಣಾ ಬೆದರಿಕೆ ಇದೆ ಎಂಬ ಊಹಾಪೋಹಗಳನ್ನು ಒಬ್ಬರು ನನ್ನ ಬಳಿ ಹೇಳಿದರು. ಆಗ ನಾನು ಹೇಳಿದೆ, “ನನಗೆ ಕೋಟ್ಯಾಂತರ ತಾಯಂದಿರ ಮತ್ತು ಸಹೋದರಿಯರ ಆರ್ಶೀವಾದವಿದೆ. ಆ ರಕ್ಷಾ ಕವಚವಿರುವುದರಿಂದ ಯಾರೂ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ; ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

ಸದ್ಯ ಬಿಜೆಪಿ 75 ವರ್ಷ ದಾಟಿದವರು ಅಧಿಕಾರದ ಸ್ಥಾನಗಳಲ್ಲಿ ಇರಬಾರದು ಎಂಬ ನಿಯಮ ಘೋಷಿಸಿದೆ. ಹಾಗೆ ನೋಡಿದರೆ 2024ರ ಚುನಾವಣೆ ಹೊತ್ತಿಗೆ ನರೇಂದ್ರ ಮೋದಿಯವರಿಗೆ 74 ವರ್ಷ ತುಂಬಿರುತ್ತದೆ. ಅವರು ಪ್ರಧಾನಿಯಾದರೆ 79 ವರ್ಷದವರೆಗೂ ಅಧಿಕಾರದಲ್ಲಿ ಇದ್ದ ಹಾಗೆ ಆಗುತ್ತದೆ. ಅದು ಬಿಜೆಪಿಯ ನಿಯಮವನ್ನು ಉಲ್ಲಂಘಿಸಿದಂತೆ ಆಗುವುದಿಲ್ಲವೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...