Homeಮುಖಪುಟ’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು...

’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗೌಹಾಟಿಯಲ್ಲಿ ನಡೆದ ಬೃಹತ್ ರ್‍ಯಾಲಿಯಲ್ಲಿ ಮಾತನಾಡಿದ ಹಿಮಂತ ಬಿಸ್ವ ಶರ್ಮಾ, ’ಪ್ರಧಾನಿ ಅಮಿತ್ ಶಾರವರೆ ಮತ್ತು ಗೃಹ ಮಂತ್ರಿ ನರೇಂದ್ರ ಮೋದಿಯವರೆ’ ಎಂದು ಸಂಬೋಧಿಸಿ ಚರ್ಚೆಗೆ ಗ್ರಾಸವಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಲ್ಲದೆ, ಹಿಮಂತ ಶರ್ಮಾ ಬೇಕಂತಲೇ ಅಮಿತ್ ಶಾರವರನ್ನು ಪ್ರಧಾನಿ ಎಂದು ಕರೆದಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

2024ರ ಚುನಾವಣೆಗೆ ಗೃಹ ಸಚಿವ ಅಮಿತ್‌ ಶಾರವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ ಎಂಬ ಉಹಾಪೋಹಗಳ ನಡುವೆ ಅವರ ನಿಕಟವರ್ತಿಯಾದ ಅಸ್ಸಾಂ ಸಿಎಂ ಹಿಮಂತ ಶರ್ಮಾ ಈ ರೀತಿಯ ಹೇಳಿಕೆ ನೀಡಿದ್ದು ಅದಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು.

ಈ ಚರ್ಚೆ ಆರಂಭವಾಗುತ್ತಲೇ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ ಆ ಕುರಿತು ಪ್ರತಿಕ್ರಿಯಿಸಿದ್ದಾರೆ. ಹಿಮಂತ ಶರ್ಮಾ ಹೇಳಿಕೆ ನೀಡಿದ ಎರಡು ದಿನದ ನಂತರ ಗುಜರಾತ್‌ನಲ್ಲಿ ನಡೆದ ವರ್ಚುವಲ್ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ “ಮೂರನೇ ಅವಧಿಗೆ ಪ್ರಧಾನಿಯಾಗಲು ತಯಾರಿಯಾಗಿದ್ದು, ಶೇ.100 ರಷ್ಟು ಕೆಲಸಗಳನ್ನು ಮಾಡಲು 2024ರ ಚುನಾವಣೆಯಲ್ಲಿಯೂ ತಾನು ಪ್ರಧಾನಿ ಅಭ್ಯರ್ಥಿಯಾಗಿರುತ್ತೇನೆ” ಎಂಬ ಸಂದೇಶ ರವಾನಿಸಿದ್ದಾರೆ.

ಈ ವಿಷಯ ಪ್ರಸ್ತಾಪಿಸಿದ ಅವರು, “ಒಮ್ಮೆ ನಾನು ಗೌರವಿಸುವ ವಿರೋಧ ಪಕ್ಷದ ಹಿರಿಯ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕೆಲ ವಿಷಯಗಳನ್ನು ಮಾತನಾಡಿದ ನಂತರ, ಮೋದಿಜಿ ನಿಮಗೆ ಇನ್ನೇನು ಬೇಕು, ಈ ದೇಶ ನಿಮ್ಮನ್ನು ಎರಡು ಬಾರಿಗೆ ಪ್ರಧಾನಿಯನ್ನಾಗಿ ಮಾಡಿದೆ ಎಂದರು. ಎರಡು ಬಾರಿ ಪ್ರಧಾನಿಯಾಗುವುದು ದೊಡ್ಡ ಸಾಧನೆ ಎಂದು ಅವರು ಭಾವಿಸಿದ್ದರು. ಆದರೆ ಈ ಮೋದಿಯವರ ಮನಸ್ಸಿನಲ್ಲಿ ಬೇರೆ ಇದೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ಗುಜರಾತ್ ಮಣ್ಣಿನಲ್ಲಿ ಹುಟ್ಟಿಬಂದ ನಾನು ವಿಶ್ರಾಂತಿ ಪಡೆಯಬಹುದಾದಷ್ಟನ್ನು ಇನ್ನು ಸಾಧಿಸಿಲ್ಲ. ಎಲ್ಲಾ ಸರಿ ಇದೆ ಎಂದು ನಾನು ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ. ನನ್ನ ಕನಸುಗಳು ಮುಗಿದಿಲ್ಲ, 100% ಕೆಲಸ ಮಾಡಬೇಕಿದೆ” ಎಂದು ಮೋದಿ ಹೇಳಿದ್ದಾರೆ.

ಮೋದಿಯವರ ಆರೋಗ್ಯ ಸರಿ ಇಲ್ಲ, ಅವರಿಗೆ ರಕ್ಷಣಾ ಬೆದರಿಕೆ ಇದೆ ಎಂಬ ಊಹಾಪೋಹಗಳನ್ನು ಒಬ್ಬರು ನನ್ನ ಬಳಿ ಹೇಳಿದರು. ಆಗ ನಾನು ಹೇಳಿದೆ, “ನನಗೆ ಕೋಟ್ಯಾಂತರ ತಾಯಂದಿರ ಮತ್ತು ಸಹೋದರಿಯರ ಆರ್ಶೀವಾದವಿದೆ. ಆ ರಕ್ಷಾ ಕವಚವಿರುವುದರಿಂದ ಯಾರೂ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ; ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

ಸದ್ಯ ಬಿಜೆಪಿ 75 ವರ್ಷ ದಾಟಿದವರು ಅಧಿಕಾರದ ಸ್ಥಾನಗಳಲ್ಲಿ ಇರಬಾರದು ಎಂಬ ನಿಯಮ ಘೋಷಿಸಿದೆ. ಹಾಗೆ ನೋಡಿದರೆ 2024ರ ಚುನಾವಣೆ ಹೊತ್ತಿಗೆ ನರೇಂದ್ರ ಮೋದಿಯವರಿಗೆ 74 ವರ್ಷ ತುಂಬಿರುತ್ತದೆ. ಅವರು ಪ್ರಧಾನಿಯಾದರೆ 79 ವರ್ಷದವರೆಗೂ ಅಧಿಕಾರದಲ್ಲಿ ಇದ್ದ ಹಾಗೆ ಆಗುತ್ತದೆ. ಅದು ಬಿಜೆಪಿಯ ನಿಯಮವನ್ನು ಉಲ್ಲಂಘಿಸಿದಂತೆ ಆಗುವುದಿಲ್ಲವೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...