Homeಮುಖಪುಟ’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು...

’ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗೌಹಾಟಿಯಲ್ಲಿ ನಡೆದ ಬೃಹತ್ ರ್‍ಯಾಲಿಯಲ್ಲಿ ಮಾತನಾಡಿದ ಹಿಮಂತ ಬಿಸ್ವ ಶರ್ಮಾ, ’ಪ್ರಧಾನಿ ಅಮಿತ್ ಶಾರವರೆ ಮತ್ತು ಗೃಹ ಮಂತ್ರಿ ನರೇಂದ್ರ ಮೋದಿಯವರೆ’ ಎಂದು ಸಂಬೋಧಿಸಿ ಚರ್ಚೆಗೆ ಗ್ರಾಸವಾಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಲ್ಲದೆ, ಹಿಮಂತ ಶರ್ಮಾ ಬೇಕಂತಲೇ ಅಮಿತ್ ಶಾರವರನ್ನು ಪ್ರಧಾನಿ ಎಂದು ಕರೆದಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

2024ರ ಚುನಾವಣೆಗೆ ಗೃಹ ಸಚಿವ ಅಮಿತ್‌ ಶಾರವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ ಎಂಬ ಉಹಾಪೋಹಗಳ ನಡುವೆ ಅವರ ನಿಕಟವರ್ತಿಯಾದ ಅಸ್ಸಾಂ ಸಿಎಂ ಹಿಮಂತ ಶರ್ಮಾ ಈ ರೀತಿಯ ಹೇಳಿಕೆ ನೀಡಿದ್ದು ಅದಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು.

ಈ ಚರ್ಚೆ ಆರಂಭವಾಗುತ್ತಲೇ ಎಚ್ಚೆತ್ತುಕೊಂಡಿರುವ ಪ್ರಧಾನಿ ಮೋದಿ ಆ ಕುರಿತು ಪ್ರತಿಕ್ರಿಯಿಸಿದ್ದಾರೆ. ಹಿಮಂತ ಶರ್ಮಾ ಹೇಳಿಕೆ ನೀಡಿದ ಎರಡು ದಿನದ ನಂತರ ಗುಜರಾತ್‌ನಲ್ಲಿ ನಡೆದ ವರ್ಚುವಲ್ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ “ಮೂರನೇ ಅವಧಿಗೆ ಪ್ರಧಾನಿಯಾಗಲು ತಯಾರಿಯಾಗಿದ್ದು, ಶೇ.100 ರಷ್ಟು ಕೆಲಸಗಳನ್ನು ಮಾಡಲು 2024ರ ಚುನಾವಣೆಯಲ್ಲಿಯೂ ತಾನು ಪ್ರಧಾನಿ ಅಭ್ಯರ್ಥಿಯಾಗಿರುತ್ತೇನೆ” ಎಂಬ ಸಂದೇಶ ರವಾನಿಸಿದ್ದಾರೆ.

ಈ ವಿಷಯ ಪ್ರಸ್ತಾಪಿಸಿದ ಅವರು, “ಒಮ್ಮೆ ನಾನು ಗೌರವಿಸುವ ವಿರೋಧ ಪಕ್ಷದ ಹಿರಿಯ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕೆಲ ವಿಷಯಗಳನ್ನು ಮಾತನಾಡಿದ ನಂತರ, ಮೋದಿಜಿ ನಿಮಗೆ ಇನ್ನೇನು ಬೇಕು, ಈ ದೇಶ ನಿಮ್ಮನ್ನು ಎರಡು ಬಾರಿಗೆ ಪ್ರಧಾನಿಯನ್ನಾಗಿ ಮಾಡಿದೆ ಎಂದರು. ಎರಡು ಬಾರಿ ಪ್ರಧಾನಿಯಾಗುವುದು ದೊಡ್ಡ ಸಾಧನೆ ಎಂದು ಅವರು ಭಾವಿಸಿದ್ದರು. ಆದರೆ ಈ ಮೋದಿಯವರ ಮನಸ್ಸಿನಲ್ಲಿ ಬೇರೆ ಇದೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ಗುಜರಾತ್ ಮಣ್ಣಿನಲ್ಲಿ ಹುಟ್ಟಿಬಂದ ನಾನು ವಿಶ್ರಾಂತಿ ಪಡೆಯಬಹುದಾದಷ್ಟನ್ನು ಇನ್ನು ಸಾಧಿಸಿಲ್ಲ. ಎಲ್ಲಾ ಸರಿ ಇದೆ ಎಂದು ನಾನು ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ. ನನ್ನ ಕನಸುಗಳು ಮುಗಿದಿಲ್ಲ, 100% ಕೆಲಸ ಮಾಡಬೇಕಿದೆ” ಎಂದು ಮೋದಿ ಹೇಳಿದ್ದಾರೆ.

ಮೋದಿಯವರ ಆರೋಗ್ಯ ಸರಿ ಇಲ್ಲ, ಅವರಿಗೆ ರಕ್ಷಣಾ ಬೆದರಿಕೆ ಇದೆ ಎಂಬ ಊಹಾಪೋಹಗಳನ್ನು ಒಬ್ಬರು ನನ್ನ ಬಳಿ ಹೇಳಿದರು. ಆಗ ನಾನು ಹೇಳಿದೆ, “ನನಗೆ ಕೋಟ್ಯಾಂತರ ತಾಯಂದಿರ ಮತ್ತು ಸಹೋದರಿಯರ ಆರ್ಶೀವಾದವಿದೆ. ಆ ರಕ್ಷಾ ಕವಚವಿರುವುದರಿಂದ ಯಾರೂ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ; ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

ಸದ್ಯ ಬಿಜೆಪಿ 75 ವರ್ಷ ದಾಟಿದವರು ಅಧಿಕಾರದ ಸ್ಥಾನಗಳಲ್ಲಿ ಇರಬಾರದು ಎಂಬ ನಿಯಮ ಘೋಷಿಸಿದೆ. ಹಾಗೆ ನೋಡಿದರೆ 2024ರ ಚುನಾವಣೆ ಹೊತ್ತಿಗೆ ನರೇಂದ್ರ ಮೋದಿಯವರಿಗೆ 74 ವರ್ಷ ತುಂಬಿರುತ್ತದೆ. ಅವರು ಪ್ರಧಾನಿಯಾದರೆ 79 ವರ್ಷದವರೆಗೂ ಅಧಿಕಾರದಲ್ಲಿ ಇದ್ದ ಹಾಗೆ ಆಗುತ್ತದೆ. ಅದು ಬಿಜೆಪಿಯ ನಿಯಮವನ್ನು ಉಲ್ಲಂಘಿಸಿದಂತೆ ಆಗುವುದಿಲ್ಲವೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...