Homeಮುಖಪುಟತಪ್ಪು ಅನುವಾದದ ಭಗವದ್ಗೀತೆ ಶ್ಲೋಕ ಹಂಚಿಕೊಂಡ ಅಸ್ಸಾಂ ಸಿಎಂ; ವಿವಾದದ ನಂತರ ಕ್ಷಮೆಯಾಚನೆ

ತಪ್ಪು ಅನುವಾದದ ಭಗವದ್ಗೀತೆ ಶ್ಲೋಕ ಹಂಚಿಕೊಂಡ ಅಸ್ಸಾಂ ಸಿಎಂ; ವಿವಾದದ ನಂತರ ಕ್ಷಮೆಯಾಚನೆ

- Advertisement -
- Advertisement -

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಗವದ್ಗೀತೆಯ ಶ್ಲೋಕವನ್ನು ತಪ್ಪಾಗಿ ಭಾಷಾಂತರಿಸಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ ಮೂಲಕ ಶರ್ಮಾ ಅವರು ಜಾತಿ ವಿಭಜನೆಯನ್ನು ಉತ್ತೇಜಿಸುತ್ತಿದ್ದಾರೆ ಎಂದು ಹಲವಾರು ನಾಯಕರು ಆರೋಪಿಸಿದ್ದರು.

ಈ ಕುರಿತು ಕ್ಷಮೆಯಾಚಿಸಿರುವ ಶರ್ಮಾ, ‘ನನ್ನನ್ನು ಅನುಸರಿಸುವವರಿಗಾಗಿ ಪ್ರತಿದಿನ ಗೀತೆಯ ಒಂದು ಶ್ಲೋಕವನ್ನು ಹಂಚಿಕೊಳ್ಳುವ ಸಂಪ್ರದಾಯದ ಭಾಗವಾಗಿ ನನ್ನ ತಂಡವು ಎಕ್ಸ್ ಖಾತೆಯಲ್ಲಿ ಪದ್ಯವನ್ನು ಪೋಸ್ಟ್ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

‘ವಾಡಿಕೆಯಂತೆ ನಾನು ಪ್ರತಿದಿನ ಬೆಳಿಗ್ಗೆ ನನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಭಗವದ್ಗೀತೆಯ ಒಂದು ಶ್ಲೋಕವನ್ನು ಪೋಸ್ಟ್ ಮಾಡುತ್ತೇನೆ. ಇಲ್ಲಿಯವರೆಗೆ, ನಾನು 668 ಶ್ಲೋಕಗಳನ್ನು ಪೋಸ್ಟ್ ಮಾಡಿದ್ದು, ಇತ್ತೀಚೆಗೆ ನನ್ನ ತಂಡದ ಸದಸ್ಯರೊಬ್ಬರು ಅಧ್ಯಾಯ 18ರ 44 ಶ್ಲೋಕವನ್ನು ತಪ್ಪಾಗಿ ಅನುವಾದಿಸಿದ್ದಾರೆ. ತಪ್ಪು ಗಮನಕ್ಕೆ ಬಂದ ಕೂಡಲೇ ಟ್ವೀಟ್ ಡಿಲೀಟ್ ಮಾಡಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ತಪ್ಪನ್ನು ಗಮನಿಸಿದ ತಕ್ಷಣ ನಾನು ಪೋಸ್ಟ್ ಅನ್ನು ಅಳಿಸಿದ್ದೇನೆ. ಅಳಿಸಿದ ಪೋಸ್ಟ್ ಯಾರಿಗಾದರೂ ನೋಯಿಸಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

‘ಗೀತೆಯ ಪ್ರಕಾರ ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯ ಎಂಬ ಇತರ ಮೂರು ಜಾತಿಗಳಿಗೆ ಸೇವೆ ಸಲ್ಲಿಸುವುದು ಶೂದ್ರರ ಕರ್ತವ್ಯ’ ಎಂದು ಪ್ರಕಟಿಸಿದ್ದ ಪೋಸ್ಟ್ ರಾಜಕೀಯ ಗದ್ದಲವನ್ನು ಹುಟ್ಟುಹಾಕಿದೆ.

ಲೋಕಸಭಾ ಸದಸ್ಯ ಅಸಾದುದ್ದೀನ್ ಓವೈಸಿ ಅವರು ‘ಪ್ರತಿ ಭಾರತೀಯ ಪ್ರಜೆಯನ್ನು ಸಮಾನವಾಗಿ ಕಾಣುವ ಪ್ರತಿಜ್ಞೆಯನ್ನು ಅವರು ಪೂರೈಸುತ್ತಿಲ್ಲ’ ಎಂದು ಶರ್ಮಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ಅಸ್ಸಾಂ ಸಿಎಂ ತಾವು ಡಿಲೀಟ್ ಮಾಡಿದ ಪೋಸ್ಟ್‌ನಲ್ಲಿ ತಮ್ಮ ಸಮಾಜದ ದೃಷ್ಟಿಕೋನವನ್ನು ವಿವರಿಸಿದ್ದಾರೆ. ಕೃಷಿ, ಹಸು ಸಾಕಣೆ ಮತ್ತು ವಾಣಿಜ್ಯವು ವೈಶ್ಯರ ನೈಸರ್ಗಿಕ ಕರ್ತವ್ಯಗಳು ಮತ್ತು ಬ್ರಾಹ್ಮಣರು, ಕ್ಷತ್ರಿಯರು ಮತ್ತು ವೈಶ್ಯರಿಗೆ ಸೇವೆ ಸಲ್ಲಿಸುವುದು ಶೂದ್ರರ ನೈಸರ್ಗಿಕ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ. ಸಾಂವಿಧಾನಿಕ ಸ್ಥಾನವನ್ನು ಹೊಂದಿರುವ ನಿಮ್ಮ ಪ್ರತಿಜ್ಞೆಯು ಪ್ರತಿಯೊಬ್ಬ ನಾಗರಿಕರನ್ನು ಸಮಾನವಾಗಿ ಪರಿಗಣಿಸುವುದಾಗಿದೆ. ಕಳೆದ ಕೆಲವು ವರ್ಷಗಳಿಂದ ಅಸ್ಸಾಂನ ಮುಸ್ಲಿಮರು ಎದುರಿಸುತ್ತಿರುವ ದುರದೃಷ್ಟಕರ ಕ್ರೌರ್ಯವನ್ನು ಇದು ಪ್ರತಿಬಿಂಬಿಸುತ್ತದೆ. ಹಿಂದುತ್ವವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯಕ್ಕೆ ವಿರುದ್ಧವಾಗಿದೆ’ ಎಂದು ಓವೈಸಿ ಹೇಳಿದ್ದಾರೆ.

ಇದನ್ನೂ ಓದಿ; ಇಡಿ, ಸಿಬಿಐ ಬಳಸಿ ಹಣ ಲೂಟಿ: ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...