Homeಮುಖಪುಟಭಾರತ್ ಜೋಡೊ ಯಾತ್ರೆ ಮೇಲೆ ಬಿಜೆಪಿಗರಿಂದ ದಾಳಿ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷನಿಗೆ ಗಾಯ

ಭಾರತ್ ಜೋಡೊ ಯಾತ್ರೆ ಮೇಲೆ ಬಿಜೆಪಿಗರಿಂದ ದಾಳಿ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷನಿಗೆ ಗಾಯ

- Advertisement -
- Advertisement -

ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಭಾರತೀಯ ಜನತಾ ಪಕ್ಷ (ಬಿಜೆಪಿ) ದ ‘ಗೂಂಡಾಗಳು’ ನಡೆಸಿದ ದಾಳಿಯಲ್ಲಿ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಗಾಯಗೊಂಡಿದ್ದಾರೆ ಎಂದು ಪಕ್ಷ ಭಾನುವಾರ ಆರೋಪಿಸಿದೆ.

ಈ ಕುರಿತ ವಿಡಿಯೋವೊಂದನ್ನು ಕಾಂಗ್ರೆಸ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಭೂಪೇನ್ ಬೋರಾ ಅವರಿಗೆ ವ್ಯಕ್ತಿಯೊಬ್ಬ ತಲೆಯಿಂದ ಗುದ್ದಿರುವುದನ್ನು ಕಾಣಬಹುದು.

ಬಿಜೆಪಿ ಕಾರ್ಯಕರ್ತರು ಭಾರತ್ ಜೋಡೊ ಯಾತ್ರೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದಕ್ಕೆ ಪುಷ್ಠಿ ನೀಡುವಂತೆ ಅವರ ಕೈಯಲ್ಲಿ ಕೇಸರಿ ಮತ್ತು ಬಿಜೆಪಿ ಧ್ವಜ ಕಾಣಬಹುದು. ರಾಹುಲ್ ಗಾಂಧಿಯವರ ಯಾತ್ರೆ ಜಮುಗುರಿಹತ್‌ ಪಟ್ಟಣದ ಮೂಲಕ ಹಾದು ಹೋಗುವಾಗ ಬಿಜೆಪಿಯವರು ತಡೆಯೊಡ್ಡಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾಳಿ ಘಟನೆಯನ್ನು ರೆಕಾರ್ಡ್ ಮಾಡಲು ಯತ್ನಿಸುತ್ತಿದ್ದ ತಮ್ಮ ವರದಿಗಾರನ ಕ್ಯಾಮರಾವನ್ನೂ ಆರೋಪಿಗಳು ಕಿತ್ತುಕೊಂಡಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಘಟನೆಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿಯವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಬಸ್‌ನಲ್ಲಿ ತೆರಳುತ್ತಿದ್ದಾಗ ಬಿಜೆಪಿ ಧ್ವಜಗಳನ್ನು ಹಿಡಿದ ಗುಂಪು ‘ಮೋದಿ ಮೋದಿ’ ಎಂದು ಕೂಗಿದೆ. ಈ ವೇಳೆ ಅವರೊಂದಿಗೆ ಮಾತನಾಡಲು ರಾಹುಲ್ ಗಾಂಧಿ ಬಸ್‌ನಿಂದ ಕೆಳಗಿಳಿದಿದ್ದು, ಆಗ ಗುಂಪು ಅಲ್ಲಿಂದ ಚದುರಿದೆ.

ಬಿಜೆಪಿಯ 20 ರಿಂದ 25 ಕಾರ್ಯಕರ್ತರು “ಧ್ವಜದೊಂದಿಗೆ ನನ್ನ ಬಸ್‌ನ ಮುಂದೆ ಬಂದಿದ್ದರು” ಎಂದು ರಾಹುಲ್ ಗಾಂಧಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾನು ಬಸ್‌ನಿಂದ ಕೆಳಗಿಳಿದಾಗ ಅವರು ಓಡಿ ಹೋದರು. ಬಿಜೆಪಿ, ಆರೆಸ್ಸೆಸ್‌ ಕಾರ್ಯಕರ್ತರಿಗೆ ನಾವು ಹೆದರುತ್ತೀವಿ ಅಂದುಕೊಂಡಿದ್ದಾರೆ. ನಮ್ಮ ಪೋಸ್ಟರ್‌ಗಳನ್ನು ಅವರು ಹರಿದು ಹಾಕಿದ್ದಾರೆ. ಅವರು ಎಷ್ಟೇ ಪೋಸ್ಟರ್ ಹರಿದರೂ ನಮಗೆ ಯಾವುದೇ ಪರಿಣಾಮ ಬೀರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಯಾರಿಗೂ ನಾವು ಹೆದರುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಸ್ಸಾಂನ ಬಿಜೆಪಿ ಸರ್ಕಾರವು ಭಾರತ್ ಜೋಡೋ ಯಾತ್ರೆಯಲ್ಲಿ ಜನರು ಸೇರದಂತೆ ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದೆ. ಯಾತ್ರೆಯ ಮಾರ್ಗದಲ್ಲಿ ಕಾಂಗ್ರೆಸ್‌ನ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ಜನರ ಅಭೂತಪೂರ್ವ ಬೆಂಬಲ ದೊರೆಯುತ್ತಿರುವುದನ್ನು ಕಂಡು ಸಿಎಂ ಹಿಮಂತ ಬಿಸ್ವಾ ಶರ್ಮಾ ಗಲಿಬಿಲಿಗೊಂಡಿದ್ದಾರೆ. ಹಾಗಾಗಿ, ಅವರು ನಮ್ಮ ಯಾತ್ರೆ ತಡೆದು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ಕಾರ್ಯಕರ್ತರು ನಮ್ಮ ಪೋಸ್ಟರ್‌ಗಳನ್ನು ಹರಿಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂನ ದೇವಸ್ಥಾನದ ಆಡಳಿತವೊಂದು ಅಯೋಧ್ಯೆ ರಾಮಮಂದಿರದ ಉದ್ಘಾಟನಾ ಸಮಾರಂಭ ಮುಗಿಯುವವರೆಗೆ ದೇವಾಲಯಕ್ಕೆ ಭೆಟಿ ನೀಡದಂತೆ ರಾಹುಲ್ ಗಾಂಧಿಯವರಿಗೆ ಭಾನುವಾರ ಮನವಿ ಮಾಡಿದೆ ಎಂದು ವರದಿಗಳು ಹೇಳಿವೆ.

ಈ ವರದಿ ಬೆನ್ನಲ್ಲೇ, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ಫೋಟೋ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಕಾಂಗ್ರೆಸ್, “ಅಸ್ಸಾಂ ಮುಖ್ಯಮಂತ್ರಿ ಒಬ್ಬ ಹೇಡಿ” ಎಂದು ಬರೆದುಕೊಂಡಿತ್ತು.

ಇದನ್ನೂ ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಅಸ್ಸಾಂನಲ್ಲಿ ಜೈರಾಮ್‌ ರಮೇಶ್‌ ಕಾರಿನ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...