Homeಮುಖಪುಟಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯಾಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಕೆಗಳ ವಿರುದ್ದ ದೂರು ದಾಖಲಿಸಿದೆ.

- Advertisement -
- Advertisement -

ಮಾರ್ಚ್ 27 ರಂದು ಪಂಚರಾಜ್ಯಗಳ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಅಂದು ಚುನಾವಣೆ ನಡೆದ ಅಸ್ಸಾಂನಲ್ಲಿನ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಜಯಗಳಿಸಿದೆ ಎಂಬ ‘ಜಾಹೀರಾತನ್ನು, ಸುದ್ದಿಯ ರೂಪದಲ್ಲಿ ನೀಡಿದ್ದಾರೆ’ ಎಂದು ಆರೋಪಿಸಿ ದೂರು ದಾಖಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯದ ಬಿಜೆಪಿ ಅಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಿಕೆಗಳ ವಿರುದ್ದ ಕಾಂಗ್ರೆಸ್ ದೂರು ದಾಖಲಿಸಿದೆ.

ಮಾದರಿ ನೀತಿ ಸಂಹಿತೆ (ಎಂಸಿಸಿ), ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಸೆಕ್ಷನ್ 126 ಎ ಮತ್ತು ಮಾರ್ಚ್ 26 ರಂದು ಹೊರಡಿಸಿದ ಇಸಿಐ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾನುವಾರ ರಾತ್ರಿ ಎಫ್‌ಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಸ್ಸಾಂ ಕಾಂಗ್ರೆಸ್‌‌ನ ಕಾನೂನು ವಿಭಾಗದ ಅಧ್ಯಕ್ಷ ನಿರನ್ ಬೋರಾ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

“ಬಿಜೆಪಿ ನಾಯಕರು ಮತ್ತು ಸದಸ್ಯರು ಎಂಸಿಸಿ, ಜನರ ಪ್ರಾತಿನಿಧ್ಯ ಕಾಯ್ದೆ, 1951 ಮತ್ತು ಇಸಿಐನ ಸಂಬಂಧಿತ ಸೂಚನೆಗಳು ಮತ್ತು ಮಾಧ್ಯಮ ನೀತಿಗಳ ಉಲ್ಲಂಘನೆಯಾಗಿದೆ. ಬಿಜೆಪಿಗೆ ಸೋಲಾಗುತ್ತದೆ ಎಂದು ತಿಳಿದ ನಂತರ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಲು ಹತಾಶ, ಅಕ್ರಮ ಮತ್ತು ಅಸಂವಿಧಾನಿಕ ವಿಧಾನಗಳನ್ನು ಆಶ್ರಯಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎರಡನೇ ಮತ್ತು ಮೂರನೇ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರನ್ನು ಮೋಸಗೊಳಿಸಲು ಮಾಡಲಾದ ಪೂರ್ವ ಯೋಜಿತ ಪಿತೂರಿಯಾಗಿದೆ ಇದು. ಸಿಎಂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಾಧ್ಯಕ್ಷ ಮತ್ತು ಪಕ್ಷದ ಇತರ ಸದಸ್ಯರು ಉದ್ದೇಶಪೂರ್ವಕವಾಗಿ ಉತ್ತರ ಅಸ್ಸಾಂನ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುವ ಮೂಲಕ ವಿವಿಧ ಪತ್ರಿಕೆಗಳ ಮುಖ ಪುಟಗಳಲ್ಲಿ ಜಾಹೀರಾತುಗಳನ್ನು ಸುದ್ದಿಯ ರೀತಿಯಲ್ಲಿ ಬಿಡುಗಡೆ ಮಾಡಿದ್ದಾರೆ” ಎಂದು ಬೋರಾ ಹೇಳಿದ್ದಾರೆ.

“ಮತದಾರರ ಮನಸ್ಸನ್ನು ಪೂರ್ವಾಗ್ರಹ ಪೀಡಿತಗೊಳಿಸುವ ರೀತಿಯಲ್ಲಿ ಜಾಹೀರಾತುಗಳನ್ನು ಪ್ರಸ್ತುತಪಡಿಸಲಾಗಿದೆ. ಈ ದುರುದ್ದೇಶಪೂರಿತ ಮತ್ತು ತಿರುಚಿರುವ ಜಾಹೀರಾತುಗಳು ಜನರ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ಎ ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ಇದಲ್ಲದೆ, ಅಸ್ಸಾಂಗೆ ನಿರ್ದಿಷ್ಟವಾದ ಇಸಿಐನ ಸೂಚನೆಗಳು ಇದ್ದು, ಮಾರ್ಚ್ 27 ರಿಂದ ಏಪ್ರಿಲ್ 29 ರ ವರೆಗೆ ಮತದಾನ ಫಲಿತಾಂಶಗಳಿಗೆ ಸಂಬಂಧಿಸಿದ ಯಾವುದೇ ರೀತಿಯ ಮುನ್ಸೂಚನೆಯನ್ನು ಪ್ರಸಾರ ಮಾಡುವುದನ್ನು ನಿಷೇಧಿಸಿವೆ ಎಂದು ಬೋರಾ ಹೇಳಿದ್ದಾರೆ.

“ಪ್ರಸಕ್ತ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ತಮ್ಮ ಪರವಾಗಿದೆ ಎಂದು ತಪ್ಪಾಗಿ ಊಹಿಸುವ ದೊಡ್ಡ ಪ್ರಮಾಣದ ಜಾಹೀರಾತುಗಳನ್ನು ಬಿಜೆಪಿ ಪ್ರಕಟಿಸುವುದರಿಂದ ಇದು ಈ ಸೂಚನೆಗಳ ನೇರ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಪತ್ರಿಕೆಗಳು ಸೇರಿದಂತೆ ದೂರಿನಲ್ಲಿ ಹೆಸರಿಸಲಾದವರ ವಿರುದ್ಧ “ತ್ವರಿತ ಮತ್ತು ಅಗತ್ಯ ಕ್ರಮ” ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಅಸ್ಸಾಂನಲ್ಲಿ ಶನಿವಾರ ನಡೆದ ಮೊದಲ ಹಂತದ ಮತದಾನದ ವೇಳೆ ಒಟ್ಟು 81.09 ಲಕ್ಷ ಮತದಾರರಲ್ಲಿ ಶೇಕಡಾ 79.93 ರಷ್ಟು ಜನರು 47 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 39 ಸ್ಥಾನಗಳಿಗೆ ಚುನಾವಣೆ ಏಪ್ರಿಲ್ 1 ರಂದು ಮತ್ತು 40 ಸ್ಥಾನಗಳಿಗೆ ಮೂರನೇ ಮತ್ತು ಅಂತಿಮ ಹಂತದಲ್ಲಿ ಏಪ್ರಿಲ್ 6 ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಕ್ಷಣೆ ಕೊಡಿ ಎಂದು ಹೈಕೋರ್ಟ್ ಸಿಜೆಐಗೆ ಪತ್ರ ಬರೆದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...