Homeಮುಖಪುಟಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

- Advertisement -
- Advertisement -

ದೇಶದಾದ್ಯಂತ ಇತ್ತೀಚೆಗೆ ನಡೆದ 30 ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇವುಗಳಲ್ಲಿ ಅಸ್ಸಾಂನಲ್ಲಿ ಐದು ಸ್ಥಾನಗಳಿಗೆ ನಡೆದಿದ್ದ ವಿಧಾನಸಭಾ ಉಪಚುನಾವಣೆಯಲ್ಲಿ, ಐದೂ ಸ್ಥಾನಗಳಲ್ಲೂ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಗೆಲುವು ಸಾಧಿಸಿವೆ.

ಬಿಜೆಪಿ ಅಭ್ಯರ್ಥಿಗಳಾದ ಫಣಿಧರ್ ತಾಲೂಕ್ದಾರ್, ರೂಪಜ್ಯೋತಿ ಕುರ್ಮಿ ​​ಮತ್ತು ಸುಶಾಂತ ಬೊರ್ಗೊಹೈನ್ ಅವರು ಕ್ರಮವಾಗಿ ಭಬಾನಿಪುರ, ಮರಿಯಾನಿ ಮತ್ತು ಥೌರಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂವರು ಈ ವರ್ಷದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಟಿಕೆಟ್‌ನಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ನಂತರ, ಅವರು ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು.

ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನ ಅಭ್ಯರ್ಥಿಗಳಾದ ಜಿರಾನ್ ಬಸುಮತರಿ ಮತ್ತು ಜೋಲೆನ್ ಡೈಮರಿ ಕ್ರಮವಾಗಿ ಗೋಸಾಯಿಗಾಂವ್‌ ಮತ್ತು ತಮುಲ್‌ಪುರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಬಬಾನಿಪುರ್‌ ಕ್ಷೇತ್ರದಲ್ಲಿ ಬಿಜೆಪಿಯ ಫಣಿಧರ್ ತಾಲೂಕ್ದಾರ್ 64 ಸಾವಿರ ಮತಗಳೊಂದಿಗೆ, ಕಾಂಗ್ರೆಸ್‌ನ ಸೈಲೇಂದ್ರನಾಥ್‌ ದಾಸ್ ಅವರನ್ನು ಸೋಲಿಸಿದ್ದಾರೆ. ಇಲ್ಲಿ 38 ಸಾವಿರ ಮತಗಳು ಸೈಲೈಂದ್ರನಾಥ್‌ ಅವರ ಪರವಾಗಿ ಚಲಾವಣೆಯಾಗಿದ್ದವು. ಫಣಿಧರ್‌ ತಾಲೂಕ್ದಾರ್‌ ಈ ಹಿಂದೆ AIUDF ಪಕ್ಷದಿಂದ ಸ್ಪರ್ಧಿಸಿ ಗೆದ್ದುಕೊಂಡಿದ್ದರು. ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ಮರಿಯಾನಿ ಕ್ಷೇತ್ರದಲ್ಲಿ ಬಿಜೆಪಿಯ ರೂಪಜ್ಯೋತಿ ಕುರ್ಮಿ ಅವರ ಪರವಾಗಿ 55 ಸಾವಿರ ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್‌ನ ಲೋಹಿತ್‌ ಕೋನ್ವರ್‌ 15 ಸಾವಿರ ಮತಗಳನ್ನು ಪಡೆದು ಹೀನಾಯವಾಗಿ ಸೋಲುಂಡಿದ್ದಾರೆ. ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸಂಜೀಜ್‌ ಗೋಗಯ್‌ ಕೂಡಾ 15 ಸಾವಿರ ಮತಗಳನ್ನು ಪಡೆದಿದ್ದಾರೆ.

ಥೌರಾ ಕ್ಷೇತ್ರದಲ್ಲಿ ಬಿಜೆಪಿಯ ಸುಶಾಂತ ಬೊರ್ಗೊಹೈನ್ 54 ಸಾವಿರ ಮತಗಳನ್ನು ಪಡೆದು ಗೆಲುವಿನ ದಡ ಸೇರಿದ್ದಾರೆ. ಇಲ್ಲಿ  ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮನೊರಂಜನ್‌ ಕೊನ್ವಾರ್‌ 5,818 ಮತಗಳನ್ನು ಮಾತ್ರ ಪಡೆದಿದ್ದು, ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿದ್ದ ಧಾಜಿಯಾ ಕೋನ್ವರ್‌ ಅವರು 24 ಸಾವಿರ ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿ ಇದ್ದಾರೆ.

ಇದನ್ನೂ ಓದಿ: ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ಗೋಸಾಯಿಗಾಂವ್‌ ಕ್ಷೇತ್ರದಲ್ಲಿ 58 ಸಾವಿರ ಮತಗಳನ್ನು ಪಡೆದು ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನ ಜಿರಾನ್ ಬಸುಮತರಿ ವಿಜಯಿಯಾಗಿದ್ದಾರೆ. ಇಲ್ಲಿ ಕಾಂಗ್ರೆಸ್‌ನಿಂದ ಜೊವೆಲ್ ತುಡು ಅವರು ಸ್ಪರ್ಧಿಸಿದ್ದು 30 ಸಾವಿರ ಮತಗಳನ್ನು ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಭಾರಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. AIUDF ಯಿಂದ ಖೈರುಲ್‌ ಅನಾಮ್‌ ಖಾನ್‌ದಾರ್‌ ಸ್ಫರ್ಧಿಸಿ 19 ಸಾವಿರ ಮತಗಳನ್ನು ಪಡೆದಿದ್ದರೆ, ಬೋಡೋಲ್ಯಾಂಡ್‌ ಪೀಪಲ್ಸ್‌ ಫ್ರಂಟ್‌ನಿಂದ ಧ್ರುಭ ಕುಮಾರ್‌ ಬ್ರಹ್ಮ ಅವರು ಸ್ಪರ್ಧಿಸಿ 20 ಸಾವಿರ ಮತಗಳನ್ನು ಪಡೆದ್ದಾರೆ. ಜೊತೆಗೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಒಸ್ಮಾನ್‌ ಗೊನಿ ಅವರು 15 ಸಾವಿರ ಮತಗಳನ್ನು ಪಡೆದಿದ್ದಾರೆ.

ತಮುಲ್‌ಪುರ ಕ್ಷೇತ್ರದಲ್ಲಿ ಜೋಲೆನ್ ಡೈಮರಿ ಅವರು ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನಿಂದ ಸ್ಪರ್ಧಿಸಿದ್ದು ಅಲ್ಲಿ ಅವರು 82,462 ಮತಗಳನ್ನು ಪಡೆದಿದ್ದಾರೆ. ಕ್ಷೇತ್ರದಲ್ಲಿ ಇನ್ನೂ ಒಂದು ಸುತ್ತಿನ ಮತ ಎಣಿಕೆ ಬಾಕಿಯಿದೆ. ಇಲ್ಲಿ ಕಾಂಗ್ರೆಸ್ ನಾಲ್ಕನೇ ಸ್ಥಾನದಲ್ಲಿದ್ದು ಹೀನಾಯ ಸೋಲನ್ನು ಅನುಭವಿಸಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಭಾಸ್ಕರ್‌ ದಹಲ್‌ 7 ಸಾವಿರ ಮತಗಳನ್ನು ಪಡೆದಿದ್ದಾರೆ. ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗಣೇಶ್‌ ಕಚಾರಿ 28,546 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಗಣ ಸುರಕ್ಷಾ ಪಕ್ಷದ ಬ್ರಜೇಂದ್ರನಾಥ್‌ ಥೇಕಾ ಅವರಿದ್ದು, 12952 ಮತಗಳನ್ನು ಪಡೆದಿದ್ದಾರೆ. ಅಲ್ಲಿ ಇನ್ನೂ ಒಂದು ಹಂತದ ಮತ ಎಣಿಕೆ ಬಾಕಿಯಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮೂರು ಶಾಸಕರ ರಾಜೀನಾಮೆ ಮತ್ತು ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದ ಇಬ್ಬರು ಹಾಲಿ ಶಾಸಕರ ಸಾವಿನಿಂದಾಗಿ ಉಪಚುನಾವಣೆ ಅಕ್ಟೋಬರ್ 30 ರಂದು ನಡೆದಿತ್ತು. ಚುನಾವಣಾ ಪೂರ್ವದಲ್ಲಿ, ಅಧಿಕಾರಿಗಳು ಕ್ಷೇತ್ರಗಳಾದ್ಯಂತ ವಿವಿಧ ಸ್ಥಳಗಳಲ್ಲಿ 1.71 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ ಮತ್ತು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಸ್ಸಾಂ ಮುಖ್ಯ ಚುನಾವಣಾಧಿಕಾರಿ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...