Homeಮುಖಪುಟಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

- Advertisement -
- Advertisement -

ದೇಶದಾದ್ಯಂತ ಇತ್ತೀಚೆಗೆ ನಡೆದ 30 ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇವುಗಳಲ್ಲಿ ಅಸ್ಸಾಂನಲ್ಲಿ ಐದು ಸ್ಥಾನಗಳಿಗೆ ನಡೆದಿದ್ದ ವಿಧಾನಸಭಾ ಉಪಚುನಾವಣೆಯಲ್ಲಿ, ಐದೂ ಸ್ಥಾನಗಳಲ್ಲೂ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಗೆಲುವು ಸಾಧಿಸಿವೆ.

ಬಿಜೆಪಿ ಅಭ್ಯರ್ಥಿಗಳಾದ ಫಣಿಧರ್ ತಾಲೂಕ್ದಾರ್, ರೂಪಜ್ಯೋತಿ ಕುರ್ಮಿ ​​ಮತ್ತು ಸುಶಾಂತ ಬೊರ್ಗೊಹೈನ್ ಅವರು ಕ್ರಮವಾಗಿ ಭಬಾನಿಪುರ, ಮರಿಯಾನಿ ಮತ್ತು ಥೌರಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂವರು ಈ ವರ್ಷದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಟಿಕೆಟ್‌ನಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ನಂತರ, ಅವರು ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು.

ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನ ಅಭ್ಯರ್ಥಿಗಳಾದ ಜಿರಾನ್ ಬಸುಮತರಿ ಮತ್ತು ಜೋಲೆನ್ ಡೈಮರಿ ಕ್ರಮವಾಗಿ ಗೋಸಾಯಿಗಾಂವ್‌ ಮತ್ತು ತಮುಲ್‌ಪುರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಬಬಾನಿಪುರ್‌ ಕ್ಷೇತ್ರದಲ್ಲಿ ಬಿಜೆಪಿಯ ಫಣಿಧರ್ ತಾಲೂಕ್ದಾರ್ 64 ಸಾವಿರ ಮತಗಳೊಂದಿಗೆ, ಕಾಂಗ್ರೆಸ್‌ನ ಸೈಲೇಂದ್ರನಾಥ್‌ ದಾಸ್ ಅವರನ್ನು ಸೋಲಿಸಿದ್ದಾರೆ. ಇಲ್ಲಿ 38 ಸಾವಿರ ಮತಗಳು ಸೈಲೈಂದ್ರನಾಥ್‌ ಅವರ ಪರವಾಗಿ ಚಲಾವಣೆಯಾಗಿದ್ದವು. ಫಣಿಧರ್‌ ತಾಲೂಕ್ದಾರ್‌ ಈ ಹಿಂದೆ AIUDF ಪಕ್ಷದಿಂದ ಸ್ಪರ್ಧಿಸಿ ಗೆದ್ದುಕೊಂಡಿದ್ದರು. ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ಮರಿಯಾನಿ ಕ್ಷೇತ್ರದಲ್ಲಿ ಬಿಜೆಪಿಯ ರೂಪಜ್ಯೋತಿ ಕುರ್ಮಿ ಅವರ ಪರವಾಗಿ 55 ಸಾವಿರ ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್‌ನ ಲೋಹಿತ್‌ ಕೋನ್ವರ್‌ 15 ಸಾವಿರ ಮತಗಳನ್ನು ಪಡೆದು ಹೀನಾಯವಾಗಿ ಸೋಲುಂಡಿದ್ದಾರೆ. ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸಂಜೀಜ್‌ ಗೋಗಯ್‌ ಕೂಡಾ 15 ಸಾವಿರ ಮತಗಳನ್ನು ಪಡೆದಿದ್ದಾರೆ.

ಥೌರಾ ಕ್ಷೇತ್ರದಲ್ಲಿ ಬಿಜೆಪಿಯ ಸುಶಾಂತ ಬೊರ್ಗೊಹೈನ್ 54 ಸಾವಿರ ಮತಗಳನ್ನು ಪಡೆದು ಗೆಲುವಿನ ದಡ ಸೇರಿದ್ದಾರೆ. ಇಲ್ಲಿ  ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮನೊರಂಜನ್‌ ಕೊನ್ವಾರ್‌ 5,818 ಮತಗಳನ್ನು ಮಾತ್ರ ಪಡೆದಿದ್ದು, ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿದ್ದ ಧಾಜಿಯಾ ಕೋನ್ವರ್‌ ಅವರು 24 ಸಾವಿರ ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿ ಇದ್ದಾರೆ.

ಇದನ್ನೂ ಓದಿ: ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ಗೋಸಾಯಿಗಾಂವ್‌ ಕ್ಷೇತ್ರದಲ್ಲಿ 58 ಸಾವಿರ ಮತಗಳನ್ನು ಪಡೆದು ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನ ಜಿರಾನ್ ಬಸುಮತರಿ ವಿಜಯಿಯಾಗಿದ್ದಾರೆ. ಇಲ್ಲಿ ಕಾಂಗ್ರೆಸ್‌ನಿಂದ ಜೊವೆಲ್ ತುಡು ಅವರು ಸ್ಪರ್ಧಿಸಿದ್ದು 30 ಸಾವಿರ ಮತಗಳನ್ನು ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಭಾರಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. AIUDF ಯಿಂದ ಖೈರುಲ್‌ ಅನಾಮ್‌ ಖಾನ್‌ದಾರ್‌ ಸ್ಫರ್ಧಿಸಿ 19 ಸಾವಿರ ಮತಗಳನ್ನು ಪಡೆದಿದ್ದರೆ, ಬೋಡೋಲ್ಯಾಂಡ್‌ ಪೀಪಲ್ಸ್‌ ಫ್ರಂಟ್‌ನಿಂದ ಧ್ರುಭ ಕುಮಾರ್‌ ಬ್ರಹ್ಮ ಅವರು ಸ್ಪರ್ಧಿಸಿ 20 ಸಾವಿರ ಮತಗಳನ್ನು ಪಡೆದ್ದಾರೆ. ಜೊತೆಗೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಒಸ್ಮಾನ್‌ ಗೊನಿ ಅವರು 15 ಸಾವಿರ ಮತಗಳನ್ನು ಪಡೆದಿದ್ದಾರೆ.

ತಮುಲ್‌ಪುರ ಕ್ಷೇತ್ರದಲ್ಲಿ ಜೋಲೆನ್ ಡೈಮರಿ ಅವರು ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನಿಂದ ಸ್ಪರ್ಧಿಸಿದ್ದು ಅಲ್ಲಿ ಅವರು 82,462 ಮತಗಳನ್ನು ಪಡೆದಿದ್ದಾರೆ. ಕ್ಷೇತ್ರದಲ್ಲಿ ಇನ್ನೂ ಒಂದು ಸುತ್ತಿನ ಮತ ಎಣಿಕೆ ಬಾಕಿಯಿದೆ. ಇಲ್ಲಿ ಕಾಂಗ್ರೆಸ್ ನಾಲ್ಕನೇ ಸ್ಥಾನದಲ್ಲಿದ್ದು ಹೀನಾಯ ಸೋಲನ್ನು ಅನುಭವಿಸಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಭಾಸ್ಕರ್‌ ದಹಲ್‌ 7 ಸಾವಿರ ಮತಗಳನ್ನು ಪಡೆದಿದ್ದಾರೆ. ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗಣೇಶ್‌ ಕಚಾರಿ 28,546 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಗಣ ಸುರಕ್ಷಾ ಪಕ್ಷದ ಬ್ರಜೇಂದ್ರನಾಥ್‌ ಥೇಕಾ ಅವರಿದ್ದು, 12952 ಮತಗಳನ್ನು ಪಡೆದಿದ್ದಾರೆ. ಅಲ್ಲಿ ಇನ್ನೂ ಒಂದು ಹಂತದ ಮತ ಎಣಿಕೆ ಬಾಕಿಯಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮೂರು ಶಾಸಕರ ರಾಜೀನಾಮೆ ಮತ್ತು ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದ ಇಬ್ಬರು ಹಾಲಿ ಶಾಸಕರ ಸಾವಿನಿಂದಾಗಿ ಉಪಚುನಾವಣೆ ಅಕ್ಟೋಬರ್ 30 ರಂದು ನಡೆದಿತ್ತು. ಚುನಾವಣಾ ಪೂರ್ವದಲ್ಲಿ, ಅಧಿಕಾರಿಗಳು ಕ್ಷೇತ್ರಗಳಾದ್ಯಂತ ವಿವಿಧ ಸ್ಥಳಗಳಲ್ಲಿ 1.71 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ ಮತ್ತು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಸ್ಸಾಂ ಮುಖ್ಯ ಚುನಾವಣಾಧಿಕಾರಿ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...