Homeಮುಖಪುಟಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

- Advertisement -
- Advertisement -

ದೇಶದಾದ್ಯಂತ ಇತ್ತೀಚೆಗೆ ನಡೆದ 30 ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇವುಗಳಲ್ಲಿ ಅಸ್ಸಾಂನಲ್ಲಿ ಐದು ಸ್ಥಾನಗಳಿಗೆ ನಡೆದಿದ್ದ ವಿಧಾನಸಭಾ ಉಪಚುನಾವಣೆಯಲ್ಲಿ, ಐದೂ ಸ್ಥಾನಗಳಲ್ಲೂ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಗೆಲುವು ಸಾಧಿಸಿವೆ.

ಬಿಜೆಪಿ ಅಭ್ಯರ್ಥಿಗಳಾದ ಫಣಿಧರ್ ತಾಲೂಕ್ದಾರ್, ರೂಪಜ್ಯೋತಿ ಕುರ್ಮಿ ​​ಮತ್ತು ಸುಶಾಂತ ಬೊರ್ಗೊಹೈನ್ ಅವರು ಕ್ರಮವಾಗಿ ಭಬಾನಿಪುರ, ಮರಿಯಾನಿ ಮತ್ತು ಥೌರಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂವರು ಈ ವರ್ಷದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಟಿಕೆಟ್‌ನಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ನಂತರ, ಅವರು ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು.

ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನ ಅಭ್ಯರ್ಥಿಗಳಾದ ಜಿರಾನ್ ಬಸುಮತರಿ ಮತ್ತು ಜೋಲೆನ್ ಡೈಮರಿ ಕ್ರಮವಾಗಿ ಗೋಸಾಯಿಗಾಂವ್‌ ಮತ್ತು ತಮುಲ್‌ಪುರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಬಬಾನಿಪುರ್‌ ಕ್ಷೇತ್ರದಲ್ಲಿ ಬಿಜೆಪಿಯ ಫಣಿಧರ್ ತಾಲೂಕ್ದಾರ್ 64 ಸಾವಿರ ಮತಗಳೊಂದಿಗೆ, ಕಾಂಗ್ರೆಸ್‌ನ ಸೈಲೇಂದ್ರನಾಥ್‌ ದಾಸ್ ಅವರನ್ನು ಸೋಲಿಸಿದ್ದಾರೆ. ಇಲ್ಲಿ 38 ಸಾವಿರ ಮತಗಳು ಸೈಲೈಂದ್ರನಾಥ್‌ ಅವರ ಪರವಾಗಿ ಚಲಾವಣೆಯಾಗಿದ್ದವು. ಫಣಿಧರ್‌ ತಾಲೂಕ್ದಾರ್‌ ಈ ಹಿಂದೆ AIUDF ಪಕ್ಷದಿಂದ ಸ್ಪರ್ಧಿಸಿ ಗೆದ್ದುಕೊಂಡಿದ್ದರು. ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ಮರಿಯಾನಿ ಕ್ಷೇತ್ರದಲ್ಲಿ ಬಿಜೆಪಿಯ ರೂಪಜ್ಯೋತಿ ಕುರ್ಮಿ ಅವರ ಪರವಾಗಿ 55 ಸಾವಿರ ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್‌ನ ಲೋಹಿತ್‌ ಕೋನ್ವರ್‌ 15 ಸಾವಿರ ಮತಗಳನ್ನು ಪಡೆದು ಹೀನಾಯವಾಗಿ ಸೋಲುಂಡಿದ್ದಾರೆ. ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸಂಜೀಜ್‌ ಗೋಗಯ್‌ ಕೂಡಾ 15 ಸಾವಿರ ಮತಗಳನ್ನು ಪಡೆದಿದ್ದಾರೆ.

ಥೌರಾ ಕ್ಷೇತ್ರದಲ್ಲಿ ಬಿಜೆಪಿಯ ಸುಶಾಂತ ಬೊರ್ಗೊಹೈನ್ 54 ಸಾವಿರ ಮತಗಳನ್ನು ಪಡೆದು ಗೆಲುವಿನ ದಡ ಸೇರಿದ್ದಾರೆ. ಇಲ್ಲಿ  ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮನೊರಂಜನ್‌ ಕೊನ್ವಾರ್‌ 5,818 ಮತಗಳನ್ನು ಮಾತ್ರ ಪಡೆದಿದ್ದು, ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿದ್ದ ಧಾಜಿಯಾ ಕೋನ್ವರ್‌ ಅವರು 24 ಸಾವಿರ ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿ ಇದ್ದಾರೆ.

ಇದನ್ನೂ ಓದಿ: ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ಗೋಸಾಯಿಗಾಂವ್‌ ಕ್ಷೇತ್ರದಲ್ಲಿ 58 ಸಾವಿರ ಮತಗಳನ್ನು ಪಡೆದು ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನ ಜಿರಾನ್ ಬಸುಮತರಿ ವಿಜಯಿಯಾಗಿದ್ದಾರೆ. ಇಲ್ಲಿ ಕಾಂಗ್ರೆಸ್‌ನಿಂದ ಜೊವೆಲ್ ತುಡು ಅವರು ಸ್ಪರ್ಧಿಸಿದ್ದು 30 ಸಾವಿರ ಮತಗಳನ್ನು ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಭಾರಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. AIUDF ಯಿಂದ ಖೈರುಲ್‌ ಅನಾಮ್‌ ಖಾನ್‌ದಾರ್‌ ಸ್ಫರ್ಧಿಸಿ 19 ಸಾವಿರ ಮತಗಳನ್ನು ಪಡೆದಿದ್ದರೆ, ಬೋಡೋಲ್ಯಾಂಡ್‌ ಪೀಪಲ್ಸ್‌ ಫ್ರಂಟ್‌ನಿಂದ ಧ್ರುಭ ಕುಮಾರ್‌ ಬ್ರಹ್ಮ ಅವರು ಸ್ಪರ್ಧಿಸಿ 20 ಸಾವಿರ ಮತಗಳನ್ನು ಪಡೆದ್ದಾರೆ. ಜೊತೆಗೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಒಸ್ಮಾನ್‌ ಗೊನಿ ಅವರು 15 ಸಾವಿರ ಮತಗಳನ್ನು ಪಡೆದಿದ್ದಾರೆ.

ತಮುಲ್‌ಪುರ ಕ್ಷೇತ್ರದಲ್ಲಿ ಜೋಲೆನ್ ಡೈಮರಿ ಅವರು ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನಿಂದ ಸ್ಪರ್ಧಿಸಿದ್ದು ಅಲ್ಲಿ ಅವರು 82,462 ಮತಗಳನ್ನು ಪಡೆದಿದ್ದಾರೆ. ಕ್ಷೇತ್ರದಲ್ಲಿ ಇನ್ನೂ ಒಂದು ಸುತ್ತಿನ ಮತ ಎಣಿಕೆ ಬಾಕಿಯಿದೆ. ಇಲ್ಲಿ ಕಾಂಗ್ರೆಸ್ ನಾಲ್ಕನೇ ಸ್ಥಾನದಲ್ಲಿದ್ದು ಹೀನಾಯ ಸೋಲನ್ನು ಅನುಭವಿಸಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಭಾಸ್ಕರ್‌ ದಹಲ್‌ 7 ಸಾವಿರ ಮತಗಳನ್ನು ಪಡೆದಿದ್ದಾರೆ. ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗಣೇಶ್‌ ಕಚಾರಿ 28,546 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಗಣ ಸುರಕ್ಷಾ ಪಕ್ಷದ ಬ್ರಜೇಂದ್ರನಾಥ್‌ ಥೇಕಾ ಅವರಿದ್ದು, 12952 ಮತಗಳನ್ನು ಪಡೆದಿದ್ದಾರೆ. ಅಲ್ಲಿ ಇನ್ನೂ ಒಂದು ಹಂತದ ಮತ ಎಣಿಕೆ ಬಾಕಿಯಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮೂರು ಶಾಸಕರ ರಾಜೀನಾಮೆ ಮತ್ತು ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದ ಇಬ್ಬರು ಹಾಲಿ ಶಾಸಕರ ಸಾವಿನಿಂದಾಗಿ ಉಪಚುನಾವಣೆ ಅಕ್ಟೋಬರ್ 30 ರಂದು ನಡೆದಿತ್ತು. ಚುನಾವಣಾ ಪೂರ್ವದಲ್ಲಿ, ಅಧಿಕಾರಿಗಳು ಕ್ಷೇತ್ರಗಳಾದ್ಯಂತ ವಿವಿಧ ಸ್ಥಳಗಳಲ್ಲಿ 1.71 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ ಮತ್ತು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಸ್ಸಾಂ ಮುಖ್ಯ ಚುನಾವಣಾಧಿಕಾರಿ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...