Homeಮುಖಪುಟಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

ಅಸ್ಸಾಂ: ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಸೋಲು; ಆಪರೇಷನ್‌ ಕಮಲಕ್ಕೆ ಜಯ!

- Advertisement -
- Advertisement -

ದೇಶದಾದ್ಯಂತ ಇತ್ತೀಚೆಗೆ ನಡೆದ 30 ವಿಧಾನಸಭೆ ಮತ್ತು ಮೂರು ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇವುಗಳಲ್ಲಿ ಅಸ್ಸಾಂನಲ್ಲಿ ಐದು ಸ್ಥಾನಗಳಿಗೆ ನಡೆದಿದ್ದ ವಿಧಾನಸಭಾ ಉಪಚುನಾವಣೆಯಲ್ಲಿ, ಐದೂ ಸ್ಥಾನಗಳಲ್ಲೂ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಗೆಲುವು ಸಾಧಿಸಿವೆ.

ಬಿಜೆಪಿ ಅಭ್ಯರ್ಥಿಗಳಾದ ಫಣಿಧರ್ ತಾಲೂಕ್ದಾರ್, ರೂಪಜ್ಯೋತಿ ಕುರ್ಮಿ ​​ಮತ್ತು ಸುಶಾಂತ ಬೊರ್ಗೊಹೈನ್ ಅವರು ಕ್ರಮವಾಗಿ ಭಬಾನಿಪುರ, ಮರಿಯಾನಿ ಮತ್ತು ಥೌರಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂವರು ಈ ವರ್ಷದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಟಿಕೆಟ್‌ನಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ನಂತರ, ಅವರು ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದರು.

ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನ ಅಭ್ಯರ್ಥಿಗಳಾದ ಜಿರಾನ್ ಬಸುಮತರಿ ಮತ್ತು ಜೋಲೆನ್ ಡೈಮರಿ ಕ್ರಮವಾಗಿ ಗೋಸಾಯಿಗಾಂವ್‌ ಮತ್ತು ತಮುಲ್‌ಪುರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಬಬಾನಿಪುರ್‌ ಕ್ಷೇತ್ರದಲ್ಲಿ ಬಿಜೆಪಿಯ ಫಣಿಧರ್ ತಾಲೂಕ್ದಾರ್ 64 ಸಾವಿರ ಮತಗಳೊಂದಿಗೆ, ಕಾಂಗ್ರೆಸ್‌ನ ಸೈಲೇಂದ್ರನಾಥ್‌ ದಾಸ್ ಅವರನ್ನು ಸೋಲಿಸಿದ್ದಾರೆ. ಇಲ್ಲಿ 38 ಸಾವಿರ ಮತಗಳು ಸೈಲೈಂದ್ರನಾಥ್‌ ಅವರ ಪರವಾಗಿ ಚಲಾವಣೆಯಾಗಿದ್ದವು. ಫಣಿಧರ್‌ ತಾಲೂಕ್ದಾರ್‌ ಈ ಹಿಂದೆ AIUDF ಪಕ್ಷದಿಂದ ಸ್ಪರ್ಧಿಸಿ ಗೆದ್ದುಕೊಂಡಿದ್ದರು. ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ಮರಿಯಾನಿ ಕ್ಷೇತ್ರದಲ್ಲಿ ಬಿಜೆಪಿಯ ರೂಪಜ್ಯೋತಿ ಕುರ್ಮಿ ಅವರ ಪರವಾಗಿ 55 ಸಾವಿರ ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್‌ನ ಲೋಹಿತ್‌ ಕೋನ್ವರ್‌ 15 ಸಾವಿರ ಮತಗಳನ್ನು ಪಡೆದು ಹೀನಾಯವಾಗಿ ಸೋಲುಂಡಿದ್ದಾರೆ. ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಸಂಜೀಜ್‌ ಗೋಗಯ್‌ ಕೂಡಾ 15 ಸಾವಿರ ಮತಗಳನ್ನು ಪಡೆದಿದ್ದಾರೆ.

ಥೌರಾ ಕ್ಷೇತ್ರದಲ್ಲಿ ಬಿಜೆಪಿಯ ಸುಶಾಂತ ಬೊರ್ಗೊಹೈನ್ 54 ಸಾವಿರ ಮತಗಳನ್ನು ಪಡೆದು ಗೆಲುವಿನ ದಡ ಸೇರಿದ್ದಾರೆ. ಇಲ್ಲಿ  ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮನೊರಂಜನ್‌ ಕೊನ್ವಾರ್‌ 5,818 ಮತಗಳನ್ನು ಮಾತ್ರ ಪಡೆದಿದ್ದು, ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿದ್ದ ಧಾಜಿಯಾ ಕೋನ್ವರ್‌ ಅವರು 24 ಸಾವಿರ ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿ ಇದ್ದಾರೆ.

ಇದನ್ನೂ ಓದಿ: ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ಗೋಸಾಯಿಗಾಂವ್‌ ಕ್ಷೇತ್ರದಲ್ಲಿ 58 ಸಾವಿರ ಮತಗಳನ್ನು ಪಡೆದು ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನ ಜಿರಾನ್ ಬಸುಮತರಿ ವಿಜಯಿಯಾಗಿದ್ದಾರೆ. ಇಲ್ಲಿ ಕಾಂಗ್ರೆಸ್‌ನಿಂದ ಜೊವೆಲ್ ತುಡು ಅವರು ಸ್ಪರ್ಧಿಸಿದ್ದು 30 ಸಾವಿರ ಮತಗಳನ್ನು ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಭಾರಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. AIUDF ಯಿಂದ ಖೈರುಲ್‌ ಅನಾಮ್‌ ಖಾನ್‌ದಾರ್‌ ಸ್ಫರ್ಧಿಸಿ 19 ಸಾವಿರ ಮತಗಳನ್ನು ಪಡೆದಿದ್ದರೆ, ಬೋಡೋಲ್ಯಾಂಡ್‌ ಪೀಪಲ್ಸ್‌ ಫ್ರಂಟ್‌ನಿಂದ ಧ್ರುಭ ಕುಮಾರ್‌ ಬ್ರಹ್ಮ ಅವರು ಸ್ಪರ್ಧಿಸಿ 20 ಸಾವಿರ ಮತಗಳನ್ನು ಪಡೆದ್ದಾರೆ. ಜೊತೆಗೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಒಸ್ಮಾನ್‌ ಗೊನಿ ಅವರು 15 ಸಾವಿರ ಮತಗಳನ್ನು ಪಡೆದಿದ್ದಾರೆ.

ತಮುಲ್‌ಪುರ ಕ್ಷೇತ್ರದಲ್ಲಿ ಜೋಲೆನ್ ಡೈಮರಿ ಅವರು ಬಿಜೆಪಿ ಮಿತ್ರ ಪಕ್ಷವಾದ ಯುಪಿಪಿಎಲ್‌ನಿಂದ ಸ್ಪರ್ಧಿಸಿದ್ದು ಅಲ್ಲಿ ಅವರು 82,462 ಮತಗಳನ್ನು ಪಡೆದಿದ್ದಾರೆ. ಕ್ಷೇತ್ರದಲ್ಲಿ ಇನ್ನೂ ಒಂದು ಸುತ್ತಿನ ಮತ ಎಣಿಕೆ ಬಾಕಿಯಿದೆ. ಇಲ್ಲಿ ಕಾಂಗ್ರೆಸ್ ನಾಲ್ಕನೇ ಸ್ಥಾನದಲ್ಲಿದ್ದು ಹೀನಾಯ ಸೋಲನ್ನು ಅನುಭವಿಸಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಭಾಸ್ಕರ್‌ ದಹಲ್‌ 7 ಸಾವಿರ ಮತಗಳನ್ನು ಪಡೆದಿದ್ದಾರೆ. ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗಣೇಶ್‌ ಕಚಾರಿ 28,546 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಗಣ ಸುರಕ್ಷಾ ಪಕ್ಷದ ಬ್ರಜೇಂದ್ರನಾಥ್‌ ಥೇಕಾ ಅವರಿದ್ದು, 12952 ಮತಗಳನ್ನು ಪಡೆದಿದ್ದಾರೆ. ಅಲ್ಲಿ ಇನ್ನೂ ಒಂದು ಹಂತದ ಮತ ಎಣಿಕೆ ಬಾಕಿಯಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮೂರು ಶಾಸಕರ ರಾಜೀನಾಮೆ ಮತ್ತು ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದ ಇಬ್ಬರು ಹಾಲಿ ಶಾಸಕರ ಸಾವಿನಿಂದಾಗಿ ಉಪಚುನಾವಣೆ ಅಕ್ಟೋಬರ್ 30 ರಂದು ನಡೆದಿತ್ತು. ಚುನಾವಣಾ ಪೂರ್ವದಲ್ಲಿ, ಅಧಿಕಾರಿಗಳು ಕ್ಷೇತ್ರಗಳಾದ್ಯಂತ ವಿವಿಧ ಸ್ಥಳಗಳಲ್ಲಿ 1.71 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ ಮತ್ತು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಸ್ಸಾಂ ಮುಖ್ಯ ಚುನಾವಣಾಧಿಕಾರಿ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...