Homeಮುಖಪುಟಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

- Advertisement -
- Advertisement -

ಅಸ್ಸಾಂನಲ್ಲಿ ನಿನ್ನೆ ಎರಡನೇ ಹಂತದ ಚುನಾವಣೆ ಮುಕ್ತಾಯವಾಗಿದ್ದು, ಮತದಾನದ ಅಂತ್ಯಕ್ಕೆ ಗಲಭೆಗೆ ತಿರುಗಿರುವ ಆತಂಕಕಾರಿ ಘಟನೆ ಜರುಗಿದೆ. ಅಸ್ಸಾಂನ ಬರಾಕ್ ಕಣಿವೆ ಪ್ರದೇಶದಲ್ಲಿ  ಚುನಾವಣಾ ಅಧಿಕಾರಿಗಳು ಮತದಾನ ಅಂತ್ಯಗೊಂಡ ನಂತರ ಕಾನೂನುಬಾಹಿರವಾಗಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯೊಬ್ಬರ ಕಾರಿನಲ್ಲಿ ಪ್ರಯಾಣ ಮಾಡಿದ್ದು ಹಿಂಸೆ ಭುಗಿಲೇಳಲು ಕಾರಣವಾಗಿದೆ.

ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಹೋಗುತ್ತಿದ್ದನ್ನು ಪ್ರತಿಪಕ್ಷದ ಕಾರ್ಯಕರ್ತರು ತಡೆದು ಘೇರಾವ್ ಹಾಕಿದ್ದಾರೆ. ಗುಂಪು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀಚಾರ್ಜ್ ನಡೆಸಿದ್ದಾರೆ. ಆಗ ಹಿಂಸೆಗೆ ತಿರುಗಿದೆ.

ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚುನಾವಣಾ ಆಯೋಗ ಪೂರ್ಣವಾಗಿ ಬಿಜೆಪಿಯೊಂದಿಗೆ ಶಾಮೀಲಾಗಿದೆ. ಈ ಚುನಾವಣೆಗೆ ಅರ್ಥವಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರುವುದನ್ನು ನೋಡಬಹುದು.

ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದಲ್ಲಿ ಮತದಾನ ಮುಗಿದ ನಂತರ ಇವಿಎಂಗಳನ್ನು ಸರ್ಕಾರಿ ಭದ್ರತಾ ವಾಹನದಲ್ಲಿ ಇವಿಎಂಗಳನ್ನು ಇರಿಸುವ ಸ್ಟ್ರಾಂಗ್‌ ರೂಂಗೆ ಸಾಗಿಸಬೇಕಿತ್ತು. ಆದರೆ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಗಂಟೆಗಳಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಸೇರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಆ ಕಾರು ಸ್ಟ್ರಾಂಗ್‌ ರೂಂ ಬಳಿ ಬರುತ್ತಿದ್ದಂತೆ ರೊಚ್ಚಿಗೆದ್ದ ವಿರೋಧ ಪಕ್ಷದ ಬೆಂಬಲಿಗರು ಕಾರನ್ನು ಸುತ್ತುವರಿದು ಘೋಷಣೆ ಕೂಗಿದ್ದಾರೆ. ಕಾರಿನ ಡ್ರೈವರ್ ಸೇರಿದಂತೆ ಪೊಲೀಸರು ಸ್ಥಳದಿಂದ ಪರಾರಿಯಾದರು ಎನ್ನಲಾಗಿದೆ. ಆ ಸಂದರ್ಭದಲ್ಲಿ ಜಿಲ್ಲಾಡಳಿತ ಶಾಂತಿ ಕಾಪಾಡಲು ಲಾಠೀಚಾರ್ಜ್ ಮಾಡಲು ಆದೇಶ ನೀಡಿತು. ಇವಿಎಂಗಳು ಸುರಕ್ಷಿತವಾಗಿವೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯನ್ನು ಅಸ್ಸಾಂ ಪ್ರತಿಪಕ್ಷಗಳು ತೀವ್ರವಾಗಿ ಖಂಡಿಸಿವೆ. ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಸೇರಿದಂತೆ ಹಲವಾರು ಮುಖಂಡರು ಘಟನೆಯನ್ನು ಖಂಡಿಸಿದ್ದಾರೆ.


ಇದನ್ನೂ ಓದಿ: ಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...