Homeಮುಖಪುಟಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

- Advertisement -
- Advertisement -

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ. ಬದಲಾಗಿ, ಯುವಜನರ ಕಲ್ಯಾಣದ ಕುರಿತು ಮಾತನಾಡಲಾರಂಭಿಸಿದ್ದಾರೆ.

ಶನಿವಾರ (ಏ.4) ಗುವಾಹಟಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪಿಜುಷ್ ಹಜಾರಿಕಾ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನತೆಯ ಕಲ್ಯಾಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿವೆ” ಎಂದು ಹೇಳಿದ್ದಾರೆ. ತಮ್ಮ ಸರ್ಕಾರಗಳ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.

ಬಿಜೆಪಿಯ ಈ ಹಠಾತ್ ಬದಲಾವಣೆಯು, ಕಳೆದ ಹತ್ತು ವರ್ಷಗಳಿಂದ  ಬಿಜೆಪಿ ಬಳಸುತ್ತಿದ್ದ ‘ನುಸುಳುಕೋರ’ ಎಂಬ ಹಳೆಯ ರಾಗವು ಯುವ ಮತದಾರರನ್ನು ಪ್ರಭಾವಿಸಿಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡಂತಿದೆ. ಅಲ್ಲದೆ, ಯುವಜನತೆಯಲ್ಲಿ ಎನ್‌ಡಿಎ ವಿರುದ್ಧ ಮೌನ ಅಲೆ ಇರುವ ಸಾಧ್ಯತೆಯನ್ನು ಬಿಜೆಪಿ ಅರಿತುಕೊಂಡಿದೆ. ಆದ್ದರಿಂದ, ಸರ್ಕಾರದ ಕಾರ್ಯವೈಖರಿ ಬರಿ ಭಾಷಣಕ್ಕೆ ಸೀಮಿತವಾಗಿಲ್ಲ, ಬದಲಿಗೆ ಜೀವನೋಪಾಯದ ಸಮಸ್ಯೆಗಳಿಗೂ ಸ್ಪಂದಿಸುತ್ತಿದೆ ಎಂದು ಮನವರಿಕೆ ಮಾಡಲು ಪ್ರಯತ್ನಿಸುತ್ತಿದೆ.

ಸಚಿವರು ನೀಡಿದ ಭರವಸೆಯ ಪ್ರಕಾರ, ಮುಂದಿನ ಐದು ವರ್ಷಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಜನರಿಗೆ ಆರ್ಥಿಕ ನೆರವು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ 10 ಲಕ್ಷ ಯುವಜನರಿಗೆ ತಲಾ 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡುವ ಯೋಜನೆಯನ್ನು ಬಿಜೆಪಿ ಹೊಂದಿದೆ ಎಂದು ವಿವರಿಸಿದ್ದಾರೆ.

2021ರಿಂದ 615 ಸ್ಟಾರ್ಟ್‌ಅಪ್‌ಗಳಿಗೆ ನೆರವು ನೀಡಲಾಗಿದ್ದು, ಎಂಎಸ್‌ಎಂಇ ವಲಯವು 82 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಮೂಲಕ ತಳಮಟ್ಟದ ಉದ್ಯಮಶೀಲತೆಯನ್ನು ವಿಸ್ತರಿಸಿದೆ ಎಂದು ಸಚಿವರು ಹೇಳಿಕೊಂಡಿದ್ದಾರೆ.

ಇದುವರೆಗೆ ಬಿಜೆಪಿ ‘ಜಾತಿ, ಮಾತಿ ಮತ್ತು ಭೇಟಿ’ (ಸಮುದಾಯ, ಭೂಮಿ ಮತ್ತು ಅಡಿಪಾಯ) ಎಂಬ ಘೋಷಣೆಯಡಿ ಧ್ರುವೀಕರಣದ ರಾಜಕಾರಣ ಮಾಡಿತ್ತು. ವಿಶೇಷವಾಗಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆಸಲಾದ ಒತ್ತುವರಿ ತೆರವು ಕಾರ್ಯಾಚರಣೆಗಳ ಮೂಲಕ ಮತ ಸೆಳೆಯಲು ಪ್ರಯತ್ನಿಸಿತ್ತು.

ಶುಕ್ರವಾರ, ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಪ್ರಚಾರದಲ್ಲಿ ನುಸುಳುಕೋರರನ್ನು ಹೊರಹಾಕುವ ಮಾತನ್ನೇ ಆಡಿದ್ದರು. ಆದರೆ, ರಾಜಕೀಯ ವಿಶ್ಲೇಷಕರ ಪ್ರಕಾರ ನುಸುಳುಕೋರರ ವಿಚಾರ ಈಗ ಯುವ ಮತದಾರರನ್ನು ಹೆಚ್ಚು ಆಕರ್ಷಿಸುತ್ತಿಲ್ಲ. ಬದಲಿಗೆ, ನಾಡಿನ ಜನಪ್ರಿಯ ಗಾಯಕ ದಿ. ಜುಬೀನ್ ಗಾರ್ಗ್ ಅವರ ಸಾವಿನ ಪ್ರಕರಣದಲ್ಲಿನ ತನಿಖೆ ಮತ್ತು ನ್ಯಾಯದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಯುವಜನತೆ ಹೆಚ್ಚು ಆಕ್ರೋಶಗೊಂಡಿದ್ದಾರೆ.

ಗುವಾಹಟಿಯ ಹೊರವಲಯದಲ್ಲಿರುವ ಹಾತಿಮುರಾದಲ್ಲಿ ಜುಬೀನ್ ಅವರ ಸಮಾಧಿ ಸ್ಥಳದ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲು ರಾಜ್ಯ ಸರ್ಕಾರ ಆರು ತಿಂಗಳು ತೆಗೆದುಕೊಂಡಿದ್ದರಿಂದ ಯುವ ವರ್ಗವು ಅಸಮಾಧಾನಗೊಂಡಿದೆ. ಅಲ್ಲದೆ, ಅವರ ಸಾವಿನ ಕುರಿತ ಹೈಪ್ರೊಫೈಲ್ ಪ್ರಕರಣದ ವಿಚಾರಣೆಯು ಇತ್ತೀಚೆಗಷ್ಟೇ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ಪ್ರಾರಂಭವಾಗಿದೆ. ಇನ್ನು ಬಿಜೆಪಿಗೆ ಪರಿಸ್ಥಿತಿಯನ್ನು ಮತ್ತಷ್ಟು ಕಷ್ಟವಾಗಿಸಿರುವ ವಿಷಯವೇನೆಂದರೆ, ಜುಬೀನ್ ಗಾರ್ಗ್ ಅವರು ಬಿಜೆಪಿ ಪಕ್ಷದ ಪ್ರಬಲ ಟೀಕಾಕಾರರಾಗಿದ್ದರು.

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ವಿಧಾನಸಭೆಯಲ್ಲಿ ಜುಬೀನ್ ಅವರನ್ನು ‘ಕೊಲೆ’ ಮಾಡಲಾಗಿದೆ ಎಂದು ಹೇಳಿದ ನಂತರ ‘ಜಸ್ಟೀಸ್ ಫಾರ್ ಜುಬೀನ್’ ಎಂಬ ಅಭಿಯಾನವು ತೀವ್ರಗೊಂಡಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಂಧಿತರಾದ ಏಳು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆಯಾದರೂ, ಸಿಂಗಾಪುರ ಸರ್ಕಾರ ಗಾರ್ಗ್ ಅವರು ‘ಅಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದಾರೆ’ ಎಂದು ಹೇಳಿ ಕೊಲೆಯ ಆರೋಪವನ್ನು ತಳ್ಳಿಹಾಕಿರುವ ಹಿನ್ನೆಲೆಯಲ್ಲಿ, ಆರೋಪಿಗಳು ಶೀಘ್ರದಲ್ಲೇ ಜೈಲಿನಿಂದ ಹೊರಬರುತ್ತಾರೆ ಎಂಬ ಭಾವನೆ ಯುವಜನರಲ್ಲಿ ಮೂಡಿದೆ.

ಲಂಡನ್‌ನಲ್ಲಿ ಶಿಕ್ಷಣ ಪಡೆದ ಮತ್ತು ಗುವಾಹಟಿ ಸೆಂಟ್ರಲ್ ಕ್ಷೇತ್ರದ ಅಸ್ಸಾಂ ಜಾತೀಯ ಪರಿಷತ್ತಿನ (ಎಜೆಪಿ) ‘ಜೆನ್ ಝಿ’ (Gen Z) ಅಭ್ಯರ್ಥಿ ಕುಂಕಿ ಚೌಧರಿ ಅವರ ಕುಟುಂಬದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಕ್ಕಾಗಿ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು, ವಿಶೇಷವಾಗಿ ಯುವಜನರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರನ್ನು ಟೀಕಿಸಿದ್ದಾರೆ. ಇದರಿಂದ ಎಚ್ಚತ್ತ ಬಿಜೆಪಿ ಈಗ ತನ್ನ ಹಿಂದುತ್ವ ಮತ್ತು ನುಸುಳುಕೋರರ ವಿಷಯಕ್ಕಿಂತ ಉದ್ಯೋಗ ಮತ್ತು ಯುವ ಕಲ್ಯಾಣದ ಮಾತನ್ನು ಆಡಲು ಪ್ರಾರಂಭಿಸಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...