Homeಮುಖಪುಟಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಸ್ಸಾಂನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಗೊಗೊಯ್ ಮುಂದಾಳತ್ವದ ಕೆಎಂಎಸ್ಎಸ್ ಮಹತ್ವದ ಪಾತ್ರ ವಹಿಸಿತ್ತು.

- Advertisement -
- Advertisement -

ಮುಂದಿನ ವರ್ಷದಲ್ಲಿ ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರೈತ ಹಕ್ಕುಗಳ ಹೋರಾಟಗಾರರ ಸಮೂಹವಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಶೀಘ್ರದಲ್ಲೇ ಹೊಸ ಪ್ರಾದೇಶಿಕ ಪಕ್ಷ ಪ್ರಾರಂಭಿಸಲಿದ್ದು, ಅದರ ಸಂಸ್ಥಾಪಕ ಅಖಿಲ್ ಗೊಗೊಯ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಿದೆ.

ಪ್ರಸ್ತುತ ಹೋರಾಟಗಾರ ಅಖಿಲ್ ಗೊಗೊಯ್ ಜೈಲಿನಲ್ಲಿದ್ದಾರೆ. ನಿಷೇಧಿತ ಸಿಪಿಐ (ಮಾವೋವಾದಿ)ಯೊಂದಿಗಿನ ಸಂಪರ್ಕವಿದೆ ಎಂದು ಆರೋಪಿಸಿ ದೇಶದ್ರೋಹದ ಆರೋಪದ ಮೇಲೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಎನ್‌ಐಎ ವಿರುದ್ಧ ಅವರ ವಿರುದ್ಧ ಪ್ರಕರಣ ದಾಖಲಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಸ್ಸಾಂನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಗೊಗೊಯ್ ಮುಂದಾಳತ್ವದ ಕೆಎಂಎಸ್ಎಸ್ ಮಹತ್ವದ ಪಾತ್ರ ವಹಿಸಿತ್ತು.

“ನಾವು ರಾಜಕೀಯ ಪಕ್ಷವನ್ನು ರಚಿಸುತ್ತೇವೆ. ಗೊಗೊಯ್ ಜೈಲಿನಿಂದ ಹೊರಬಂದ ನಂತರ ಪಕ್ಷದ ಹೆಸರು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸುವುದರ ಕುರಿತು ಇತರ ವಿವರಗಳನ್ನು ಪ್ರಕಟಿಸಲಾಗುವುದು. ಗೊಗೊಯ್ ಸಿಎಂ ಅಭ್ಯರ್ಥಿಯಾಗಲಿದ್ದಾರೆ” ಎಂದು ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಡಿ ಸೈಕಿಯಾ ಹೇಳಿದ್ದಾರೆ.

ಹೊಸ ಪಕ್ಷವನ್ನು ರಾಜ್ಯದ ವಿವಿಧ ಬುಡಕಟ್ಟು, ಜನಾಂಗೀಯ, ಧಾರ್ಮಿಕ ಮತ್ತು ಭಾಷಾ ಸಮುದಾಯಗಳಿಗೆ ಸೇರಿದ ನಾಯಕರು ಮುನ್ನೆಡೆಸಲಿದ್ದಾರೆ. ಈ ಪ್ರಾದೇಶಿಕ ಪಕ್ಷವು ಅವರಿಗಾಗಿ ಕೆಲಸ ಮಾಡಲಿದೆ ಎಂದು ಅವರು ಗುವಾಹಟಿಯಲ್ಲಿ ಹೇಳಿದರು.

ಕಾಂಗ್ರೆಸ್ ಮತ್ತು ಎಐಯುಡಿಎಫ್ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ ಬೆನ್ನಲ್ಲೇ ಈ ಪ್ರಕಟಣೆ ಹೊರಬಿದ್ದಿದೆ. ಈ ಹಿಂದೆ ಕೆಎಂಎಸ್‌ಎಸ್‌ ರಾಜಕೀಯದಲ್ಲಿ ನಮ್ಮೊಂದಿಗೆ ಸೇರಲಿದೆ ಎಂದು ಕಾಂಗ್ರೆಸ್ ಮತ್ತು ಎಐಯುಡಿಎಫ್ ನಾಯಕರು ಹೇಳಿದ್ದರು.

ಆದರೆ ಸೈಕಿಯಾ ಅಂತಹ ಯಾವುದೇ ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. “ನಾವು ಯಾವುದೇ ರಾಷ್ಟ್ರೀಯ ಪಕ್ಷ ಅಥವಾ ಯಾವುದೇ ಕೋಮು ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ. ಬಿಜೆಪಿಯನ್ನು ಅಸ್ಸಾಂನಿಂದ ಹೊರಹಾಕಲು ಎಲ್ಲಾ ಪ್ರಾದೇಶಿಕ ಪಕ್ಷಗಳು ಒಗ್ಗೂಡಬೇಕೆಂದು ನಾವು ಮನವಿ ಮಾಡುತ್ತೇವೆ” ಹೊಸ ಪಕ್ಷವು, ಯಾರೊಂದಿಗೂ ರಾಜಿ ಮಾಡಿಕೊಳ್ಳದ ರಾಜಕೀಯ ಶಕ್ತಿಯಾಗಲಿದೆ ಎಂದು ಅವರು ಹೇಳಿದರು.

“ಅಖಿಲ್ ಗೊಗೊಯ್ ಅಕ್ಟೋಬರ್ ವೇಳೆಗೆ ಬಿಡುಗಡೆಯಾಗಬಹುದು. ಅವರು ಜೈಲಿನಿಂದ ಹೊರಬಂದ ನಂತರ ಪಕ್ಷದ ಹೆಸರನ್ನು ಪ್ರಕಟಿಸಲಿದ್ದಾರೆ. ಪಕ್ಷದ ಹೆಸರು ಈಗಾಗಲೇ ಅಂತಿಮಗೊಂಡಿದೆ ” ಎಂದು ಸೈಕಿಯಾ ಸುದ್ದಿಗಾರರಿಗೆ ತಿಳಿಸಿದರು.


ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...