Homeಮುಖಪುಟಅಸ್ಸಾಂ ಪ್ರವಾಹ: ನೀರಿನಿಂದ ಹೊರಬರದ ಸಿಲ್ಚಾರ್, ಸಾವಿನ ಸಂಖ್ಯೆ 108ಕ್ಕೆ ಏರಿಕೆ

ಅಸ್ಸಾಂ ಪ್ರವಾಹ: ನೀರಿನಿಂದ ಹೊರಬರದ ಸಿಲ್ಚಾರ್, ಸಾವಿನ ಸಂಖ್ಯೆ 108ಕ್ಕೆ ಏರಿಕೆ

- Advertisement -
- Advertisement -

ಶುಕ್ರವಾರ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, 45.34 ಲಕ್ಷ ಜನರು ಪ್ರವಾಹದಲ್ಲಿ ತತ್ತರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಏಳು ಸಾವುಗಳು ವರದಿಯಾಗಿವೆ.

ಭಾರಿ ಪ್ರವಾಹಕ್ಕೆ ಮೇ ತಿಂಗಳಿನಿಂದ 108 ಜನರು ಬಲಿಯಾಗಿದ್ದಾರೆ. ಬ್ರಹ್ಮಪುತ್ರ ಮತ್ತು ಬರಾಕ್ ನದಿಗಳು ಮತ್ತು ಅವುಗಳ ಉಪನದಿಗಳು ಉಕ್ಕಿ ಹರಿಯುತ್ತಿವೆ. ಆದರೆ, ಕೆಲವು ಪ್ರದೇಶಗಳಲ್ಲಿ ಪ್ರವಾಹವು ಕಡಿಮೆಯಾಗಲು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬರಾಕ್ ಕಣಿವೆಯ ಸಿಲ್ಚಾರ್ ಪಟ್ಟಣವು ಹೆಚ್ಚು ಬಾಧಿತವಾಗಿದ್ದು, ಇಲ್ಲಿ ನಾಲ್ಕು ದಿನಗಳಿಂದ ಪರಿಸ್ಥಿತಿ ಅತ್ಯಂತ ಕಠಿಣವಾಗಿದೆ. ಉಕ್ಕಿ ಹರಿಯುತ್ತಿರುವ ಬರಾಕ್ ನದಿಯು ದಕ್ಷಿಣ ಅಸ್ಸಾಂನ ಪ್ರಮುಖ ಪಟ್ಟಣವನ್ನು ಮುಳುಗಿಸಿದೆ. ಇದರಿಂದ ಸುಮಾರು ಮೂರು ಲಕ್ಷ ಜನರು ತೊಂದರೆಗೀಡಾಗಿದ್ದು, 71,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

ಆಹಾರ, ವಿದ್ಯುತ್ ಮತ್ತು ಕುಡಿಯುವ ನೀರಿನ ತೀವ್ರ ಕೊರತೆಯಿಂದಾಗಿ ಸಿಲ್ಚಾರ್‌ ಪಟ್ಟಣವು ಈಗ ಕೇಂದ್ರ ಮತ್ತು ರಾಜ್ಯ ವಿಪತ್ತು ಪಡೆಗಳು, ಸೈನ್ಯ ಮತ್ತು ವಾಯುಪಡೆಯ ವಾಯುಪಡೆಯಿಂದ ನೀಡಲಾಗುವ ಆಹಾರ ಮತ್ತು ಅಗತ್ಯ ವಸ್ತುಗಳ ಮೇಲೆ ಅವಲಂಬಿತವಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಿನ್ನೆ ಸಿಲ್ಚಾರ್‌ನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

“ಹೆಚ್ಚಿನ ಸೇನೆ ರಕ್ಷಣಾ ಕಾರ್ಯಾಚರಣೆಗೆ ಸೇರುತ್ತಿವೆ. ನಾವು ಗುವಾಹಟಿಯಿಂದ ಸಿಲ್ಚಾರ್‌ಗೆ ಪ್ರತಿದಿನ ಒಂದು ಲಕ್ಷ ಕುಡಿಯುವ ನೀರಿನ ಬಾಟಲ್‌ಗಳನ್ನು ಏರ್‌ಲಿಫ್ಟ್ ಮಾಡುತ್ತಿದ್ದೇವೆ. ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಸರಿಪಡಿಸಲು ವಿದ್ಯುತ್ ಇಲಾಖೆಯ ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ಅಲ್ಲಿಗೆ ಕಳುಹಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇನ್ನು ಅಸ್ಸಾಂನ ಪ್ರವಾಹ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಗಮನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರಿಸ್ಥಿತಿಯನ್ನು ಸರಿಪಡಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಸರ್ಕಾರವು ರಾಜ್ಯದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಅಸ್ಸಾಂ ಪ್ರವಾಹದಲ್ಲಿ ಮುಳುಗಿದೆ: ಅಲ್ಲಿನ ಸಿಎಂ ಕುದುರೆ ವ್ಯಾಪಾರದಲ್ಲಿ ನಿರತರಾಗಿದ್ದಾರೆ – ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -