Homeಮುಖಪುಟಅಸ್ಸಾಂ ಪೊಲೀಸರಿಂದ ಮಾಜಿ ವಿದ್ಯಾರ್ಥಿ ನಾಯಕನ ಮೇಲೆ ಗುಂಡಿನ ದಾಳಿ: ತನಿಖೆಗೆ ಆದೇಶಿಸಿದ ಸಿಎಂ

ಅಸ್ಸಾಂ ಪೊಲೀಸರಿಂದ ಮಾಜಿ ವಿದ್ಯಾರ್ಥಿ ನಾಯಕನ ಮೇಲೆ ಗುಂಡಿನ ದಾಳಿ: ತನಿಖೆಗೆ ಆದೇಶಿಸಿದ ಸಿಎಂ

- Advertisement -
- Advertisement -

ಜನವರಿ 22 ರ ಶನಿವಾರ ಸಂಜೆ ಅಸ್ಸಾಂನ ನಗಾಂವ್ ಜಿಲ್ಲೆಯಲ್ಲಿ 22 ವರ್ಷದ ಮಾಜಿ ವಿದ್ಯಾರ್ಥಿ ನಾಯಕನ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘಟನೆಯ ಕುರಿತು ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಏಕವ್ಯಕ್ತಿ ತನಿಖಾ ಆಯೋಗವನ್ನು ರಚಿಸಿದ್ದು, ವರದಿಯನ್ನು ಏಳು ದಿನಗಳಲ್ಲಿ ಸಲ್ಲಿಸಬೇಕು ಎಂದು ಆದೇಶಿಸಿದ್ದಾರೆ.

ಮಾಜಿ ವಿದ್ಯಾರ್ಥಿ ನಾಯಕ ಕೀರ್ತಿ ಕಮಲ್ ಬೋರಾ ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿದ್ದರು. ನಾಗಾವ್‌ನ ಕಚಲುಖುವಾ ಪ್ರದೇಶದಲ್ಲಿ ಡ್ರಗ್ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿ ಮಾಡಿದರು. ಹೀಗಾಗಿ ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಆಲ್ ಅಸ್ಸಾಂ ಸ್ಟೂಡೆಂಟ್ಸ್ ಅಸೋಸಿಯೇಷನ್ ​​(ಎಎಎಸ್‌ಯು) ಸದಸ್ಯರಾಗಿ ಮತ್ತು ನಗಾಂವ್ ಕಾಲೇಜಿನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ 22 ವರ್ಷದ ಬೋರಾ ಅವರ ಎಡತೊಡೆ, ಎಡಗೈ ಮತ್ತು ಹಣೆಯ ಮೇಲೆ ಗಾಯಗಳಾಗಿದ್ದು, ಸದ್ಯ ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಉಪ ಮುಖ್ಯಮಂತ್ರಿಗೆ ಘೇರಾವ್ ಹಾಕಿ, ಸ್ವ ಕ್ಷೇತ್ರದಿಂದ ವಾಪಸ್ ಕಳುಹಿಸಿದ ಮಹಿಳೆಯರು

ಪೊಲೀಸ್ ಕ್ರಮದ ವಿರುದ್ಧ ಬೋರಾ ಅವರ ಕುಟುಂಬ ಮತ್ತು ಸಹಚರರು ಪ್ರತಿಭಟನೆ ನಡೆಸಿದ ನಂತರ, ಅಸ್ಸಾಂ ಸರ್ಕಾರ ಭಾನುವಾರ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಬನ್ ಕುಮಾರ್ ಬೋರ್ತಕೂರ್ ಅವರ ಏಕವ್ಯಕ್ತಿ ತನಿಖಾ ಆಯೋಗವು ಜನವರಿ 22 ರಂದು ನಾಗಾಂವ್ ಪೊಲೀಸ್ ಫೈರಿಂಗ್ ಘಟನೆಯ ತನಿಖೆ ನಡೆಸಿ 7 ದಿನಗಳಲ್ಲಿ ವರದಿಯನ್ನು ಸಲ್ಲಿಸುತ್ತದೆ. ಪೊಲೀಸರು ಯಾವುದೇ ತಪ್ಪು ಮಾಡಿರುವುದು ಕಂಡುಬಂದರೆ, ತಕ್ಷಣವೇ ಕ್ರಮ ತೆಗೆದುಕೊಳ್ಳಲಾಗುವುದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 ಘಟನೆಯ ಹಿನ್ನೆಲೆ:

ಜನವರಿ 22 ರ ಶನಿವಾರ ಸಂಜೆ ನಾಗಾಂವ್‌ನಲ್ಲಿ ಕೆಲವು ಬೈಕ್‌ ಸವಾರರು ಡ್ರಗ್ಸ್ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಮಿಶ್ರಾ ಪಿಟಿಐಗೆ ತಿಳಿಸಿದ್ದಾರೆ.

“ಸಿವಿಲ್ ಡ್ರೆಸ್‌ನಲ್ಲಿದ್ದ ಇಬ್ಬರು ಪೊಲೀಸರು ಸ್ಥಳಕ್ಕೆ ತಲುಪಿದಾಗ, ಈ ಯುವಕ ಅವರನ್ನು ನೀವು ಪೊಲೀಸಿನವರೇ ಎಂದು ಕೇಳಿದರು. ಅವರು ಸಕಾರಾತ್ಮಕವಾಗಿ ಉತ್ತರಿಸಿದಾಗ, ಆರೋಪಿಯು ಅವರಲ್ಲಿ ಒಬ್ಬರನ್ನು ತನ್ನ ಹೆಲ್ಮೆಟ್‌ನಿಂದ ಹೊಡೆದು ಗಾಯಗೊಳಿಸದ್ದಾರೆ. ಸಮೀಪದಲ್ಲಿದ್ದ ಬ್ಯಾಕ್‌ಅಪ್ ಪೊಲೀಸ್ ತಂಡವೂ ಸ್ಥಳಕ್ಕೆ ತಲುಪಿತು. ಆದರೆ, ಆತ ಅವರ ಮೇಲೆ ದಾಳಿಯನ್ನು ಮುಂದುವರೆಸಿದ್ದಾರೆ, ಬೇರೆ ದಾರಿಯಿಲ್ಲದೆ ಪೊಲೀಸರು ಅವನ ಕಾಲಿಗೆ ಗುಂಡು ಹಾರಿಸಿದ್ದಾರೆ. ಆತನ ವಶದಿಂದ ಎಂಟು ಹೆರಾಯಿನ್ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದೆಡೆ, ಆಲ್ ಅಸ್ಸಾಂ ಸ್ಟೂಡೆಂಟ್ಸ್ ಅಸೋಸಿಯೇಷನ್ (AASU), ಬೋರಾ ಔಷಧಾಲಯದಿಂದ ಮನೆಗೆ ಹಿಂದಿರುಗುತ್ತಿದ್ದಾಗ, ರಸ್ತೆಯಲ್ಲಿ ಕುಡಿದ ಪೊಲೀಸ್ ಅಧಿಕಾರಿಗಳಿಂದ ತೊಂದರೆಗೀಡಾದ ಯುವಕನನ್ನು ರಕ್ಷಿಸಲು ತನ್ನ ಬೈಕ್ ಅನ್ನು ನಿಲ್ಲಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪೊಲೀಸರು ಆತನ ಮೇಲೆ ಗುಂಡು ಹಾರಿಸಿ, ಹೆರಾಯಿನ್ ಅನ್ನು ಅವರೇ ಸಿಗುವಂತೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ತ ಕೀರ್ತಿ ಕಮಲ್ ಬೋರಾ ಅವರ ತಾಯಿ ಮತ್ತು ಕೆಲವು ವಿದ್ಯಾರ್ಥಿಗಳು ನಗಾಂವ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಇದರಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು ಮತ್ತು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು.

ಹಿರಿಯ ಕಾಂಗ್ರೆಸ್ ನಾಯಕ ರಿಪುನ್ ಬೋರಾ ಅವರು ಪೊಲೀಸರ ಗುಂಡಿನ ದಾಳಿಯನ್ನು ಖಂಡಿಸಿದ್ದಾರೆ. ಈ ಕ್ರಮ “ಅಸ್ಸಾಂನಲ್ಲಿ ಪೊಲೀಸ್ ಜಂಗಲ್ ರಾಜ್”ಗೆ ಉದಾಹರಣೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿಯಿಂದ ಮೇನಕಾ ಗಾಂಧಿ, ವರುಣ್ ಗಾಂಧಿ ಔಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...