Homeಮುಖಪುಟಜಿಲ್ಲಾಧಿಕಾರಿ, ಪೊಲೀಸರಿಗೆ 'ಅಕ್ರಮ ವಲಸಿಗರನ್ನು' ಗಡಿಪಾರು ಮಾಡಲು ಅವಕಾಶ ನೀಡಿದ ಅಸ್ಸಾಂ ಸರ್ಕಾರ!

ಜಿಲ್ಲಾಧಿಕಾರಿ, ಪೊಲೀಸರಿಗೆ ‘ಅಕ್ರಮ ವಲಸಿಗರನ್ನು’ ಗಡಿಪಾರು ಮಾಡಲು ಅವಕಾಶ ನೀಡಿದ ಅಸ್ಸಾಂ ಸರ್ಕಾರ!

- Advertisement -
- Advertisement -

ಅಸ್ಸಾಂ ಸಚಿವ ಸಂಪುಟ ಮಂಗಳವಾರ 1950ರ ಅಸ್ಸಾಂ ವಲಸಿಗರ ಗಡಿಪಾರು ಕಾಯ್ದೆಯಡಿಯಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್‌ಒಪಿ) ರೂಪಿಸಲು ಅನುಮೋದನೆ ನೀಡಿದೆ. ಇದು ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಜಿಲ್ಲಾ ಆಯುಕ್ತರು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಪ್ರಸ್ತುತ, ದಾಖಲೆರಹಿತ ವಲಸಿಗರಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿದೇಶಿಯರ ನ್ಯಾಯಮಂಡಳಿಗಳು ನಿರ್ವಹಿಸುತ್ತಿವೆ.

ಹೆಚ್ಚಿನ ಶಂಕಿತ ವಿದೇಶಿಯರನ್ನು ‘ಗಡಿಪಾರು’ ಮಾಡಲು ರಾಜ್ಯ ಸರ್ಕಾರ 1950ರ ಕಾನೂನನ್ನು ಜಾರಿಗೆ ತರಲು ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೂನ್‌ನಲ್ಲಿ ವಿಧಾನಸಭೆಗೆ ತಿಳಿಸಿದ್ದರು. ಅದರಂತೆ, ಮಂಗಳವಾರ ಎಸ್‌ಒಪಿ ಘೋಷಣೆ ಹೊರಬಿದ್ದಿದೆ.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು – ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರು ಎಂಬುವುದನ್ನು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಆರೋಪದ ಮೇಲೆ ಹಲವಾರು ವ್ಯಕ್ತಿಗಳನ್ನು ಬಾಂಗ್ಲಾದೇಶಕ್ಕೆ ಬಲವಂತವಾಗಿ ಕಳುಹಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ, ತಪ್ಪಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ವ್ಯಕ್ತಿಗಳನ್ನು ವಾಪಸ್ ಕರೆ ತರಲಾಗಿದೆ.

ಜೂನ್‌ನಲ್ಲಿ ನೀಡಿದ್ದ ಹೇಳಿಕೆಯಲ್ಲಿ, ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಿಂದ ಒದಗಿಸಲಾದ ಕಾನೂನು ಚೌಕಟ್ಟಿನಲ್ಲಿ ಘೋಷಿತ ವಿದೇಶಿಯರನ್ನು ಹೊರಹಾಕುವುದು ಸಮರ್ಥನೀಯ ಎಂದು ಶರ್ಮಾ ಹೇಳಿಕೊಂಡಿದ್ದರು.

2024ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6ಎ ಅನ್ನು ಎತ್ತಿಹಿಡಿದಿದೆ ಎಂದು ಸಿಎಂ ಶರ್ಮಾ ಹೇಳಿದ್ದರು. ಇದು 1950ರ ಕಾನೂನಿನಡಿಯಲ್ಲಿ ಕಾರ್ಯನಿರ್ವಹಿಸಲು ಅಸ್ಸಾಂ ಸರ್ಕಾರಕ್ಕೆ ‘ವಿಶಾಲ ಅಧಿಕಾರವನ್ನು’ ನೀಡುತ್ತದೆ. ಯಾವುದೇ ವ್ಯಕ್ತಿ ‘ಅಕ್ರಮ ವಲಸಿಗ’ ಎಂಬುದಕ್ಕೆ ಪ್ರಾಥಮಿಕ ಪುರಾವೆಗಳಿದ್ದರೆ ಅವರನ್ನು ಹೊರಹಾಕುವ ಅಧಿಕಾರವನ್ನು ಉಪ ಆಯುಕ್ತರಿಗೆ ನೀಡುತ್ತದೆ.

ಅಕ್ಟೋಬರ್ 2024ರಲ್ಲಿ, ನ್ಯಾಯಾಲಯವು 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6ಎನ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ.

1985ರಲ್ಲಿ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಚಳವಳಿಯ ನಾಯಕರ ನಡುವೆ ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಿದಾಗ ಈ ಸೆಕ್ಷನ್ ಅನ್ನು ಕಾಯಿದೆಯಡಿಯಲ್ಲಿ ವಿಶೇಷ ನಿಬಂಧನೆಯಾಗಿ ಪರಿಚಯಿಸಲಾಯಿತು. ಇದು ಜನವರಿ 1, 1966 ಮತ್ತು ಮಾರ್ಚ್ 25, 1971 ರ ನಡುವೆ ಅಸ್ಸಾಂಗೆ ಬಂದ ವಿದೇಶಿಯರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶ ನೀಡುತ್ತದೆ.

ಅಸ್ಸಾಂನ ಸ್ಥಳೀಯ ಗುಂಪುಗಳು ಕಾಯ್ದೆಯಲ್ಲಿನ ಈ ನಿಬಂಧನೆಯು ಬಾಂಗ್ಲಾದೇಶದಿಂದ ವಲಸೆ ಬಂದವರ ಒಳನುಸುಳುವಿಕೆಯನ್ನು ಕಾನೂನುಬದ್ಧಗೊಳಿಸಿದೆ ಎಂದು ಆರೋಪಿಸಿವೆ.

ಮಂಗಳವಾರ ನಡೆದ ಸಚಿವ ಸಂಪುಟ ಸಭೆಯ ನಂತರ, 1950ರ ಕಾಯ್ದೆಯನ್ನು ಬಳಸಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು ಅನುಮೋದಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಇದು ಹೆಚ್ಚಿನ ಮಟ್ಟಿಗೆ ವಿದೇಶಿಯರ ನ್ಯಾಯಮಂಡಳಿಗಳ ಪಾತ್ರವನ್ನು ‘ರದ್ದುಗೊಳಿಸುತ್ತದೆ’ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ. ಆದಾಗ್ಯೂ, ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗುತ್ತಿದೆ.

ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಕಾರ, ಒಬ್ಬ ವ್ಯಕ್ತಿಯು ‘ಅಕ್ರಮ ವಲಸಿಗ’ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಥವಾ ಇತರ ಮೂಲಗಳಿಂದ ಜಿಲ್ಲಾಧಿಕಾರಿಗೆ ಮಾಹಿತಿ ಬಂದರೆ, ಅಧಿಕಾರಿಯು 10 ದಿನಗಳಲ್ಲಿ ಆ ವ್ಯಕ್ತಿಗೆ ತನ್ನ ಪೌರತ್ವದ ಪುರಾವೆಗಳನ್ನು ಒದಗಿಸುವಂತೆ ನಿರ್ದೇಶಿಸುತ್ತಾರೆ ಎಂದು ಶರ್ಮಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸಲ್ಲಿಸಿದ ಪುರಾವೆಗಳು ತೃಪ್ತಿಕರವಾಗಿಲ್ಲ ಎಂದು ಜಿಲ್ಲಾಧಿಕಾರಿ ಕಂಡುಕೊಂಡರೆ, ಅವರು 1950ರ ಕಾಯ್ದೆಯನ್ನು ಅನ್ವಯಿಸುವ ಮೂಲಕ, ದಾಖಲೆರಹಿತ ವಲಸಿಗರನ್ನು ಅಸ್ಸಾಂನಿಂದ 24 ಗಂಟೆಗಳ ಕಾಲಾವಕಾಶ ನೀಡುವ ಮೂಲಕ ಮತ್ತು ನಿರ್ದಿಷ್ಟಪಡಿಸಿದ ಮಾರ್ಗದ ಮೂಲಕ ಹೊರದಬ್ಬುವ ಆದೇಶವನ್ನು ಹೊರಡಿಸಬಹುದು ಎಂದು ಸಿಎಂ ಹೇಳಿದ್ದಾರೆ.

“ನಾವು ಶಂಕಿತ ವ್ಯಕ್ತಿಯನ್ನು ತಕ್ಷಣವೇ ಒಂದು ಹೋಲ್ಡಿಂಗ್ ಸೆಂಟರ್‌ಗೆ ಕರೆದೊಯ್ಯುತ್ತೇವೆ. ಅಲ್ಲಿಂದ ಬಿಎಸ್‌ಎಫ್ [ಗಡಿ ಭದ್ರತಾ ಪಡೆ] ಅವರನ್ನು ಬಾಂಗ್ಲಾದೇಶ ಅಥವಾ ಪಾಕಿಸ್ತಾನಕ್ಕೆ ಗಡಿಪಾರು ಮಾಡುತ್ತದೆ” ಎಂದು ಸಿಎಂ ಶರ್ಮಾ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಜಿಲ್ಲಾಧಿಕಾರಿ ನಿರ್ಧಾರಕ್ಕೆ ಬರಲು ಸಾಧ್ಯವಾಗದ ಗೊಂದಲಮಯ ಪ್ರಕರಣ ಮಾತ್ರ, ವಿದೇಶಿಯರ ನ್ಯಾಯಮಂಡಳಿಗಳಿಗೆ ಹೋಗುತ್ತದೆ” ಎಂದು ಸಿಎಂ ವಿವರಿಸಿದ್ದಾರೆ.

ಸೆಪ್ಟೆಂಬರ್ 1ರಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ವಿದೇಶಿಗರು ಮಾನ್ಯ ಪ್ರಯಾಣ ದಾಖಲೆಗಳನ್ನು ಹೊಂದಿಲ್ಲದಿದ್ದರೆ, ‘ಪ್ರಯಾಣ ದಾಖಲೆಯನ್ನು ಸ್ವೀಕರಿಸಿದ ತಕ್ಷಣ’ ಅವರನ್ನು ಗಡಿಪಾರು ಮಾಡಲು ಅಧಿಕಾರಿಗಳು ಅವರ ತಾಯ್ನಾಡಿನ ರಾಜತಾಂತ್ರಿಕ ಕಾರ್ಯಾಚರಣೆಗಳ ಮೂಲಕ ರಾಷ್ಟ್ರೀಯತೆಯನ್ನು ಪರಿಶೀಲಿಸಬೇಕು ಎಂದು ಹೇಳಿದೆ.

ಬಿಹಾರ ಎಸ್‌ಐಆರ್‌: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್‌ ಪರಿಗಣಿಸಲು ಚು. ಆಯೋಗ ನಿರ್ದೇಶನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...