Homeಮುಖಪುಟಜಿಲ್ಲಾಧಿಕಾರಿ, ಪೊಲೀಸರಿಗೆ 'ಅಕ್ರಮ ವಲಸಿಗರನ್ನು' ಗಡಿಪಾರು ಮಾಡಲು ಅವಕಾಶ ನೀಡಿದ ಅಸ್ಸಾಂ ಸರ್ಕಾರ!

ಜಿಲ್ಲಾಧಿಕಾರಿ, ಪೊಲೀಸರಿಗೆ ‘ಅಕ್ರಮ ವಲಸಿಗರನ್ನು’ ಗಡಿಪಾರು ಮಾಡಲು ಅವಕಾಶ ನೀಡಿದ ಅಸ್ಸಾಂ ಸರ್ಕಾರ!

- Advertisement -
- Advertisement -

ಅಸ್ಸಾಂ ಸಚಿವ ಸಂಪುಟ ಮಂಗಳವಾರ 1950ರ ಅಸ್ಸಾಂ ವಲಸಿಗರ ಗಡಿಪಾರು ಕಾಯ್ದೆಯಡಿಯಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್‌ಒಪಿ) ರೂಪಿಸಲು ಅನುಮೋದನೆ ನೀಡಿದೆ. ಇದು ವಿದೇಶಿಯರ ನ್ಯಾಯಮಂಡಳಿಗಳನ್ನು ಬೈಪಾಸ್ ಮಾಡುವ ಮೂಲಕ ರಾಜ್ಯದಿಂದ ‘ಅಕ್ರಮ ವಲಸಿಗರನ್ನು’ ಹೊರಹಾಕಲು ಜಿಲ್ಲಾ ಆಯುಕ್ತರು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಪ್ರಸ್ತುತ, ದಾಖಲೆರಹಿತ ವಲಸಿಗರಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿದೇಶಿಯರ ನ್ಯಾಯಮಂಡಳಿಗಳು ನಿರ್ವಹಿಸುತ್ತಿವೆ.

ಹೆಚ್ಚಿನ ಶಂಕಿತ ವಿದೇಶಿಯರನ್ನು ‘ಗಡಿಪಾರು’ ಮಾಡಲು ರಾಜ್ಯ ಸರ್ಕಾರ 1950ರ ಕಾನೂನನ್ನು ಜಾರಿಗೆ ತರಲು ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೂನ್‌ನಲ್ಲಿ ವಿಧಾನಸಭೆಗೆ ತಿಳಿಸಿದ್ದರು. ಅದರಂತೆ, ಮಂಗಳವಾರ ಎಸ್‌ಒಪಿ ಘೋಷಣೆ ಹೊರಬಿದ್ದಿದೆ.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಳ್ವಿಕೆಯಲ್ಲಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು – ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ, ಅವರು ಭಾರತೀಯ ನಾಗರಿಕರು ಎಂಬುವುದನ್ನು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಆರೋಪದ ಮೇಲೆ ಹಲವಾರು ವ್ಯಕ್ತಿಗಳನ್ನು ಬಾಂಗ್ಲಾದೇಶಕ್ಕೆ ಬಲವಂತವಾಗಿ ಕಳುಹಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ, ತಪ್ಪಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ವ್ಯಕ್ತಿಗಳನ್ನು ವಾಪಸ್ ಕರೆ ತರಲಾಗಿದೆ.

ಜೂನ್‌ನಲ್ಲಿ ನೀಡಿದ್ದ ಹೇಳಿಕೆಯಲ್ಲಿ, ಅಸ್ಸಾಂನಿಂದ ವಲಸಿಗರನ್ನು ಹೊರಹಾಕುವ ಕಾಯ್ದೆಯಿಂದ ಒದಗಿಸಲಾದ ಕಾನೂನು ಚೌಕಟ್ಟಿನಲ್ಲಿ ಘೋಷಿತ ವಿದೇಶಿಯರನ್ನು ಹೊರಹಾಕುವುದು ಸಮರ್ಥನೀಯ ಎಂದು ಶರ್ಮಾ ಹೇಳಿಕೊಂಡಿದ್ದರು.

2024ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6ಎ ಅನ್ನು ಎತ್ತಿಹಿಡಿದಿದೆ ಎಂದು ಸಿಎಂ ಶರ್ಮಾ ಹೇಳಿದ್ದರು. ಇದು 1950ರ ಕಾನೂನಿನಡಿಯಲ್ಲಿ ಕಾರ್ಯನಿರ್ವಹಿಸಲು ಅಸ್ಸಾಂ ಸರ್ಕಾರಕ್ಕೆ ‘ವಿಶಾಲ ಅಧಿಕಾರವನ್ನು’ ನೀಡುತ್ತದೆ. ಯಾವುದೇ ವ್ಯಕ್ತಿ ‘ಅಕ್ರಮ ವಲಸಿಗ’ ಎಂಬುದಕ್ಕೆ ಪ್ರಾಥಮಿಕ ಪುರಾವೆಗಳಿದ್ದರೆ ಅವರನ್ನು ಹೊರಹಾಕುವ ಅಧಿಕಾರವನ್ನು ಉಪ ಆಯುಕ್ತರಿಗೆ ನೀಡುತ್ತದೆ.

ಅಕ್ಟೋಬರ್ 2024ರಲ್ಲಿ, ನ್ಯಾಯಾಲಯವು 1955ರ ಪೌರತ್ವ ಕಾಯ್ದೆಯ ಸೆಕ್ಷನ್ 6ಎನ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ.

1985ರಲ್ಲಿ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಚಳವಳಿಯ ನಾಯಕರ ನಡುವೆ ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಿದಾಗ ಈ ಸೆಕ್ಷನ್ ಅನ್ನು ಕಾಯಿದೆಯಡಿಯಲ್ಲಿ ವಿಶೇಷ ನಿಬಂಧನೆಯಾಗಿ ಪರಿಚಯಿಸಲಾಯಿತು. ಇದು ಜನವರಿ 1, 1966 ಮತ್ತು ಮಾರ್ಚ್ 25, 1971 ರ ನಡುವೆ ಅಸ್ಸಾಂಗೆ ಬಂದ ವಿದೇಶಿಯರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶ ನೀಡುತ್ತದೆ.

ಅಸ್ಸಾಂನ ಸ್ಥಳೀಯ ಗುಂಪುಗಳು ಕಾಯ್ದೆಯಲ್ಲಿನ ಈ ನಿಬಂಧನೆಯು ಬಾಂಗ್ಲಾದೇಶದಿಂದ ವಲಸೆ ಬಂದವರ ಒಳನುಸುಳುವಿಕೆಯನ್ನು ಕಾನೂನುಬದ್ಧಗೊಳಿಸಿದೆ ಎಂದು ಆರೋಪಿಸಿವೆ.

ಮಂಗಳವಾರ ನಡೆದ ಸಚಿವ ಸಂಪುಟ ಸಭೆಯ ನಂತರ, 1950ರ ಕಾಯ್ದೆಯನ್ನು ಬಳಸಲು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು ಅನುಮೋದಿಸಲಾಗಿದೆ ಎಂದು ಶರ್ಮಾ ಹೇಳಿದ್ದಾರೆ. ಇದು ಹೆಚ್ಚಿನ ಮಟ್ಟಿಗೆ ವಿದೇಶಿಯರ ನ್ಯಾಯಮಂಡಳಿಗಳ ಪಾತ್ರವನ್ನು ‘ರದ್ದುಗೊಳಿಸುತ್ತದೆ’ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ. ಆದಾಗ್ಯೂ, ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗುತ್ತಿದೆ.

ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನದ ಪ್ರಕಾರ, ಒಬ್ಬ ವ್ಯಕ್ತಿಯು ‘ಅಕ್ರಮ ವಲಸಿಗ’ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಅಥವಾ ಇತರ ಮೂಲಗಳಿಂದ ಜಿಲ್ಲಾಧಿಕಾರಿಗೆ ಮಾಹಿತಿ ಬಂದರೆ, ಅಧಿಕಾರಿಯು 10 ದಿನಗಳಲ್ಲಿ ಆ ವ್ಯಕ್ತಿಗೆ ತನ್ನ ಪೌರತ್ವದ ಪುರಾವೆಗಳನ್ನು ಒದಗಿಸುವಂತೆ ನಿರ್ದೇಶಿಸುತ್ತಾರೆ ಎಂದು ಶರ್ಮಾ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸಲ್ಲಿಸಿದ ಪುರಾವೆಗಳು ತೃಪ್ತಿಕರವಾಗಿಲ್ಲ ಎಂದು ಜಿಲ್ಲಾಧಿಕಾರಿ ಕಂಡುಕೊಂಡರೆ, ಅವರು 1950ರ ಕಾಯ್ದೆಯನ್ನು ಅನ್ವಯಿಸುವ ಮೂಲಕ, ದಾಖಲೆರಹಿತ ವಲಸಿಗರನ್ನು ಅಸ್ಸಾಂನಿಂದ 24 ಗಂಟೆಗಳ ಕಾಲಾವಕಾಶ ನೀಡುವ ಮೂಲಕ ಮತ್ತು ನಿರ್ದಿಷ್ಟಪಡಿಸಿದ ಮಾರ್ಗದ ಮೂಲಕ ಹೊರದಬ್ಬುವ ಆದೇಶವನ್ನು ಹೊರಡಿಸಬಹುದು ಎಂದು ಸಿಎಂ ಹೇಳಿದ್ದಾರೆ.

“ನಾವು ಶಂಕಿತ ವ್ಯಕ್ತಿಯನ್ನು ತಕ್ಷಣವೇ ಒಂದು ಹೋಲ್ಡಿಂಗ್ ಸೆಂಟರ್‌ಗೆ ಕರೆದೊಯ್ಯುತ್ತೇವೆ. ಅಲ್ಲಿಂದ ಬಿಎಸ್‌ಎಫ್ [ಗಡಿ ಭದ್ರತಾ ಪಡೆ] ಅವರನ್ನು ಬಾಂಗ್ಲಾದೇಶ ಅಥವಾ ಪಾಕಿಸ್ತಾನಕ್ಕೆ ಗಡಿಪಾರು ಮಾಡುತ್ತದೆ” ಎಂದು ಸಿಎಂ ಶರ್ಮಾ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಜಿಲ್ಲಾಧಿಕಾರಿ ನಿರ್ಧಾರಕ್ಕೆ ಬರಲು ಸಾಧ್ಯವಾಗದ ಗೊಂದಲಮಯ ಪ್ರಕರಣ ಮಾತ್ರ, ವಿದೇಶಿಯರ ನ್ಯಾಯಮಂಡಳಿಗಳಿಗೆ ಹೋಗುತ್ತದೆ” ಎಂದು ಸಿಎಂ ವಿವರಿಸಿದ್ದಾರೆ.

ಸೆಪ್ಟೆಂಬರ್ 1ರಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ವಿದೇಶಿಗರು ಮಾನ್ಯ ಪ್ರಯಾಣ ದಾಖಲೆಗಳನ್ನು ಹೊಂದಿಲ್ಲದಿದ್ದರೆ, ‘ಪ್ರಯಾಣ ದಾಖಲೆಯನ್ನು ಸ್ವೀಕರಿಸಿದ ತಕ್ಷಣ’ ಅವರನ್ನು ಗಡಿಪಾರು ಮಾಡಲು ಅಧಿಕಾರಿಗಳು ಅವರ ತಾಯ್ನಾಡಿನ ರಾಜತಾಂತ್ರಿಕ ಕಾರ್ಯಾಚರಣೆಗಳ ಮೂಲಕ ರಾಷ್ಟ್ರೀಯತೆಯನ್ನು ಪರಿಶೀಲಿಸಬೇಕು ಎಂದು ಹೇಳಿದೆ.

ಬಿಹಾರ ಎಸ್‌ಐಆರ್‌: ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್‌ ಪರಿಗಣಿಸಲು ಚು. ಆಯೋಗ ನಿರ್ದೇಶನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...