Homeಮುಖಪುಟಅಸ್ಸಾಂ ಸರ್ಕಾರದಿಂದ ಮತ್ತೆ ತೆರವು ಕಾರ್ಯಾಚರಣೆ : ನೆಲೆ ಕಳೆದುಕೊಂಡ 1,500 ಮುಸ್ಲಿಂ ಕುಟುಂಬಗಳು

ಅಸ್ಸಾಂ ಸರ್ಕಾರದಿಂದ ಮತ್ತೆ ತೆರವು ಕಾರ್ಯಾಚರಣೆ : ನೆಲೆ ಕಳೆದುಕೊಂಡ 1,500 ಮುಸ್ಲಿಂ ಕುಟುಂಬಗಳು

- Advertisement -
- Advertisement -

ಅಸ್ಸಾಂನ ನಾಗಾಂವ್ ಜಿಲ್ಲೆಯ ಲುಟಿಮರಿ ಪ್ರದೇಶದ 795 ಹೆಕ್ಟೇರ್ ಮೀಸಲು ಅರಣ್ಯ ಭೂಮಿಯ ಒತ್ತುವರಿ ತೆರವು ಕಾರ್ಯಾಚರಣೆ ಶನಿವಾರ (ನ.29) ಪ್ರಾರಂಭಗೊಂಡಿದ್ದು, ಇದರಿಂದ ಈ ಪ್ರದೇಶದಲ್ಲಿದ್ದ ಸುಮಾರು 1,500 ಬಂಗಾಳಿ ಮಾತನಾಡುವ ಮುಸ್ಲಿಂ ಕುಟುಂಬಗಳು ನೆಲೆ ಕಳೆದುಕೊಂಡಿದೆ.

“ಮೂರು ತಿಂಗಳ ಹಿಂದೆಯೇ ಮನೆಗಳನ್ನು ಖಾಲಿ ಮಾಡುವಂತೆ ಇಲ್ಲಿನ ನಿವಾಸಿಗಳಿಗೆ ನೋಟಿಸ್ ನೀಡಲಾಗಿತ್ತು. ಅವರು ಹೆಚ್ಚುವರಿ ಸಮಯ ಕೇಳಿದ್ದರು. ಅದರಂತೆ ಅವರಿಗೆ ಹೆಚ್ಚುವರಿ ಸಮಯ ನೀಡಲಾಗಿದೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ scroll.in ವರದಿ ಮಾಡಿದೆ.

ಶನಿವಾರ ತೆರವು ಕಾರ್ಯಾಚರಣೆ ಪ್ರಾರಂಭಿಸುವಾಗ 1,100ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮನೆಗಳನ್ನು ಕೆಡವಿ ಸಾಮಗ್ರಿಗಳೊಂದಿಗೆ ತೆರಳಿದ್ದರು. ಉಳಿದ ಮನೆಗಳನ್ನು ಕಾರ್ಯಾಚರಣೆ ವೇಳೆ ಕೆಡವಲಾಯಿತು ವರದಿ ಹೇಳಿದೆ.

“ತೆರವು ಕಾರ್ಯಾಚರಣೆಯ ನಂತರ ನಮಗೆ ಉಳಿಯಲು ಸ್ಥಳವಿಲ್ಲದಂತಾಗಿದೆ. ಸರ್ಕಾರ ನಮಗೆ ಒಂದು ಸ್ಥಳ ಒದಗಿಸಿದ್ದರೆ ಒಳ್ಳೆಯದಿತ್ತು. ನಾವು ಜಿಲ್ಲಾಡಳಿತದ ಆದೇಶ ಪಾಲಿಸಿ ಸ್ವಯಂ ಪ್ರೇರಣೆಯಿಂದ ಮನೆಗಳನ್ನು ತೊರೆದು ಬಂದಿದ್ದೇವೆ” ಎಂದು ಮನೆ ಕಳೆದುಕೊಂಡಿರುವ ವ್ಯಕ್ತಿಯೊಬ್ಬರು ಹೇಳಿರುವುದಾಗಿ ಸುದ್ದಿ ಸಂಸ್ಥೆ ಅಸ್ಸಾಂ ಟ್ರಿಬ್ಯೂನ್ ವರದಿ ಮಾಡಿದೆ.

ಅತಿಕ್ರಮಣಗಳನ್ನು ತೆರವುಗೊಳಿಸುವುದರಿಂದ ಅರಣ್ಯ ಭೂಮಿಯಲ್ಲಿ ಮಾನವ-ಆನೆ ಸಂಘರ್ಷವನ್ನು ತಡೆಯಲು ಸಹಾಯವಾಗುತ್ತದೆ ಎಂದು ಅಸ್ಸಾಂ ಅರಣ್ಯ ಇಲಾಖೆಯ ವಿಶೇಷ ಮುಖ್ಯ ಕಾರ್ಯದರ್ಶಿ ಎಂ.ಕೆ. ಯಾದವ್ ಹೇಳಿದ್ದಾಗಿ ಅಸ್ಸಾಂ ಟ್ರಿಬ್ಯೂನ್ ತಿಳಿಸಿದೆ.

2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಅತಿಕ್ರಮಣ ತೆರವು ಹೆಸರಿನಲ್ಲಿ ನಿರಂತರವಾಗಿ ಮನೆಗಳ ನೆಲಸಮ ಕಾರ್ಯ ನಡೆಯುತ್ತಿದೆ. ಹೆಚ್ಚಾಗಿ ಬಂಗಾಳಿ ಮಾತನಾಡುವ ಮುಸ್ಲಿಮರು ವಾಸಿಸುವ ಪ್ರದೇಶಗಳನ್ನು ಗುರಿಯಾಗಿಸಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮೇ 2021ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯನ್ನು ಅತಿಕ್ರಮಣಗಳಿಂದ ಮುಕ್ತಗೊಳಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಸ್ಥಳಾಂತರಗೊಂಡವರಲ್ಲಿ ಅನೇಕರು ತಮ್ಮ ಕುಟುಂಬಗಳು ದಶಕಗಳಿಂದ ಈ ಪ್ರದೇಶಗಳಲ್ಲಿ ವಾಸಿಸುತ್ತಿತ್ತು. ಬ್ರಹ್ಮಪುತ್ರ ನದಿಯ ಸವೆತದಿಂದಾಗಿ ನದಿ ತೀರದ ಪ್ರದೇಶಗಳಲ್ಲಿನ ತಮ್ಮ ಜಮೀನುಗಳು ಕೊಚ್ಚಿಹೋದ ನಂತರ ತಮ್ಮ ಪೂರ್ವಜರು ಈ ಪ್ರದೇಶಗಳಲ್ಲಿ ನೆಲೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...