Homeಮುಖಪುಟಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ...

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದು ಗುವಾಹಟಿ ಹೈಕೋರ್ಟ್‌ಗೆ ತಿಳಿಸಿದೆ.

ಮೇ 21, 2022ರಂದು, ಮೀನು ವ್ಯಾಪಾರಿ ಶಫೀಕುಲ್ ಇಸ್ಲಾಂ ಎಂಬವರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಇದಾಗಿ ಒಂದು ದಿನದ ನಂತರ, ನಾಗಾಂವ್ ಜಿಲ್ಲೆಯ ಬಟದ್ರವಾ ಪೊಲೀಸ್ ಠಾಣೆಗೆ ಗುಂಪೊಂದು ಬೆಂಕಿ ಹಚ್ಚಿತ್ತು. ಶಫೀಕುಲ್ ಇಸ್ಲಾಂ ಅವರನ್ನು ಬಿಡುಗಡೆ ಮಾಡಲು ಪೊಲೀಸರು 10,000 ರೂಪಾಯಿ ಹಣ ಮತ್ತು ಬಾತುಕೋಳಿಯನ್ನು ಲಂಚವಾಗಿ ಕೇಳಿದ್ದರು ಎಂದು ಇಸ್ಲಾಂನ ಕುಟುಂಬ ಆರೋಪಿಸಿತ್ತು.

ಉದ್ರಿಕ್ತರ ಗುಂಪು ಪೊಲೀಸ್ ಠಾಣೆಯನ್ನು ಸುಟ್ಟು ಹಾಕಿದ ಒಂದು ದಿನದ ನಂತರ, ಐದು ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಮೂಲಕ ಕೆಡವಿದ್ದರು. ಮನೆ ಕೆಡವಲು ಭಾರತೀಯ ಕಾನೂನಿನಡಿಯಲ್ಲಿ ಯಾವುದೇ ನಿಬಂಧನೆಗಳಿಲ್ಲ. ಆದರೆ, ಇದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವಾಡಿಕೆಯಾಗಿಬಿಟ್ಟಿದೆ.

ಬುಧವಾರ, ಅಸ್ಸಾಂ ಸರ್ಕಾರದ ಪರವಾಗಿ ಗುವಾಹಟಿ ಹೈಕೋರ್ಟ್‌ಗೆ ಹಾಜರಾದ ಹಿರಿಯ ವಕೀಲ ಡಿ ನಾಥ್ ಅವರು, ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ಐದು ಕುಟುಂಬಗಳಿಗೆ ಪರಿಹಾರದ ಹಣವನ್ನು ಪಾವತಿಸಿದ್ದಾರೆ ಎಂದು ತಿಳಿಸಿದ್ದಾರೆ. ಎರಡು ಕಾಂಕ್ರೀಟ್ ಮನೆಗಳು ಮತ್ತು ನಾಲ್ಕು ತಾತ್ಕಾಲಿಕ ಮನೆಗಳನ್ನು ಕೆಡವಿದ್ದಕ್ಕಾಗಿ ಪರಿಹಾರ ನೀಡಲಾಗಿದೆ ಎಂದಿದ್ದಾರೆ.

ಇಮಾಮುಲ್ ಹಕ್ ಮತ್ತು ಮುಜೀಬುರಹ್ಮಾನ್ ಎಂಬವರ ಕಾಂಕ್ರೀಟ್ ಮನೆಗಳನ್ನು ಕಡೆವಿದ್ದಕ್ಕೆ ತಲಾ 10 ಲಕ್ಷ ರೂಪಾಯಿಗಳನ್ನು ನೀಡಲಾಗಿದೆ. ನೆಲಸಮಗೊಂಡ ಪ್ರತಿ ತಾತ್ಕಾಲಿಕ ಮನೆಗೆ 2.5 ಲಕ್ಷ ರೂ. ನೀಡಲಾಗಿದೆ ಎಂದು ಅಸ್ಸಾಂನ ಬಿಜೆಪಿ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಮುಜೀಬುರಹ್ಮಾನ್ ಅವರು ಕಾಂಕ್ರೀಟ್ ಮತ್ತು ತಾತ್ಕಾಲಿಕ ಮನೆ ಎರಡನ್ನೂ ಕಳೆದುಕೊಂಡಿದ್ದರಿಂದ 12.5 ಲಕ್ಷ ರೂ.ನೀಡಲಾಗಿದೆ ಎಂದು ಹೇಳಿದೆ.

ಮೃತ ಇಸ್ಲಾಂ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 2.5 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದೆ. ಆದರೆ, ಕುಟುಂಬವು ಉತ್ತರಾಧಿಕಾರದ ಪ್ರಮಾಣಪತ್ರವನ್ನು ನೀಡಿಲ್ಲ. ಅವರು ದಾಖಲೆಯನ್ನು ನೀಡಿದ ನಂತರ ಅಧಿಕಾರಿಗಳು ಪರಿಹಾರ ಪಾವತಿಸಲಿದ್ದಾರೆ ಎಂದು ವಕೀಲ ನಾಥ್ ತಿಳಿಸಿದ್ದಾರೆ.

ಸರ್ಕಾತದ ಆದೇಶದಂತೆ ನಡೆಸಲಾದ ವಿಚಾರಣೆಯು ಇಸ್ಲಾಂ ಪೋಲಿಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದನ್ನು ದೃಢಪಡಿಸಿದೆ. ಇದು ಸರ್ಕಾರದ ಪ್ರಾತಿನಿಧಿಕ ಹೊಣೆಗಾರಿಕೆಯ ಸ್ಪಷ್ಟ ಪ್ರಕರಣವಾಗಿದೆ ಎಂದು ಗುವಾಹಟಿ ಹೈಕೋರ್ಟ್ ಮೇ 3ರಂದು ಹೇಳಿತ್ತು.

ಅಸ್ಸಾಂ ಸರ್ಕಾರ ಶಫೀಕುಲ್ ಇಸ್ಲಾಂ ಅವರ ಕಸ್ಟಡಿ ಸಾವು ನಿರ್ಲಕ್ಷ್ಯ ಅಥವಾ ಜವಬ್ದಾರಿಯ ಲೋಪವಲ್ಲ. ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಮೇ 21, 2023ರಂದು ತಿಳಿಸಿತ್ತು.

ಅಸಲಿಗೆ ಶಫೀಕುಲ್ ಇಸ್ಲಾಂ ಅವರನ್ನು ಪೊಲೀಸರು ಬಂಧಿಸಿಯೇ ಇಲ್ಲ. ಕುಡಿದು ಅಮಲಿನಲ್ಲಿದ್ದ ಅವರನ್ನು ಪೊಲೀಸರು ರಕ್ಷಿಸಿ ಕರೆ ತಂದಿದ್ದರು. ಬಟದ್ರವಾ ಪಾಲಿಕೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದರು. ಬಳಿಕ ಮೇ 21ರಂದು ದೂರವಾಣಿ ಮೂಲಕ ಮಾಹಿತಿ ನೀಡಿದರೂ ಶಫೀಕುಲ್ ಇಸ್ಲಾಂ ಅವರ ಕುಟುಂಬ ಪೊಲೀಸ್ ಠಾಣೆಗೆ ಬರಲೇ ಇಲ್ಲ ಎಂದು ಸರ್ಕಾರ ಹೇಳಿತ್ತು.

ಶಫೀಕುಲ್ ಇಸ್ಲಾಂ ಅವರ ರಕ್ತದೊತ್ತಡ ಹೆಚ್ಚಾಗಿತ್ತು. ಅವರ ಪರಿಸ್ಥಿತಿ ಗಂಭೀರವಾಗಿತ್ತು. ಹಾಗಾಗಿ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದರು. ಇಸ್ಲಾಂ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ ಎಂಬುವುದನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...