Homeಮುಖಪುಟಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ...

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದು ಗುವಾಹಟಿ ಹೈಕೋರ್ಟ್‌ಗೆ ತಿಳಿಸಿದೆ.

ಮೇ 21, 2022ರಂದು, ಮೀನು ವ್ಯಾಪಾರಿ ಶಫೀಕುಲ್ ಇಸ್ಲಾಂ ಎಂಬವರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಇದಾಗಿ ಒಂದು ದಿನದ ನಂತರ, ನಾಗಾಂವ್ ಜಿಲ್ಲೆಯ ಬಟದ್ರವಾ ಪೊಲೀಸ್ ಠಾಣೆಗೆ ಗುಂಪೊಂದು ಬೆಂಕಿ ಹಚ್ಚಿತ್ತು. ಶಫೀಕುಲ್ ಇಸ್ಲಾಂ ಅವರನ್ನು ಬಿಡುಗಡೆ ಮಾಡಲು ಪೊಲೀಸರು 10,000 ರೂಪಾಯಿ ಹಣ ಮತ್ತು ಬಾತುಕೋಳಿಯನ್ನು ಲಂಚವಾಗಿ ಕೇಳಿದ್ದರು ಎಂದು ಇಸ್ಲಾಂನ ಕುಟುಂಬ ಆರೋಪಿಸಿತ್ತು.

ಉದ್ರಿಕ್ತರ ಗುಂಪು ಪೊಲೀಸ್ ಠಾಣೆಯನ್ನು ಸುಟ್ಟು ಹಾಕಿದ ಒಂದು ದಿನದ ನಂತರ, ಐದು ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಮೂಲಕ ಕೆಡವಿದ್ದರು. ಮನೆ ಕೆಡವಲು ಭಾರತೀಯ ಕಾನೂನಿನಡಿಯಲ್ಲಿ ಯಾವುದೇ ನಿಬಂಧನೆಗಳಿಲ್ಲ. ಆದರೆ, ಇದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವಾಡಿಕೆಯಾಗಿಬಿಟ್ಟಿದೆ.

ಬುಧವಾರ, ಅಸ್ಸಾಂ ಸರ್ಕಾರದ ಪರವಾಗಿ ಗುವಾಹಟಿ ಹೈಕೋರ್ಟ್‌ಗೆ ಹಾಜರಾದ ಹಿರಿಯ ವಕೀಲ ಡಿ ನಾಥ್ ಅವರು, ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ಐದು ಕುಟುಂಬಗಳಿಗೆ ಪರಿಹಾರದ ಹಣವನ್ನು ಪಾವತಿಸಿದ್ದಾರೆ ಎಂದು ತಿಳಿಸಿದ್ದಾರೆ. ಎರಡು ಕಾಂಕ್ರೀಟ್ ಮನೆಗಳು ಮತ್ತು ನಾಲ್ಕು ತಾತ್ಕಾಲಿಕ ಮನೆಗಳನ್ನು ಕೆಡವಿದ್ದಕ್ಕಾಗಿ ಪರಿಹಾರ ನೀಡಲಾಗಿದೆ ಎಂದಿದ್ದಾರೆ.

ಇಮಾಮುಲ್ ಹಕ್ ಮತ್ತು ಮುಜೀಬುರಹ್ಮಾನ್ ಎಂಬವರ ಕಾಂಕ್ರೀಟ್ ಮನೆಗಳನ್ನು ಕಡೆವಿದ್ದಕ್ಕೆ ತಲಾ 10 ಲಕ್ಷ ರೂಪಾಯಿಗಳನ್ನು ನೀಡಲಾಗಿದೆ. ನೆಲಸಮಗೊಂಡ ಪ್ರತಿ ತಾತ್ಕಾಲಿಕ ಮನೆಗೆ 2.5 ಲಕ್ಷ ರೂ. ನೀಡಲಾಗಿದೆ ಎಂದು ಅಸ್ಸಾಂನ ಬಿಜೆಪಿ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಮುಜೀಬುರಹ್ಮಾನ್ ಅವರು ಕಾಂಕ್ರೀಟ್ ಮತ್ತು ತಾತ್ಕಾಲಿಕ ಮನೆ ಎರಡನ್ನೂ ಕಳೆದುಕೊಂಡಿದ್ದರಿಂದ 12.5 ಲಕ್ಷ ರೂ.ನೀಡಲಾಗಿದೆ ಎಂದು ಹೇಳಿದೆ.

ಮೃತ ಇಸ್ಲಾಂ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 2.5 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದೆ. ಆದರೆ, ಕುಟುಂಬವು ಉತ್ತರಾಧಿಕಾರದ ಪ್ರಮಾಣಪತ್ರವನ್ನು ನೀಡಿಲ್ಲ. ಅವರು ದಾಖಲೆಯನ್ನು ನೀಡಿದ ನಂತರ ಅಧಿಕಾರಿಗಳು ಪರಿಹಾರ ಪಾವತಿಸಲಿದ್ದಾರೆ ಎಂದು ವಕೀಲ ನಾಥ್ ತಿಳಿಸಿದ್ದಾರೆ.

ಸರ್ಕಾತದ ಆದೇಶದಂತೆ ನಡೆಸಲಾದ ವಿಚಾರಣೆಯು ಇಸ್ಲಾಂ ಪೋಲಿಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದನ್ನು ದೃಢಪಡಿಸಿದೆ. ಇದು ಸರ್ಕಾರದ ಪ್ರಾತಿನಿಧಿಕ ಹೊಣೆಗಾರಿಕೆಯ ಸ್ಪಷ್ಟ ಪ್ರಕರಣವಾಗಿದೆ ಎಂದು ಗುವಾಹಟಿ ಹೈಕೋರ್ಟ್ ಮೇ 3ರಂದು ಹೇಳಿತ್ತು.

ಅಸ್ಸಾಂ ಸರ್ಕಾರ ಶಫೀಕುಲ್ ಇಸ್ಲಾಂ ಅವರ ಕಸ್ಟಡಿ ಸಾವು ನಿರ್ಲಕ್ಷ್ಯ ಅಥವಾ ಜವಬ್ದಾರಿಯ ಲೋಪವಲ್ಲ. ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಮೇ 21, 2023ರಂದು ತಿಳಿಸಿತ್ತು.

ಅಸಲಿಗೆ ಶಫೀಕುಲ್ ಇಸ್ಲಾಂ ಅವರನ್ನು ಪೊಲೀಸರು ಬಂಧಿಸಿಯೇ ಇಲ್ಲ. ಕುಡಿದು ಅಮಲಿನಲ್ಲಿದ್ದ ಅವರನ್ನು ಪೊಲೀಸರು ರಕ್ಷಿಸಿ ಕರೆ ತಂದಿದ್ದರು. ಬಟದ್ರವಾ ಪಾಲಿಕೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದರು. ಬಳಿಕ ಮೇ 21ರಂದು ದೂರವಾಣಿ ಮೂಲಕ ಮಾಹಿತಿ ನೀಡಿದರೂ ಶಫೀಕುಲ್ ಇಸ್ಲಾಂ ಅವರ ಕುಟುಂಬ ಪೊಲೀಸ್ ಠಾಣೆಗೆ ಬರಲೇ ಇಲ್ಲ ಎಂದು ಸರ್ಕಾರ ಹೇಳಿತ್ತು.

ಶಫೀಕುಲ್ ಇಸ್ಲಾಂ ಅವರ ರಕ್ತದೊತ್ತಡ ಹೆಚ್ಚಾಗಿತ್ತು. ಅವರ ಪರಿಸ್ಥಿತಿ ಗಂಭೀರವಾಗಿತ್ತು. ಹಾಗಾಗಿ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದರು. ಇಸ್ಲಾಂ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ ಎಂಬುವುದನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...