Homeಮುಖಪುಟಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ...

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದು ಗುವಾಹಟಿ ಹೈಕೋರ್ಟ್‌ಗೆ ತಿಳಿಸಿದೆ.

ಮೇ 21, 2022ರಂದು, ಮೀನು ವ್ಯಾಪಾರಿ ಶಫೀಕುಲ್ ಇಸ್ಲಾಂ ಎಂಬವರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಇದಾಗಿ ಒಂದು ದಿನದ ನಂತರ, ನಾಗಾಂವ್ ಜಿಲ್ಲೆಯ ಬಟದ್ರವಾ ಪೊಲೀಸ್ ಠಾಣೆಗೆ ಗುಂಪೊಂದು ಬೆಂಕಿ ಹಚ್ಚಿತ್ತು. ಶಫೀಕುಲ್ ಇಸ್ಲಾಂ ಅವರನ್ನು ಬಿಡುಗಡೆ ಮಾಡಲು ಪೊಲೀಸರು 10,000 ರೂಪಾಯಿ ಹಣ ಮತ್ತು ಬಾತುಕೋಳಿಯನ್ನು ಲಂಚವಾಗಿ ಕೇಳಿದ್ದರು ಎಂದು ಇಸ್ಲಾಂನ ಕುಟುಂಬ ಆರೋಪಿಸಿತ್ತು.

ಉದ್ರಿಕ್ತರ ಗುಂಪು ಪೊಲೀಸ್ ಠಾಣೆಯನ್ನು ಸುಟ್ಟು ಹಾಕಿದ ಒಂದು ದಿನದ ನಂತರ, ಐದು ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಮೂಲಕ ಕೆಡವಿದ್ದರು. ಮನೆ ಕೆಡವಲು ಭಾರತೀಯ ಕಾನೂನಿನಡಿಯಲ್ಲಿ ಯಾವುದೇ ನಿಬಂಧನೆಗಳಿಲ್ಲ. ಆದರೆ, ಇದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವಾಡಿಕೆಯಾಗಿಬಿಟ್ಟಿದೆ.

ಬುಧವಾರ, ಅಸ್ಸಾಂ ಸರ್ಕಾರದ ಪರವಾಗಿ ಗುವಾಹಟಿ ಹೈಕೋರ್ಟ್‌ಗೆ ಹಾಜರಾದ ಹಿರಿಯ ವಕೀಲ ಡಿ ನಾಥ್ ಅವರು, ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ಐದು ಕುಟುಂಬಗಳಿಗೆ ಪರಿಹಾರದ ಹಣವನ್ನು ಪಾವತಿಸಿದ್ದಾರೆ ಎಂದು ತಿಳಿಸಿದ್ದಾರೆ. ಎರಡು ಕಾಂಕ್ರೀಟ್ ಮನೆಗಳು ಮತ್ತು ನಾಲ್ಕು ತಾತ್ಕಾಲಿಕ ಮನೆಗಳನ್ನು ಕೆಡವಿದ್ದಕ್ಕಾಗಿ ಪರಿಹಾರ ನೀಡಲಾಗಿದೆ ಎಂದಿದ್ದಾರೆ.

ಇಮಾಮುಲ್ ಹಕ್ ಮತ್ತು ಮುಜೀಬುರಹ್ಮಾನ್ ಎಂಬವರ ಕಾಂಕ್ರೀಟ್ ಮನೆಗಳನ್ನು ಕಡೆವಿದ್ದಕ್ಕೆ ತಲಾ 10 ಲಕ್ಷ ರೂಪಾಯಿಗಳನ್ನು ನೀಡಲಾಗಿದೆ. ನೆಲಸಮಗೊಂಡ ಪ್ರತಿ ತಾತ್ಕಾಲಿಕ ಮನೆಗೆ 2.5 ಲಕ್ಷ ರೂ. ನೀಡಲಾಗಿದೆ ಎಂದು ಅಸ್ಸಾಂನ ಬಿಜೆಪಿ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಮುಜೀಬುರಹ್ಮಾನ್ ಅವರು ಕಾಂಕ್ರೀಟ್ ಮತ್ತು ತಾತ್ಕಾಲಿಕ ಮನೆ ಎರಡನ್ನೂ ಕಳೆದುಕೊಂಡಿದ್ದರಿಂದ 12.5 ಲಕ್ಷ ರೂ.ನೀಡಲಾಗಿದೆ ಎಂದು ಹೇಳಿದೆ.

ಮೃತ ಇಸ್ಲಾಂ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 2.5 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದೆ. ಆದರೆ, ಕುಟುಂಬವು ಉತ್ತರಾಧಿಕಾರದ ಪ್ರಮಾಣಪತ್ರವನ್ನು ನೀಡಿಲ್ಲ. ಅವರು ದಾಖಲೆಯನ್ನು ನೀಡಿದ ನಂತರ ಅಧಿಕಾರಿಗಳು ಪರಿಹಾರ ಪಾವತಿಸಲಿದ್ದಾರೆ ಎಂದು ವಕೀಲ ನಾಥ್ ತಿಳಿಸಿದ್ದಾರೆ.

ಸರ್ಕಾತದ ಆದೇಶದಂತೆ ನಡೆಸಲಾದ ವಿಚಾರಣೆಯು ಇಸ್ಲಾಂ ಪೋಲಿಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದನ್ನು ದೃಢಪಡಿಸಿದೆ. ಇದು ಸರ್ಕಾರದ ಪ್ರಾತಿನಿಧಿಕ ಹೊಣೆಗಾರಿಕೆಯ ಸ್ಪಷ್ಟ ಪ್ರಕರಣವಾಗಿದೆ ಎಂದು ಗುವಾಹಟಿ ಹೈಕೋರ್ಟ್ ಮೇ 3ರಂದು ಹೇಳಿತ್ತು.

ಅಸ್ಸಾಂ ಸರ್ಕಾರ ಶಫೀಕುಲ್ ಇಸ್ಲಾಂ ಅವರ ಕಸ್ಟಡಿ ಸಾವು ನಿರ್ಲಕ್ಷ್ಯ ಅಥವಾ ಜವಬ್ದಾರಿಯ ಲೋಪವಲ್ಲ. ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಮೇ 21, 2023ರಂದು ತಿಳಿಸಿತ್ತು.

ಅಸಲಿಗೆ ಶಫೀಕುಲ್ ಇಸ್ಲಾಂ ಅವರನ್ನು ಪೊಲೀಸರು ಬಂಧಿಸಿಯೇ ಇಲ್ಲ. ಕುಡಿದು ಅಮಲಿನಲ್ಲಿದ್ದ ಅವರನ್ನು ಪೊಲೀಸರು ರಕ್ಷಿಸಿ ಕರೆ ತಂದಿದ್ದರು. ಬಟದ್ರವಾ ಪಾಲಿಕೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದರು. ಬಳಿಕ ಮೇ 21ರಂದು ದೂರವಾಣಿ ಮೂಲಕ ಮಾಹಿತಿ ನೀಡಿದರೂ ಶಫೀಕುಲ್ ಇಸ್ಲಾಂ ಅವರ ಕುಟುಂಬ ಪೊಲೀಸ್ ಠಾಣೆಗೆ ಬರಲೇ ಇಲ್ಲ ಎಂದು ಸರ್ಕಾರ ಹೇಳಿತ್ತು.

ಶಫೀಕುಲ್ ಇಸ್ಲಾಂ ಅವರ ರಕ್ತದೊತ್ತಡ ಹೆಚ್ಚಾಗಿತ್ತು. ಅವರ ಪರಿಸ್ಥಿತಿ ಗಂಭೀರವಾಗಿತ್ತು. ಹಾಗಾಗಿ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದರು. ಇಸ್ಲಾಂ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ ಎಂಬುವುದನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...