Homeಮುಖಪುಟಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ...

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದು ಗುವಾಹಟಿ ಹೈಕೋರ್ಟ್‌ಗೆ ತಿಳಿಸಿದೆ.

ಮೇ 21, 2022ರಂದು, ಮೀನು ವ್ಯಾಪಾರಿ ಶಫೀಕುಲ್ ಇಸ್ಲಾಂ ಎಂಬವರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಇದಾಗಿ ಒಂದು ದಿನದ ನಂತರ, ನಾಗಾಂವ್ ಜಿಲ್ಲೆಯ ಬಟದ್ರವಾ ಪೊಲೀಸ್ ಠಾಣೆಗೆ ಗುಂಪೊಂದು ಬೆಂಕಿ ಹಚ್ಚಿತ್ತು. ಶಫೀಕುಲ್ ಇಸ್ಲಾಂ ಅವರನ್ನು ಬಿಡುಗಡೆ ಮಾಡಲು ಪೊಲೀಸರು 10,000 ರೂಪಾಯಿ ಹಣ ಮತ್ತು ಬಾತುಕೋಳಿಯನ್ನು ಲಂಚವಾಗಿ ಕೇಳಿದ್ದರು ಎಂದು ಇಸ್ಲಾಂನ ಕುಟುಂಬ ಆರೋಪಿಸಿತ್ತು.

ಉದ್ರಿಕ್ತರ ಗುಂಪು ಪೊಲೀಸ್ ಠಾಣೆಯನ್ನು ಸುಟ್ಟು ಹಾಕಿದ ಒಂದು ದಿನದ ನಂತರ, ಐದು ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಮೂಲಕ ಕೆಡವಿದ್ದರು. ಮನೆ ಕೆಡವಲು ಭಾರತೀಯ ಕಾನೂನಿನಡಿಯಲ್ಲಿ ಯಾವುದೇ ನಿಬಂಧನೆಗಳಿಲ್ಲ. ಆದರೆ, ಇದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವಾಡಿಕೆಯಾಗಿಬಿಟ್ಟಿದೆ.

ಬುಧವಾರ, ಅಸ್ಸಾಂ ಸರ್ಕಾರದ ಪರವಾಗಿ ಗುವಾಹಟಿ ಹೈಕೋರ್ಟ್‌ಗೆ ಹಾಜರಾದ ಹಿರಿಯ ವಕೀಲ ಡಿ ನಾಥ್ ಅವರು, ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ಐದು ಕುಟುಂಬಗಳಿಗೆ ಪರಿಹಾರದ ಹಣವನ್ನು ಪಾವತಿಸಿದ್ದಾರೆ ಎಂದು ತಿಳಿಸಿದ್ದಾರೆ. ಎರಡು ಕಾಂಕ್ರೀಟ್ ಮನೆಗಳು ಮತ್ತು ನಾಲ್ಕು ತಾತ್ಕಾಲಿಕ ಮನೆಗಳನ್ನು ಕೆಡವಿದ್ದಕ್ಕಾಗಿ ಪರಿಹಾರ ನೀಡಲಾಗಿದೆ ಎಂದಿದ್ದಾರೆ.

ಇಮಾಮುಲ್ ಹಕ್ ಮತ್ತು ಮುಜೀಬುರಹ್ಮಾನ್ ಎಂಬವರ ಕಾಂಕ್ರೀಟ್ ಮನೆಗಳನ್ನು ಕಡೆವಿದ್ದಕ್ಕೆ ತಲಾ 10 ಲಕ್ಷ ರೂಪಾಯಿಗಳನ್ನು ನೀಡಲಾಗಿದೆ. ನೆಲಸಮಗೊಂಡ ಪ್ರತಿ ತಾತ್ಕಾಲಿಕ ಮನೆಗೆ 2.5 ಲಕ್ಷ ರೂ. ನೀಡಲಾಗಿದೆ ಎಂದು ಅಸ್ಸಾಂನ ಬಿಜೆಪಿ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಮುಜೀಬುರಹ್ಮಾನ್ ಅವರು ಕಾಂಕ್ರೀಟ್ ಮತ್ತು ತಾತ್ಕಾಲಿಕ ಮನೆ ಎರಡನ್ನೂ ಕಳೆದುಕೊಂಡಿದ್ದರಿಂದ 12.5 ಲಕ್ಷ ರೂ.ನೀಡಲಾಗಿದೆ ಎಂದು ಹೇಳಿದೆ.

ಮೃತ ಇಸ್ಲಾಂ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 2.5 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದೆ. ಆದರೆ, ಕುಟುಂಬವು ಉತ್ತರಾಧಿಕಾರದ ಪ್ರಮಾಣಪತ್ರವನ್ನು ನೀಡಿಲ್ಲ. ಅವರು ದಾಖಲೆಯನ್ನು ನೀಡಿದ ನಂತರ ಅಧಿಕಾರಿಗಳು ಪರಿಹಾರ ಪಾವತಿಸಲಿದ್ದಾರೆ ಎಂದು ವಕೀಲ ನಾಥ್ ತಿಳಿಸಿದ್ದಾರೆ.

ಸರ್ಕಾತದ ಆದೇಶದಂತೆ ನಡೆಸಲಾದ ವಿಚಾರಣೆಯು ಇಸ್ಲಾಂ ಪೋಲಿಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದನ್ನು ದೃಢಪಡಿಸಿದೆ. ಇದು ಸರ್ಕಾರದ ಪ್ರಾತಿನಿಧಿಕ ಹೊಣೆಗಾರಿಕೆಯ ಸ್ಪಷ್ಟ ಪ್ರಕರಣವಾಗಿದೆ ಎಂದು ಗುವಾಹಟಿ ಹೈಕೋರ್ಟ್ ಮೇ 3ರಂದು ಹೇಳಿತ್ತು.

ಅಸ್ಸಾಂ ಸರ್ಕಾರ ಶಫೀಕುಲ್ ಇಸ್ಲಾಂ ಅವರ ಕಸ್ಟಡಿ ಸಾವು ನಿರ್ಲಕ್ಷ್ಯ ಅಥವಾ ಜವಬ್ದಾರಿಯ ಲೋಪವಲ್ಲ. ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಮೇ 21, 2023ರಂದು ತಿಳಿಸಿತ್ತು.

ಅಸಲಿಗೆ ಶಫೀಕುಲ್ ಇಸ್ಲಾಂ ಅವರನ್ನು ಪೊಲೀಸರು ಬಂಧಿಸಿಯೇ ಇಲ್ಲ. ಕುಡಿದು ಅಮಲಿನಲ್ಲಿದ್ದ ಅವರನ್ನು ಪೊಲೀಸರು ರಕ್ಷಿಸಿ ಕರೆ ತಂದಿದ್ದರು. ಬಟದ್ರವಾ ಪಾಲಿಕೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದರು. ಬಳಿಕ ಮೇ 21ರಂದು ದೂರವಾಣಿ ಮೂಲಕ ಮಾಹಿತಿ ನೀಡಿದರೂ ಶಫೀಕುಲ್ ಇಸ್ಲಾಂ ಅವರ ಕುಟುಂಬ ಪೊಲೀಸ್ ಠಾಣೆಗೆ ಬರಲೇ ಇಲ್ಲ ಎಂದು ಸರ್ಕಾರ ಹೇಳಿತ್ತು.

ಶಫೀಕುಲ್ ಇಸ್ಲಾಂ ಅವರ ರಕ್ತದೊತ್ತಡ ಹೆಚ್ಚಾಗಿತ್ತು. ಅವರ ಪರಿಸ್ಥಿತಿ ಗಂಭೀರವಾಗಿತ್ತು. ಹಾಗಾಗಿ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದರು. ಇಸ್ಲಾಂ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ ಎಂಬುವುದನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...