Homeಮುಖಪುಟ1 ಸಾವಿರ ಖಾಸಗಿ ಮದ್ರಸಾಗಳನ್ನು ಮುಚ್ಚಲು ಮುಂದಾದ ಅಸ್ಸಾಂ ಸರ್ಕಾರ

1 ಸಾವಿರ ಖಾಸಗಿ ಮದ್ರಸಾಗಳನ್ನು ಮುಚ್ಚಲು ಮುಂದಾದ ಅಸ್ಸಾಂ ಸರ್ಕಾರ

- Advertisement -
- Advertisement -

ರಾಜ್ಯದ ಒಂದು ಸಾವಿರ ಖಾಸಗಿ ಮದ್ರಸಾಗಳನ್ನು ಸಂಪೂರ್ಣವಾಗಿ ಮುಚ್ಚಲು ಅಸ್ಸಾಂನ ಬಿಜೆಪಿ ಸರ್ಕಾರ ಮುಂದಾಗಿದ್ದು, ಹೊಸ ವರ್ಷದ ಮೊದಲ ದಿನದಂದು ಈ ಕುರಿತು ಸಿಎಂ ಹಿಮಂತ ಬಿಸ್ವ ಶರ್ಮಾ ಹೇಳಿಕೆ ನೀಡಿದ್ದಾರೆ.

ಖಾಸಗಿ ಮದ್ರಸಾಗಳನ್ನು ಸಾಂವಿಧಾನಿಕವಾಗಿ ರಕ್ಷಿಸಲಾಗಿದೆ. ಆದರೆ, ರಾಜ್ಯ ಪೊಲೀಸ್ ಮತ್ತು ಶಿಕ್ಷಣ ಇಲಾಖೆ ಅವುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕೆಲಸ ಮಾಡುತ್ತಿದೆ ಎಂದು ಸಿಎಂ ಹೇಳಿದ್ದಾರೆ.

2024ರ ಅಂತ್ಯದ ವೇಳೆಗೆ ಅಸ್ಸಾಮಿ ಮುಸ್ಲಿಮರು ಎಂದೂ ಕರೆಯಲ್ಪಡುವ ಸ್ಥಳೀಯ ಮುಸ್ಲಿಮರ ವಿಶೇಷ ಗಣತಿಯನ್ನು ನಡೆಸಲು ಸರ್ಕಾರದ ಯೋಜನೆ ರೂಪಿಸಿದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ. ಈ ಜನಗಣತಿಯು ಗ್ರಾಮ, ನಗರ ಮತ್ತು ಪುರಸಭೆ ಪ್ರದೇಶಗಳಲ್ಲಿರುವ ಅಸ್ಸಾಮಿ ಮುಸ್ಲಿಂ ಜನಸಂಖ್ಯೆಯೊಳಗಿನ ವಿಭಿನ್ನ ಸಮುದಾಯಗಳನ್ನು ಗುರುತಿಸುವ ಮತ್ತು ದಾಖಲಿಸುವ ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಈ ಹಿಂದೆ ಎರಡು ರೀತಿಯ ಮದ್ರಸಾ ವ್ಯವಸ್ಥೆಗಳಿತ್ತು. ಒಂದು ಸರ್ಕಾರಿ ಮತ್ತೊಂದು ಖಾಸಗಿ. ಸರ್ಕಾರಿ ಮದ್ರಸಾಗಳಿಗೆ ಪಠ್ಯ, ಪರೀಕ್ಷೆ ಎಲ್ಲವನ್ನೂ ಸರ್ಕಾರ ಹೇಳಿದಂತೆ ರೂಪಿಸಲಾಗುತ್ತಿತ್ತು. ಇತ್ತೀಚೆಗೆ ಎಲ್ಲಾ ಸರ್ಕಾರಿ ಮದ್ರಸಾಗಳನ್ನು ಸಾಮಾನ್ಯ ಶಾಲೆಗಳಾಗಿ ಸರ್ಕಾರ ಬದಲಿಸಿದೆ. ಮದ್ರಸಾಗಳಲ್ಲಿ ಮಕ್ಕಳಿಗೆ ಲೌಕಿಕ ಶಿಕ್ಷಣ ಸಿಗುತ್ತಿಲ್ಲ ಎಂಬ ಕಾರಣವನ್ನು ಸರ್ಕಾರ ಹೇಳಿದೆ.

ಇದೀಗ ಖಾಸಗಿ ಮದ್ರಸಾಗಳನ್ನು ಸಂಪೂರ್ಣ ಮುಚ್ಚಿ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದಲ್ಲಿ ಮದ್ರಸಾ ವ್ಯವಸ್ಥೆಯನ್ನೇ ನಿರ್ಣಾಮ ಮಾಡಲು ಸರ್ಕಾರ ಮುಂದಾಗಿದೆ. 2023ರ ಮಾರ್ಚ್‌ನಲ್ಲಿ ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ್ದ ಸಿಎಂ ಶರ್ಮಾ, ಅಸ್ಸಾಂನಲ್ಲಿ ಮದ್ರಸಾಗಳನ್ನು ಸಂಪೂರ್ಣವಾಗಿ ಮುಚ್ಚಿ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಿಗೆ ಆದ್ಯತೆ ನೀಡುವುದಾಗಿ ಹೇಳಿದ್ದರು.

ಖಾಸಗಿ ಮದ್ರಸಾಗಳನ್ನು ಮುಚ್ಚುವುದು ಅಸ್ಸಾಂನ ಶೈಕ್ಷಣಿಕ ಚೌಕಟ್ಟನ್ನು ಮರುರೂಪಿಸುವ ವಿಶಾಲ ಕಾರ್ಯತಂತ್ರದ ಭಾಗವಾಗಿದೆ. ಸರ್ಕಾರ ಮದ್ರಸಾಗಳನ್ನು ಸಾಮಾನ್ಯ ಶಾಲೆಗಳಾಗಿ ಪರಿವರ್ತಿಸಲು ಕೆಲಸ ಮಾಡುತ್ತಿದೆ. ಈ ಉಪಕ್ರಮವು ಶಿಕ್ಷಣವನ್ನು ಆಧುನೀಕರಿಸುವ ರಾಜ್ಯದ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ ಮತ್ತು ಎಲ್ಲಾ ಸಂಸ್ಥೆಗಳು, ವಿದ್ಯಾರ್ಥಿಗಳ ಒಟ್ಟಾರೆ ಅಭಿವೃದ್ಧಿಗೆ ಅನುಕೂಲಕರವಾದ ಮೂಲಭೂತ ಸೌಕರ್ಯ ಮತ್ತು ಕಲಿಕೆಯ ವಾತಾವರಣವನ್ನು ಒದಗಿಸುವುದನ್ನು ಖಚಿತಪಡಿಸುತ್ತದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ : ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...