Homeಮುಖಪುಟಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

- Advertisement -
- Advertisement -

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಶಿಸ್ತುಕ್ರಮ ಕೈಗೊಂಡಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಜನವರಿ 23 ರಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಬಾಲ್ಯ ವಿವಾಹದ ವಿರುದ್ಧ ರಾಜ್ಯಾದ್ಯಂತ ಸರ್ಕಾರ ಅಭಿಯಾನ ಆರಂಭಿಸುತ್ತದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವ ಪುರುಷರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಹಾಗೂ 14-18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಬಂಧಿಸಲಾಗುತ್ತದೆ ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 4,074 ಪ್ರಕರಣಗಳು ದಾಖಲಾಗಿವೆ. ವರನ ಪೋಷಕರು ಮತ್ತು ಅರ್ಚಕರು ಸೇರಿದಂತೆ 8,134 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಸ್ವನಾಥ್ ಜಿಲ್ಲೆಯಲ್ಲಿ ಕನಿಷ್ಠ 139 ಜನರನ್ನು ಬಂಧಿಸಲಾಗಿದೆ, ಬರ್ಪೇಟಾದಲ್ಲಿ 130 ಮತ್ತು ಧುಬ್ರಿಯಲ್ಲಿ 126, ಬಕ್ಸಾದಲ್ಲಿ 123, ಬೊಂಗೈಗಾಂವ್ ಮತ್ತು ಹೊಜೈನಲ್ಲಿ ತಲಾ 117 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಾಲ್ಯ ವಿವಾಹಗಳ ವಿರುದ್ಧ ಧುಬ್ರಿಯಲ್ಲಿ ಅತಿ ಹೆಚ್ಚು (374) ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೊಜೈ (255) ಮತ್ತು ಮೊರಿಗಾಂವ್ (224) ನಂತರದ ಸ್ಥಾನದಲ್ಲಿವೆ.

ಕಾರ್ಯಾಚರಣೆ ವಿರುದ್ಧ ಬರಾಕ್ ಕಣಿವೆಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಅಸ್ಸಾಂ: ಬಾಲ್ಯ ವಿವಾಹ ತಡೆ ವಿರುದ್ಧ ಮಹಿಳೆಯರ ಪ್ರತಿಭಟನೆ

ಧುಬ್ರಿ, ಮೋರಿಗಾಂವ್, ದಕ್ಷಿಣ-ಸಾಲಮರ ಮಂಚಚಾರ್ ಜಿಲ್ಲೆಗಳಲ್ಲಿ ಮಹಿಳೆಯರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟಿಸುವ ಹೆಚ್ಚಿನ ಮಹಿಳೆಯರು ಆರ್ಥಿಕ ಬೆಂಬಲಕ್ಕೆ ತಮ್ಮ ಗಂಡನನ್ನೇ ಅವಲಂಬಿಸಿದ್ದಾರೆ.

ಧುಬ್ರಿಯ ತಮರ್ಹತ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಅವರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.

ಈ ವೇಳೆ ಮೂರು ತಿಂಗಳ ಹಸುಳೆಯನ್ನು ಹೊತ್ತ ಅಪರಿಚಿತ ಮಹಿಳೆಯೊಬ್ಬರು, ”ನನ್ನ ಮಗುವನ್ನು ನಾನು ಹೇಗೆ ನೋಡಿಕೊಳ್ಳಲಿ ಎಂದು ಚಿಂತಿತಳಾಗಿದ್ದೇನೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಅಳಲು ತೊಡಿಕೊಂಡಳು. ”ನನ್ನ ಪತಿ ಕೃಷಿ ಕೂಲಿ ಕೆಲಸ ಮಾಡುತ್ತಿದ್ದರು. ನಾನು ಮನೆಯಿಂದ ಓಡಿಹೋಗಿ ಮದುವೆಯಾಗಿದ್ದೇನೆ. ನನಗೆ ಬೇರೆ ಯಾವುದೇ ಬೆಂಬಲವಿಲ್ಲ, ಸದ್ಯಕ್ಕೆ ನನ್ನ ಬಳಿ ಒಂದು ರೂಪಾಯಿಯೂ ಇಲ್ಲ” ಎಂದು ತನ್ನ ಸಂಕಟವನ್ನು ತೋಡಿಕೊಂಡಿದ್ದಾಳೆ.

23 ವರ್ಷದ ಮಹಿಳೆ ತನ್ನ ಗಂಡನ ಬಂಧನವನ್ನು ವಿರೋಧಿಸಿ ಧುಬ್ರಿಯ ಗೋಲಕ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟಿಸಿದಳು. ಈ ವೇಳೆ ತನ್ನ ಗಂಡ ಮತ್ತು ತನ್ನ ತಂದೆಯನ್ನು ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಳು.

”ಈ ವಿಷಯಗಳಲ್ಲಿ ಶೂನ್ಯ ಸಹಾನುಭೂತಿ ಇದೆ” ಎಂದು  ಹೇಳಿದರು. ”ಒಂದು ಚಿಕ್ಕ ಹುಡುಗಿ ಮದುವೆಯಾಗಿ ಹೋದ ನಂತರ, ನಾನು ಅದನ್ನು ಅತ್ಯಾಚಾರ ಎಂದು ಕರೆಯಬೇಕಾಗುತ್ತದೆ. ಹುಡುಗಿ ಅನುಭವಿಸುವ ನೋವನ್ನು ನಾವು ಯೋಚಿಸಿದ್ದೇವೆಯೇ? ಭವಿಷ್ಯದಲ್ಲಿ ಲಕ್ಷಾಂತರ ಹೆಣ್ಣುಮಕ್ಕಳನ್ನು ಈ ಪರಿಸ್ಥಿತಿಯಿಂದ ರಕ್ಷಿಸಲು, ಒಂದು ಪೀಳಿಗೆಯು ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಅಸ್ಸಾಂನಲ್ಲಿ ಬಾಲ್ಯ ವಿವಾಹ ಪದ್ಧತಿ ನಿಲ್ಲಬೇಕು. ಪತಿ ಜೈಲಿನಲ್ಲಿರುವ ಕಾರಣ ಯಾರಿಗಾದರೂ ಹಣಕಾಸಿನ ತೊಂದರೆಯಾಗಿದ್ದರೆ, ಸರ್ಕಾರವು ಅದನ್ನು ಪರಿಶೀಲಿಸುತ್ತದೆ. ಈಗಾಗಲೇ ನಾನು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆ ಎಂದು ಶರ್ಮಾ ಹೇಳಿದರು.

ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಅಸ್ಸಾಂ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಇದು ತರಾತುರಿಯಲ್ಲಿ ನಡೆಸಿದ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ.

ರಾಜ್ಯದ ವಿರೋಧ ಪಕ್ಷದ ನಾಯಕರು ಈ ಅಭಿಯಾನವನ್ನು ಪ್ರಶ್ನಿಸಿದ್ದಾರೆ. ಈ ಕ್ರಮವನ್ನು ಬಿಜೆಪಿ ಸರ್ಕಾರದ ಜನಸಂಪರ್ಕ ವ್ಯಾಯಾಮ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬಣ್ಣಿಸಿದ್ದಾರೆ.

”ಬಾಲ್ಯ ವಿವಾಹವನ್ನು ಹತ್ತಿಕ್ಕುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಉಪಕ್ರಮವನ್ನು ಅಸ್ಸಾಂನಲ್ಲಿ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಸರಿಯಾದ ವಿಚಾರಣೆ ಅಥವಾ ಕಾರ್ಯವಿಧಾನವನ್ನು ಅನುಸರಿಸದೆ ದಶಕಗಳಷ್ಟು ಹಳೆಯದಾದ ಪ್ರಕರಣಗಳನ್ನು ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ತೋರುತ್ತದೆ. ಇದು ಒಂದು ಪ್ರಹಸನ” ಎಂದು ಗೊಗೋಯ್ ಟ್ವೀಟ್ ಮಾಡಿದ್ದಾರೆ.

ಕಾರ್ಯಾಚರಣೆ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಬಾಲ್ಯ ವಿವಾಹದ ಸಮಸ್ಯೆಯನ್ನು ನಿಜವಾಗಿಯೂ ಬಗೆಹರಿಸುವ ಮನಸ್ಸಿದ್ದಿದ್ದರೆ ಅಸ್ಸಾಂ ಸರ್ಕಾರವು ಸಾಕ್ಷರತೆಯ ಮಟ್ಟವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

”ಬಾಲ್ಯವಿವಾಹಗಳನ್ನು ನಿಲ್ಲಿಸಬೇಕಾದರೆ ಶಾಲೆಗಳನ್ನು ತೆರೆಯಬೇಕು ಎಂದು ತಜ್ಞರು ಹೇಳಿದ್ದಾರೆ, (ಆದರೆ) ನೀವು ಅದನ್ನು ಮಾಡಿಲ್ಲ. ಮದರಸಾಗಳನ್ನೂ ಮುಚ್ಚಿದ್ದೀರಿ” ಎಂದು ಅವರು ಆರೋಪಿಸಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮಾತನಾಡಿ, ”ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನವೀಯ ನಡೆ ಅನುಸರಿಸಬೇಕಾದ ಅಗತ್ಯವಿದೆ” ಎಂದು ಪ್ರತಿಪಾದಿಸಿದ್ದಾರೆ.

”ಬಾಲ್ಯ ವಿವಾಹವನ್ನು ಕಾಂಗ್ರೆಸ್‌ ವಿರೋಧಿಸುತ್ತದೆ. ಆದರೆ ಬೆಳೆದ ಮಕ್ಕಳೊಂದಿಗೆ ನೆಲೆಸಿರುವ ಕುಟುಂಬಗಳಲ್ಲಿ ನೆಮ್ಮದಿ ಕದಡುವುದರಿಂದ ಏನು ಪ್ರಯೋಜನ? ಇದು ಪ್ರಚಾರದ ಸ್ಟಂಟ್ ಹೊರತು ಬೇರೇನೂ ಅಲ್ಲ” ಎಂದು ಅವರು ಹೇಳಿದರು.

ಅಸ್ಸಾಂ ತೃಣಮೂಲ ಕಾಂಗ್ರೆಸ್ ಘಟಕದ ಅಧ್ಯಕ್ಷ ರಿಪುನ್ ಬೋರಾ, ”ರಾಜ್ಯ ಸರ್ಕಾರ ಬಾಲ್ಯವಿವಾಹ ಕಾಯ್ದೆಯನ್ನು ತೀವ್ರವಾಗಿ ದುರುಪಯೋಗಪಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

”ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವುದು ಸರಿಯಲ್ಲ. ಮಂಕಚಾರ್‌ನಲ್ಲಿ, ತನ್ನ ಪೋಷಕರು ಜೈಲಿಗೆ ಹೋಗುತ್ತಾರೆ ಎಂದು ಹೆದರಿ, ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಅಪರಾಧಿಗಳ ಮೇಲೆ ವಿಚಿತ್ರವಾದ ದಮನದ ಪರಿಣಾಮವಾಗಿದೆ” ಎಂದು ಬೋರಾ ಟ್ವೀಟ್ ಮಾಡಿದ್ದಾರೆ.

ಬಾಲ್ಯವಿವಾಹದ ವಿರುದ್ಧ ಸರ್ಕಾರ ನಡೆಸುತ್ತಿರುವ ಕ್ರಮದಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಸೂಪರಿಂಟೆಂಡೆಂಟ್ ಹೋರೆನ್ ಟೋಕ್ಬಿ ಅವರು, ”ಅವಳ ಕುಟುಂಬಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ನಾವು ಈ ವಿಚಾರದ ಬಗ್ಗೆ ಮತ್ತಷ್ಟು ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....