Homeಮುಖಪುಟಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

- Advertisement -
- Advertisement -

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಶಿಸ್ತುಕ್ರಮ ಕೈಗೊಂಡಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಜನವರಿ 23 ರಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಬಾಲ್ಯ ವಿವಾಹದ ವಿರುದ್ಧ ರಾಜ್ಯಾದ್ಯಂತ ಸರ್ಕಾರ ಅಭಿಯಾನ ಆರಂಭಿಸುತ್ತದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವ ಪುರುಷರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಹಾಗೂ 14-18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಬಂಧಿಸಲಾಗುತ್ತದೆ ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 4,074 ಪ್ರಕರಣಗಳು ದಾಖಲಾಗಿವೆ. ವರನ ಪೋಷಕರು ಮತ್ತು ಅರ್ಚಕರು ಸೇರಿದಂತೆ 8,134 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಸ್ವನಾಥ್ ಜಿಲ್ಲೆಯಲ್ಲಿ ಕನಿಷ್ಠ 139 ಜನರನ್ನು ಬಂಧಿಸಲಾಗಿದೆ, ಬರ್ಪೇಟಾದಲ್ಲಿ 130 ಮತ್ತು ಧುಬ್ರಿಯಲ್ಲಿ 126, ಬಕ್ಸಾದಲ್ಲಿ 123, ಬೊಂಗೈಗಾಂವ್ ಮತ್ತು ಹೊಜೈನಲ್ಲಿ ತಲಾ 117 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಾಲ್ಯ ವಿವಾಹಗಳ ವಿರುದ್ಧ ಧುಬ್ರಿಯಲ್ಲಿ ಅತಿ ಹೆಚ್ಚು (374) ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೊಜೈ (255) ಮತ್ತು ಮೊರಿಗಾಂವ್ (224) ನಂತರದ ಸ್ಥಾನದಲ್ಲಿವೆ.

ಕಾರ್ಯಾಚರಣೆ ವಿರುದ್ಧ ಬರಾಕ್ ಕಣಿವೆಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಅಸ್ಸಾಂ: ಬಾಲ್ಯ ವಿವಾಹ ತಡೆ ವಿರುದ್ಧ ಮಹಿಳೆಯರ ಪ್ರತಿಭಟನೆ

ಧುಬ್ರಿ, ಮೋರಿಗಾಂವ್, ದಕ್ಷಿಣ-ಸಾಲಮರ ಮಂಚಚಾರ್ ಜಿಲ್ಲೆಗಳಲ್ಲಿ ಮಹಿಳೆಯರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟಿಸುವ ಹೆಚ್ಚಿನ ಮಹಿಳೆಯರು ಆರ್ಥಿಕ ಬೆಂಬಲಕ್ಕೆ ತಮ್ಮ ಗಂಡನನ್ನೇ ಅವಲಂಬಿಸಿದ್ದಾರೆ.

ಧುಬ್ರಿಯ ತಮರ್ಹತ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಅವರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.

ಈ ವೇಳೆ ಮೂರು ತಿಂಗಳ ಹಸುಳೆಯನ್ನು ಹೊತ್ತ ಅಪರಿಚಿತ ಮಹಿಳೆಯೊಬ್ಬರು, ”ನನ್ನ ಮಗುವನ್ನು ನಾನು ಹೇಗೆ ನೋಡಿಕೊಳ್ಳಲಿ ಎಂದು ಚಿಂತಿತಳಾಗಿದ್ದೇನೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಅಳಲು ತೊಡಿಕೊಂಡಳು. ”ನನ್ನ ಪತಿ ಕೃಷಿ ಕೂಲಿ ಕೆಲಸ ಮಾಡುತ್ತಿದ್ದರು. ನಾನು ಮನೆಯಿಂದ ಓಡಿಹೋಗಿ ಮದುವೆಯಾಗಿದ್ದೇನೆ. ನನಗೆ ಬೇರೆ ಯಾವುದೇ ಬೆಂಬಲವಿಲ್ಲ, ಸದ್ಯಕ್ಕೆ ನನ್ನ ಬಳಿ ಒಂದು ರೂಪಾಯಿಯೂ ಇಲ್ಲ” ಎಂದು ತನ್ನ ಸಂಕಟವನ್ನು ತೋಡಿಕೊಂಡಿದ್ದಾಳೆ.

23 ವರ್ಷದ ಮಹಿಳೆ ತನ್ನ ಗಂಡನ ಬಂಧನವನ್ನು ವಿರೋಧಿಸಿ ಧುಬ್ರಿಯ ಗೋಲಕ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟಿಸಿದಳು. ಈ ವೇಳೆ ತನ್ನ ಗಂಡ ಮತ್ತು ತನ್ನ ತಂದೆಯನ್ನು ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಳು.

”ಈ ವಿಷಯಗಳಲ್ಲಿ ಶೂನ್ಯ ಸಹಾನುಭೂತಿ ಇದೆ” ಎಂದು  ಹೇಳಿದರು. ”ಒಂದು ಚಿಕ್ಕ ಹುಡುಗಿ ಮದುವೆಯಾಗಿ ಹೋದ ನಂತರ, ನಾನು ಅದನ್ನು ಅತ್ಯಾಚಾರ ಎಂದು ಕರೆಯಬೇಕಾಗುತ್ತದೆ. ಹುಡುಗಿ ಅನುಭವಿಸುವ ನೋವನ್ನು ನಾವು ಯೋಚಿಸಿದ್ದೇವೆಯೇ? ಭವಿಷ್ಯದಲ್ಲಿ ಲಕ್ಷಾಂತರ ಹೆಣ್ಣುಮಕ್ಕಳನ್ನು ಈ ಪರಿಸ್ಥಿತಿಯಿಂದ ರಕ್ಷಿಸಲು, ಒಂದು ಪೀಳಿಗೆಯು ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಅಸ್ಸಾಂನಲ್ಲಿ ಬಾಲ್ಯ ವಿವಾಹ ಪದ್ಧತಿ ನಿಲ್ಲಬೇಕು. ಪತಿ ಜೈಲಿನಲ್ಲಿರುವ ಕಾರಣ ಯಾರಿಗಾದರೂ ಹಣಕಾಸಿನ ತೊಂದರೆಯಾಗಿದ್ದರೆ, ಸರ್ಕಾರವು ಅದನ್ನು ಪರಿಶೀಲಿಸುತ್ತದೆ. ಈಗಾಗಲೇ ನಾನು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆ ಎಂದು ಶರ್ಮಾ ಹೇಳಿದರು.

ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಅಸ್ಸಾಂ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಇದು ತರಾತುರಿಯಲ್ಲಿ ನಡೆಸಿದ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ.

ರಾಜ್ಯದ ವಿರೋಧ ಪಕ್ಷದ ನಾಯಕರು ಈ ಅಭಿಯಾನವನ್ನು ಪ್ರಶ್ನಿಸಿದ್ದಾರೆ. ಈ ಕ್ರಮವನ್ನು ಬಿಜೆಪಿ ಸರ್ಕಾರದ ಜನಸಂಪರ್ಕ ವ್ಯಾಯಾಮ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬಣ್ಣಿಸಿದ್ದಾರೆ.

”ಬಾಲ್ಯ ವಿವಾಹವನ್ನು ಹತ್ತಿಕ್ಕುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಉಪಕ್ರಮವನ್ನು ಅಸ್ಸಾಂನಲ್ಲಿ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಸರಿಯಾದ ವಿಚಾರಣೆ ಅಥವಾ ಕಾರ್ಯವಿಧಾನವನ್ನು ಅನುಸರಿಸದೆ ದಶಕಗಳಷ್ಟು ಹಳೆಯದಾದ ಪ್ರಕರಣಗಳನ್ನು ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ತೋರುತ್ತದೆ. ಇದು ಒಂದು ಪ್ರಹಸನ” ಎಂದು ಗೊಗೋಯ್ ಟ್ವೀಟ್ ಮಾಡಿದ್ದಾರೆ.

ಕಾರ್ಯಾಚರಣೆ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಬಾಲ್ಯ ವಿವಾಹದ ಸಮಸ್ಯೆಯನ್ನು ನಿಜವಾಗಿಯೂ ಬಗೆಹರಿಸುವ ಮನಸ್ಸಿದ್ದಿದ್ದರೆ ಅಸ್ಸಾಂ ಸರ್ಕಾರವು ಸಾಕ್ಷರತೆಯ ಮಟ್ಟವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

”ಬಾಲ್ಯವಿವಾಹಗಳನ್ನು ನಿಲ್ಲಿಸಬೇಕಾದರೆ ಶಾಲೆಗಳನ್ನು ತೆರೆಯಬೇಕು ಎಂದು ತಜ್ಞರು ಹೇಳಿದ್ದಾರೆ, (ಆದರೆ) ನೀವು ಅದನ್ನು ಮಾಡಿಲ್ಲ. ಮದರಸಾಗಳನ್ನೂ ಮುಚ್ಚಿದ್ದೀರಿ” ಎಂದು ಅವರು ಆರೋಪಿಸಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮಾತನಾಡಿ, ”ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನವೀಯ ನಡೆ ಅನುಸರಿಸಬೇಕಾದ ಅಗತ್ಯವಿದೆ” ಎಂದು ಪ್ರತಿಪಾದಿಸಿದ್ದಾರೆ.

”ಬಾಲ್ಯ ವಿವಾಹವನ್ನು ಕಾಂಗ್ರೆಸ್‌ ವಿರೋಧಿಸುತ್ತದೆ. ಆದರೆ ಬೆಳೆದ ಮಕ್ಕಳೊಂದಿಗೆ ನೆಲೆಸಿರುವ ಕುಟುಂಬಗಳಲ್ಲಿ ನೆಮ್ಮದಿ ಕದಡುವುದರಿಂದ ಏನು ಪ್ರಯೋಜನ? ಇದು ಪ್ರಚಾರದ ಸ್ಟಂಟ್ ಹೊರತು ಬೇರೇನೂ ಅಲ್ಲ” ಎಂದು ಅವರು ಹೇಳಿದರು.

ಅಸ್ಸಾಂ ತೃಣಮೂಲ ಕಾಂಗ್ರೆಸ್ ಘಟಕದ ಅಧ್ಯಕ್ಷ ರಿಪುನ್ ಬೋರಾ, ”ರಾಜ್ಯ ಸರ್ಕಾರ ಬಾಲ್ಯವಿವಾಹ ಕಾಯ್ದೆಯನ್ನು ತೀವ್ರವಾಗಿ ದುರುಪಯೋಗಪಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

”ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವುದು ಸರಿಯಲ್ಲ. ಮಂಕಚಾರ್‌ನಲ್ಲಿ, ತನ್ನ ಪೋಷಕರು ಜೈಲಿಗೆ ಹೋಗುತ್ತಾರೆ ಎಂದು ಹೆದರಿ, ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಅಪರಾಧಿಗಳ ಮೇಲೆ ವಿಚಿತ್ರವಾದ ದಮನದ ಪರಿಣಾಮವಾಗಿದೆ” ಎಂದು ಬೋರಾ ಟ್ವೀಟ್ ಮಾಡಿದ್ದಾರೆ.

ಬಾಲ್ಯವಿವಾಹದ ವಿರುದ್ಧ ಸರ್ಕಾರ ನಡೆಸುತ್ತಿರುವ ಕ್ರಮದಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಸೂಪರಿಂಟೆಂಡೆಂಟ್ ಹೋರೆನ್ ಟೋಕ್ಬಿ ಅವರು, ”ಅವಳ ಕುಟುಂಬಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ನಾವು ಈ ವಿಚಾರದ ಬಗ್ಗೆ ಮತ್ತಷ್ಟು ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...