Homeಮುಖಪುಟಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

- Advertisement -
- Advertisement -

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಶಿಸ್ತುಕ್ರಮ ಕೈಗೊಂಡಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಜನವರಿ 23 ರಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಬಾಲ್ಯ ವಿವಾಹದ ವಿರುದ್ಧ ರಾಜ್ಯಾದ್ಯಂತ ಸರ್ಕಾರ ಅಭಿಯಾನ ಆರಂಭಿಸುತ್ತದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವ ಪುರುಷರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಹಾಗೂ 14-18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಬಂಧಿಸಲಾಗುತ್ತದೆ ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 4,074 ಪ್ರಕರಣಗಳು ದಾಖಲಾಗಿವೆ. ವರನ ಪೋಷಕರು ಮತ್ತು ಅರ್ಚಕರು ಸೇರಿದಂತೆ 8,134 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಸ್ವನಾಥ್ ಜಿಲ್ಲೆಯಲ್ಲಿ ಕನಿಷ್ಠ 139 ಜನರನ್ನು ಬಂಧಿಸಲಾಗಿದೆ, ಬರ್ಪೇಟಾದಲ್ಲಿ 130 ಮತ್ತು ಧುಬ್ರಿಯಲ್ಲಿ 126, ಬಕ್ಸಾದಲ್ಲಿ 123, ಬೊಂಗೈಗಾಂವ್ ಮತ್ತು ಹೊಜೈನಲ್ಲಿ ತಲಾ 117 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಾಲ್ಯ ವಿವಾಹಗಳ ವಿರುದ್ಧ ಧುಬ್ರಿಯಲ್ಲಿ ಅತಿ ಹೆಚ್ಚು (374) ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೊಜೈ (255) ಮತ್ತು ಮೊರಿಗಾಂವ್ (224) ನಂತರದ ಸ್ಥಾನದಲ್ಲಿವೆ.

ಕಾರ್ಯಾಚರಣೆ ವಿರುದ್ಧ ಬರಾಕ್ ಕಣಿವೆಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಅಸ್ಸಾಂ: ಬಾಲ್ಯ ವಿವಾಹ ತಡೆ ವಿರುದ್ಧ ಮಹಿಳೆಯರ ಪ್ರತಿಭಟನೆ

ಧುಬ್ರಿ, ಮೋರಿಗಾಂವ್, ದಕ್ಷಿಣ-ಸಾಲಮರ ಮಂಚಚಾರ್ ಜಿಲ್ಲೆಗಳಲ್ಲಿ ಮಹಿಳೆಯರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟಿಸುವ ಹೆಚ್ಚಿನ ಮಹಿಳೆಯರು ಆರ್ಥಿಕ ಬೆಂಬಲಕ್ಕೆ ತಮ್ಮ ಗಂಡನನ್ನೇ ಅವಲಂಬಿಸಿದ್ದಾರೆ.

ಧುಬ್ರಿಯ ತಮರ್ಹತ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಅವರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.

ಈ ವೇಳೆ ಮೂರು ತಿಂಗಳ ಹಸುಳೆಯನ್ನು ಹೊತ್ತ ಅಪರಿಚಿತ ಮಹಿಳೆಯೊಬ್ಬರು, ”ನನ್ನ ಮಗುವನ್ನು ನಾನು ಹೇಗೆ ನೋಡಿಕೊಳ್ಳಲಿ ಎಂದು ಚಿಂತಿತಳಾಗಿದ್ದೇನೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಅಳಲು ತೊಡಿಕೊಂಡಳು. ”ನನ್ನ ಪತಿ ಕೃಷಿ ಕೂಲಿ ಕೆಲಸ ಮಾಡುತ್ತಿದ್ದರು. ನಾನು ಮನೆಯಿಂದ ಓಡಿಹೋಗಿ ಮದುವೆಯಾಗಿದ್ದೇನೆ. ನನಗೆ ಬೇರೆ ಯಾವುದೇ ಬೆಂಬಲವಿಲ್ಲ, ಸದ್ಯಕ್ಕೆ ನನ್ನ ಬಳಿ ಒಂದು ರೂಪಾಯಿಯೂ ಇಲ್ಲ” ಎಂದು ತನ್ನ ಸಂಕಟವನ್ನು ತೋಡಿಕೊಂಡಿದ್ದಾಳೆ.

23 ವರ್ಷದ ಮಹಿಳೆ ತನ್ನ ಗಂಡನ ಬಂಧನವನ್ನು ವಿರೋಧಿಸಿ ಧುಬ್ರಿಯ ಗೋಲಕ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟಿಸಿದಳು. ಈ ವೇಳೆ ತನ್ನ ಗಂಡ ಮತ್ತು ತನ್ನ ತಂದೆಯನ್ನು ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಳು.

”ಈ ವಿಷಯಗಳಲ್ಲಿ ಶೂನ್ಯ ಸಹಾನುಭೂತಿ ಇದೆ” ಎಂದು  ಹೇಳಿದರು. ”ಒಂದು ಚಿಕ್ಕ ಹುಡುಗಿ ಮದುವೆಯಾಗಿ ಹೋದ ನಂತರ, ನಾನು ಅದನ್ನು ಅತ್ಯಾಚಾರ ಎಂದು ಕರೆಯಬೇಕಾಗುತ್ತದೆ. ಹುಡುಗಿ ಅನುಭವಿಸುವ ನೋವನ್ನು ನಾವು ಯೋಚಿಸಿದ್ದೇವೆಯೇ? ಭವಿಷ್ಯದಲ್ಲಿ ಲಕ್ಷಾಂತರ ಹೆಣ್ಣುಮಕ್ಕಳನ್ನು ಈ ಪರಿಸ್ಥಿತಿಯಿಂದ ರಕ್ಷಿಸಲು, ಒಂದು ಪೀಳಿಗೆಯು ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಅಸ್ಸಾಂನಲ್ಲಿ ಬಾಲ್ಯ ವಿವಾಹ ಪದ್ಧತಿ ನಿಲ್ಲಬೇಕು. ಪತಿ ಜೈಲಿನಲ್ಲಿರುವ ಕಾರಣ ಯಾರಿಗಾದರೂ ಹಣಕಾಸಿನ ತೊಂದರೆಯಾಗಿದ್ದರೆ, ಸರ್ಕಾರವು ಅದನ್ನು ಪರಿಶೀಲಿಸುತ್ತದೆ. ಈಗಾಗಲೇ ನಾನು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆ ಎಂದು ಶರ್ಮಾ ಹೇಳಿದರು.

ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಅಸ್ಸಾಂ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಇದು ತರಾತುರಿಯಲ್ಲಿ ನಡೆಸಿದ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ.

ರಾಜ್ಯದ ವಿರೋಧ ಪಕ್ಷದ ನಾಯಕರು ಈ ಅಭಿಯಾನವನ್ನು ಪ್ರಶ್ನಿಸಿದ್ದಾರೆ. ಈ ಕ್ರಮವನ್ನು ಬಿಜೆಪಿ ಸರ್ಕಾರದ ಜನಸಂಪರ್ಕ ವ್ಯಾಯಾಮ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬಣ್ಣಿಸಿದ್ದಾರೆ.

”ಬಾಲ್ಯ ವಿವಾಹವನ್ನು ಹತ್ತಿಕ್ಕುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಉಪಕ್ರಮವನ್ನು ಅಸ್ಸಾಂನಲ್ಲಿ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಸರಿಯಾದ ವಿಚಾರಣೆ ಅಥವಾ ಕಾರ್ಯವಿಧಾನವನ್ನು ಅನುಸರಿಸದೆ ದಶಕಗಳಷ್ಟು ಹಳೆಯದಾದ ಪ್ರಕರಣಗಳನ್ನು ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ತೋರುತ್ತದೆ. ಇದು ಒಂದು ಪ್ರಹಸನ” ಎಂದು ಗೊಗೋಯ್ ಟ್ವೀಟ್ ಮಾಡಿದ್ದಾರೆ.

ಕಾರ್ಯಾಚರಣೆ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಬಾಲ್ಯ ವಿವಾಹದ ಸಮಸ್ಯೆಯನ್ನು ನಿಜವಾಗಿಯೂ ಬಗೆಹರಿಸುವ ಮನಸ್ಸಿದ್ದಿದ್ದರೆ ಅಸ್ಸಾಂ ಸರ್ಕಾರವು ಸಾಕ್ಷರತೆಯ ಮಟ್ಟವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

”ಬಾಲ್ಯವಿವಾಹಗಳನ್ನು ನಿಲ್ಲಿಸಬೇಕಾದರೆ ಶಾಲೆಗಳನ್ನು ತೆರೆಯಬೇಕು ಎಂದು ತಜ್ಞರು ಹೇಳಿದ್ದಾರೆ, (ಆದರೆ) ನೀವು ಅದನ್ನು ಮಾಡಿಲ್ಲ. ಮದರಸಾಗಳನ್ನೂ ಮುಚ್ಚಿದ್ದೀರಿ” ಎಂದು ಅವರು ಆರೋಪಿಸಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮಾತನಾಡಿ, ”ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನವೀಯ ನಡೆ ಅನುಸರಿಸಬೇಕಾದ ಅಗತ್ಯವಿದೆ” ಎಂದು ಪ್ರತಿಪಾದಿಸಿದ್ದಾರೆ.

”ಬಾಲ್ಯ ವಿವಾಹವನ್ನು ಕಾಂಗ್ರೆಸ್‌ ವಿರೋಧಿಸುತ್ತದೆ. ಆದರೆ ಬೆಳೆದ ಮಕ್ಕಳೊಂದಿಗೆ ನೆಲೆಸಿರುವ ಕುಟುಂಬಗಳಲ್ಲಿ ನೆಮ್ಮದಿ ಕದಡುವುದರಿಂದ ಏನು ಪ್ರಯೋಜನ? ಇದು ಪ್ರಚಾರದ ಸ್ಟಂಟ್ ಹೊರತು ಬೇರೇನೂ ಅಲ್ಲ” ಎಂದು ಅವರು ಹೇಳಿದರು.

ಅಸ್ಸಾಂ ತೃಣಮೂಲ ಕಾಂಗ್ರೆಸ್ ಘಟಕದ ಅಧ್ಯಕ್ಷ ರಿಪುನ್ ಬೋರಾ, ”ರಾಜ್ಯ ಸರ್ಕಾರ ಬಾಲ್ಯವಿವಾಹ ಕಾಯ್ದೆಯನ್ನು ತೀವ್ರವಾಗಿ ದುರುಪಯೋಗಪಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

”ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವುದು ಸರಿಯಲ್ಲ. ಮಂಕಚಾರ್‌ನಲ್ಲಿ, ತನ್ನ ಪೋಷಕರು ಜೈಲಿಗೆ ಹೋಗುತ್ತಾರೆ ಎಂದು ಹೆದರಿ, ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಅಪರಾಧಿಗಳ ಮೇಲೆ ವಿಚಿತ್ರವಾದ ದಮನದ ಪರಿಣಾಮವಾಗಿದೆ” ಎಂದು ಬೋರಾ ಟ್ವೀಟ್ ಮಾಡಿದ್ದಾರೆ.

ಬಾಲ್ಯವಿವಾಹದ ವಿರುದ್ಧ ಸರ್ಕಾರ ನಡೆಸುತ್ತಿರುವ ಕ್ರಮದಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಸೂಪರಿಂಟೆಂಡೆಂಟ್ ಹೋರೆನ್ ಟೋಕ್ಬಿ ಅವರು, ”ಅವಳ ಕುಟುಂಬಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ನಾವು ಈ ವಿಚಾರದ ಬಗ್ಗೆ ಮತ್ತಷ್ಟು ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...