Homeಮುಖಪುಟಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

- Advertisement -
- Advertisement -

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಶಿಸ್ತುಕ್ರಮ ಕೈಗೊಂಡಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಜನವರಿ 23 ರಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಬಾಲ್ಯ ವಿವಾಹದ ವಿರುದ್ಧ ರಾಜ್ಯಾದ್ಯಂತ ಸರ್ಕಾರ ಅಭಿಯಾನ ಆರಂಭಿಸುತ್ತದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವ ಪುರುಷರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಹಾಗೂ 14-18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಬಂಧಿಸಲಾಗುತ್ತದೆ ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 4,074 ಪ್ರಕರಣಗಳು ದಾಖಲಾಗಿವೆ. ವರನ ಪೋಷಕರು ಮತ್ತು ಅರ್ಚಕರು ಸೇರಿದಂತೆ 8,134 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಸ್ವನಾಥ್ ಜಿಲ್ಲೆಯಲ್ಲಿ ಕನಿಷ್ಠ 139 ಜನರನ್ನು ಬಂಧಿಸಲಾಗಿದೆ, ಬರ್ಪೇಟಾದಲ್ಲಿ 130 ಮತ್ತು ಧುಬ್ರಿಯಲ್ಲಿ 126, ಬಕ್ಸಾದಲ್ಲಿ 123, ಬೊಂಗೈಗಾಂವ್ ಮತ್ತು ಹೊಜೈನಲ್ಲಿ ತಲಾ 117 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಾಲ್ಯ ವಿವಾಹಗಳ ವಿರುದ್ಧ ಧುಬ್ರಿಯಲ್ಲಿ ಅತಿ ಹೆಚ್ಚು (374) ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೊಜೈ (255) ಮತ್ತು ಮೊರಿಗಾಂವ್ (224) ನಂತರದ ಸ್ಥಾನದಲ್ಲಿವೆ.

ಕಾರ್ಯಾಚರಣೆ ವಿರುದ್ಧ ಬರಾಕ್ ಕಣಿವೆಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಅಸ್ಸಾಂ: ಬಾಲ್ಯ ವಿವಾಹ ತಡೆ ವಿರುದ್ಧ ಮಹಿಳೆಯರ ಪ್ರತಿಭಟನೆ

ಧುಬ್ರಿ, ಮೋರಿಗಾಂವ್, ದಕ್ಷಿಣ-ಸಾಲಮರ ಮಂಚಚಾರ್ ಜಿಲ್ಲೆಗಳಲ್ಲಿ ಮಹಿಳೆಯರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟಿಸುವ ಹೆಚ್ಚಿನ ಮಹಿಳೆಯರು ಆರ್ಥಿಕ ಬೆಂಬಲಕ್ಕೆ ತಮ್ಮ ಗಂಡನನ್ನೇ ಅವಲಂಬಿಸಿದ್ದಾರೆ.

ಧುಬ್ರಿಯ ತಮರ್ಹತ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಅವರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.

ಈ ವೇಳೆ ಮೂರು ತಿಂಗಳ ಹಸುಳೆಯನ್ನು ಹೊತ್ತ ಅಪರಿಚಿತ ಮಹಿಳೆಯೊಬ್ಬರು, ”ನನ್ನ ಮಗುವನ್ನು ನಾನು ಹೇಗೆ ನೋಡಿಕೊಳ್ಳಲಿ ಎಂದು ಚಿಂತಿತಳಾಗಿದ್ದೇನೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಅಳಲು ತೊಡಿಕೊಂಡಳು. ”ನನ್ನ ಪತಿ ಕೃಷಿ ಕೂಲಿ ಕೆಲಸ ಮಾಡುತ್ತಿದ್ದರು. ನಾನು ಮನೆಯಿಂದ ಓಡಿಹೋಗಿ ಮದುವೆಯಾಗಿದ್ದೇನೆ. ನನಗೆ ಬೇರೆ ಯಾವುದೇ ಬೆಂಬಲವಿಲ್ಲ, ಸದ್ಯಕ್ಕೆ ನನ್ನ ಬಳಿ ಒಂದು ರೂಪಾಯಿಯೂ ಇಲ್ಲ” ಎಂದು ತನ್ನ ಸಂಕಟವನ್ನು ತೋಡಿಕೊಂಡಿದ್ದಾಳೆ.

23 ವರ್ಷದ ಮಹಿಳೆ ತನ್ನ ಗಂಡನ ಬಂಧನವನ್ನು ವಿರೋಧಿಸಿ ಧುಬ್ರಿಯ ಗೋಲಕ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟಿಸಿದಳು. ಈ ವೇಳೆ ತನ್ನ ಗಂಡ ಮತ್ತು ತನ್ನ ತಂದೆಯನ್ನು ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಳು.

”ಈ ವಿಷಯಗಳಲ್ಲಿ ಶೂನ್ಯ ಸಹಾನುಭೂತಿ ಇದೆ” ಎಂದು  ಹೇಳಿದರು. ”ಒಂದು ಚಿಕ್ಕ ಹುಡುಗಿ ಮದುವೆಯಾಗಿ ಹೋದ ನಂತರ, ನಾನು ಅದನ್ನು ಅತ್ಯಾಚಾರ ಎಂದು ಕರೆಯಬೇಕಾಗುತ್ತದೆ. ಹುಡುಗಿ ಅನುಭವಿಸುವ ನೋವನ್ನು ನಾವು ಯೋಚಿಸಿದ್ದೇವೆಯೇ? ಭವಿಷ್ಯದಲ್ಲಿ ಲಕ್ಷಾಂತರ ಹೆಣ್ಣುಮಕ್ಕಳನ್ನು ಈ ಪರಿಸ್ಥಿತಿಯಿಂದ ರಕ್ಷಿಸಲು, ಒಂದು ಪೀಳಿಗೆಯು ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಅಸ್ಸಾಂನಲ್ಲಿ ಬಾಲ್ಯ ವಿವಾಹ ಪದ್ಧತಿ ನಿಲ್ಲಬೇಕು. ಪತಿ ಜೈಲಿನಲ್ಲಿರುವ ಕಾರಣ ಯಾರಿಗಾದರೂ ಹಣಕಾಸಿನ ತೊಂದರೆಯಾಗಿದ್ದರೆ, ಸರ್ಕಾರವು ಅದನ್ನು ಪರಿಶೀಲಿಸುತ್ತದೆ. ಈಗಾಗಲೇ ನಾನು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆ ಎಂದು ಶರ್ಮಾ ಹೇಳಿದರು.

ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಅಸ್ಸಾಂ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಇದು ತರಾತುರಿಯಲ್ಲಿ ನಡೆಸಿದ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ.

ರಾಜ್ಯದ ವಿರೋಧ ಪಕ್ಷದ ನಾಯಕರು ಈ ಅಭಿಯಾನವನ್ನು ಪ್ರಶ್ನಿಸಿದ್ದಾರೆ. ಈ ಕ್ರಮವನ್ನು ಬಿಜೆಪಿ ಸರ್ಕಾರದ ಜನಸಂಪರ್ಕ ವ್ಯಾಯಾಮ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬಣ್ಣಿಸಿದ್ದಾರೆ.

”ಬಾಲ್ಯ ವಿವಾಹವನ್ನು ಹತ್ತಿಕ್ಕುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಉಪಕ್ರಮವನ್ನು ಅಸ್ಸಾಂನಲ್ಲಿ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಸರಿಯಾದ ವಿಚಾರಣೆ ಅಥವಾ ಕಾರ್ಯವಿಧಾನವನ್ನು ಅನುಸರಿಸದೆ ದಶಕಗಳಷ್ಟು ಹಳೆಯದಾದ ಪ್ರಕರಣಗಳನ್ನು ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ತೋರುತ್ತದೆ. ಇದು ಒಂದು ಪ್ರಹಸನ” ಎಂದು ಗೊಗೋಯ್ ಟ್ವೀಟ್ ಮಾಡಿದ್ದಾರೆ.

ಕಾರ್ಯಾಚರಣೆ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಬಾಲ್ಯ ವಿವಾಹದ ಸಮಸ್ಯೆಯನ್ನು ನಿಜವಾಗಿಯೂ ಬಗೆಹರಿಸುವ ಮನಸ್ಸಿದ್ದಿದ್ದರೆ ಅಸ್ಸಾಂ ಸರ್ಕಾರವು ಸಾಕ್ಷರತೆಯ ಮಟ್ಟವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

”ಬಾಲ್ಯವಿವಾಹಗಳನ್ನು ನಿಲ್ಲಿಸಬೇಕಾದರೆ ಶಾಲೆಗಳನ್ನು ತೆರೆಯಬೇಕು ಎಂದು ತಜ್ಞರು ಹೇಳಿದ್ದಾರೆ, (ಆದರೆ) ನೀವು ಅದನ್ನು ಮಾಡಿಲ್ಲ. ಮದರಸಾಗಳನ್ನೂ ಮುಚ್ಚಿದ್ದೀರಿ” ಎಂದು ಅವರು ಆರೋಪಿಸಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮಾತನಾಡಿ, ”ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನವೀಯ ನಡೆ ಅನುಸರಿಸಬೇಕಾದ ಅಗತ್ಯವಿದೆ” ಎಂದು ಪ್ರತಿಪಾದಿಸಿದ್ದಾರೆ.

”ಬಾಲ್ಯ ವಿವಾಹವನ್ನು ಕಾಂಗ್ರೆಸ್‌ ವಿರೋಧಿಸುತ್ತದೆ. ಆದರೆ ಬೆಳೆದ ಮಕ್ಕಳೊಂದಿಗೆ ನೆಲೆಸಿರುವ ಕುಟುಂಬಗಳಲ್ಲಿ ನೆಮ್ಮದಿ ಕದಡುವುದರಿಂದ ಏನು ಪ್ರಯೋಜನ? ಇದು ಪ್ರಚಾರದ ಸ್ಟಂಟ್ ಹೊರತು ಬೇರೇನೂ ಅಲ್ಲ” ಎಂದು ಅವರು ಹೇಳಿದರು.

ಅಸ್ಸಾಂ ತೃಣಮೂಲ ಕಾಂಗ್ರೆಸ್ ಘಟಕದ ಅಧ್ಯಕ್ಷ ರಿಪುನ್ ಬೋರಾ, ”ರಾಜ್ಯ ಸರ್ಕಾರ ಬಾಲ್ಯವಿವಾಹ ಕಾಯ್ದೆಯನ್ನು ತೀವ್ರವಾಗಿ ದುರುಪಯೋಗಪಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

”ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವುದು ಸರಿಯಲ್ಲ. ಮಂಕಚಾರ್‌ನಲ್ಲಿ, ತನ್ನ ಪೋಷಕರು ಜೈಲಿಗೆ ಹೋಗುತ್ತಾರೆ ಎಂದು ಹೆದರಿ, ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಅಪರಾಧಿಗಳ ಮೇಲೆ ವಿಚಿತ್ರವಾದ ದಮನದ ಪರಿಣಾಮವಾಗಿದೆ” ಎಂದು ಬೋರಾ ಟ್ವೀಟ್ ಮಾಡಿದ್ದಾರೆ.

ಬಾಲ್ಯವಿವಾಹದ ವಿರುದ್ಧ ಸರ್ಕಾರ ನಡೆಸುತ್ತಿರುವ ಕ್ರಮದಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಸೂಪರಿಂಟೆಂಡೆಂಟ್ ಹೋರೆನ್ ಟೋಕ್ಬಿ ಅವರು, ”ಅವಳ ಕುಟುಂಬಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ನಾವು ಈ ವಿಚಾರದ ಬಗ್ಗೆ ಮತ್ತಷ್ಟು ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...