Homeಮುಖಪುಟಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರದ ಶಿಸ್ತುಕ್ರಮ; 2,441 ಜನರ ಬಂಧನ

- Advertisement -
- Advertisement -

ಬಾಲ್ಯವಿವಾಹದ ವಿರುದ್ಧ ಅಸ್ಸಾಂ ಸರ್ಕಾರ ಶಿಸ್ತುಕ್ರಮ ಕೈಗೊಂಡಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಜನವರಿ 23 ರಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಬಾಲ್ಯ ವಿವಾಹದ ವಿರುದ್ಧ ರಾಜ್ಯಾದ್ಯಂತ ಸರ್ಕಾರ ಅಭಿಯಾನ ಆರಂಭಿಸುತ್ತದೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವ ಪುರುಷರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ ಹಾಗೂ 14-18 ವರ್ಷ ವಯಸ್ಸಿನ ಹುಡುಗಿಯರನ್ನು ಮದುವೆಯಾಗುವವರನ್ನು ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಬಂಧಿಸಲಾಗುತ್ತದೆ ಎಂದು ಘೋಷಿಸಿದ್ದರು.

ರಾಜ್ಯದಲ್ಲಿ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 4,074 ಪ್ರಕರಣಗಳು ದಾಖಲಾಗಿವೆ. ವರನ ಪೋಷಕರು ಮತ್ತು ಅರ್ಚಕರು ಸೇರಿದಂತೆ 8,134 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಸ್ವನಾಥ್ ಜಿಲ್ಲೆಯಲ್ಲಿ ಕನಿಷ್ಠ 139 ಜನರನ್ನು ಬಂಧಿಸಲಾಗಿದೆ, ಬರ್ಪೇಟಾದಲ್ಲಿ 130 ಮತ್ತು ಧುಬ್ರಿಯಲ್ಲಿ 126, ಬಕ್ಸಾದಲ್ಲಿ 123, ಬೊಂಗೈಗಾಂವ್ ಮತ್ತು ಹೊಜೈನಲ್ಲಿ ತಲಾ 117 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಾಲ್ಯ ವಿವಾಹಗಳ ವಿರುದ್ಧ ಧುಬ್ರಿಯಲ್ಲಿ ಅತಿ ಹೆಚ್ಚು (374) ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೊಜೈ (255) ಮತ್ತು ಮೊರಿಗಾಂವ್ (224) ನಂತರದ ಸ್ಥಾನದಲ್ಲಿವೆ.

ಕಾರ್ಯಾಚರಣೆ ವಿರುದ್ಧ ಬರಾಕ್ ಕಣಿವೆಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಇದನ್ನೂ ಓದಿ: ಅಸ್ಸಾಂ: ಬಾಲ್ಯ ವಿವಾಹ ತಡೆ ವಿರುದ್ಧ ಮಹಿಳೆಯರ ಪ್ರತಿಭಟನೆ

ಧುಬ್ರಿ, ಮೋರಿಗಾಂವ್, ದಕ್ಷಿಣ-ಸಾಲಮರ ಮಂಚಚಾರ್ ಜಿಲ್ಲೆಗಳಲ್ಲಿ ಮಹಿಳೆಯರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟಿಸುವ ಹೆಚ್ಚಿನ ಮಹಿಳೆಯರು ಆರ್ಥಿಕ ಬೆಂಬಲಕ್ಕೆ ತಮ್ಮ ಗಂಡನನ್ನೇ ಅವಲಂಬಿಸಿದ್ದಾರೆ.

ಧುಬ್ರಿಯ ತಮರ್ಹತ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ, ಅವರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು.

ಈ ವೇಳೆ ಮೂರು ತಿಂಗಳ ಹಸುಳೆಯನ್ನು ಹೊತ್ತ ಅಪರಿಚಿತ ಮಹಿಳೆಯೊಬ್ಬರು, ”ನನ್ನ ಮಗುವನ್ನು ನಾನು ಹೇಗೆ ನೋಡಿಕೊಳ್ಳಲಿ ಎಂದು ಚಿಂತಿತಳಾಗಿದ್ದೇನೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಅಳಲು ತೊಡಿಕೊಂಡಳು. ”ನನ್ನ ಪತಿ ಕೃಷಿ ಕೂಲಿ ಕೆಲಸ ಮಾಡುತ್ತಿದ್ದರು. ನಾನು ಮನೆಯಿಂದ ಓಡಿಹೋಗಿ ಮದುವೆಯಾಗಿದ್ದೇನೆ. ನನಗೆ ಬೇರೆ ಯಾವುದೇ ಬೆಂಬಲವಿಲ್ಲ, ಸದ್ಯಕ್ಕೆ ನನ್ನ ಬಳಿ ಒಂದು ರೂಪಾಯಿಯೂ ಇಲ್ಲ” ಎಂದು ತನ್ನ ಸಂಕಟವನ್ನು ತೋಡಿಕೊಂಡಿದ್ದಾಳೆ.

23 ವರ್ಷದ ಮಹಿಳೆ ತನ್ನ ಗಂಡನ ಬಂಧನವನ್ನು ವಿರೋಧಿಸಿ ಧುಬ್ರಿಯ ಗೋಲಕ್‌ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರತಿಭಟಿಸಿದಳು. ಈ ವೇಳೆ ತನ್ನ ಗಂಡ ಮತ್ತು ತನ್ನ ತಂದೆಯನ್ನು ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಳು.

”ಈ ವಿಷಯಗಳಲ್ಲಿ ಶೂನ್ಯ ಸಹಾನುಭೂತಿ ಇದೆ” ಎಂದು  ಹೇಳಿದರು. ”ಒಂದು ಚಿಕ್ಕ ಹುಡುಗಿ ಮದುವೆಯಾಗಿ ಹೋದ ನಂತರ, ನಾನು ಅದನ್ನು ಅತ್ಯಾಚಾರ ಎಂದು ಕರೆಯಬೇಕಾಗುತ್ತದೆ. ಹುಡುಗಿ ಅನುಭವಿಸುವ ನೋವನ್ನು ನಾವು ಯೋಚಿಸಿದ್ದೇವೆಯೇ? ಭವಿಷ್ಯದಲ್ಲಿ ಲಕ್ಷಾಂತರ ಹೆಣ್ಣುಮಕ್ಕಳನ್ನು ಈ ಪರಿಸ್ಥಿತಿಯಿಂದ ರಕ್ಷಿಸಲು, ಒಂದು ಪೀಳಿಗೆಯು ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದರು.

ಅಸ್ಸಾಂನಲ್ಲಿ ಬಾಲ್ಯ ವಿವಾಹ ಪದ್ಧತಿ ನಿಲ್ಲಬೇಕು. ಪತಿ ಜೈಲಿನಲ್ಲಿರುವ ಕಾರಣ ಯಾರಿಗಾದರೂ ಹಣಕಾಸಿನ ತೊಂದರೆಯಾಗಿದ್ದರೆ, ಸರ್ಕಾರವು ಅದನ್ನು ಪರಿಶೀಲಿಸುತ್ತದೆ. ಈಗಾಗಲೇ ನಾನು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆ ಎಂದು ಶರ್ಮಾ ಹೇಳಿದರು.

ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಅಸ್ಸಾಂ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ, ಇದು ತರಾತುರಿಯಲ್ಲಿ ನಡೆಸಿದ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ.

ರಾಜ್ಯದ ವಿರೋಧ ಪಕ್ಷದ ನಾಯಕರು ಈ ಅಭಿಯಾನವನ್ನು ಪ್ರಶ್ನಿಸಿದ್ದಾರೆ. ಈ ಕ್ರಮವನ್ನು ಬಿಜೆಪಿ ಸರ್ಕಾರದ ಜನಸಂಪರ್ಕ ವ್ಯಾಯಾಮ ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಬಣ್ಣಿಸಿದ್ದಾರೆ.

”ಬಾಲ್ಯ ವಿವಾಹವನ್ನು ಹತ್ತಿಕ್ಕುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಉಪಕ್ರಮವನ್ನು ಅಸ್ಸಾಂನಲ್ಲಿ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಸರಿಯಾದ ವಿಚಾರಣೆ ಅಥವಾ ಕಾರ್ಯವಿಧಾನವನ್ನು ಅನುಸರಿಸದೆ ದಶಕಗಳಷ್ಟು ಹಳೆಯದಾದ ಪ್ರಕರಣಗಳನ್ನು ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ತೋರುತ್ತದೆ. ಇದು ಒಂದು ಪ್ರಹಸನ” ಎಂದು ಗೊಗೋಯ್ ಟ್ವೀಟ್ ಮಾಡಿದ್ದಾರೆ.

ಕಾರ್ಯಾಚರಣೆ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ”ಬಾಲ್ಯ ವಿವಾಹದ ಸಮಸ್ಯೆಯನ್ನು ನಿಜವಾಗಿಯೂ ಬಗೆಹರಿಸುವ ಮನಸ್ಸಿದ್ದಿದ್ದರೆ ಅಸ್ಸಾಂ ಸರ್ಕಾರವು ಸಾಕ್ಷರತೆಯ ಮಟ್ಟವನ್ನು ಹೆಚ್ಚಿಸುವತ್ತ ಗಮನ ಹರಿಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

”ಬಾಲ್ಯವಿವಾಹಗಳನ್ನು ನಿಲ್ಲಿಸಬೇಕಾದರೆ ಶಾಲೆಗಳನ್ನು ತೆರೆಯಬೇಕು ಎಂದು ತಜ್ಞರು ಹೇಳಿದ್ದಾರೆ, (ಆದರೆ) ನೀವು ಅದನ್ನು ಮಾಡಿಲ್ಲ. ಮದರಸಾಗಳನ್ನೂ ಮುಚ್ಚಿದ್ದೀರಿ” ಎಂದು ಅವರು ಆರೋಪಿಸಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಮಾತನಾಡಿ, ”ಈ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಾನವೀಯ ನಡೆ ಅನುಸರಿಸಬೇಕಾದ ಅಗತ್ಯವಿದೆ” ಎಂದು ಪ್ರತಿಪಾದಿಸಿದ್ದಾರೆ.

”ಬಾಲ್ಯ ವಿವಾಹವನ್ನು ಕಾಂಗ್ರೆಸ್‌ ವಿರೋಧಿಸುತ್ತದೆ. ಆದರೆ ಬೆಳೆದ ಮಕ್ಕಳೊಂದಿಗೆ ನೆಲೆಸಿರುವ ಕುಟುಂಬಗಳಲ್ಲಿ ನೆಮ್ಮದಿ ಕದಡುವುದರಿಂದ ಏನು ಪ್ರಯೋಜನ? ಇದು ಪ್ರಚಾರದ ಸ್ಟಂಟ್ ಹೊರತು ಬೇರೇನೂ ಅಲ್ಲ” ಎಂದು ಅವರು ಹೇಳಿದರು.

ಅಸ್ಸಾಂ ತೃಣಮೂಲ ಕಾಂಗ್ರೆಸ್ ಘಟಕದ ಅಧ್ಯಕ್ಷ ರಿಪುನ್ ಬೋರಾ, ”ರಾಜ್ಯ ಸರ್ಕಾರ ಬಾಲ್ಯವಿವಾಹ ಕಾಯ್ದೆಯನ್ನು ತೀವ್ರವಾಗಿ ದುರುಪಯೋಗಪಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

”ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವುದು ಸರಿಯಲ್ಲ. ಮಂಕಚಾರ್‌ನಲ್ಲಿ, ತನ್ನ ಪೋಷಕರು ಜೈಲಿಗೆ ಹೋಗುತ್ತಾರೆ ಎಂದು ಹೆದರಿ, ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದು ಅಪರಾಧಿಗಳ ಮೇಲೆ ವಿಚಿತ್ರವಾದ ದಮನದ ಪರಿಣಾಮವಾಗಿದೆ” ಎಂದು ಬೋರಾ ಟ್ವೀಟ್ ಮಾಡಿದ್ದಾರೆ.

ಬಾಲ್ಯವಿವಾಹದ ವಿರುದ್ಧ ಸರ್ಕಾರ ನಡೆಸುತ್ತಿರುವ ಕ್ರಮದಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಸೂಪರಿಂಟೆಂಡೆಂಟ್ ಹೋರೆನ್ ಟೋಕ್ಬಿ ಅವರು, ”ಅವಳ ಕುಟುಂಬಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು. ನಾವು ಈ ವಿಚಾರದ ಬಗ್ಗೆ ಮತ್ತಷ್ಟು ತನಿಖೆ ಮಾಡುತ್ತೇವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...