Homeಮುಖಪುಟಪಂಜಾಬ್‌: ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ; ಬಿಜೆಪಿ ಸೇರಿದ ಎಎಪಿ-ಕಾಂಗ್ರೆಸ್ ಕಾರ್ಯಕರ್ತರು

ಪಂಜಾಬ್‌: ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ; ಬಿಜೆಪಿ ಸೇರಿದ ಎಎಪಿ-ಕಾಂಗ್ರೆಸ್ ಕಾರ್ಯಕರ್ತರು

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ’ಇಂಡಿಯಾ’ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು, ಪಂಜಾಬ್‌ನ ಹಲವಾರು ಎಎಪಿ-ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಚಂಡೀಗಢದಲ್ಲಿ ಬಿಜೆಪಿ ಸೇರಿದ್ದಾರೆ.

ಮಾಜಿ ಸಂಸದ ಅಶೋಕ್ ತನ್ವಾರ್ ಅವರು ಚಂಡೀಗಢ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆಗಿನ ಎಎಪಿ ಹೊಂದಾಣಿಕೆಯ ಕಾರಣವನ್ನು ಉಲ್ಲೇಖಿಸಿ ಗುರುವಾರ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಚಂಡೀಗಢ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಜಂಟಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದವು.

ಎಎಪಿ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಹಿರಿಯ ಉಪಮೇಯರ್ ಮತ್ತು ಉಪ ಮೇಯರ್‍ ಸ್ಥಾನಕ್ಕೆ ಸ್ಪರ್ಧಿಸುತ್ತಿದೆ. ಗುರುವಾರ ನಡೆಯಬೇಕಿದ್ದ ಚಂಡೀಗಢ ಮೇಯರ್ ಚುನಾವಣೆಯ ದಿನಾಂಕವನ್ನು ನಿಯೋಜಿತ ಅಧ್ಯಕ್ಷರ ’ಅನಾರೋಗ್ಯ’ವನ್ನು ಉಲ್ಲೇಖಿಸಿ ಮುಂದೂಡಲಾಗಿದೆ. ಈ ಘೋಷಣೆಯು ಮೇಯರ್ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಪ್ರತಿಭಟನೆಗೆ ಕಾರಣವಾಯಿತು.

ಜ.17ರಂದು ಚಂಡೀಗಢದ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಎಎಪಿ ಮೈತ್ರಿಕೂಟದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮೇಯರ್ ಸ್ಥಾನದಿಂದ ಕಾಂಗ್ರೆಸ್‌ನ ಮುನ್ಸಿಪಲ್ ಕೌನ್ಸಿಲರ್ ಜಸ್ಬೀರ್ ಸಿಂಗ್ ಬಂಟಿ ನಾಮಪತ್ರ ಹಿಂಪಡೆಯಲು ಬಂದಾಗ ಈ ಘಟನೆ ನಡೆದಿದೆ. ಎಂಸಿ ಕಚೇರಿಗೆ ಆಗಮಿಸಿದ ಬಂಟಿ ಅವರ ತಂದೆ, ತನ್ನ ಮಗನನ್ನು ತನ್ನೊಂದಿಗೆ ಕಳುಹಿಸುವಂತೆ ಕಾಂಗ್ರೆಸ್ ಮುಖಂಡರನ್ನು ಕೇಳಿದರು, ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಕಾಂಗ್ರೆಸ್-ಎಎಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಜಗಳ ನಡೆದಿದೆ.

ಬಂಟಿ ಅವರ ತಂದೆ ಬಿಜೆಪಿಯ ಪ್ರಭಾವದಿಂದ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪರಿಸ್ಥಿತಿ ಕೈ ಮೀರಿದ್ದರಿಂದ ಚಂಡೀಗಢ ಪೊಲೀಸರು ಬಂಟಿಯನ್ನು ಅವರ ನಿವಾಸಕ್ಕೆ ಕರೆದೊಯ್ದರು. ಆರಂಭದಲ್ಲಿ ಮೇಯರ್ ಹುದ್ದೆಗೆ ಜಸ್ಬೀರ್ ಸಿಂಗ್ ಬಂಟಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿ ಮಾಡಿಕೊಂಡ ನಂತರ, ಮೇಯರ್ ಹುದ್ದೆಗೆ ಎಎಪಿ, ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶಿತರು ಸ್ಪರ್ಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ; ವಡೋದರಾ ದೋಣಿ ದುರಂತ; ವಿಹಾರಕ್ಕೆ ತೆರಳಿದ್ದ ಶಾಲಾ ವಿದ್ಯಾರ್ಥಿಗಳು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...