Homeಮುಖಪುಟಪಂಜಾಬ್‌: ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ; ಬಿಜೆಪಿ ಸೇರಿದ ಎಎಪಿ-ಕಾಂಗ್ರೆಸ್ ಕಾರ್ಯಕರ್ತರು

ಪಂಜಾಬ್‌: ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ; ಬಿಜೆಪಿ ಸೇರಿದ ಎಎಪಿ-ಕಾಂಗ್ರೆಸ್ ಕಾರ್ಯಕರ್ತರು

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ’ಇಂಡಿಯಾ’ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು, ಪಂಜಾಬ್‌ನ ಹಲವಾರು ಎಎಪಿ-ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಚಂಡೀಗಢದಲ್ಲಿ ಬಿಜೆಪಿ ಸೇರಿದ್ದಾರೆ.

ಮಾಜಿ ಸಂಸದ ಅಶೋಕ್ ತನ್ವಾರ್ ಅವರು ಚಂಡೀಗಢ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‌ ಜೊತೆಗಿನ ಎಎಪಿ ಹೊಂದಾಣಿಕೆಯ ಕಾರಣವನ್ನು ಉಲ್ಲೇಖಿಸಿ ಗುರುವಾರ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಚಂಡೀಗಢ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಜಂಟಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದವು.

ಎಎಪಿ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಹಿರಿಯ ಉಪಮೇಯರ್ ಮತ್ತು ಉಪ ಮೇಯರ್‍ ಸ್ಥಾನಕ್ಕೆ ಸ್ಪರ್ಧಿಸುತ್ತಿದೆ. ಗುರುವಾರ ನಡೆಯಬೇಕಿದ್ದ ಚಂಡೀಗಢ ಮೇಯರ್ ಚುನಾವಣೆಯ ದಿನಾಂಕವನ್ನು ನಿಯೋಜಿತ ಅಧ್ಯಕ್ಷರ ’ಅನಾರೋಗ್ಯ’ವನ್ನು ಉಲ್ಲೇಖಿಸಿ ಮುಂದೂಡಲಾಗಿದೆ. ಈ ಘೋಷಣೆಯು ಮೇಯರ್ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ಪ್ರತಿಭಟನೆಗೆ ಕಾರಣವಾಯಿತು.

ಜ.17ರಂದು ಚಂಡೀಗಢದ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಎಎಪಿ ಮೈತ್ರಿಕೂಟದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮೇಯರ್ ಸ್ಥಾನದಿಂದ ಕಾಂಗ್ರೆಸ್‌ನ ಮುನ್ಸಿಪಲ್ ಕೌನ್ಸಿಲರ್ ಜಸ್ಬೀರ್ ಸಿಂಗ್ ಬಂಟಿ ನಾಮಪತ್ರ ಹಿಂಪಡೆಯಲು ಬಂದಾಗ ಈ ಘಟನೆ ನಡೆದಿದೆ. ಎಂಸಿ ಕಚೇರಿಗೆ ಆಗಮಿಸಿದ ಬಂಟಿ ಅವರ ತಂದೆ, ತನ್ನ ಮಗನನ್ನು ತನ್ನೊಂದಿಗೆ ಕಳುಹಿಸುವಂತೆ ಕಾಂಗ್ರೆಸ್ ಮುಖಂಡರನ್ನು ಕೇಳಿದರು, ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದರು. ಇದರಿಂದ ಕಾಂಗ್ರೆಸ್-ಎಎಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಜಗಳ ನಡೆದಿದೆ.

ಬಂಟಿ ಅವರ ತಂದೆ ಬಿಜೆಪಿಯ ಪ್ರಭಾವದಿಂದ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪರಿಸ್ಥಿತಿ ಕೈ ಮೀರಿದ್ದರಿಂದ ಚಂಡೀಗಢ ಪೊಲೀಸರು ಬಂಟಿಯನ್ನು ಅವರ ನಿವಾಸಕ್ಕೆ ಕರೆದೊಯ್ದರು. ಆರಂಭದಲ್ಲಿ ಮೇಯರ್ ಹುದ್ದೆಗೆ ಜಸ್ಬೀರ್ ಸಿಂಗ್ ಬಂಟಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಎಎಪಿ ಮೈತ್ರಿ ಮಾಡಿಕೊಂಡ ನಂತರ, ಮೇಯರ್ ಹುದ್ದೆಗೆ ಎಎಪಿ, ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶಿತರು ಸ್ಪರ್ಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ; ವಡೋದರಾ ದೋಣಿ ದುರಂತ; ವಿಹಾರಕ್ಕೆ ತೆರಳಿದ್ದ ಶಾಲಾ ವಿದ್ಯಾರ್ಥಿಗಳು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...