Homeಮುಖಪುಟಸರ್ಕಾರಿ ಉದ್ಯೋಗದ ಭರವಸೆ; ಹಣಪಡೆದು ವಂಚಿಸಿದ ಬಿಜೆಪಿ ಕಾರ್ಯಕರ್ತ!

ಸರ್ಕಾರಿ ಉದ್ಯೋಗದ ಭರವಸೆ; ಹಣಪಡೆದು ವಂಚಿಸಿದ ಬಿಜೆಪಿ ಕಾರ್ಯಕರ್ತ!

ಬಿಜೆಪಿ "ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಜಾಬ್ ಸಿಂಡಿಕೇಟ್" ನಡೆಸುತ್ತಿದೆ ಎಂದು ಅಸ್ಸಾಂ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ದೇವವ್ರತ ಸೈಕಿಯಾ ಶುಕ್ರವಾರ ಆರೋಪಿಸಿದ್ದಾರೆ

- Advertisement -
- Advertisement -

ಅಸ್ಸಾಂ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ಜನರನ್ನು ವಂಚಿಸಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಗುವಾಹಟಿ ಪೊಲೀಸರ ಅಪರಾಧ ವಿಭಾಗವು ವಂಚನೆ ಮತ್ತು ಇತರ ಸಂಬಂಧಿತ ಆರೋಪಗಳಿಗಾಗಿ ಶುಕ್ರವಾರ ಪ್ರಕರಣ ದಾಖಲಿಸಿದ್ದು, ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ” ಎಂದು ಅವರು ಹೇಳಿದರು.

“ಅವನ ಹೆಸರು ರಾಜೀವ್ ಪರಾಶರ್, ಇಂದು ಬೆಳಿಗ್ಗೆ ಬಂಧಿಸಲಾಯಿತು. ಆತ ಅಭ್ಯರ್ಥಿಗಳಿಂದ ಹಣವನ್ನು ಸಂಗ್ರಹಿಸಿ, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿದ್ದ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪೊಲೀಸ್ ತಂಡವು ಆತನ ಬಳಿ ಕೆಲವು ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಸಹ ವಶಪಡಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ಈ ಕ್ಷಣದಲ್ಲಿ ನೀಡಲಾಗುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಪೊಲೀಸ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ: ಅಸ್ಸಾಂ ಬಿಜೆಪಿ ಸದಸ್ಯ, ಮಾಜಿ ಡಿಐಜಿಗೆ ಲುಕ್‌ ಔಟ್ ನೋಟೀಸ್

ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ವಿವಾದಾತ್ಮಕ ನೇಮಕಾತಿಯಲ್ಲಿಯೂ ಬಿಜೆಪಿ ಸದಸ್ಯ ಭಾಗಿಯಾಗಿದ್ದಾನೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ವಿವಿಧ ಹಂತಗಳಲ್ಲಿ 945 ಹುದ್ದೆಗಳಿಗೆ ಜನರನ್ನು ನೇಮಿಸಿಕೊಳ್ಳಲು ಇಲಾಖೆ 2018 ರ ಮೇ ತಿಂಗಳಲ್ಲಿ ಪರೀಕ್ಷೆ ನಡೆಸಿತ್ತು.

ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ಪ್ರತಿಪಕ್ಷಗಳು ಅಂದಿನಿಂದಲೂ ಬಿಜೆಪಿ ನೇತೃತ್ವದ ಸರ್ಕಾರದ ಮೇಲೆ ದಾಳಿ ನಡೆಸುತ್ತಿವೆ. ಆದರೆ ಬಿಜೆಪಿ ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.

ಸರ್ಬಾನಂದ ಸೋನೊವಾಲ್ ಸರ್ಕಾರವೂ ಅಸ್ಸಾಂ ಪೊಲೀಸರ ಉದ್ಯೋಗ ಹಗರಣದಲ್ಲಿ ಸಿಲುಕಿದೆ.

ನಿವೃತ್ತ ಡಿಐಜಿ ಪ್ರಶಾಂತ್ ಕುಮಾರ್ ದತ್ತಾ, ಹಿರಿಯ ಪೊಲೀಸ್ ಅಧಿಕಾರಿ ಕುಮಾರ್ ಸಂಜಿತ್ ಕೃಷ್ಣ, ಅಸ್ಸಾಂ ಮುಖ್ಯ ಕಾರ್ಯದರ್ಶಿ ಕುಮಾರ್ ಸಂಜಯ್ ಕೃಷ್ಣ ಅವರ ಸಹೋದರ ಮತ್ತು ಪಕ್ಷದಿಂದ ಹೊರಹಾಕಲ್ಪಟ್ಟ ಬಿಜೆಪಿ ನಾಯಕ ದಿಬನ್ ದೇಕಾ ಸೇರಿದಂತೆ 52 ಜನರನ್ನು, ಪೊಲೀಸ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ರಾಜ್ಯ ಪೊಲೀಸರ ಅನೇಕ ಏಜೆನ್ಸಿಗಳು ಬಂಧಿಸಿವೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ಸೆಪ್ಟೆಂಬರ್ 20 ರಂದು, ಅಸ್ಸಾಂ ನಿರಾಯುಧ ಸಬ್ ಇನ್ಸ್‌ಪೆಕ್ಟರ್‌ಗಳ 597 ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ನಂತರ ರಾಜ್ಯ ಮಟ್ಟದ ಪೊಲೀಸ್ ನೇಮಕಾತಿ ಮಂಡಳಿ (ಎಸ್‌ಎಲ್‌ಪಿಆರ್‌ಬಿ), ಪರೀಕ್ಷೆ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಅದನ್ನು ರದ್ದುಗೊಳಿಸಿತ್ತು.

ಬಿಜೆಪಿ “ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಜಾಬ್ ಸಿಂಡಿಕೇಟ್” ನಡೆಸುತ್ತಿದೆ ಎಂದು ಅಸ್ಸಾಂ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ದೇವವ್ರತ ಸೈಕಿಯಾ ಶುಕ್ರವಾರ ಆರೋಪಿಸಿದ್ದು, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಮಾಡಿದ ಎಲ್ಲಾ ನೇಮಕಾತಿಗಳ ಬಗ್ಗೆ ಗೌಹಾತಿ ಹೈಕೋರ್ಟ್‌ನ ನ್ಯಾಯಾಧೀಶರು ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.


ಇದನ್ನೂ ಓದಿ: ಅಸ್ಸಾಂ ಪ್ರವಾಹ: 26 ಜಿಲ್ಲೆಗಳ 26 ಲಕ್ಷ ಜನರು ಸಂಕಷ್ಟದಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬ್ರಶ್ಟಾಚಾರ..corruption..ನಡೆಗೇಡಿತನ,ಲಂಚಗುಳಿತನ
    ಆರ್ಥಿಕ.. ಹಣಕಾಸು
    ನಿರಂತರ..ಎಡೆಬಿಡದ,ಎಡೆಯಿರದ,ಸತತ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...