Homeಮುಖಪುಟ‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ‘ಘೋಷಿತ ವಿದೇಶಿಯರು’ ಎಂದು ಗುರುತಿಸಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಗೋಲ್ಪಾರಾ ಜಿಲ್ಲೆಯ ಮಾಟಿಯಾ ‘ಟ್ರಾನ್ಸಿಟ್ ಕ್ಯಾಂಪ್‌’ಗೆ ಸ್ಥಳಾಂತರಿಸಲಾಗಿದೆ. ಇದು ರಾಜ್ಯದಲ್ಲಿನ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ ಎಂದು ಗುರುತಿಸಲ್ಪಟ್ಟಿದೆ.

ವಿದೇಶಿಯರೆಂದು ಗುರುತಿಸಲ್ಪಟ್ಟಿರುವ, ಗಡೀಪಾರು ಅಥವಾ ವಾಪಸ್‌‌ ಹೋಗಲು ನಿರೀಕ್ಷಿಸುತ್ತಿರುವ ವ್ಯಕ್ತಿಗಳನ್ನು; ಪೌರತ್ವದ ಹಕ್ಕುಗಳನ್ನು ಇತ್ಯರ್ಥಗೊಳಿಸಲು ಕಾಯುತ್ತಿರುವವರನ್ನು ಬಂಧಿಸಲು ಮಾಟಿಯಾ ಕೇಂದ್ರವನ್ನು ಬಳಸಲಾಗುತ್ತಿದೆ.

ಡಿಟೆನ್ಷನ್‌ ಸೆಂಟರ್‌ಗಳನ್ನು ಈಗ ‘ಟ್ರಾನ್ಸಿಸ್ಟ್‌ ಕ್ಯಾಂಪ್‌’ ಎಂದು ಕರೆಯಬೇಕೆಂದು ರಾಜ್ಯ ಸರ್ಕಾರದ ಅಧಿಸೂಚನೆ ತಿಳಿಸಿದೆ.

ಸಿಲ್ಚಾರ್ ಡಿಟೆನ್ಷನ್‌ ಸೆಂಟರ್‌ನಲ್ಲಿದ್ದ  87 ಮಂದಿ ಬಂಧಿತರ ಕೊನೆಯ ತಂಡವನ್ನು ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ಗೆ ಕರೆದೊಯ್ಯಲಾಯಿತು ಎಂದು ಅಸ್ಸಾಂ ಇನ್‌ಸ್ಪೆಕ್ಟರ್ ಜನರಲ್ ಆಫ್ ಪ್ರಿಸನ್ ಆಗಿರುವ ಪುಬಾಲಿ ಗೊಹೈನ್ ಪಿಟಿಐಗೆ ತಿಳಿಸಿದ್ದಾರೆ.

“ಇದರೊಂದಿಗೆ ಎಲ್ಲಾ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಸ್ಸಾಂನಲ್ಲಿ ಆರು ಡಿಟೆನ್ಷನ್‌ ಕೇಂದ್ರಗಳು ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ” ಎಂದು ಗೊಹೈನ್ ಮಾಹಿತಿ ನೀಡಿದ್ದಾರೆ.

ಗೋಲ್ಪಾರಾ, ಕೊಕ್ರಜಾರ್, ತೇಜ್ಪುರ್, ಜೋರ್ಹತ್, ದಿಬ್ರುಗಢ್ ಮತ್ತು ಸಿಲ್ಚಾರ್ ಜಿಲ್ಲಾ ಕಾರಾಗೃಹಗಳಲ್ಲಿ ಡಿಟೆನ್ಷನ್‌ ಸೆಂಟರ್‌ಗಳಿವೆ.

ಘೋಷಿತ ವಿದೇಶಿಯರನ್ನು ಸ್ಥಳಾಂತರಿಸುವ ಪ್ರಕ್ರಿಯೆಯು ಜನವರಿ 27ರಂದು ಗೋಲ್ಪಾರಾ ಡಿಟೆನ್ಷನ್‌ ಸೆಂಟರ್‌ನಿಂದ 68 ಬಂಧಿತರನ್ನು ವರ್ಗಾಯಿಸುವುದರೊಂದಿಗೆ ಪ್ರಕ್ರಿಯೆ ಪ್ರಾರಂಭವಾಯಿತು.

ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ 217 ಘೋಷಿತ ವಿದೇಶಿಯರು ಇದ್ದಾರೆ ಎಂದು ಗೋಲ್‌ಪಾರಾ ಡೆಪ್ಯೂಟಿ ಕಮಿಷನರ್ ಖನೀಂದ್ರ ಚೌಧರಿ ಹೇಳಿದ್ದಾರೆ.

“ಈ ಅಂಕಿ ಅಂಶವು ನ್ಯಾಯಾಲಯದ ತೀರ್ಪುಗಳು ಮತ್ತು ವಿದೇಶಿಯರನ್ನು ಗಡೀಪಾರು ಮಾಡುವುದರೊಂದಿಗೆ ಆಗಾಗ್ಗೆ ಬದಲಾಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಕೇವಲ ಮೂರು ದಿನಗಳ ಹಿಂದೆ, ಮೂರು ಬಾಂಗ್ಲಾದೇಶೀಯರನ್ನು ಮಾಟಿಯಾ ಶಿಬಿರದಿಂದ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ” ಎಂದಿದ್ದಾರೆ.

ವಿದೇಶಿಯರ ಬಂಧನಕ್ಕಾಗಿ ಒಂದು ವಿಶೇಷ ಡಿಟೆನ್ಷನ್‌ ಸೆಂಟರ್‌ ಸ್ಥಾಪಿಸುವಂತೆ ಅಸ್ಸಾಂ ಸರ್ಕಾರಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ನಿರ್ದೇಶನ ನೀಡಿತು. ಹೀಗಾಗಿ ವಿದೇಶಿ ಬಂಧಿತರನ್ನು ಜೈಲುಗಳಲ್ಲಿನ ಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳೊಂದಿಗೆ ಇರಿಸುತ್ತಿಲ್ಲ.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಯಿಂದ ಹೊರಗುಳಿಯುವ ಹೆಚ್ಚಿನ ಸಂಖ್ಯೆಯ ವ್ಯಕ್ತಿಗಳನ್ನು ಪರಿಗಣಿಸಿ ಅಸ್ಸಾಂ ಸರ್ಕಾರವು ಕನಿಷ್ಠ 10 ಇಂತಹ ಕೇಂದ್ರಗಳನ್ನು ನಿರ್ಮಿಸಲು ಯೋಜಿಸಿತ್ತು. ಪ್ರಸ್ತಾವಿತ 10 ಶಿಬಿರಗಳಲ್ಲಿ ಮಾಟಿಯಾ ಬಂಧನ ಕೇಂದ್ರವು ಮೊದಲನೆಯದು.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಗುರಿಯೊಂದಿಗೆ ಎನ್‌ಆರ್‌ಸಿ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರ ಆಗಸ್ಟ್ 2019 ರಲ್ಲಿ ಪ್ರಕಟಿಸಿದೆ.

ತಮ್ಮ ಪೂರ್ವಜರು ಮಾರ್ಚ್ 24, 1971ರ ಮಧ್ಯರಾತ್ರಿಗಿಂತ ಮೊದಲು ಅಸ್ಸಾಂಗೆ ಪ್ರವೇಶಿಸಿರುವ ಸಂಬಂಧ ದೃಢೀಕರಿಸಲು ಸಾಧ್ಯವಾಗದವರನ್ನು ನಾಗರಿಕ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಎನ್‌ಆರ್‌ಸಿ ನಿಬಂಧನೆಗಳು ಹೇಳುತ್ತವೆ.

ಇದನ್ನೂ ಓದಿರಿ: ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

19 ಲಕ್ಷಕ್ಕೂ ಹೆಚ್ಚು ಜನರು ಅಥವಾ ರಾಜ್ಯದ ಜನಸಂಖ್ಯೆಯ ಸುಮಾರು 6% ಜನರನ್ನು ಅಂತಿಮ ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿದೆ.

ರಾಜ್ಯ ಸರ್ಕಾರವು ಎನ್‌ಆರ್‌ಸಿಯ ಅಂತಿಮ ಕರಡನ್ನು ‘ದೋಷಪೂರಿತ’ ಎಂದು ಕರೆದಿದ್ದು, ಇದು ಅಸ್ಸಾಂನ ಹಲವಾರು ಸ್ಥಳೀಯ ಜನರನ್ನೂ ಹೊರಗಿಟ್ಟಿದೆ ಎಂದು ಆರೋಪಿಸಿದೆ. ಹೊರಗಿಡುವಿಕೆಯ ವಿರುದ್ಧದ ಮೇಲ್ಮನವಿಗಳನ್ನು ಆಲಿಸುವ ಕೆಲಸವನ್ನು ವಿದೇಶಿಯರ ನ್ಯಾಯಮಂಡಳಿಗಳಿಗೆ ವಹಿಸಲಾಯಿತು. ಎನ್‌ಆರ್‌ಸಿಯಿಂದ ಬಾಧಿತರಾದವರು ಬಂಧನದಲ್ಲಿ ಇರಬೇಕಾಗುತ್ತದೆ.

ಹೆಚ್ಚಿನ ವ್ಯಕ್ತಿಗಳು ವಿದೇಶಿಯರೆಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಶಿಬಿರಗಳಲ್ಲಿ ಇದ್ದಾರೆ. “ಪ್ರಾಥಮಿಕ ಕಾನೂನು ಪ್ರಾತಿನಿಧ್ಯವನ್ನು ಸಹ ಇವರು ಹೊಂದಿಲ್ಲ. ನ್ಯಾಯಮಂಡಳಿಗಳೂ ಆಲಿಸುತ್ತಿಲ್ಲ” ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಾಂದರ್ ಜುಲೈ 2019 ರಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...