Homeಮುಖಪುಟ‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ‘ಘೋಷಿತ ವಿದೇಶಿಯರು’ ಎಂದು ಗುರುತಿಸಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಗೋಲ್ಪಾರಾ ಜಿಲ್ಲೆಯ ಮಾಟಿಯಾ ‘ಟ್ರಾನ್ಸಿಟ್ ಕ್ಯಾಂಪ್‌’ಗೆ ಸ್ಥಳಾಂತರಿಸಲಾಗಿದೆ. ಇದು ರಾಜ್ಯದಲ್ಲಿನ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ ಎಂದು ಗುರುತಿಸಲ್ಪಟ್ಟಿದೆ.

ವಿದೇಶಿಯರೆಂದು ಗುರುತಿಸಲ್ಪಟ್ಟಿರುವ, ಗಡೀಪಾರು ಅಥವಾ ವಾಪಸ್‌‌ ಹೋಗಲು ನಿರೀಕ್ಷಿಸುತ್ತಿರುವ ವ್ಯಕ್ತಿಗಳನ್ನು; ಪೌರತ್ವದ ಹಕ್ಕುಗಳನ್ನು ಇತ್ಯರ್ಥಗೊಳಿಸಲು ಕಾಯುತ್ತಿರುವವರನ್ನು ಬಂಧಿಸಲು ಮಾಟಿಯಾ ಕೇಂದ್ರವನ್ನು ಬಳಸಲಾಗುತ್ತಿದೆ.

ಡಿಟೆನ್ಷನ್‌ ಸೆಂಟರ್‌ಗಳನ್ನು ಈಗ ‘ಟ್ರಾನ್ಸಿಸ್ಟ್‌ ಕ್ಯಾಂಪ್‌’ ಎಂದು ಕರೆಯಬೇಕೆಂದು ರಾಜ್ಯ ಸರ್ಕಾರದ ಅಧಿಸೂಚನೆ ತಿಳಿಸಿದೆ.

ಸಿಲ್ಚಾರ್ ಡಿಟೆನ್ಷನ್‌ ಸೆಂಟರ್‌ನಲ್ಲಿದ್ದ  87 ಮಂದಿ ಬಂಧಿತರ ಕೊನೆಯ ತಂಡವನ್ನು ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ಗೆ ಕರೆದೊಯ್ಯಲಾಯಿತು ಎಂದು ಅಸ್ಸಾಂ ಇನ್‌ಸ್ಪೆಕ್ಟರ್ ಜನರಲ್ ಆಫ್ ಪ್ರಿಸನ್ ಆಗಿರುವ ಪುಬಾಲಿ ಗೊಹೈನ್ ಪಿಟಿಐಗೆ ತಿಳಿಸಿದ್ದಾರೆ.

“ಇದರೊಂದಿಗೆ ಎಲ್ಲಾ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಸ್ಸಾಂನಲ್ಲಿ ಆರು ಡಿಟೆನ್ಷನ್‌ ಕೇಂದ್ರಗಳು ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ” ಎಂದು ಗೊಹೈನ್ ಮಾಹಿತಿ ನೀಡಿದ್ದಾರೆ.

ಗೋಲ್ಪಾರಾ, ಕೊಕ್ರಜಾರ್, ತೇಜ್ಪುರ್, ಜೋರ್ಹತ್, ದಿಬ್ರುಗಢ್ ಮತ್ತು ಸಿಲ್ಚಾರ್ ಜಿಲ್ಲಾ ಕಾರಾಗೃಹಗಳಲ್ಲಿ ಡಿಟೆನ್ಷನ್‌ ಸೆಂಟರ್‌ಗಳಿವೆ.

ಘೋಷಿತ ವಿದೇಶಿಯರನ್ನು ಸ್ಥಳಾಂತರಿಸುವ ಪ್ರಕ್ರಿಯೆಯು ಜನವರಿ 27ರಂದು ಗೋಲ್ಪಾರಾ ಡಿಟೆನ್ಷನ್‌ ಸೆಂಟರ್‌ನಿಂದ 68 ಬಂಧಿತರನ್ನು ವರ್ಗಾಯಿಸುವುದರೊಂದಿಗೆ ಪ್ರಕ್ರಿಯೆ ಪ್ರಾರಂಭವಾಯಿತು.

ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ 217 ಘೋಷಿತ ವಿದೇಶಿಯರು ಇದ್ದಾರೆ ಎಂದು ಗೋಲ್‌ಪಾರಾ ಡೆಪ್ಯೂಟಿ ಕಮಿಷನರ್ ಖನೀಂದ್ರ ಚೌಧರಿ ಹೇಳಿದ್ದಾರೆ.

“ಈ ಅಂಕಿ ಅಂಶವು ನ್ಯಾಯಾಲಯದ ತೀರ್ಪುಗಳು ಮತ್ತು ವಿದೇಶಿಯರನ್ನು ಗಡೀಪಾರು ಮಾಡುವುದರೊಂದಿಗೆ ಆಗಾಗ್ಗೆ ಬದಲಾಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಕೇವಲ ಮೂರು ದಿನಗಳ ಹಿಂದೆ, ಮೂರು ಬಾಂಗ್ಲಾದೇಶೀಯರನ್ನು ಮಾಟಿಯಾ ಶಿಬಿರದಿಂದ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ” ಎಂದಿದ್ದಾರೆ.

ವಿದೇಶಿಯರ ಬಂಧನಕ್ಕಾಗಿ ಒಂದು ವಿಶೇಷ ಡಿಟೆನ್ಷನ್‌ ಸೆಂಟರ್‌ ಸ್ಥಾಪಿಸುವಂತೆ ಅಸ್ಸಾಂ ಸರ್ಕಾರಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ನಿರ್ದೇಶನ ನೀಡಿತು. ಹೀಗಾಗಿ ವಿದೇಶಿ ಬಂಧಿತರನ್ನು ಜೈಲುಗಳಲ್ಲಿನ ಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳೊಂದಿಗೆ ಇರಿಸುತ್ತಿಲ್ಲ.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಯಿಂದ ಹೊರಗುಳಿಯುವ ಹೆಚ್ಚಿನ ಸಂಖ್ಯೆಯ ವ್ಯಕ್ತಿಗಳನ್ನು ಪರಿಗಣಿಸಿ ಅಸ್ಸಾಂ ಸರ್ಕಾರವು ಕನಿಷ್ಠ 10 ಇಂತಹ ಕೇಂದ್ರಗಳನ್ನು ನಿರ್ಮಿಸಲು ಯೋಜಿಸಿತ್ತು. ಪ್ರಸ್ತಾವಿತ 10 ಶಿಬಿರಗಳಲ್ಲಿ ಮಾಟಿಯಾ ಬಂಧನ ಕೇಂದ್ರವು ಮೊದಲನೆಯದು.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಗುರಿಯೊಂದಿಗೆ ಎನ್‌ಆರ್‌ಸಿ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರ ಆಗಸ್ಟ್ 2019 ರಲ್ಲಿ ಪ್ರಕಟಿಸಿದೆ.

ತಮ್ಮ ಪೂರ್ವಜರು ಮಾರ್ಚ್ 24, 1971ರ ಮಧ್ಯರಾತ್ರಿಗಿಂತ ಮೊದಲು ಅಸ್ಸಾಂಗೆ ಪ್ರವೇಶಿಸಿರುವ ಸಂಬಂಧ ದೃಢೀಕರಿಸಲು ಸಾಧ್ಯವಾಗದವರನ್ನು ನಾಗರಿಕ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಎನ್‌ಆರ್‌ಸಿ ನಿಬಂಧನೆಗಳು ಹೇಳುತ್ತವೆ.

ಇದನ್ನೂ ಓದಿರಿ: ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

19 ಲಕ್ಷಕ್ಕೂ ಹೆಚ್ಚು ಜನರು ಅಥವಾ ರಾಜ್ಯದ ಜನಸಂಖ್ಯೆಯ ಸುಮಾರು 6% ಜನರನ್ನು ಅಂತಿಮ ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿದೆ.

ರಾಜ್ಯ ಸರ್ಕಾರವು ಎನ್‌ಆರ್‌ಸಿಯ ಅಂತಿಮ ಕರಡನ್ನು ‘ದೋಷಪೂರಿತ’ ಎಂದು ಕರೆದಿದ್ದು, ಇದು ಅಸ್ಸಾಂನ ಹಲವಾರು ಸ್ಥಳೀಯ ಜನರನ್ನೂ ಹೊರಗಿಟ್ಟಿದೆ ಎಂದು ಆರೋಪಿಸಿದೆ. ಹೊರಗಿಡುವಿಕೆಯ ವಿರುದ್ಧದ ಮೇಲ್ಮನವಿಗಳನ್ನು ಆಲಿಸುವ ಕೆಲಸವನ್ನು ವಿದೇಶಿಯರ ನ್ಯಾಯಮಂಡಳಿಗಳಿಗೆ ವಹಿಸಲಾಯಿತು. ಎನ್‌ಆರ್‌ಸಿಯಿಂದ ಬಾಧಿತರಾದವರು ಬಂಧನದಲ್ಲಿ ಇರಬೇಕಾಗುತ್ತದೆ.

ಹೆಚ್ಚಿನ ವ್ಯಕ್ತಿಗಳು ವಿದೇಶಿಯರೆಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಶಿಬಿರಗಳಲ್ಲಿ ಇದ್ದಾರೆ. “ಪ್ರಾಥಮಿಕ ಕಾನೂನು ಪ್ರಾತಿನಿಧ್ಯವನ್ನು ಸಹ ಇವರು ಹೊಂದಿಲ್ಲ. ನ್ಯಾಯಮಂಡಳಿಗಳೂ ಆಲಿಸುತ್ತಿಲ್ಲ” ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಾಂದರ್ ಜುಲೈ 2019 ರಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...