Homeಮುಖಪುಟ‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ‘ಘೋಷಿತ ವಿದೇಶಿಯರು’ ಎಂದು ಗುರುತಿಸಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಗೋಲ್ಪಾರಾ ಜಿಲ್ಲೆಯ ಮಾಟಿಯಾ ‘ಟ್ರಾನ್ಸಿಟ್ ಕ್ಯಾಂಪ್‌’ಗೆ ಸ್ಥಳಾಂತರಿಸಲಾಗಿದೆ. ಇದು ರಾಜ್ಯದಲ್ಲಿನ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ ಎಂದು ಗುರುತಿಸಲ್ಪಟ್ಟಿದೆ.

ವಿದೇಶಿಯರೆಂದು ಗುರುತಿಸಲ್ಪಟ್ಟಿರುವ, ಗಡೀಪಾರು ಅಥವಾ ವಾಪಸ್‌‌ ಹೋಗಲು ನಿರೀಕ್ಷಿಸುತ್ತಿರುವ ವ್ಯಕ್ತಿಗಳನ್ನು; ಪೌರತ್ವದ ಹಕ್ಕುಗಳನ್ನು ಇತ್ಯರ್ಥಗೊಳಿಸಲು ಕಾಯುತ್ತಿರುವವರನ್ನು ಬಂಧಿಸಲು ಮಾಟಿಯಾ ಕೇಂದ್ರವನ್ನು ಬಳಸಲಾಗುತ್ತಿದೆ.

ಡಿಟೆನ್ಷನ್‌ ಸೆಂಟರ್‌ಗಳನ್ನು ಈಗ ‘ಟ್ರಾನ್ಸಿಸ್ಟ್‌ ಕ್ಯಾಂಪ್‌’ ಎಂದು ಕರೆಯಬೇಕೆಂದು ರಾಜ್ಯ ಸರ್ಕಾರದ ಅಧಿಸೂಚನೆ ತಿಳಿಸಿದೆ.

ಸಿಲ್ಚಾರ್ ಡಿಟೆನ್ಷನ್‌ ಸೆಂಟರ್‌ನಲ್ಲಿದ್ದ  87 ಮಂದಿ ಬಂಧಿತರ ಕೊನೆಯ ತಂಡವನ್ನು ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ಗೆ ಕರೆದೊಯ್ಯಲಾಯಿತು ಎಂದು ಅಸ್ಸಾಂ ಇನ್‌ಸ್ಪೆಕ್ಟರ್ ಜನರಲ್ ಆಫ್ ಪ್ರಿಸನ್ ಆಗಿರುವ ಪುಬಾಲಿ ಗೊಹೈನ್ ಪಿಟಿಐಗೆ ತಿಳಿಸಿದ್ದಾರೆ.

“ಇದರೊಂದಿಗೆ ಎಲ್ಲಾ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಸ್ಸಾಂನಲ್ಲಿ ಆರು ಡಿಟೆನ್ಷನ್‌ ಕೇಂದ್ರಗಳು ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ” ಎಂದು ಗೊಹೈನ್ ಮಾಹಿತಿ ನೀಡಿದ್ದಾರೆ.

ಗೋಲ್ಪಾರಾ, ಕೊಕ್ರಜಾರ್, ತೇಜ್ಪುರ್, ಜೋರ್ಹತ್, ದಿಬ್ರುಗಢ್ ಮತ್ತು ಸಿಲ್ಚಾರ್ ಜಿಲ್ಲಾ ಕಾರಾಗೃಹಗಳಲ್ಲಿ ಡಿಟೆನ್ಷನ್‌ ಸೆಂಟರ್‌ಗಳಿವೆ.

ಘೋಷಿತ ವಿದೇಶಿಯರನ್ನು ಸ್ಥಳಾಂತರಿಸುವ ಪ್ರಕ್ರಿಯೆಯು ಜನವರಿ 27ರಂದು ಗೋಲ್ಪಾರಾ ಡಿಟೆನ್ಷನ್‌ ಸೆಂಟರ್‌ನಿಂದ 68 ಬಂಧಿತರನ್ನು ವರ್ಗಾಯಿಸುವುದರೊಂದಿಗೆ ಪ್ರಕ್ರಿಯೆ ಪ್ರಾರಂಭವಾಯಿತು.

ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ 217 ಘೋಷಿತ ವಿದೇಶಿಯರು ಇದ್ದಾರೆ ಎಂದು ಗೋಲ್‌ಪಾರಾ ಡೆಪ್ಯೂಟಿ ಕಮಿಷನರ್ ಖನೀಂದ್ರ ಚೌಧರಿ ಹೇಳಿದ್ದಾರೆ.

“ಈ ಅಂಕಿ ಅಂಶವು ನ್ಯಾಯಾಲಯದ ತೀರ್ಪುಗಳು ಮತ್ತು ವಿದೇಶಿಯರನ್ನು ಗಡೀಪಾರು ಮಾಡುವುದರೊಂದಿಗೆ ಆಗಾಗ್ಗೆ ಬದಲಾಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಕೇವಲ ಮೂರು ದಿನಗಳ ಹಿಂದೆ, ಮೂರು ಬಾಂಗ್ಲಾದೇಶೀಯರನ್ನು ಮಾಟಿಯಾ ಶಿಬಿರದಿಂದ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ” ಎಂದಿದ್ದಾರೆ.

ವಿದೇಶಿಯರ ಬಂಧನಕ್ಕಾಗಿ ಒಂದು ವಿಶೇಷ ಡಿಟೆನ್ಷನ್‌ ಸೆಂಟರ್‌ ಸ್ಥಾಪಿಸುವಂತೆ ಅಸ್ಸಾಂ ಸರ್ಕಾರಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ನಿರ್ದೇಶನ ನೀಡಿತು. ಹೀಗಾಗಿ ವಿದೇಶಿ ಬಂಧಿತರನ್ನು ಜೈಲುಗಳಲ್ಲಿನ ಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳೊಂದಿಗೆ ಇರಿಸುತ್ತಿಲ್ಲ.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಯಿಂದ ಹೊರಗುಳಿಯುವ ಹೆಚ್ಚಿನ ಸಂಖ್ಯೆಯ ವ್ಯಕ್ತಿಗಳನ್ನು ಪರಿಗಣಿಸಿ ಅಸ್ಸಾಂ ಸರ್ಕಾರವು ಕನಿಷ್ಠ 10 ಇಂತಹ ಕೇಂದ್ರಗಳನ್ನು ನಿರ್ಮಿಸಲು ಯೋಜಿಸಿತ್ತು. ಪ್ರಸ್ತಾವಿತ 10 ಶಿಬಿರಗಳಲ್ಲಿ ಮಾಟಿಯಾ ಬಂಧನ ಕೇಂದ್ರವು ಮೊದಲನೆಯದು.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಗುರಿಯೊಂದಿಗೆ ಎನ್‌ಆರ್‌ಸಿ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರ ಆಗಸ್ಟ್ 2019 ರಲ್ಲಿ ಪ್ರಕಟಿಸಿದೆ.

ತಮ್ಮ ಪೂರ್ವಜರು ಮಾರ್ಚ್ 24, 1971ರ ಮಧ್ಯರಾತ್ರಿಗಿಂತ ಮೊದಲು ಅಸ್ಸಾಂಗೆ ಪ್ರವೇಶಿಸಿರುವ ಸಂಬಂಧ ದೃಢೀಕರಿಸಲು ಸಾಧ್ಯವಾಗದವರನ್ನು ನಾಗರಿಕ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಎನ್‌ಆರ್‌ಸಿ ನಿಬಂಧನೆಗಳು ಹೇಳುತ್ತವೆ.

ಇದನ್ನೂ ಓದಿರಿ: ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

19 ಲಕ್ಷಕ್ಕೂ ಹೆಚ್ಚು ಜನರು ಅಥವಾ ರಾಜ್ಯದ ಜನಸಂಖ್ಯೆಯ ಸುಮಾರು 6% ಜನರನ್ನು ಅಂತಿಮ ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿದೆ.

ರಾಜ್ಯ ಸರ್ಕಾರವು ಎನ್‌ಆರ್‌ಸಿಯ ಅಂತಿಮ ಕರಡನ್ನು ‘ದೋಷಪೂರಿತ’ ಎಂದು ಕರೆದಿದ್ದು, ಇದು ಅಸ್ಸಾಂನ ಹಲವಾರು ಸ್ಥಳೀಯ ಜನರನ್ನೂ ಹೊರಗಿಟ್ಟಿದೆ ಎಂದು ಆರೋಪಿಸಿದೆ. ಹೊರಗಿಡುವಿಕೆಯ ವಿರುದ್ಧದ ಮೇಲ್ಮನವಿಗಳನ್ನು ಆಲಿಸುವ ಕೆಲಸವನ್ನು ವಿದೇಶಿಯರ ನ್ಯಾಯಮಂಡಳಿಗಳಿಗೆ ವಹಿಸಲಾಯಿತು. ಎನ್‌ಆರ್‌ಸಿಯಿಂದ ಬಾಧಿತರಾದವರು ಬಂಧನದಲ್ಲಿ ಇರಬೇಕಾಗುತ್ತದೆ.

ಹೆಚ್ಚಿನ ವ್ಯಕ್ತಿಗಳು ವಿದೇಶಿಯರೆಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಶಿಬಿರಗಳಲ್ಲಿ ಇದ್ದಾರೆ. “ಪ್ರಾಥಮಿಕ ಕಾನೂನು ಪ್ರಾತಿನಿಧ್ಯವನ್ನು ಸಹ ಇವರು ಹೊಂದಿಲ್ಲ. ನ್ಯಾಯಮಂಡಳಿಗಳೂ ಆಲಿಸುತ್ತಿಲ್ಲ” ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಾಂದರ್ ಜುಲೈ 2019 ರಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...