Homeಮುಖಪುಟ‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ‘ಘೋಷಿತ ವಿದೇಶಿಯರು’ ಎಂದು ಗುರುತಿಸಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಗೋಲ್ಪಾರಾ ಜಿಲ್ಲೆಯ ಮಾಟಿಯಾ ‘ಟ್ರಾನ್ಸಿಟ್ ಕ್ಯಾಂಪ್‌’ಗೆ ಸ್ಥಳಾಂತರಿಸಲಾಗಿದೆ. ಇದು ರಾಜ್ಯದಲ್ಲಿನ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ ಎಂದು ಗುರುತಿಸಲ್ಪಟ್ಟಿದೆ.

ವಿದೇಶಿಯರೆಂದು ಗುರುತಿಸಲ್ಪಟ್ಟಿರುವ, ಗಡೀಪಾರು ಅಥವಾ ವಾಪಸ್‌‌ ಹೋಗಲು ನಿರೀಕ್ಷಿಸುತ್ತಿರುವ ವ್ಯಕ್ತಿಗಳನ್ನು; ಪೌರತ್ವದ ಹಕ್ಕುಗಳನ್ನು ಇತ್ಯರ್ಥಗೊಳಿಸಲು ಕಾಯುತ್ತಿರುವವರನ್ನು ಬಂಧಿಸಲು ಮಾಟಿಯಾ ಕೇಂದ್ರವನ್ನು ಬಳಸಲಾಗುತ್ತಿದೆ.

ಡಿಟೆನ್ಷನ್‌ ಸೆಂಟರ್‌ಗಳನ್ನು ಈಗ ‘ಟ್ರಾನ್ಸಿಸ್ಟ್‌ ಕ್ಯಾಂಪ್‌’ ಎಂದು ಕರೆಯಬೇಕೆಂದು ರಾಜ್ಯ ಸರ್ಕಾರದ ಅಧಿಸೂಚನೆ ತಿಳಿಸಿದೆ.

ಸಿಲ್ಚಾರ್ ಡಿಟೆನ್ಷನ್‌ ಸೆಂಟರ್‌ನಲ್ಲಿದ್ದ  87 ಮಂದಿ ಬಂಧಿತರ ಕೊನೆಯ ತಂಡವನ್ನು ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ಗೆ ಕರೆದೊಯ್ಯಲಾಯಿತು ಎಂದು ಅಸ್ಸಾಂ ಇನ್‌ಸ್ಪೆಕ್ಟರ್ ಜನರಲ್ ಆಫ್ ಪ್ರಿಸನ್ ಆಗಿರುವ ಪುಬಾಲಿ ಗೊಹೈನ್ ಪಿಟಿಐಗೆ ತಿಳಿಸಿದ್ದಾರೆ.

“ಇದರೊಂದಿಗೆ ಎಲ್ಲಾ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಸ್ಸಾಂನಲ್ಲಿ ಆರು ಡಿಟೆನ್ಷನ್‌ ಕೇಂದ್ರಗಳು ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ” ಎಂದು ಗೊಹೈನ್ ಮಾಹಿತಿ ನೀಡಿದ್ದಾರೆ.

ಗೋಲ್ಪಾರಾ, ಕೊಕ್ರಜಾರ್, ತೇಜ್ಪುರ್, ಜೋರ್ಹತ್, ದಿಬ್ರುಗಢ್ ಮತ್ತು ಸಿಲ್ಚಾರ್ ಜಿಲ್ಲಾ ಕಾರಾಗೃಹಗಳಲ್ಲಿ ಡಿಟೆನ್ಷನ್‌ ಸೆಂಟರ್‌ಗಳಿವೆ.

ಘೋಷಿತ ವಿದೇಶಿಯರನ್ನು ಸ್ಥಳಾಂತರಿಸುವ ಪ್ರಕ್ರಿಯೆಯು ಜನವರಿ 27ರಂದು ಗೋಲ್ಪಾರಾ ಡಿಟೆನ್ಷನ್‌ ಸೆಂಟರ್‌ನಿಂದ 68 ಬಂಧಿತರನ್ನು ವರ್ಗಾಯಿಸುವುದರೊಂದಿಗೆ ಪ್ರಕ್ರಿಯೆ ಪ್ರಾರಂಭವಾಯಿತು.

ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ 217 ಘೋಷಿತ ವಿದೇಶಿಯರು ಇದ್ದಾರೆ ಎಂದು ಗೋಲ್‌ಪಾರಾ ಡೆಪ್ಯೂಟಿ ಕಮಿಷನರ್ ಖನೀಂದ್ರ ಚೌಧರಿ ಹೇಳಿದ್ದಾರೆ.

“ಈ ಅಂಕಿ ಅಂಶವು ನ್ಯಾಯಾಲಯದ ತೀರ್ಪುಗಳು ಮತ್ತು ವಿದೇಶಿಯರನ್ನು ಗಡೀಪಾರು ಮಾಡುವುದರೊಂದಿಗೆ ಆಗಾಗ್ಗೆ ಬದಲಾಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಕೇವಲ ಮೂರು ದಿನಗಳ ಹಿಂದೆ, ಮೂರು ಬಾಂಗ್ಲಾದೇಶೀಯರನ್ನು ಮಾಟಿಯಾ ಶಿಬಿರದಿಂದ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ” ಎಂದಿದ್ದಾರೆ.

ವಿದೇಶಿಯರ ಬಂಧನಕ್ಕಾಗಿ ಒಂದು ವಿಶೇಷ ಡಿಟೆನ್ಷನ್‌ ಸೆಂಟರ್‌ ಸ್ಥಾಪಿಸುವಂತೆ ಅಸ್ಸಾಂ ಸರ್ಕಾರಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ನಿರ್ದೇಶನ ನೀಡಿತು. ಹೀಗಾಗಿ ವಿದೇಶಿ ಬಂಧಿತರನ್ನು ಜೈಲುಗಳಲ್ಲಿನ ಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳೊಂದಿಗೆ ಇರಿಸುತ್ತಿಲ್ಲ.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಯಿಂದ ಹೊರಗುಳಿಯುವ ಹೆಚ್ಚಿನ ಸಂಖ್ಯೆಯ ವ್ಯಕ್ತಿಗಳನ್ನು ಪರಿಗಣಿಸಿ ಅಸ್ಸಾಂ ಸರ್ಕಾರವು ಕನಿಷ್ಠ 10 ಇಂತಹ ಕೇಂದ್ರಗಳನ್ನು ನಿರ್ಮಿಸಲು ಯೋಜಿಸಿತ್ತು. ಪ್ರಸ್ತಾವಿತ 10 ಶಿಬಿರಗಳಲ್ಲಿ ಮಾಟಿಯಾ ಬಂಧನ ಕೇಂದ್ರವು ಮೊದಲನೆಯದು.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಗುರಿಯೊಂದಿಗೆ ಎನ್‌ಆರ್‌ಸಿ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರ ಆಗಸ್ಟ್ 2019 ರಲ್ಲಿ ಪ್ರಕಟಿಸಿದೆ.

ತಮ್ಮ ಪೂರ್ವಜರು ಮಾರ್ಚ್ 24, 1971ರ ಮಧ್ಯರಾತ್ರಿಗಿಂತ ಮೊದಲು ಅಸ್ಸಾಂಗೆ ಪ್ರವೇಶಿಸಿರುವ ಸಂಬಂಧ ದೃಢೀಕರಿಸಲು ಸಾಧ್ಯವಾಗದವರನ್ನು ನಾಗರಿಕ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಎನ್‌ಆರ್‌ಸಿ ನಿಬಂಧನೆಗಳು ಹೇಳುತ್ತವೆ.

ಇದನ್ನೂ ಓದಿರಿ: ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

19 ಲಕ್ಷಕ್ಕೂ ಹೆಚ್ಚು ಜನರು ಅಥವಾ ರಾಜ್ಯದ ಜನಸಂಖ್ಯೆಯ ಸುಮಾರು 6% ಜನರನ್ನು ಅಂತಿಮ ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿದೆ.

ರಾಜ್ಯ ಸರ್ಕಾರವು ಎನ್‌ಆರ್‌ಸಿಯ ಅಂತಿಮ ಕರಡನ್ನು ‘ದೋಷಪೂರಿತ’ ಎಂದು ಕರೆದಿದ್ದು, ಇದು ಅಸ್ಸಾಂನ ಹಲವಾರು ಸ್ಥಳೀಯ ಜನರನ್ನೂ ಹೊರಗಿಟ್ಟಿದೆ ಎಂದು ಆರೋಪಿಸಿದೆ. ಹೊರಗಿಡುವಿಕೆಯ ವಿರುದ್ಧದ ಮೇಲ್ಮನವಿಗಳನ್ನು ಆಲಿಸುವ ಕೆಲಸವನ್ನು ವಿದೇಶಿಯರ ನ್ಯಾಯಮಂಡಳಿಗಳಿಗೆ ವಹಿಸಲಾಯಿತು. ಎನ್‌ಆರ್‌ಸಿಯಿಂದ ಬಾಧಿತರಾದವರು ಬಂಧನದಲ್ಲಿ ಇರಬೇಕಾಗುತ್ತದೆ.

ಹೆಚ್ಚಿನ ವ್ಯಕ್ತಿಗಳು ವಿದೇಶಿಯರೆಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಶಿಬಿರಗಳಲ್ಲಿ ಇದ್ದಾರೆ. “ಪ್ರಾಥಮಿಕ ಕಾನೂನು ಪ್ರಾತಿನಿಧ್ಯವನ್ನು ಸಹ ಇವರು ಹೊಂದಿಲ್ಲ. ನ್ಯಾಯಮಂಡಳಿಗಳೂ ಆಲಿಸುತ್ತಿಲ್ಲ” ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಾಂದರ್ ಜುಲೈ 2019 ರಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...