Homeಮುಖಪುಟ‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ‘ಘೋಷಿತ ವಿದೇಶಿಯರು’ ಎಂದು ಗುರುತಿಸಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಗೋಲ್ಪಾರಾ ಜಿಲ್ಲೆಯ ಮಾಟಿಯಾ ‘ಟ್ರಾನ್ಸಿಟ್ ಕ್ಯಾಂಪ್‌’ಗೆ ಸ್ಥಳಾಂತರಿಸಲಾಗಿದೆ. ಇದು ರಾಜ್ಯದಲ್ಲಿನ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ ಎಂದು ಗುರುತಿಸಲ್ಪಟ್ಟಿದೆ.

ವಿದೇಶಿಯರೆಂದು ಗುರುತಿಸಲ್ಪಟ್ಟಿರುವ, ಗಡೀಪಾರು ಅಥವಾ ವಾಪಸ್‌‌ ಹೋಗಲು ನಿರೀಕ್ಷಿಸುತ್ತಿರುವ ವ್ಯಕ್ತಿಗಳನ್ನು; ಪೌರತ್ವದ ಹಕ್ಕುಗಳನ್ನು ಇತ್ಯರ್ಥಗೊಳಿಸಲು ಕಾಯುತ್ತಿರುವವರನ್ನು ಬಂಧಿಸಲು ಮಾಟಿಯಾ ಕೇಂದ್ರವನ್ನು ಬಳಸಲಾಗುತ್ತಿದೆ.

ಡಿಟೆನ್ಷನ್‌ ಸೆಂಟರ್‌ಗಳನ್ನು ಈಗ ‘ಟ್ರಾನ್ಸಿಸ್ಟ್‌ ಕ್ಯಾಂಪ್‌’ ಎಂದು ಕರೆಯಬೇಕೆಂದು ರಾಜ್ಯ ಸರ್ಕಾರದ ಅಧಿಸೂಚನೆ ತಿಳಿಸಿದೆ.

ಸಿಲ್ಚಾರ್ ಡಿಟೆನ್ಷನ್‌ ಸೆಂಟರ್‌ನಲ್ಲಿದ್ದ  87 ಮಂದಿ ಬಂಧಿತರ ಕೊನೆಯ ತಂಡವನ್ನು ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ಗೆ ಕರೆದೊಯ್ಯಲಾಯಿತು ಎಂದು ಅಸ್ಸಾಂ ಇನ್‌ಸ್ಪೆಕ್ಟರ್ ಜನರಲ್ ಆಫ್ ಪ್ರಿಸನ್ ಆಗಿರುವ ಪುಬಾಲಿ ಗೊಹೈನ್ ಪಿಟಿಐಗೆ ತಿಳಿಸಿದ್ದಾರೆ.

“ಇದರೊಂದಿಗೆ ಎಲ್ಲಾ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಸ್ಸಾಂನಲ್ಲಿ ಆರು ಡಿಟೆನ್ಷನ್‌ ಕೇಂದ್ರಗಳು ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ” ಎಂದು ಗೊಹೈನ್ ಮಾಹಿತಿ ನೀಡಿದ್ದಾರೆ.

ಗೋಲ್ಪಾರಾ, ಕೊಕ್ರಜಾರ್, ತೇಜ್ಪುರ್, ಜೋರ್ಹತ್, ದಿಬ್ರುಗಢ್ ಮತ್ತು ಸಿಲ್ಚಾರ್ ಜಿಲ್ಲಾ ಕಾರಾಗೃಹಗಳಲ್ಲಿ ಡಿಟೆನ್ಷನ್‌ ಸೆಂಟರ್‌ಗಳಿವೆ.

ಘೋಷಿತ ವಿದೇಶಿಯರನ್ನು ಸ್ಥಳಾಂತರಿಸುವ ಪ್ರಕ್ರಿಯೆಯು ಜನವರಿ 27ರಂದು ಗೋಲ್ಪಾರಾ ಡಿಟೆನ್ಷನ್‌ ಸೆಂಟರ್‌ನಿಂದ 68 ಬಂಧಿತರನ್ನು ವರ್ಗಾಯಿಸುವುದರೊಂದಿಗೆ ಪ್ರಕ್ರಿಯೆ ಪ್ರಾರಂಭವಾಯಿತು.

ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ 217 ಘೋಷಿತ ವಿದೇಶಿಯರು ಇದ್ದಾರೆ ಎಂದು ಗೋಲ್‌ಪಾರಾ ಡೆಪ್ಯೂಟಿ ಕಮಿಷನರ್ ಖನೀಂದ್ರ ಚೌಧರಿ ಹೇಳಿದ್ದಾರೆ.

“ಈ ಅಂಕಿ ಅಂಶವು ನ್ಯಾಯಾಲಯದ ತೀರ್ಪುಗಳು ಮತ್ತು ವಿದೇಶಿಯರನ್ನು ಗಡೀಪಾರು ಮಾಡುವುದರೊಂದಿಗೆ ಆಗಾಗ್ಗೆ ಬದಲಾಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಕೇವಲ ಮೂರು ದಿನಗಳ ಹಿಂದೆ, ಮೂರು ಬಾಂಗ್ಲಾದೇಶೀಯರನ್ನು ಮಾಟಿಯಾ ಶಿಬಿರದಿಂದ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ” ಎಂದಿದ್ದಾರೆ.

ವಿದೇಶಿಯರ ಬಂಧನಕ್ಕಾಗಿ ಒಂದು ವಿಶೇಷ ಡಿಟೆನ್ಷನ್‌ ಸೆಂಟರ್‌ ಸ್ಥಾಪಿಸುವಂತೆ ಅಸ್ಸಾಂ ಸರ್ಕಾರಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ನಿರ್ದೇಶನ ನೀಡಿತು. ಹೀಗಾಗಿ ವಿದೇಶಿ ಬಂಧಿತರನ್ನು ಜೈಲುಗಳಲ್ಲಿನ ಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳೊಂದಿಗೆ ಇರಿಸುತ್ತಿಲ್ಲ.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಯಿಂದ ಹೊರಗುಳಿಯುವ ಹೆಚ್ಚಿನ ಸಂಖ್ಯೆಯ ವ್ಯಕ್ತಿಗಳನ್ನು ಪರಿಗಣಿಸಿ ಅಸ್ಸಾಂ ಸರ್ಕಾರವು ಕನಿಷ್ಠ 10 ಇಂತಹ ಕೇಂದ್ರಗಳನ್ನು ನಿರ್ಮಿಸಲು ಯೋಜಿಸಿತ್ತು. ಪ್ರಸ್ತಾವಿತ 10 ಶಿಬಿರಗಳಲ್ಲಿ ಮಾಟಿಯಾ ಬಂಧನ ಕೇಂದ್ರವು ಮೊದಲನೆಯದು.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಗುರಿಯೊಂದಿಗೆ ಎನ್‌ಆರ್‌ಸಿ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರ ಆಗಸ್ಟ್ 2019 ರಲ್ಲಿ ಪ್ರಕಟಿಸಿದೆ.

ತಮ್ಮ ಪೂರ್ವಜರು ಮಾರ್ಚ್ 24, 1971ರ ಮಧ್ಯರಾತ್ರಿಗಿಂತ ಮೊದಲು ಅಸ್ಸಾಂಗೆ ಪ್ರವೇಶಿಸಿರುವ ಸಂಬಂಧ ದೃಢೀಕರಿಸಲು ಸಾಧ್ಯವಾಗದವರನ್ನು ನಾಗರಿಕ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಎನ್‌ಆರ್‌ಸಿ ನಿಬಂಧನೆಗಳು ಹೇಳುತ್ತವೆ.

ಇದನ್ನೂ ಓದಿರಿ: ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

19 ಲಕ್ಷಕ್ಕೂ ಹೆಚ್ಚು ಜನರು ಅಥವಾ ರಾಜ್ಯದ ಜನಸಂಖ್ಯೆಯ ಸುಮಾರು 6% ಜನರನ್ನು ಅಂತಿಮ ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿದೆ.

ರಾಜ್ಯ ಸರ್ಕಾರವು ಎನ್‌ಆರ್‌ಸಿಯ ಅಂತಿಮ ಕರಡನ್ನು ‘ದೋಷಪೂರಿತ’ ಎಂದು ಕರೆದಿದ್ದು, ಇದು ಅಸ್ಸಾಂನ ಹಲವಾರು ಸ್ಥಳೀಯ ಜನರನ್ನೂ ಹೊರಗಿಟ್ಟಿದೆ ಎಂದು ಆರೋಪಿಸಿದೆ. ಹೊರಗಿಡುವಿಕೆಯ ವಿರುದ್ಧದ ಮೇಲ್ಮನವಿಗಳನ್ನು ಆಲಿಸುವ ಕೆಲಸವನ್ನು ವಿದೇಶಿಯರ ನ್ಯಾಯಮಂಡಳಿಗಳಿಗೆ ವಹಿಸಲಾಯಿತು. ಎನ್‌ಆರ್‌ಸಿಯಿಂದ ಬಾಧಿತರಾದವರು ಬಂಧನದಲ್ಲಿ ಇರಬೇಕಾಗುತ್ತದೆ.

ಹೆಚ್ಚಿನ ವ್ಯಕ್ತಿಗಳು ವಿದೇಶಿಯರೆಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಶಿಬಿರಗಳಲ್ಲಿ ಇದ್ದಾರೆ. “ಪ್ರಾಥಮಿಕ ಕಾನೂನು ಪ್ರಾತಿನಿಧ್ಯವನ್ನು ಸಹ ಇವರು ಹೊಂದಿಲ್ಲ. ನ್ಯಾಯಮಂಡಳಿಗಳೂ ಆಲಿಸುತ್ತಿಲ್ಲ” ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಾಂದರ್ ಜುಲೈ 2019 ರಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...