Homeಮುಖಪುಟ‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

- Advertisement -
- Advertisement -

ಅಸ್ಸಾಂ ರಾಜ್ಯದಲ್ಲಿ ‘ಘೋಷಿತ ವಿದೇಶಿಯರು’ ಎಂದು ಗುರುತಿಸಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಗೋಲ್ಪಾರಾ ಜಿಲ್ಲೆಯ ಮಾಟಿಯಾ ‘ಟ್ರಾನ್ಸಿಟ್ ಕ್ಯಾಂಪ್‌’ಗೆ ಸ್ಥಳಾಂತರಿಸಲಾಗಿದೆ. ಇದು ರಾಜ್ಯದಲ್ಲಿನ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ ಎಂದು ಗುರುತಿಸಲ್ಪಟ್ಟಿದೆ.

ವಿದೇಶಿಯರೆಂದು ಗುರುತಿಸಲ್ಪಟ್ಟಿರುವ, ಗಡೀಪಾರು ಅಥವಾ ವಾಪಸ್‌‌ ಹೋಗಲು ನಿರೀಕ್ಷಿಸುತ್ತಿರುವ ವ್ಯಕ್ತಿಗಳನ್ನು; ಪೌರತ್ವದ ಹಕ್ಕುಗಳನ್ನು ಇತ್ಯರ್ಥಗೊಳಿಸಲು ಕಾಯುತ್ತಿರುವವರನ್ನು ಬಂಧಿಸಲು ಮಾಟಿಯಾ ಕೇಂದ್ರವನ್ನು ಬಳಸಲಾಗುತ್ತಿದೆ.

ಡಿಟೆನ್ಷನ್‌ ಸೆಂಟರ್‌ಗಳನ್ನು ಈಗ ‘ಟ್ರಾನ್ಸಿಸ್ಟ್‌ ಕ್ಯಾಂಪ್‌’ ಎಂದು ಕರೆಯಬೇಕೆಂದು ರಾಜ್ಯ ಸರ್ಕಾರದ ಅಧಿಸೂಚನೆ ತಿಳಿಸಿದೆ.

ಸಿಲ್ಚಾರ್ ಡಿಟೆನ್ಷನ್‌ ಸೆಂಟರ್‌ನಲ್ಲಿದ್ದ  87 ಮಂದಿ ಬಂಧಿತರ ಕೊನೆಯ ತಂಡವನ್ನು ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ಗೆ ಕರೆದೊಯ್ಯಲಾಯಿತು ಎಂದು ಅಸ್ಸಾಂ ಇನ್‌ಸ್ಪೆಕ್ಟರ್ ಜನರಲ್ ಆಫ್ ಪ್ರಿಸನ್ ಆಗಿರುವ ಪುಬಾಲಿ ಗೊಹೈನ್ ಪಿಟಿಐಗೆ ತಿಳಿಸಿದ್ದಾರೆ.

“ಇದರೊಂದಿಗೆ ಎಲ್ಲಾ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಸ್ಸಾಂನಲ್ಲಿ ಆರು ಡಿಟೆನ್ಷನ್‌ ಕೇಂದ್ರಗಳು ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ” ಎಂದು ಗೊಹೈನ್ ಮಾಹಿತಿ ನೀಡಿದ್ದಾರೆ.

ಗೋಲ್ಪಾರಾ, ಕೊಕ್ರಜಾರ್, ತೇಜ್ಪುರ್, ಜೋರ್ಹತ್, ದಿಬ್ರುಗಢ್ ಮತ್ತು ಸಿಲ್ಚಾರ್ ಜಿಲ್ಲಾ ಕಾರಾಗೃಹಗಳಲ್ಲಿ ಡಿಟೆನ್ಷನ್‌ ಸೆಂಟರ್‌ಗಳಿವೆ.

ಘೋಷಿತ ವಿದೇಶಿಯರನ್ನು ಸ್ಥಳಾಂತರಿಸುವ ಪ್ರಕ್ರಿಯೆಯು ಜನವರಿ 27ರಂದು ಗೋಲ್ಪಾರಾ ಡಿಟೆನ್ಷನ್‌ ಸೆಂಟರ್‌ನಿಂದ 68 ಬಂಧಿತರನ್ನು ವರ್ಗಾಯಿಸುವುದರೊಂದಿಗೆ ಪ್ರಕ್ರಿಯೆ ಪ್ರಾರಂಭವಾಯಿತು.

ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ 217 ಘೋಷಿತ ವಿದೇಶಿಯರು ಇದ್ದಾರೆ ಎಂದು ಗೋಲ್‌ಪಾರಾ ಡೆಪ್ಯೂಟಿ ಕಮಿಷನರ್ ಖನೀಂದ್ರ ಚೌಧರಿ ಹೇಳಿದ್ದಾರೆ.

“ಈ ಅಂಕಿ ಅಂಶವು ನ್ಯಾಯಾಲಯದ ತೀರ್ಪುಗಳು ಮತ್ತು ವಿದೇಶಿಯರನ್ನು ಗಡೀಪಾರು ಮಾಡುವುದರೊಂದಿಗೆ ಆಗಾಗ್ಗೆ ಬದಲಾಗುತ್ತದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಕೇವಲ ಮೂರು ದಿನಗಳ ಹಿಂದೆ, ಮೂರು ಬಾಂಗ್ಲಾದೇಶೀಯರನ್ನು ಮಾಟಿಯಾ ಶಿಬಿರದಿಂದ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ” ಎಂದಿದ್ದಾರೆ.

ವಿದೇಶಿಯರ ಬಂಧನಕ್ಕಾಗಿ ಒಂದು ವಿಶೇಷ ಡಿಟೆನ್ಷನ್‌ ಸೆಂಟರ್‌ ಸ್ಥಾಪಿಸುವಂತೆ ಅಸ್ಸಾಂ ಸರ್ಕಾರಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ನಿರ್ದೇಶನ ನೀಡಿತು. ಹೀಗಾಗಿ ವಿದೇಶಿ ಬಂಧಿತರನ್ನು ಜೈಲುಗಳಲ್ಲಿನ ಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳೊಂದಿಗೆ ಇರಿಸುತ್ತಿಲ್ಲ.

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ಯಿಂದ ಹೊರಗುಳಿಯುವ ಹೆಚ್ಚಿನ ಸಂಖ್ಯೆಯ ವ್ಯಕ್ತಿಗಳನ್ನು ಪರಿಗಣಿಸಿ ಅಸ್ಸಾಂ ಸರ್ಕಾರವು ಕನಿಷ್ಠ 10 ಇಂತಹ ಕೇಂದ್ರಗಳನ್ನು ನಿರ್ಮಿಸಲು ಯೋಜಿಸಿತ್ತು. ಪ್ರಸ್ತಾವಿತ 10 ಶಿಬಿರಗಳಲ್ಲಿ ಮಾಟಿಯಾ ಬಂಧನ ಕೇಂದ್ರವು ಮೊದಲನೆಯದು.

ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಭಾರತೀಯ ನಾಗರಿಕರನ್ನು ಪ್ರತ್ಯೇಕಿಸುವ ಗುರಿಯೊಂದಿಗೆ ಎನ್‌ಆರ್‌ಸಿ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರ ಆಗಸ್ಟ್ 2019 ರಲ್ಲಿ ಪ್ರಕಟಿಸಿದೆ.

ತಮ್ಮ ಪೂರ್ವಜರು ಮಾರ್ಚ್ 24, 1971ರ ಮಧ್ಯರಾತ್ರಿಗಿಂತ ಮೊದಲು ಅಸ್ಸಾಂಗೆ ಪ್ರವೇಶಿಸಿರುವ ಸಂಬಂಧ ದೃಢೀಕರಿಸಲು ಸಾಧ್ಯವಾಗದವರನ್ನು ನಾಗರಿಕ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಎನ್‌ಆರ್‌ಸಿ ನಿಬಂಧನೆಗಳು ಹೇಳುತ್ತವೆ.

ಇದನ್ನೂ ಓದಿರಿ: ಈ ಮಧುರ ದಾಂಪತ್ಯಕ್ಕೆ ‘ಎನ್‌ಆರ್‌ಸಿ’ ಏಕೆ?

19 ಲಕ್ಷಕ್ಕೂ ಹೆಚ್ಚು ಜನರು ಅಥವಾ ರಾಜ್ಯದ ಜನಸಂಖ್ಯೆಯ ಸುಮಾರು 6% ಜನರನ್ನು ಅಂತಿಮ ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿದೆ.

ರಾಜ್ಯ ಸರ್ಕಾರವು ಎನ್‌ಆರ್‌ಸಿಯ ಅಂತಿಮ ಕರಡನ್ನು ‘ದೋಷಪೂರಿತ’ ಎಂದು ಕರೆದಿದ್ದು, ಇದು ಅಸ್ಸಾಂನ ಹಲವಾರು ಸ್ಥಳೀಯ ಜನರನ್ನೂ ಹೊರಗಿಟ್ಟಿದೆ ಎಂದು ಆರೋಪಿಸಿದೆ. ಹೊರಗಿಡುವಿಕೆಯ ವಿರುದ್ಧದ ಮೇಲ್ಮನವಿಗಳನ್ನು ಆಲಿಸುವ ಕೆಲಸವನ್ನು ವಿದೇಶಿಯರ ನ್ಯಾಯಮಂಡಳಿಗಳಿಗೆ ವಹಿಸಲಾಯಿತು. ಎನ್‌ಆರ್‌ಸಿಯಿಂದ ಬಾಧಿತರಾದವರು ಬಂಧನದಲ್ಲಿ ಇರಬೇಕಾಗುತ್ತದೆ.

ಹೆಚ್ಚಿನ ವ್ಯಕ್ತಿಗಳು ವಿದೇಶಿಯರೆಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಶಿಬಿರಗಳಲ್ಲಿ ಇದ್ದಾರೆ. “ಪ್ರಾಥಮಿಕ ಕಾನೂನು ಪ್ರಾತಿನಿಧ್ಯವನ್ನು ಸಹ ಇವರು ಹೊಂದಿಲ್ಲ. ನ್ಯಾಯಮಂಡಳಿಗಳೂ ಆಲಿಸುತ್ತಿಲ್ಲ” ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಾಂದರ್ ಜುಲೈ 2019 ರಲ್ಲಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...