Homeಮುಖಪುಟಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

ಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

- Advertisement -
- Advertisement -

ಸೌರ ವಿದ್ಯುತ್ ಯೋಜನೆಗೆ ದಾರಿ ಮಾಡಿಕೊಡಲು ಅಸ್ಸಾಂ ಸರ್ಕಾರವು ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,157 ಎಕರೆ ಸರ್ಕಾರಿ ಜಾಗದಲ್ಲಿದ್ದ ಬಂಗಾಳಿ ಮೂಲದ 1,400 ಮುಸ್ಲಿಂ ಕುಟುಂಬಗಳ ಮನೆಗಳನ್ನು ಕೆಡವಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿಬಾಕರ್ ನಾಥ್ ಮಂಗಳವಾರ ತಿಳಿಸಿದ್ದಾಗಿ scroll.in ವರದಿ ಮಾಡಿದೆ.

ಯೋಜನೆಯ ನೇತೃತ್ವ ವಹಿಸಿರುವ ಅಸ್ಸಾಂ ವಿದ್ಯುತ್ ವಿತರಣಾ ಕಂಪನಿಗೆ ಈಗಾಗಲೇ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ನಾಥ್ ಹೇಳಿದ್ದಾರೆ.

ಧುಬ್ರಿಯ ಚಾಪರ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿರಕುಟ 1 ಮತ್ತು 2, ಚಾರುಬಖ್ರ ಜಂಗಲ್ ಬ್ಲಾಕ್ ಮತ್ತು ಸಂತೇಶಪುರ ಗ್ರಾಮಗಳಲ್ಲಿ ಕನಿಷ್ಠ ಮೂರ್ನಾಲ್ಕು ದಶಕಗಳಿಂದ ವಾಸಿಸುತ್ತಿದ್ದ ಸುಮಾರು 10,000 ಬಂಗಾಳಿ ಮೂಲದ ಮುಸ್ಲಿಮರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.

ಸ್ಥಳಾಂತರಗೊಂಡವರು ಬ್ರಹ್ಮಪುತ್ರ ನದಿಯಿಂದಾಗಿ ತಮ್ಮ ಪೂರ್ವಜರ ಮನೆಗಳನ್ನು ಕಳೆದುಕೊಂಡ ಜನರು ಎಂದು ಸ್ಥಳೀಯ ನಿವಾಸಿ ತೌಫೀಕ್ ಹುಸಿಯಾನ್ ತಿಳಿಸಿದ್ದಾರೆ.

ಏಪ್ರಿಲ್ 2ರಂದು ನಡೆದ ಜಿಲ್ಲಾ ಮಟ್ಟದ ಭೂ ಸಲಹಾ ಸಭೆಯ ಪ್ರಕಾರ, ಸರ್ಕಾರಿ ಗೋಮಾಳದ ಜಾಗವನ್ನು ಸೌರಶಕ್ತಿ ಯೋಜನೆಗಾಗಿ ಬಿಟ್ಟು ಕೊಡುವ ಪ್ರಸ್ತಾಪವನ್ನು ಮಾರ್ಚ್ 30ರಂದು ಜಿಲ್ಲಾಡಳಿತ ಸಲ್ಲಿಸಿದೆ.

ಅಸ್ಸಾಂ ವಿದ್ಯುತ್ ವಿತರಣಾ ಕಂಪನಿ ಸೌರ ವಿದ್ಯುತ್ ಸ್ಥಾವರಕ್ಕಾಗಿ ಸುಮಾರು 1,289 ಎಕರೆ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಅದಾನಿ ಸಮೂಹ ಇಲ್ಲಿ ಸೌರ ವಿದ್ಯುತ್ ಯೋಜನೆ ಕಾರ್ಯಗತಗೊಳಿಸಲಿದೆ.

ಮನೆಗಳನ್ನು ಕೆಡವುವ ಮೊದಲು ನಿವಾಸಿಗಳಿಗೆ ನೋಟಿಸ್ ನೀಡಲಾಗಿದೆ. ಭಾನುವಾರಕ್ಕಿಂತ ಮೊದಲು ಮನೆಗಳನ್ನು ಖಾಲಿ ಮಾಡುವಂತೆ ಪ್ರತಿದಿನ ಸಾರ್ವಜನಿಕ ಪ್ರಕಟಣೆಗಳನ್ನು ನೀಡಲಾಗಿತ್ತು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ.

ಸೋಮವಾರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಬುಲ್ಡೋಜರ್‌ಗಳ ಜೊತೆ ಆಗಮಿಸಿ ತೆರವು ಕಾರ್ಯಾಚರಣೆ ಆರಂಭಿಸಿದ್ದರು.

ಚಾಪರ್ ಕಂದಾಯ ವೃತ್ತದ ಅಧಿಕಾರಿ ನೀಡಿದ ತೆರವು ನೋಟಿಸ್ ಪ್ರಕಾರ, ಜಿಲ್ಲಾಡಳಿತ ಬೈಜರ್ ಅಲ್ಗಾ ಗ್ರಾಮದಲ್ಲಿ ನಿರಾಶ್ರಿತ ಜನರ ಪುನರ್ವಸತಿಗಾಗಿ 300 ಬಿಘಾ (ಸುಮಾರು 1 ಎಕರೆ) ಭೂಮಿಯನ್ನು ಮಂಜೂರು ಮಾಡಿದೆ. ಜನರು ತಮ್ಮ ವಸ್ತುಗಳನ್ನು ಸಾಗಿಸಲು ಒಂದು ಬಾರಿಯ ಪರಿಹಾರಕ್ಕಾಗಿ 50,000 ರೂ.ಗಳನ್ನು ಮೀಸಲಿಟ್ಟಿದೆ. ಕೆಲವು ನಿವಾಸಿಗಳು 50,000 ರೂ.ಗಳನ್ನು ಪಡೆದಿದ್ದಾರೆ. ಇನ್ನೂ ಕೆಲವರು ತಮಗೆ ಸಿಕ್ಕಿಲ್ಲ ಎಂದು ಹೇಳಿಕೊಂಡಿದ್ದಾರೆ.

ಆದಾಗ್ಯೂ, ಪುನರ್ವಸತಿ ಸ್ಥಳವಾದ ಬೈಜರ್ ಅಲ್ಗಾ ಗ್ರಾಮವು ತಗ್ಗು ಪ್ರದೇಶದ ನದಿಪಾತ್ರದಲ್ಲಿದೆ ಎಂದು ನಿರಾಶ್ರಿತ ಜನರು ಹೇಳಿಕೊಂಡಿದ್ದಾರೆ. ಮಳೆಗಾಲದಲ್ಲಿ ಹೆಚ್ಚಿನ ಅವಧಿ ಇಲ್ಲಿ ಪ್ರವಾಹ ಪರಿಸ್ಥಿತಿ ಇರುತ್ತದೆ ಎಂದು ಸ್ಥಳಾಂತರಗೊಂಡ ನಿವಾಸಿ ನಜ್ರುಲ್ ಇಸ್ಲಾಂ ಹೇಳಿದ್ದಾರೆ. ರಸ್ತೆ ಅಥವಾ ಯಾವುದೇ ಇತರ ಸಂವಹನವಿಲ್ಲದೆ ಜನರು ಅಲ್ಲಿಗೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು scroll.in ಹೇಳಿದೆ.

ಅನೇಕ ನಿವಾಸಿಗಳು ಭಯದಿಂದ ತಮ್ಮ ವಸ್ತುಗಳನ್ನು ಈಗಾಗಲೇ ಸ್ಥಳಾಂತರಿಸಿದ್ದಾರೆ. ಪ್ರತಿದಿನ ಜನರು ಸ್ಥಳಾಂತರಗೊಳ್ಳುತ್ತಿದ್ದಾರೆ. ಮೊದಲು ಸ್ಥಳಾಂತರಗೊಳ್ಳದವರ ಮನೆಗಳನ್ನು ಮಂಗಳವಾರ ಕೆಡವಲಾಗಿದೆ ಎಂದು ಮನೆ ಕಳೆದುಕೊಂಡಿರುವ ಹುಸಿಯಾನ್ ತಿಳಿಸಿದ್ದಾರೆ.

ಕೆಲವು ನಿವಾಸಿಗಳು ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಬುಲ್ಡೋಜರ್‌ಗಳ ಮೇಲೆ ಕಲ್ಲೆಸೆದಿದ್ದಾರೆ. ಇದರಿಂದ ಮೂರು ಬುಲ್ಡೋಜರ್‌ಗಳು ಹಾನಿಗೊಳಗಾಗಿವೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಸ್ವತಂತ್ರ ಶಾಸಕ ಮತ್ತು ರೈಜೋರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯ್ ಮಂಗಳವಾರ ತೆರವು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳಾಂತರಗೊಂಡವರಿಗೆ ಪುನರ್ವಸತಿಗಾಗಿ 165 ಎಕರೆ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ವಿನಂತಿಸುವುದಾಗಿ ಹೇಳಿದ್ದಾರೆ.

ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಗೊಗೊಯ್ ಅವರನ್ನು ಪೊಲೀಸರು ಕೆಲಕಾಲ ವಶಕ್ಕೆ ಪಡೆದಿದ್ದರು.

“ಈ ತೆರವು ಕಾರ್ಯಾಚರಣೆ ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ” ಎಂದು ಶಾಸಕ ಗೊಗೊಯ್ ಆರೋಪಿಸಿದ್ದು, “ಈ ಪ್ರಕರಣ ಗುವಾಹಟಿ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಹಿಮಂತ ಬಿಸ್ವಾ ಶರ್ಮಾ ಸರ್ಕಾರವು ಕಾನೂನುಬಾಹಿರವಾಗಿ ಮನೆಗಳನ್ನು ಕೆಡವುತ್ತಿದೆ” ಎಂದಿದ್ದಾರೆ.

ಹಿಂದೂ ಮತಗಳನ್ನು ಸೆಳೆಯಲು ಮುಸ್ಲಿಮರ ವಿರುದ್ಧ ಇಂತಹ ಸ್ಥಳಾಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ. ಏಕೆಂದರೆ ಅವರು ‘ಮುಸ್ಲಿಮರು’ ಎಂದು ಗೊಗೊಯ್ ದೂರಿದ್ದಾರೆ.

ಈ ನಡುವೆ, ಗೋಲ್‌ಪಾರ ಜಿಲ್ಲೆಯ ಮೀಸಲು ಅರಣ್ಯ ಪ್ರದೇಶವಾದ ಪೈಕರ್ ಪ್ರದೇಶದಲ್ಲಿ ಜುಲೈ 10ರಂದು ರಾಜ್ಯ ಸರ್ಕಾರವು ಮತ್ತೊಂದು ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಿದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ.

“ನಮ್ಮ ಗುರಿ ಅತಿಕ್ರಮಣಗೊಂಡ ಭೂಮಿಯನ್ನು ತೆರವುಗೊಳಿಸಿ ಸಾರ್ವಜನಿಕ ಉದ್ದೇಶಕ್ಕೆ ಬಳಸುವುದು. ನಾವು ಅಸ್ಸಾಂನ ಸ್ಥಳೀಯ ಜನರೊಂದಿಗೆ ಇದ್ದೇವೆ. ಆದರೆ, ಶಾಸಕ ಅಖಿಲ್ ಗೊಗೊಯ್ ನಿರ್ದಿಷ್ಟ ಸಮುದಾಯವನ್ನು ಪ್ರತಿನಿಧಿಸುತ್ತಿದ್ದಾರೆ. ನಮ್ಮ ರಾಜಕೀಯ ಸಿದ್ಧಾಂತದಂತೆ ನಾವು ನಮ್ಮ ಕೆಲಸವನ್ನು ಮುಂದುವರಿಸುತ್ತೇವೆ” ಎಂದು ಸಿಎಂ ತಿಳಿಸಿದ್ದಾರೆ.

ಬ್ರಹ್ಮಪುತ್ರ ನದಿಯಿಂದ ಉಂಟಾದ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡು ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದ ಚಾರುಬಖ್ರ ಜಂಗಲ್ ಬ್ಲಾಕ್ ಗ್ರಾಮದ ಸುಮಾರು 400 ನಿವಾಸಿಗಳು ಏಪ್ರಿಲ್‌ನಲ್ಲಿ ತೆರವು ನೋಟಿಸ್‌ಗಳ ವಿರುದ್ಧ ಗುವಾಹಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾಡಳಿತದ ಕ್ರಮವು ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಪ್ರಕರಣ ಇನ್ನೂ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಆಸ್ತಿಗಳನ್ನು ಶಿಕ್ಷಾರ್ಹ ಕ್ರಮವಾಗಿ ಕೆಡವುವ ಪದ್ಧತಿಯನ್ನು ಕಾನೂನುಬಾಹಿರ ಎಂದು ಹೇಳಿತ್ತು. ತೆರವು ಕಾರ್ಯಾಚರಣೆಗೂ ಮುನ್ನ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಹೇಳಿತ್ತು.

ಕಳೆದ 30 ದಿನಗಳಲ್ಲಿ ಅಸ್ಸಾಂನಲ್ಲಿ ನಡೆದ ನಾಲ್ಕನೇ ಪ್ರಮುಖ ತೆರವು ಕಾರ್ಯಾಚರಣೆ ಇದಾಗಿದೆ.

ಜೂನ್ 16 ರಂದು, ಗೋಲ್ಪಾರದಲ್ಲಿ ಅಧಿಕಾರಿಗಳು 690 ಕುಟುಂಬಗಳ ಮನೆಗಳನ್ನು ಕೆಡವಿದ್ದರು. ಅವರೆಲ್ಲವೂ ಬಂಗಾಳಿ ಮೂಲದ ಮುಸ್ಲಿಮರಿಗೆ ಸೇರಿದ್ದಾಗಿವೆ. ಹಸಿಲಾ ಬೀಲ್ ಎಂಬ ಜೌಗು ಪ್ರದೇಶದಲ್ಲಿ ಅತಿಕ್ರಮಣ ಮಾಡಲಾಗಿತ್ತು ಎಂದು ಹೇಳಲಾದ ಭೂಮಿಯಲ್ಲಿ ಅವರು ವಾಸಿಸುತ್ತಿದ್ದರು.

ಈ ಪ್ರದೇಶವನ್ನು ಜೌಗು ಪ್ರದೇಶವೆಂದು ಘೋಷಿಸುವ ಮೊದಲೇ ಅಲ್ಲಿ ವಾಸಿಸುತ್ತಿದ್ದೆವು ಎಂದು ಅನೇಕ ಕುಟುಂಬಗಳು ಹೇಳಿದ್ದಾಗಿ scroll.in ತಿಳಿಸಿದೆ.

ಜೂನ್ 30 ರಂದು ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ಬರ್ಖೇತ್ರಿ ಕಂದಾಯ ವ್ಯಾಪ್ತಿಯ ಸುಮಾರು 150 ಎಕರೆ ಅತಿಕ್ರಮಣ ತೆರವು ಮಾಡಲಾಗಿತ್ತು. ಇಲ್ಲಿಯೂ ಬಂಗಾಳಿ ಮೂಲದ ಮುಸ್ಲಿಮರ ತೊಂಬತ್ತಮೂರು ಮನೆಗಳನ್ನು ಕೆಡವಲಾಗಿದೆ.

ಕಳೆದ ಗುರುವಾರ, ಅಪ್ಪರ್ ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ 220 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ನಾಲ್ಕು ಸ್ಥಳಗಳ 77 ಎಕರೆ ಭೂಮಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿದ್ದವು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, 2016 ಮತ್ತು ಆಗಸ್ಟ್ 2024ರ ನಡುವೆ 10,620ಕ್ಕೂ ಹೆಚ್ಚು ಕುಟುಂಬಗಳನ್ನು (ಅವುಗಳಲ್ಲಿ ಹೆಚ್ಚಿನವು ಮುಸ್ಲಿಮರು) ಸರ್ಕಾರಿ ಭೂಮಿಯಿಂದ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಒದಗಿಸಿದ ಅಂಕಿಅಂಶಗಳು ತಿಳಿಸಿವೆ.

‘ಲವ್ ಜಿಹಾದ್’ ಆರೋಪ: ಹರಿಯಾಣದಲ್ಲಿ ಮುಸ್ಲಿಂ ಕುಟುಂಬದ ಮನೆಗಳಿಗೆ ಬೆಂಕಿ – ಆಸ್ತಿಪಾಸ್ತಿ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...