Homeಮುಖಪುಟಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

ಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

- Advertisement -
- Advertisement -

ಸೌರ ವಿದ್ಯುತ್ ಯೋಜನೆಗೆ ದಾರಿ ಮಾಡಿಕೊಡಲು ಅಸ್ಸಾಂ ಸರ್ಕಾರವು ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,157 ಎಕರೆ ಸರ್ಕಾರಿ ಜಾಗದಲ್ಲಿದ್ದ ಬಂಗಾಳಿ ಮೂಲದ 1,400 ಮುಸ್ಲಿಂ ಕುಟುಂಬಗಳ ಮನೆಗಳನ್ನು ಕೆಡವಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿಬಾಕರ್ ನಾಥ್ ಮಂಗಳವಾರ ತಿಳಿಸಿದ್ದಾಗಿ scroll.in ವರದಿ ಮಾಡಿದೆ.

ಯೋಜನೆಯ ನೇತೃತ್ವ ವಹಿಸಿರುವ ಅಸ್ಸಾಂ ವಿದ್ಯುತ್ ವಿತರಣಾ ಕಂಪನಿಗೆ ಈಗಾಗಲೇ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ನಾಥ್ ಹೇಳಿದ್ದಾರೆ.

ಧುಬ್ರಿಯ ಚಾಪರ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿರಕುಟ 1 ಮತ್ತು 2, ಚಾರುಬಖ್ರ ಜಂಗಲ್ ಬ್ಲಾಕ್ ಮತ್ತು ಸಂತೇಶಪುರ ಗ್ರಾಮಗಳಲ್ಲಿ ಕನಿಷ್ಠ ಮೂರ್ನಾಲ್ಕು ದಶಕಗಳಿಂದ ವಾಸಿಸುತ್ತಿದ್ದ ಸುಮಾರು 10,000 ಬಂಗಾಳಿ ಮೂಲದ ಮುಸ್ಲಿಮರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.

ಸ್ಥಳಾಂತರಗೊಂಡವರು ಬ್ರಹ್ಮಪುತ್ರ ನದಿಯಿಂದಾಗಿ ತಮ್ಮ ಪೂರ್ವಜರ ಮನೆಗಳನ್ನು ಕಳೆದುಕೊಂಡ ಜನರು ಎಂದು ಸ್ಥಳೀಯ ನಿವಾಸಿ ತೌಫೀಕ್ ಹುಸಿಯಾನ್ ತಿಳಿಸಿದ್ದಾರೆ.

ಏಪ್ರಿಲ್ 2ರಂದು ನಡೆದ ಜಿಲ್ಲಾ ಮಟ್ಟದ ಭೂ ಸಲಹಾ ಸಭೆಯ ಪ್ರಕಾರ, ಸರ್ಕಾರಿ ಗೋಮಾಳದ ಜಾಗವನ್ನು ಸೌರಶಕ್ತಿ ಯೋಜನೆಗಾಗಿ ಬಿಟ್ಟು ಕೊಡುವ ಪ್ರಸ್ತಾಪವನ್ನು ಮಾರ್ಚ್ 30ರಂದು ಜಿಲ್ಲಾಡಳಿತ ಸಲ್ಲಿಸಿದೆ.

ಅಸ್ಸಾಂ ವಿದ್ಯುತ್ ವಿತರಣಾ ಕಂಪನಿ ಸೌರ ವಿದ್ಯುತ್ ಸ್ಥಾವರಕ್ಕಾಗಿ ಸುಮಾರು 1,289 ಎಕರೆ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಅದಾನಿ ಸಮೂಹ ಇಲ್ಲಿ ಸೌರ ವಿದ್ಯುತ್ ಯೋಜನೆ ಕಾರ್ಯಗತಗೊಳಿಸಲಿದೆ.

ಮನೆಗಳನ್ನು ಕೆಡವುವ ಮೊದಲು ನಿವಾಸಿಗಳಿಗೆ ನೋಟಿಸ್ ನೀಡಲಾಗಿದೆ. ಭಾನುವಾರಕ್ಕಿಂತ ಮೊದಲು ಮನೆಗಳನ್ನು ಖಾಲಿ ಮಾಡುವಂತೆ ಪ್ರತಿದಿನ ಸಾರ್ವಜನಿಕ ಪ್ರಕಟಣೆಗಳನ್ನು ನೀಡಲಾಗಿತ್ತು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ.

ಸೋಮವಾರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಬುಲ್ಡೋಜರ್‌ಗಳ ಜೊತೆ ಆಗಮಿಸಿ ತೆರವು ಕಾರ್ಯಾಚರಣೆ ಆರಂಭಿಸಿದ್ದರು.

ಚಾಪರ್ ಕಂದಾಯ ವೃತ್ತದ ಅಧಿಕಾರಿ ನೀಡಿದ ತೆರವು ನೋಟಿಸ್ ಪ್ರಕಾರ, ಜಿಲ್ಲಾಡಳಿತ ಬೈಜರ್ ಅಲ್ಗಾ ಗ್ರಾಮದಲ್ಲಿ ನಿರಾಶ್ರಿತ ಜನರ ಪುನರ್ವಸತಿಗಾಗಿ 300 ಬಿಘಾ (ಸುಮಾರು 1 ಎಕರೆ) ಭೂಮಿಯನ್ನು ಮಂಜೂರು ಮಾಡಿದೆ. ಜನರು ತಮ್ಮ ವಸ್ತುಗಳನ್ನು ಸಾಗಿಸಲು ಒಂದು ಬಾರಿಯ ಪರಿಹಾರಕ್ಕಾಗಿ 50,000 ರೂ.ಗಳನ್ನು ಮೀಸಲಿಟ್ಟಿದೆ. ಕೆಲವು ನಿವಾಸಿಗಳು 50,000 ರೂ.ಗಳನ್ನು ಪಡೆದಿದ್ದಾರೆ. ಇನ್ನೂ ಕೆಲವರು ತಮಗೆ ಸಿಕ್ಕಿಲ್ಲ ಎಂದು ಹೇಳಿಕೊಂಡಿದ್ದಾರೆ.

ಆದಾಗ್ಯೂ, ಪುನರ್ವಸತಿ ಸ್ಥಳವಾದ ಬೈಜರ್ ಅಲ್ಗಾ ಗ್ರಾಮವು ತಗ್ಗು ಪ್ರದೇಶದ ನದಿಪಾತ್ರದಲ್ಲಿದೆ ಎಂದು ನಿರಾಶ್ರಿತ ಜನರು ಹೇಳಿಕೊಂಡಿದ್ದಾರೆ. ಮಳೆಗಾಲದಲ್ಲಿ ಹೆಚ್ಚಿನ ಅವಧಿ ಇಲ್ಲಿ ಪ್ರವಾಹ ಪರಿಸ್ಥಿತಿ ಇರುತ್ತದೆ ಎಂದು ಸ್ಥಳಾಂತರಗೊಂಡ ನಿವಾಸಿ ನಜ್ರುಲ್ ಇಸ್ಲಾಂ ಹೇಳಿದ್ದಾರೆ. ರಸ್ತೆ ಅಥವಾ ಯಾವುದೇ ಇತರ ಸಂವಹನವಿಲ್ಲದೆ ಜನರು ಅಲ್ಲಿಗೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು scroll.in ಹೇಳಿದೆ.

ಅನೇಕ ನಿವಾಸಿಗಳು ಭಯದಿಂದ ತಮ್ಮ ವಸ್ತುಗಳನ್ನು ಈಗಾಗಲೇ ಸ್ಥಳಾಂತರಿಸಿದ್ದಾರೆ. ಪ್ರತಿದಿನ ಜನರು ಸ್ಥಳಾಂತರಗೊಳ್ಳುತ್ತಿದ್ದಾರೆ. ಮೊದಲು ಸ್ಥಳಾಂತರಗೊಳ್ಳದವರ ಮನೆಗಳನ್ನು ಮಂಗಳವಾರ ಕೆಡವಲಾಗಿದೆ ಎಂದು ಮನೆ ಕಳೆದುಕೊಂಡಿರುವ ಹುಸಿಯಾನ್ ತಿಳಿಸಿದ್ದಾರೆ.

ಕೆಲವು ನಿವಾಸಿಗಳು ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಬುಲ್ಡೋಜರ್‌ಗಳ ಮೇಲೆ ಕಲ್ಲೆಸೆದಿದ್ದಾರೆ. ಇದರಿಂದ ಮೂರು ಬುಲ್ಡೋಜರ್‌ಗಳು ಹಾನಿಗೊಳಗಾಗಿವೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಸ್ವತಂತ್ರ ಶಾಸಕ ಮತ್ತು ರೈಜೋರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯ್ ಮಂಗಳವಾರ ತೆರವು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳಾಂತರಗೊಂಡವರಿಗೆ ಪುನರ್ವಸತಿಗಾಗಿ 165 ಎಕರೆ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ವಿನಂತಿಸುವುದಾಗಿ ಹೇಳಿದ್ದಾರೆ.

ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಗೊಗೊಯ್ ಅವರನ್ನು ಪೊಲೀಸರು ಕೆಲಕಾಲ ವಶಕ್ಕೆ ಪಡೆದಿದ್ದರು.

“ಈ ತೆರವು ಕಾರ್ಯಾಚರಣೆ ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ” ಎಂದು ಶಾಸಕ ಗೊಗೊಯ್ ಆರೋಪಿಸಿದ್ದು, “ಈ ಪ್ರಕರಣ ಗುವಾಹಟಿ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಹಿಮಂತ ಬಿಸ್ವಾ ಶರ್ಮಾ ಸರ್ಕಾರವು ಕಾನೂನುಬಾಹಿರವಾಗಿ ಮನೆಗಳನ್ನು ಕೆಡವುತ್ತಿದೆ” ಎಂದಿದ್ದಾರೆ.

ಹಿಂದೂ ಮತಗಳನ್ನು ಸೆಳೆಯಲು ಮುಸ್ಲಿಮರ ವಿರುದ್ಧ ಇಂತಹ ಸ್ಥಳಾಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ. ಏಕೆಂದರೆ ಅವರು ‘ಮುಸ್ಲಿಮರು’ ಎಂದು ಗೊಗೊಯ್ ದೂರಿದ್ದಾರೆ.

ಈ ನಡುವೆ, ಗೋಲ್‌ಪಾರ ಜಿಲ್ಲೆಯ ಮೀಸಲು ಅರಣ್ಯ ಪ್ರದೇಶವಾದ ಪೈಕರ್ ಪ್ರದೇಶದಲ್ಲಿ ಜುಲೈ 10ರಂದು ರಾಜ್ಯ ಸರ್ಕಾರವು ಮತ್ತೊಂದು ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಿದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ.

“ನಮ್ಮ ಗುರಿ ಅತಿಕ್ರಮಣಗೊಂಡ ಭೂಮಿಯನ್ನು ತೆರವುಗೊಳಿಸಿ ಸಾರ್ವಜನಿಕ ಉದ್ದೇಶಕ್ಕೆ ಬಳಸುವುದು. ನಾವು ಅಸ್ಸಾಂನ ಸ್ಥಳೀಯ ಜನರೊಂದಿಗೆ ಇದ್ದೇವೆ. ಆದರೆ, ಶಾಸಕ ಅಖಿಲ್ ಗೊಗೊಯ್ ನಿರ್ದಿಷ್ಟ ಸಮುದಾಯವನ್ನು ಪ್ರತಿನಿಧಿಸುತ್ತಿದ್ದಾರೆ. ನಮ್ಮ ರಾಜಕೀಯ ಸಿದ್ಧಾಂತದಂತೆ ನಾವು ನಮ್ಮ ಕೆಲಸವನ್ನು ಮುಂದುವರಿಸುತ್ತೇವೆ” ಎಂದು ಸಿಎಂ ತಿಳಿಸಿದ್ದಾರೆ.

ಬ್ರಹ್ಮಪುತ್ರ ನದಿಯಿಂದ ಉಂಟಾದ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡು ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದ ಚಾರುಬಖ್ರ ಜಂಗಲ್ ಬ್ಲಾಕ್ ಗ್ರಾಮದ ಸುಮಾರು 400 ನಿವಾಸಿಗಳು ಏಪ್ರಿಲ್‌ನಲ್ಲಿ ತೆರವು ನೋಟಿಸ್‌ಗಳ ವಿರುದ್ಧ ಗುವಾಹಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾಡಳಿತದ ಕ್ರಮವು ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಪ್ರಕರಣ ಇನ್ನೂ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಆಸ್ತಿಗಳನ್ನು ಶಿಕ್ಷಾರ್ಹ ಕ್ರಮವಾಗಿ ಕೆಡವುವ ಪದ್ಧತಿಯನ್ನು ಕಾನೂನುಬಾಹಿರ ಎಂದು ಹೇಳಿತ್ತು. ತೆರವು ಕಾರ್ಯಾಚರಣೆಗೂ ಮುನ್ನ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಹೇಳಿತ್ತು.

ಕಳೆದ 30 ದಿನಗಳಲ್ಲಿ ಅಸ್ಸಾಂನಲ್ಲಿ ನಡೆದ ನಾಲ್ಕನೇ ಪ್ರಮುಖ ತೆರವು ಕಾರ್ಯಾಚರಣೆ ಇದಾಗಿದೆ.

ಜೂನ್ 16 ರಂದು, ಗೋಲ್ಪಾರದಲ್ಲಿ ಅಧಿಕಾರಿಗಳು 690 ಕುಟುಂಬಗಳ ಮನೆಗಳನ್ನು ಕೆಡವಿದ್ದರು. ಅವರೆಲ್ಲವೂ ಬಂಗಾಳಿ ಮೂಲದ ಮುಸ್ಲಿಮರಿಗೆ ಸೇರಿದ್ದಾಗಿವೆ. ಹಸಿಲಾ ಬೀಲ್ ಎಂಬ ಜೌಗು ಪ್ರದೇಶದಲ್ಲಿ ಅತಿಕ್ರಮಣ ಮಾಡಲಾಗಿತ್ತು ಎಂದು ಹೇಳಲಾದ ಭೂಮಿಯಲ್ಲಿ ಅವರು ವಾಸಿಸುತ್ತಿದ್ದರು.

ಈ ಪ್ರದೇಶವನ್ನು ಜೌಗು ಪ್ರದೇಶವೆಂದು ಘೋಷಿಸುವ ಮೊದಲೇ ಅಲ್ಲಿ ವಾಸಿಸುತ್ತಿದ್ದೆವು ಎಂದು ಅನೇಕ ಕುಟುಂಬಗಳು ಹೇಳಿದ್ದಾಗಿ scroll.in ತಿಳಿಸಿದೆ.

ಜೂನ್ 30 ರಂದು ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ಬರ್ಖೇತ್ರಿ ಕಂದಾಯ ವ್ಯಾಪ್ತಿಯ ಸುಮಾರು 150 ಎಕರೆ ಅತಿಕ್ರಮಣ ತೆರವು ಮಾಡಲಾಗಿತ್ತು. ಇಲ್ಲಿಯೂ ಬಂಗಾಳಿ ಮೂಲದ ಮುಸ್ಲಿಮರ ತೊಂಬತ್ತಮೂರು ಮನೆಗಳನ್ನು ಕೆಡವಲಾಗಿದೆ.

ಕಳೆದ ಗುರುವಾರ, ಅಪ್ಪರ್ ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ 220 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ನಾಲ್ಕು ಸ್ಥಳಗಳ 77 ಎಕರೆ ಭೂಮಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿದ್ದವು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, 2016 ಮತ್ತು ಆಗಸ್ಟ್ 2024ರ ನಡುವೆ 10,620ಕ್ಕೂ ಹೆಚ್ಚು ಕುಟುಂಬಗಳನ್ನು (ಅವುಗಳಲ್ಲಿ ಹೆಚ್ಚಿನವು ಮುಸ್ಲಿಮರು) ಸರ್ಕಾರಿ ಭೂಮಿಯಿಂದ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಒದಗಿಸಿದ ಅಂಕಿಅಂಶಗಳು ತಿಳಿಸಿವೆ.

‘ಲವ್ ಜಿಹಾದ್’ ಆರೋಪ: ಹರಿಯಾಣದಲ್ಲಿ ಮುಸ್ಲಿಂ ಕುಟುಂಬದ ಮನೆಗಳಿಗೆ ಬೆಂಕಿ – ಆಸ್ತಿಪಾಸ್ತಿ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...