Homeಮುಖಪುಟಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

ಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

- Advertisement -
- Advertisement -

ಸೌರ ವಿದ್ಯುತ್ ಯೋಜನೆಗೆ ದಾರಿ ಮಾಡಿಕೊಡಲು ಅಸ್ಸಾಂ ಸರ್ಕಾರವು ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,157 ಎಕರೆ ಸರ್ಕಾರಿ ಜಾಗದಲ್ಲಿದ್ದ ಬಂಗಾಳಿ ಮೂಲದ 1,400 ಮುಸ್ಲಿಂ ಕುಟುಂಬಗಳ ಮನೆಗಳನ್ನು ಕೆಡವಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿಬಾಕರ್ ನಾಥ್ ಮಂಗಳವಾರ ತಿಳಿಸಿದ್ದಾಗಿ scroll.in ವರದಿ ಮಾಡಿದೆ.

ಯೋಜನೆಯ ನೇತೃತ್ವ ವಹಿಸಿರುವ ಅಸ್ಸಾಂ ವಿದ್ಯುತ್ ವಿತರಣಾ ಕಂಪನಿಗೆ ಈಗಾಗಲೇ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ನಾಥ್ ಹೇಳಿದ್ದಾರೆ.

ಧುಬ್ರಿಯ ಚಾಪರ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿರಕುಟ 1 ಮತ್ತು 2, ಚಾರುಬಖ್ರ ಜಂಗಲ್ ಬ್ಲಾಕ್ ಮತ್ತು ಸಂತೇಶಪುರ ಗ್ರಾಮಗಳಲ್ಲಿ ಕನಿಷ್ಠ ಮೂರ್ನಾಲ್ಕು ದಶಕಗಳಿಂದ ವಾಸಿಸುತ್ತಿದ್ದ ಸುಮಾರು 10,000 ಬಂಗಾಳಿ ಮೂಲದ ಮುಸ್ಲಿಮರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.

ಸ್ಥಳಾಂತರಗೊಂಡವರು ಬ್ರಹ್ಮಪುತ್ರ ನದಿಯಿಂದಾಗಿ ತಮ್ಮ ಪೂರ್ವಜರ ಮನೆಗಳನ್ನು ಕಳೆದುಕೊಂಡ ಜನರು ಎಂದು ಸ್ಥಳೀಯ ನಿವಾಸಿ ತೌಫೀಕ್ ಹುಸಿಯಾನ್ ತಿಳಿಸಿದ್ದಾರೆ.

ಏಪ್ರಿಲ್ 2ರಂದು ನಡೆದ ಜಿಲ್ಲಾ ಮಟ್ಟದ ಭೂ ಸಲಹಾ ಸಭೆಯ ಪ್ರಕಾರ, ಸರ್ಕಾರಿ ಗೋಮಾಳದ ಜಾಗವನ್ನು ಸೌರಶಕ್ತಿ ಯೋಜನೆಗಾಗಿ ಬಿಟ್ಟು ಕೊಡುವ ಪ್ರಸ್ತಾಪವನ್ನು ಮಾರ್ಚ್ 30ರಂದು ಜಿಲ್ಲಾಡಳಿತ ಸಲ್ಲಿಸಿದೆ.

ಅಸ್ಸಾಂ ವಿದ್ಯುತ್ ವಿತರಣಾ ಕಂಪನಿ ಸೌರ ವಿದ್ಯುತ್ ಸ್ಥಾವರಕ್ಕಾಗಿ ಸುಮಾರು 1,289 ಎಕರೆ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಅದಾನಿ ಸಮೂಹ ಇಲ್ಲಿ ಸೌರ ವಿದ್ಯುತ್ ಯೋಜನೆ ಕಾರ್ಯಗತಗೊಳಿಸಲಿದೆ.

ಮನೆಗಳನ್ನು ಕೆಡವುವ ಮೊದಲು ನಿವಾಸಿಗಳಿಗೆ ನೋಟಿಸ್ ನೀಡಲಾಗಿದೆ. ಭಾನುವಾರಕ್ಕಿಂತ ಮೊದಲು ಮನೆಗಳನ್ನು ಖಾಲಿ ಮಾಡುವಂತೆ ಪ್ರತಿದಿನ ಸಾರ್ವಜನಿಕ ಪ್ರಕಟಣೆಗಳನ್ನು ನೀಡಲಾಗಿತ್ತು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ.

ಸೋಮವಾರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಬುಲ್ಡೋಜರ್‌ಗಳ ಜೊತೆ ಆಗಮಿಸಿ ತೆರವು ಕಾರ್ಯಾಚರಣೆ ಆರಂಭಿಸಿದ್ದರು.

ಚಾಪರ್ ಕಂದಾಯ ವೃತ್ತದ ಅಧಿಕಾರಿ ನೀಡಿದ ತೆರವು ನೋಟಿಸ್ ಪ್ರಕಾರ, ಜಿಲ್ಲಾಡಳಿತ ಬೈಜರ್ ಅಲ್ಗಾ ಗ್ರಾಮದಲ್ಲಿ ನಿರಾಶ್ರಿತ ಜನರ ಪುನರ್ವಸತಿಗಾಗಿ 300 ಬಿಘಾ (ಸುಮಾರು 1 ಎಕರೆ) ಭೂಮಿಯನ್ನು ಮಂಜೂರು ಮಾಡಿದೆ. ಜನರು ತಮ್ಮ ವಸ್ತುಗಳನ್ನು ಸಾಗಿಸಲು ಒಂದು ಬಾರಿಯ ಪರಿಹಾರಕ್ಕಾಗಿ 50,000 ರೂ.ಗಳನ್ನು ಮೀಸಲಿಟ್ಟಿದೆ. ಕೆಲವು ನಿವಾಸಿಗಳು 50,000 ರೂ.ಗಳನ್ನು ಪಡೆದಿದ್ದಾರೆ. ಇನ್ನೂ ಕೆಲವರು ತಮಗೆ ಸಿಕ್ಕಿಲ್ಲ ಎಂದು ಹೇಳಿಕೊಂಡಿದ್ದಾರೆ.

ಆದಾಗ್ಯೂ, ಪುನರ್ವಸತಿ ಸ್ಥಳವಾದ ಬೈಜರ್ ಅಲ್ಗಾ ಗ್ರಾಮವು ತಗ್ಗು ಪ್ರದೇಶದ ನದಿಪಾತ್ರದಲ್ಲಿದೆ ಎಂದು ನಿರಾಶ್ರಿತ ಜನರು ಹೇಳಿಕೊಂಡಿದ್ದಾರೆ. ಮಳೆಗಾಲದಲ್ಲಿ ಹೆಚ್ಚಿನ ಅವಧಿ ಇಲ್ಲಿ ಪ್ರವಾಹ ಪರಿಸ್ಥಿತಿ ಇರುತ್ತದೆ ಎಂದು ಸ್ಥಳಾಂತರಗೊಂಡ ನಿವಾಸಿ ನಜ್ರುಲ್ ಇಸ್ಲಾಂ ಹೇಳಿದ್ದಾರೆ. ರಸ್ತೆ ಅಥವಾ ಯಾವುದೇ ಇತರ ಸಂವಹನವಿಲ್ಲದೆ ಜನರು ಅಲ್ಲಿಗೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು scroll.in ಹೇಳಿದೆ.

ಅನೇಕ ನಿವಾಸಿಗಳು ಭಯದಿಂದ ತಮ್ಮ ವಸ್ತುಗಳನ್ನು ಈಗಾಗಲೇ ಸ್ಥಳಾಂತರಿಸಿದ್ದಾರೆ. ಪ್ರತಿದಿನ ಜನರು ಸ್ಥಳಾಂತರಗೊಳ್ಳುತ್ತಿದ್ದಾರೆ. ಮೊದಲು ಸ್ಥಳಾಂತರಗೊಳ್ಳದವರ ಮನೆಗಳನ್ನು ಮಂಗಳವಾರ ಕೆಡವಲಾಗಿದೆ ಎಂದು ಮನೆ ಕಳೆದುಕೊಂಡಿರುವ ಹುಸಿಯಾನ್ ತಿಳಿಸಿದ್ದಾರೆ.

ಕೆಲವು ನಿವಾಸಿಗಳು ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಬುಲ್ಡೋಜರ್‌ಗಳ ಮೇಲೆ ಕಲ್ಲೆಸೆದಿದ್ದಾರೆ. ಇದರಿಂದ ಮೂರು ಬುಲ್ಡೋಜರ್‌ಗಳು ಹಾನಿಗೊಳಗಾಗಿವೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಸ್ವತಂತ್ರ ಶಾಸಕ ಮತ್ತು ರೈಜೋರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯ್ ಮಂಗಳವಾರ ತೆರವು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳಾಂತರಗೊಂಡವರಿಗೆ ಪುನರ್ವಸತಿಗಾಗಿ 165 ಎಕರೆ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ವಿನಂತಿಸುವುದಾಗಿ ಹೇಳಿದ್ದಾರೆ.

ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಗೊಗೊಯ್ ಅವರನ್ನು ಪೊಲೀಸರು ಕೆಲಕಾಲ ವಶಕ್ಕೆ ಪಡೆದಿದ್ದರು.

“ಈ ತೆರವು ಕಾರ್ಯಾಚರಣೆ ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ” ಎಂದು ಶಾಸಕ ಗೊಗೊಯ್ ಆರೋಪಿಸಿದ್ದು, “ಈ ಪ್ರಕರಣ ಗುವಾಹಟಿ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಹಿಮಂತ ಬಿಸ್ವಾ ಶರ್ಮಾ ಸರ್ಕಾರವು ಕಾನೂನುಬಾಹಿರವಾಗಿ ಮನೆಗಳನ್ನು ಕೆಡವುತ್ತಿದೆ” ಎಂದಿದ್ದಾರೆ.

ಹಿಂದೂ ಮತಗಳನ್ನು ಸೆಳೆಯಲು ಮುಸ್ಲಿಮರ ವಿರುದ್ಧ ಇಂತಹ ಸ್ಥಳಾಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ. ಏಕೆಂದರೆ ಅವರು ‘ಮುಸ್ಲಿಮರು’ ಎಂದು ಗೊಗೊಯ್ ದೂರಿದ್ದಾರೆ.

ಈ ನಡುವೆ, ಗೋಲ್‌ಪಾರ ಜಿಲ್ಲೆಯ ಮೀಸಲು ಅರಣ್ಯ ಪ್ರದೇಶವಾದ ಪೈಕರ್ ಪ್ರದೇಶದಲ್ಲಿ ಜುಲೈ 10ರಂದು ರಾಜ್ಯ ಸರ್ಕಾರವು ಮತ್ತೊಂದು ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಿದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ.

“ನಮ್ಮ ಗುರಿ ಅತಿಕ್ರಮಣಗೊಂಡ ಭೂಮಿಯನ್ನು ತೆರವುಗೊಳಿಸಿ ಸಾರ್ವಜನಿಕ ಉದ್ದೇಶಕ್ಕೆ ಬಳಸುವುದು. ನಾವು ಅಸ್ಸಾಂನ ಸ್ಥಳೀಯ ಜನರೊಂದಿಗೆ ಇದ್ದೇವೆ. ಆದರೆ, ಶಾಸಕ ಅಖಿಲ್ ಗೊಗೊಯ್ ನಿರ್ದಿಷ್ಟ ಸಮುದಾಯವನ್ನು ಪ್ರತಿನಿಧಿಸುತ್ತಿದ್ದಾರೆ. ನಮ್ಮ ರಾಜಕೀಯ ಸಿದ್ಧಾಂತದಂತೆ ನಾವು ನಮ್ಮ ಕೆಲಸವನ್ನು ಮುಂದುವರಿಸುತ್ತೇವೆ” ಎಂದು ಸಿಎಂ ತಿಳಿಸಿದ್ದಾರೆ.

ಬ್ರಹ್ಮಪುತ್ರ ನದಿಯಿಂದ ಉಂಟಾದ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡು ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದ ಚಾರುಬಖ್ರ ಜಂಗಲ್ ಬ್ಲಾಕ್ ಗ್ರಾಮದ ಸುಮಾರು 400 ನಿವಾಸಿಗಳು ಏಪ್ರಿಲ್‌ನಲ್ಲಿ ತೆರವು ನೋಟಿಸ್‌ಗಳ ವಿರುದ್ಧ ಗುವಾಹಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾಡಳಿತದ ಕ್ರಮವು ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಪ್ರಕರಣ ಇನ್ನೂ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಆಸ್ತಿಗಳನ್ನು ಶಿಕ್ಷಾರ್ಹ ಕ್ರಮವಾಗಿ ಕೆಡವುವ ಪದ್ಧತಿಯನ್ನು ಕಾನೂನುಬಾಹಿರ ಎಂದು ಹೇಳಿತ್ತು. ತೆರವು ಕಾರ್ಯಾಚರಣೆಗೂ ಮುನ್ನ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಹೇಳಿತ್ತು.

ಕಳೆದ 30 ದಿನಗಳಲ್ಲಿ ಅಸ್ಸಾಂನಲ್ಲಿ ನಡೆದ ನಾಲ್ಕನೇ ಪ್ರಮುಖ ತೆರವು ಕಾರ್ಯಾಚರಣೆ ಇದಾಗಿದೆ.

ಜೂನ್ 16 ರಂದು, ಗೋಲ್ಪಾರದಲ್ಲಿ ಅಧಿಕಾರಿಗಳು 690 ಕುಟುಂಬಗಳ ಮನೆಗಳನ್ನು ಕೆಡವಿದ್ದರು. ಅವರೆಲ್ಲವೂ ಬಂಗಾಳಿ ಮೂಲದ ಮುಸ್ಲಿಮರಿಗೆ ಸೇರಿದ್ದಾಗಿವೆ. ಹಸಿಲಾ ಬೀಲ್ ಎಂಬ ಜೌಗು ಪ್ರದೇಶದಲ್ಲಿ ಅತಿಕ್ರಮಣ ಮಾಡಲಾಗಿತ್ತು ಎಂದು ಹೇಳಲಾದ ಭೂಮಿಯಲ್ಲಿ ಅವರು ವಾಸಿಸುತ್ತಿದ್ದರು.

ಈ ಪ್ರದೇಶವನ್ನು ಜೌಗು ಪ್ರದೇಶವೆಂದು ಘೋಷಿಸುವ ಮೊದಲೇ ಅಲ್ಲಿ ವಾಸಿಸುತ್ತಿದ್ದೆವು ಎಂದು ಅನೇಕ ಕುಟುಂಬಗಳು ಹೇಳಿದ್ದಾಗಿ scroll.in ತಿಳಿಸಿದೆ.

ಜೂನ್ 30 ರಂದು ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ಬರ್ಖೇತ್ರಿ ಕಂದಾಯ ವ್ಯಾಪ್ತಿಯ ಸುಮಾರು 150 ಎಕರೆ ಅತಿಕ್ರಮಣ ತೆರವು ಮಾಡಲಾಗಿತ್ತು. ಇಲ್ಲಿಯೂ ಬಂಗಾಳಿ ಮೂಲದ ಮುಸ್ಲಿಮರ ತೊಂಬತ್ತಮೂರು ಮನೆಗಳನ್ನು ಕೆಡವಲಾಗಿದೆ.

ಕಳೆದ ಗುರುವಾರ, ಅಪ್ಪರ್ ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ 220 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ನಾಲ್ಕು ಸ್ಥಳಗಳ 77 ಎಕರೆ ಭೂಮಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿದ್ದವು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, 2016 ಮತ್ತು ಆಗಸ್ಟ್ 2024ರ ನಡುವೆ 10,620ಕ್ಕೂ ಹೆಚ್ಚು ಕುಟುಂಬಗಳನ್ನು (ಅವುಗಳಲ್ಲಿ ಹೆಚ್ಚಿನವು ಮುಸ್ಲಿಮರು) ಸರ್ಕಾರಿ ಭೂಮಿಯಿಂದ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಒದಗಿಸಿದ ಅಂಕಿಅಂಶಗಳು ತಿಳಿಸಿವೆ.

‘ಲವ್ ಜಿಹಾದ್’ ಆರೋಪ: ಹರಿಯಾಣದಲ್ಲಿ ಮುಸ್ಲಿಂ ಕುಟುಂಬದ ಮನೆಗಳಿಗೆ ಬೆಂಕಿ – ಆಸ್ತಿಪಾಸ್ತಿ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...