Homeಮುಖಪುಟಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

ಅಸ್ಸಾಂ: 1,400 ಬಂಗಾಳಿ ಮುಸ್ಲಿಂ ಕುಟುಂಬಗಳ ಮನೆಗಳು ನೆಲಸಮ

- Advertisement -
- Advertisement -

ಸೌರ ವಿದ್ಯುತ್ ಯೋಜನೆಗೆ ದಾರಿ ಮಾಡಿಕೊಡಲು ಅಸ್ಸಾಂ ಸರ್ಕಾರವು ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,157 ಎಕರೆ ಸರ್ಕಾರಿ ಜಾಗದಲ್ಲಿದ್ದ ಬಂಗಾಳಿ ಮೂಲದ 1,400 ಮುಸ್ಲಿಂ ಕುಟುಂಬಗಳ ಮನೆಗಳನ್ನು ಕೆಡವಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದಿಬಾಕರ್ ನಾಥ್ ಮಂಗಳವಾರ ತಿಳಿಸಿದ್ದಾಗಿ scroll.in ವರದಿ ಮಾಡಿದೆ.

ಯೋಜನೆಯ ನೇತೃತ್ವ ವಹಿಸಿರುವ ಅಸ್ಸಾಂ ವಿದ್ಯುತ್ ವಿತರಣಾ ಕಂಪನಿಗೆ ಈಗಾಗಲೇ ಭೂಮಿ ಹಂಚಿಕೆ ಮಾಡಲಾಗಿದೆ ಎಂದು ನಾಥ್ ಹೇಳಿದ್ದಾರೆ.

ಧುಬ್ರಿಯ ಚಾಪರ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿರಕುಟ 1 ಮತ್ತು 2, ಚಾರುಬಖ್ರ ಜಂಗಲ್ ಬ್ಲಾಕ್ ಮತ್ತು ಸಂತೇಶಪುರ ಗ್ರಾಮಗಳಲ್ಲಿ ಕನಿಷ್ಠ ಮೂರ್ನಾಲ್ಕು ದಶಕಗಳಿಂದ ವಾಸಿಸುತ್ತಿದ್ದ ಸುಮಾರು 10,000 ಬಂಗಾಳಿ ಮೂಲದ ಮುಸ್ಲಿಮರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.

ಸ್ಥಳಾಂತರಗೊಂಡವರು ಬ್ರಹ್ಮಪುತ್ರ ನದಿಯಿಂದಾಗಿ ತಮ್ಮ ಪೂರ್ವಜರ ಮನೆಗಳನ್ನು ಕಳೆದುಕೊಂಡ ಜನರು ಎಂದು ಸ್ಥಳೀಯ ನಿವಾಸಿ ತೌಫೀಕ್ ಹುಸಿಯಾನ್ ತಿಳಿಸಿದ್ದಾರೆ.

ಏಪ್ರಿಲ್ 2ರಂದು ನಡೆದ ಜಿಲ್ಲಾ ಮಟ್ಟದ ಭೂ ಸಲಹಾ ಸಭೆಯ ಪ್ರಕಾರ, ಸರ್ಕಾರಿ ಗೋಮಾಳದ ಜಾಗವನ್ನು ಸೌರಶಕ್ತಿ ಯೋಜನೆಗಾಗಿ ಬಿಟ್ಟು ಕೊಡುವ ಪ್ರಸ್ತಾಪವನ್ನು ಮಾರ್ಚ್ 30ರಂದು ಜಿಲ್ಲಾಡಳಿತ ಸಲ್ಲಿಸಿದೆ.

ಅಸ್ಸಾಂ ವಿದ್ಯುತ್ ವಿತರಣಾ ಕಂಪನಿ ಸೌರ ವಿದ್ಯುತ್ ಸ್ಥಾವರಕ್ಕಾಗಿ ಸುಮಾರು 1,289 ಎಕರೆ ಸರ್ಕಾರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಅದಾನಿ ಸಮೂಹ ಇಲ್ಲಿ ಸೌರ ವಿದ್ಯುತ್ ಯೋಜನೆ ಕಾರ್ಯಗತಗೊಳಿಸಲಿದೆ.

ಮನೆಗಳನ್ನು ಕೆಡವುವ ಮೊದಲು ನಿವಾಸಿಗಳಿಗೆ ನೋಟಿಸ್ ನೀಡಲಾಗಿದೆ. ಭಾನುವಾರಕ್ಕಿಂತ ಮೊದಲು ಮನೆಗಳನ್ನು ಖಾಲಿ ಮಾಡುವಂತೆ ಪ್ರತಿದಿನ ಸಾರ್ವಜನಿಕ ಪ್ರಕಟಣೆಗಳನ್ನು ನೀಡಲಾಗಿತ್ತು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ.

ಸೋಮವಾರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಬುಲ್ಡೋಜರ್‌ಗಳ ಜೊತೆ ಆಗಮಿಸಿ ತೆರವು ಕಾರ್ಯಾಚರಣೆ ಆರಂಭಿಸಿದ್ದರು.

ಚಾಪರ್ ಕಂದಾಯ ವೃತ್ತದ ಅಧಿಕಾರಿ ನೀಡಿದ ತೆರವು ನೋಟಿಸ್ ಪ್ರಕಾರ, ಜಿಲ್ಲಾಡಳಿತ ಬೈಜರ್ ಅಲ್ಗಾ ಗ್ರಾಮದಲ್ಲಿ ನಿರಾಶ್ರಿತ ಜನರ ಪುನರ್ವಸತಿಗಾಗಿ 300 ಬಿಘಾ (ಸುಮಾರು 1 ಎಕರೆ) ಭೂಮಿಯನ್ನು ಮಂಜೂರು ಮಾಡಿದೆ. ಜನರು ತಮ್ಮ ವಸ್ತುಗಳನ್ನು ಸಾಗಿಸಲು ಒಂದು ಬಾರಿಯ ಪರಿಹಾರಕ್ಕಾಗಿ 50,000 ರೂ.ಗಳನ್ನು ಮೀಸಲಿಟ್ಟಿದೆ. ಕೆಲವು ನಿವಾಸಿಗಳು 50,000 ರೂ.ಗಳನ್ನು ಪಡೆದಿದ್ದಾರೆ. ಇನ್ನೂ ಕೆಲವರು ತಮಗೆ ಸಿಕ್ಕಿಲ್ಲ ಎಂದು ಹೇಳಿಕೊಂಡಿದ್ದಾರೆ.

ಆದಾಗ್ಯೂ, ಪುನರ್ವಸತಿ ಸ್ಥಳವಾದ ಬೈಜರ್ ಅಲ್ಗಾ ಗ್ರಾಮವು ತಗ್ಗು ಪ್ರದೇಶದ ನದಿಪಾತ್ರದಲ್ಲಿದೆ ಎಂದು ನಿರಾಶ್ರಿತ ಜನರು ಹೇಳಿಕೊಂಡಿದ್ದಾರೆ. ಮಳೆಗಾಲದಲ್ಲಿ ಹೆಚ್ಚಿನ ಅವಧಿ ಇಲ್ಲಿ ಪ್ರವಾಹ ಪರಿಸ್ಥಿತಿ ಇರುತ್ತದೆ ಎಂದು ಸ್ಥಳಾಂತರಗೊಂಡ ನಿವಾಸಿ ನಜ್ರುಲ್ ಇಸ್ಲಾಂ ಹೇಳಿದ್ದಾರೆ. ರಸ್ತೆ ಅಥವಾ ಯಾವುದೇ ಇತರ ಸಂವಹನವಿಲ್ಲದೆ ಜನರು ಅಲ್ಲಿಗೆ ಹೋಗಲು ಹಿಂಜರಿಯುತ್ತಿದ್ದಾರೆ ಎಂದು scroll.in ಹೇಳಿದೆ.

ಅನೇಕ ನಿವಾಸಿಗಳು ಭಯದಿಂದ ತಮ್ಮ ವಸ್ತುಗಳನ್ನು ಈಗಾಗಲೇ ಸ್ಥಳಾಂತರಿಸಿದ್ದಾರೆ. ಪ್ರತಿದಿನ ಜನರು ಸ್ಥಳಾಂತರಗೊಳ್ಳುತ್ತಿದ್ದಾರೆ. ಮೊದಲು ಸ್ಥಳಾಂತರಗೊಳ್ಳದವರ ಮನೆಗಳನ್ನು ಮಂಗಳವಾರ ಕೆಡವಲಾಗಿದೆ ಎಂದು ಮನೆ ಕಳೆದುಕೊಂಡಿರುವ ಹುಸಿಯಾನ್ ತಿಳಿಸಿದ್ದಾರೆ.

ಕೆಲವು ನಿವಾಸಿಗಳು ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಪ್ರತಿಭಟಿಸಿದ್ದಾರೆ. ಬುಲ್ಡೋಜರ್‌ಗಳ ಮೇಲೆ ಕಲ್ಲೆಸೆದಿದ್ದಾರೆ. ಇದರಿಂದ ಮೂರು ಬುಲ್ಡೋಜರ್‌ಗಳು ಹಾನಿಗೊಳಗಾಗಿವೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಸ್ವತಂತ್ರ ಶಾಸಕ ಮತ್ತು ರೈಜೋರ್ ದಳದ ಮುಖ್ಯಸ್ಥ ಅಖಿಲ್ ಗೊಗೊಯ್ ಮಂಗಳವಾರ ತೆರವು ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳಾಂತರಗೊಂಡವರಿಗೆ ಪುನರ್ವಸತಿಗಾಗಿ 165 ಎಕರೆ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ವಿನಂತಿಸುವುದಾಗಿ ಹೇಳಿದ್ದಾರೆ.

ತೆರವು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಗೊಗೊಯ್ ಅವರನ್ನು ಪೊಲೀಸರು ಕೆಲಕಾಲ ವಶಕ್ಕೆ ಪಡೆದಿದ್ದರು.

“ಈ ತೆರವು ಕಾರ್ಯಾಚರಣೆ ಕಾನೂನುಬಾಹಿರ ಮತ್ತು ಸಂವಿಧಾನಬಾಹಿರ” ಎಂದು ಶಾಸಕ ಗೊಗೊಯ್ ಆರೋಪಿಸಿದ್ದು, “ಈ ಪ್ರಕರಣ ಗುವಾಹಟಿ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಹಿಮಂತ ಬಿಸ್ವಾ ಶರ್ಮಾ ಸರ್ಕಾರವು ಕಾನೂನುಬಾಹಿರವಾಗಿ ಮನೆಗಳನ್ನು ಕೆಡವುತ್ತಿದೆ” ಎಂದಿದ್ದಾರೆ.

ಹಿಂದೂ ಮತಗಳನ್ನು ಸೆಳೆಯಲು ಮುಸ್ಲಿಮರ ವಿರುದ್ಧ ಇಂತಹ ಸ್ಥಳಾಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ. ಏಕೆಂದರೆ ಅವರು ‘ಮುಸ್ಲಿಮರು’ ಎಂದು ಗೊಗೊಯ್ ದೂರಿದ್ದಾರೆ.

ಈ ನಡುವೆ, ಗೋಲ್‌ಪಾರ ಜಿಲ್ಲೆಯ ಮೀಸಲು ಅರಣ್ಯ ಪ್ರದೇಶವಾದ ಪೈಕರ್ ಪ್ರದೇಶದಲ್ಲಿ ಜುಲೈ 10ರಂದು ರಾಜ್ಯ ಸರ್ಕಾರವು ಮತ್ತೊಂದು ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಿದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ.

“ನಮ್ಮ ಗುರಿ ಅತಿಕ್ರಮಣಗೊಂಡ ಭೂಮಿಯನ್ನು ತೆರವುಗೊಳಿಸಿ ಸಾರ್ವಜನಿಕ ಉದ್ದೇಶಕ್ಕೆ ಬಳಸುವುದು. ನಾವು ಅಸ್ಸಾಂನ ಸ್ಥಳೀಯ ಜನರೊಂದಿಗೆ ಇದ್ದೇವೆ. ಆದರೆ, ಶಾಸಕ ಅಖಿಲ್ ಗೊಗೊಯ್ ನಿರ್ದಿಷ್ಟ ಸಮುದಾಯವನ್ನು ಪ್ರತಿನಿಧಿಸುತ್ತಿದ್ದಾರೆ. ನಮ್ಮ ರಾಜಕೀಯ ಸಿದ್ಧಾಂತದಂತೆ ನಾವು ನಮ್ಮ ಕೆಲಸವನ್ನು ಮುಂದುವರಿಸುತ್ತೇವೆ” ಎಂದು ಸಿಎಂ ತಿಳಿಸಿದ್ದಾರೆ.

ಬ್ರಹ್ಮಪುತ್ರ ನದಿಯಿಂದ ಉಂಟಾದ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡು ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿದ್ದ ಚಾರುಬಖ್ರ ಜಂಗಲ್ ಬ್ಲಾಕ್ ಗ್ರಾಮದ ಸುಮಾರು 400 ನಿವಾಸಿಗಳು ಏಪ್ರಿಲ್‌ನಲ್ಲಿ ತೆರವು ನೋಟಿಸ್‌ಗಳ ವಿರುದ್ಧ ಗುವಾಹಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಜಿಲ್ಲಾಡಳಿತದ ಕ್ರಮವು ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಈ ಪ್ರಕರಣ ಇನ್ನೂ ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್, ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಆಸ್ತಿಗಳನ್ನು ಶಿಕ್ಷಾರ್ಹ ಕ್ರಮವಾಗಿ ಕೆಡವುವ ಪದ್ಧತಿಯನ್ನು ಕಾನೂನುಬಾಹಿರ ಎಂದು ಹೇಳಿತ್ತು. ತೆರವು ಕಾರ್ಯಾಚರಣೆಗೂ ಮುನ್ನ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಹೇಳಿತ್ತು.

ಕಳೆದ 30 ದಿನಗಳಲ್ಲಿ ಅಸ್ಸಾಂನಲ್ಲಿ ನಡೆದ ನಾಲ್ಕನೇ ಪ್ರಮುಖ ತೆರವು ಕಾರ್ಯಾಚರಣೆ ಇದಾಗಿದೆ.

ಜೂನ್ 16 ರಂದು, ಗೋಲ್ಪಾರದಲ್ಲಿ ಅಧಿಕಾರಿಗಳು 690 ಕುಟುಂಬಗಳ ಮನೆಗಳನ್ನು ಕೆಡವಿದ್ದರು. ಅವರೆಲ್ಲವೂ ಬಂಗಾಳಿ ಮೂಲದ ಮುಸ್ಲಿಮರಿಗೆ ಸೇರಿದ್ದಾಗಿವೆ. ಹಸಿಲಾ ಬೀಲ್ ಎಂಬ ಜೌಗು ಪ್ರದೇಶದಲ್ಲಿ ಅತಿಕ್ರಮಣ ಮಾಡಲಾಗಿತ್ತು ಎಂದು ಹೇಳಲಾದ ಭೂಮಿಯಲ್ಲಿ ಅವರು ವಾಸಿಸುತ್ತಿದ್ದರು.

ಈ ಪ್ರದೇಶವನ್ನು ಜೌಗು ಪ್ರದೇಶವೆಂದು ಘೋಷಿಸುವ ಮೊದಲೇ ಅಲ್ಲಿ ವಾಸಿಸುತ್ತಿದ್ದೆವು ಎಂದು ಅನೇಕ ಕುಟುಂಬಗಳು ಹೇಳಿದ್ದಾಗಿ scroll.in ತಿಳಿಸಿದೆ.

ಜೂನ್ 30 ರಂದು ಅಸ್ಸಾಂನ ನಲ್ಬರಿ ಜಿಲ್ಲೆಯಲ್ಲಿ ಬರ್ಖೇತ್ರಿ ಕಂದಾಯ ವ್ಯಾಪ್ತಿಯ ಸುಮಾರು 150 ಎಕರೆ ಅತಿಕ್ರಮಣ ತೆರವು ಮಾಡಲಾಗಿತ್ತು. ಇಲ್ಲಿಯೂ ಬಂಗಾಳಿ ಮೂಲದ ಮುಸ್ಲಿಮರ ತೊಂಬತ್ತಮೂರು ಮನೆಗಳನ್ನು ಕೆಡವಲಾಗಿದೆ.

ಕಳೆದ ಗುರುವಾರ, ಅಪ್ಪರ್ ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯಲ್ಲಿ 220 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ನಾಲ್ಕು ಸ್ಥಳಗಳ 77 ಎಕರೆ ಭೂಮಿಯಲ್ಲಿ ಈ ಕುಟುಂಬಗಳು ವಾಸಿಸುತ್ತಿದ್ದವು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

2016ರಲ್ಲಿ ಅಸ್ಸಾಂನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, 2016 ಮತ್ತು ಆಗಸ್ಟ್ 2024ರ ನಡುವೆ 10,620ಕ್ಕೂ ಹೆಚ್ಚು ಕುಟುಂಬಗಳನ್ನು (ಅವುಗಳಲ್ಲಿ ಹೆಚ್ಚಿನವು ಮುಸ್ಲಿಮರು) ಸರ್ಕಾರಿ ಭೂಮಿಯಿಂದ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಒದಗಿಸಿದ ಅಂಕಿಅಂಶಗಳು ತಿಳಿಸಿವೆ.

‘ಲವ್ ಜಿಹಾದ್’ ಆರೋಪ: ಹರಿಯಾಣದಲ್ಲಿ ಮುಸ್ಲಿಂ ಕುಟುಂಬದ ಮನೆಗಳಿಗೆ ಬೆಂಕಿ – ಆಸ್ತಿಪಾಸ್ತಿ ನಷ್ಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...