Homeಮುಖಪುಟಅಸ್ಸಾಂ: ಕಳ್ಳತನ ಆರೋಪದಲ್ಲಿ ಬಂಧಿತ ಕಸ್ಟಡಿಯಲ್ಲಿ ಸಾವು; ಭುಗಿಲೆದ್ದ ಪ್ರತಿಭಟನೆ

ಅಸ್ಸಾಂ: ಕಳ್ಳತನ ಆರೋಪದಲ್ಲಿ ಬಂಧಿತ ಕಸ್ಟಡಿಯಲ್ಲಿ ಸಾವು; ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಅಸ್ಸಾಂನ ಲಕಿಂಪುರ್ ಜಿಲ್ಲೆಯಲ್ಲಿ ಮೊಬೈಲ್‌ ಪೋನ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ 42 ವರ್ಷದ ವ್ಯಕ್ತಿಯೊಬ್ಬರು ಪೊಲೀಸ್‌ ಕಸ್ಟಡಿಯಲ್ಲಿ ಮೃತಪಟ್ಟಿದ್ದು, ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟನೆಯನ್ನು ನಡೆಸಿದ್ದಾರೆ.

ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಗುಂಪಿನಲ್ಲಿದ್ದ ಅರ್ಸಬ್ ಅಲಿ ಬುಧವಾರ ತಡರಾತ್ರಿ ಹಠಾತ್ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಆ ಬಳಿಕ ಭುಗಿಲೆದ್ದ ಪ್ರತಿಭಟನೆಯಿಂದ ಖೇಲ್ಮತಿ ಔಟ್‌ಪೋಸ್ಟ್‌ನ ಉಸ್ತುವಾರಿ ವಹಿಸಿದ್ದ ಪೊಲೀಸ್ ಅಧಿಕಾರಿ ಮತ್ತು ಸಾವಿನ ಸಮಯದಲ್ಲಿ ಔಟ್‌ಪೋಸ್ಟ್‌ನಲ್ಲಿದ್ದ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಸ್ಸಾಂನ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಲಖಿಂಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್‌ಕೆ ದೇಕಾ ಈ ಕುರಿತು ಮಾಹಿತಿಯನ್ನು ನೀಡಿದ್ದು, ಪೊಲೀಸ್ ಠಾಣೆಯ ಒಳಗೆ ಬೆಂಚ್ ಮೇಲೆ ಕುಳಿತಿದ್ದ ಆರೋಪಿಯು ಹಠಾತ್ತನೆ ಕೆಳಗೆ ಬಿದ್ದಿದ್ದಾರೆ, ತಕ್ಷಣವೇ ಅವರನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ವೈದ್ಯರು ಅವರನ್ನು ಪರಿಶೀಲಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಘಟನೆಯ ಬಗ್ಗೆ ಮ್ಯಾಜಿಸ್ಟ್ರಿಯಲ್ ವಿಚಾರಣೆಗೆ ಆದೇಶಿಸಲಾಗಿದೆ ಮತ್ತು ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ವೈದ್ಯರ ಸಮಿತಿಯು ಮರಣೋತ್ತರ ಪರೀಕ್ಷೆಯನ್ನು ವೀಡಿಯೊಗ್ರಾಫ್ ಮಾಡಲಿದೆ ಎಂದು ದೇಕಾ ಹೇಳಿದ್ದಾರೆ.

ಅರ್ಸಬ್ ಅಲಿ ಅವರ ಕುಟುಂಬವು, ಅವರು ನಿರಪರಾಧಿ, ಅವರು ಮಾಡದ ಅಪರಾಧವನ್ನು ಒಪ್ಪಿಕೊಳ್ಳುವಂತೆ  ಚಿತ್ರಹಿಂಸೆ ನೀಡಿದ್ದರಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದೆ. ಇಂದು ಬೆಳಿಗ್ಗೆ ಪೊಲೀಸ್ ಔಟ್‌ಪೋಸ್ಟ್‌ಗೆ ಬಂದು ಕಸ್ಟಡಿ ಸಾವನ್ನು ಖಂಡಿಸಿ ಅಲಿ ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ವೇಳೆ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದ ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಜ್ಞಾನೇಂದ್ರ ಪ್ರತಾಪ್ ಸಿಂಗ್  ಅವರ ಕಚೇರಿಯು, ಘಟನೆಗೆ ಸಂಬಂಧಿಸಿ ಹೊರಠಾಣೆ ಉಸ್ತುವಾರಿ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿರುವುದಾಗಿ ಘೋಷಿಸಿದ್ದಾರೆ. ಹೆಚ್ಚುವರಿ ಎಸ್ಪಿ ಬಿಸ್ವನಾಥ್ ಅವರು ಈ ಕುರಿತು ಸ್ವತಂತ್ರ ತನಿಖೆಗೆ ಆದೇಶಿಸಿದ್ದಾರೆ. ಇದಲ್ಲದೆ ಗುರುವಾರ ಬೆಳಗ್ಗೆ ಔಟ್‌ಪೋಸ್ಟ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...