Homeಮುಖಪುಟಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

- Advertisement -
- Advertisement -

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ  ದಿಮಾ ಹಸಾವೊ ಜಿಲ್ಲೆಯ ಹಾಫ್ಲಾಂಗ್ ಕ್ಷೇತ್ರದ ಟಿಕೆಟ್ ಈ ಬಾರಿ ರೂಪಾಲಿ ಲಾಂಗ್ಥಾಸಾ ಅವರಿಗೆ ನೀಡಲಾಗಿದೆ.

ಕಾಂಗ್ರೆಸ್ ಹಾಫ್ಲಾಂಗ್ ಕ್ಷೇತ್ರದ ಟಿಕೆಟ್‌ ಅನ್ನು ನಂದಿತಾ ಅವರಿಗೆ ನೀಡಲಿದೆ ಎಂದು ವರದಿಯಾಗಿದೆ. ಈ ಮೊದಲು ಕಾಂಗ್ರೆಸ್ ಈ ಕ್ಷೇತ್ರಕ್ಕೆ ನಿರ್ಮಲ್ ಲಾಂಗ್ಥಾಸಾ ಅವರ ಹೆಸರನ್ನು ಘೋಷಿಸಿತ್ತು. ಈಗ ಅವರ ಬದಲಾಗಿ ಬಿಜೆಪಿಯಿಂದ ಬಂದಿರುವ ನಂದಿತಾ ಅವರಿಗೆ ಮಣೆ ಹಾಕಿದೆ.

ನಂದಿತಾ ಅವರು ಹಿಮಂತ ಬಿಸ್ವಾ ಶರ್ಮಾ ಅವರ ಸಂಪುಟದಲ್ಲಿ ಕ್ರೀಡೆ, ಯುವ ಕಲ್ಯಾಣ, ಗಣಿ ಮತ್ತು ಖನಿಜ ಇಲಾಖೆಗಳ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾರ್ಚ್ 22ರಂದು ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದಾಗಿ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಅಸ್ಸಾಂನ ಎಲ್ಲಾ 126 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9, 2026 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...