Homeಮುಖಪುಟಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ;...

ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

- Advertisement -
- Advertisement -

ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಗುರುವಾರ (ಫೆ.20) ಕಾಂಗ್ರೆಸ್ ಸಂಸದ ರಕೀಬುಲ್ ಹುಸೈನ್ ಮೇಲೆ ಅಪರಿಚಿತ ಜನರ ಗುಂಪೊಂದು ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ನಡೆಸಿದೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

ಧುಬ್ರಿ ಲೋಕಸಭಾ ಕ್ಷೇತ್ರದ ಸಂಸದರಾದ ಹುಸೈನ್ ಅವರು ದಾಳಿ ವೇಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳು (ಪಿಎಸ್‌ಒಗಳು) ಅವರನ್ನು ರಕ್ಷಿಸಿದ್ದಾರೆ.

ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಸಂಸದ ಹುಸೈನ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ  ನಾಗಾಂವ್ ಜಿಲ್ಲೆಯ ರೂಪಾಹಿಹತ್‌ನ ನಟುನ್ ಬಝಾರ್‌ನಲ್ಲಿ ದಾಳಿ ನಡೆದಿದೆ.

ಹಲ್ಲೆಯ ವೈರಲ್ ವಿಡಿಯೋದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ದುಷ್ಕರ್ಮಿಗಳ ಪೈಕಿ ಒಬ್ಬ ಸಂಸದ ಹುಸೈನ್ ಅವರಿಗೆ ಬ್ಯಾಟ್‌ನಿಂದ ಥಳಿಸಿ ಸ್ಥಳದಿಂದ ಪರಾರಿಯಾಗಿರುವುದು ಇದೆ. ದುಷ್ಕರ್ಮಿಗಳು ಹುಸೈನ್‌ ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳ ಮೇಲೂ ದಾಳಿ ಮಾಡಿದ್ದಾರೆ. ಈ ವೇಳೆ ಒಬ್ಬರು ಭದ್ರತಾ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.

ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಹೇಳಿದ್ದರೂ, ಭದ್ರತಾ ಲೋಪದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಸುಧಾರಣೆಯಾಗಿದೆ ಎಂದು ಮುಖ್ಯಮಂತ್ರಿ ವಿಧಾನಸಭೆಗೆ ವಿವರಿಸುತ್ತಾರೆ. ಆದರೆ, ಒಬ್ಬ ಸಂಸದ ಬೀದಿಯಲ್ಲಿ ಸುರಕ್ಷಿತವಾಗಿಲ್ಲ. ಒಬ್ಬ ಸಂಸದನ ಮೇಲೆ ಈ ರೀತಿ ದಾಳಿ ನಡೆಯಲು ಕಾರಣ ಏನು ಎಂಬುದನ್ನು ತನಿಖೆ ಮಾಡಬೇಕಾಗಿದೆ” ಎಂದು ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷ ಹಾಗೂ ಕಾಂಗ್ರೆಸ್ ನಾಯಕ ದೇಬಬ್ರತ ಸೈಕಿಯಾ ಹೇಳಿದ್ದಾರೆ.

“ಸಂಸದ ಹುಸೈನ್ ಅವರು ಸುರಕ್ಷಿತವಾಗಿದ್ದಾರೆ. ಅವರ ಮೇಲೆ ಗುಂಪೊಂದು ದಾಳಿ ಮಾಡಿದೆ. ಅವರ ಭದ್ರತಾ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ. ಆದಾಗ್ಯೂ, ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ” ಎಂದು ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಹರ್ಮೀತ್ ಸಿಂಗ್ ತಿಳಿಸಿದ್ದಾರೆ.

ರಕೀಬುಲ್ ಹುಸೈನ್ ಅವರು ಕಳೆದ ವರ್ಷದ (2024) ಸಾರ್ವತ್ರಿಕ ಚುನಾವಣೆಯಲ್ಲಿ ಧುಬ್ರಿ ಲೋಕಸಭಾ ಕ್ಷೇತ್ರದಿಂದ ದಾಖಲೆಯ 10 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಹುಸೈನ್ ಅವರು ಈ ಹಿಂದೆ ಐದು ಬಾರಿ ಪ್ರತಿನಿಧಿಸಿದ್ದ ಸಮಗುರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಗೆ ಅವರ ಮಗ ಸ್ಪರ್ಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ದಿಪ್ಲು ರಂಜನ್ ಶರ್ಮಾ ವಿರುದ್ಧ ಸೋತಿದ್ದಾರೆ.

ಕಳೆದ ವರ್ಷದ ನವೆಂಬರ್‌ನಲ್ಲಿ ನಡೆದ ಉಪಚುನಾವಣೆಗೂ ಮುನ್ನ ಕ್ಷೇತ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಹಿಂಸಾಚಾರ ಘಟನೆಗಳು ನಡೆದಿತ್ತು.

ಸರ್ಕಾರಿ ಪ್ರಾಯೋಜಿತ ಕೃತ್ಯ  

ಸಂಸದನ ಮೇಲೆ ನಡೆದ ದಾಳಿಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಕೈ ನಾಯಕರು, “ಇದು ಪ್ರಜಾಪ್ರಭುತ್ವದ ಕೊಲೆ. ಜಂಗಲ್ ರಾಜ್ ಮತ್ತು ಗೂಂಡಾ ರಾಜ್ ಇಲ್ಲಿ ಮೇಲುಗೈ ಸಾಧಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರು ಇಂದು (ಫೆ.21) ಅಸ್ಸಾಂ ವಿಧಾನಸಭಾ ಸಂಕೀರ್ಣದಲ್ಲಿ ಬಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆದ್ದಾರೆ. ಅಪರಾಧಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಸಂಸದನ ಮೇಲೆ ದಾಳಿ ನಡೆಯುವ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಪೊಲೀಸರು ಸರಿಯಾದ ಭದ್ರತಾ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಆ ಪ್ರದೇಶದ (ದಾಳಿ ನಡೆದ ಜಾಗ) ಈ ಹಿಂದೆಯೂ ಇದೇ ರೀತಿಯ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಇದು ಪ್ರಜಾಪ್ರಭುತ್ವದ ಕೊಲೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸ್ಥೈರ್ಯ ಕುಗ್ಗಿಸುವ ಪ್ರಯತ್ನ” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಕಿಡಿಕಾರಿದ್ದಾರೆ.

ವಿಧಾನಸಭೆಯಲ್ಲಿ ಕೋಲಾಹಲ 

ಸಂಸದನ ಮೇಲೆ ನಡೆದ ದಾಳಿ ಇಂದು (ಫೆ.21) ಅಸ್ಸಾಂ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಈ ವಿಷಯವನ್ನು ಚರ್ಚಿಸಲು ಮಂಡಿಸಲಾದ ನಿಲುವಳಿ ಸೂಚನೆಗೆ ಅವಕಾಶ ನಿರಾಕರಿಸಿದ ಹಿನ್ನೆಲೆ ವಿರೋಧ ಪಕ್ಷ ಕಾಂಗ್ರೆಸ್‌ನ ಶಾಸಕರು ಗದ್ದಲದ ಉಂಟು ಮಾಡಿದರು. ಹಾಗಾಗಿ, ಸ್ಪೀಕರ್ ಬಿಸ್ವಜಿತ್ ಡೈಮರಿ ಮೊದಲ 30 ನಿಮಿಷಗಳಲ್ಲಿ ಎರಡು ಬಾರಿ ಸದನವನ್ನು ಮುಂದೂಡಿದರು.

ದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...