Homeಮುಖಪುಟಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ;...

ಅಸ್ಸಾಂ | ಸಂಸದನಿಗೆ ಬ್ಯಾಟ್‌ನಿಂದ ಹಲ್ಲೆ : ಸರ್ಕಾರಿ ಯೋಜಿತ ಕೃತ್ಯ ಎಂದ ಕಾಂಗ್ರೆಸ್ ; ವಿಧಾನಸಭೆಯಲ್ಲಿ ಕೋಲಾಹಲ

- Advertisement -
- Advertisement -

ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಗುರುವಾರ (ಫೆ.20) ಕಾಂಗ್ರೆಸ್ ಸಂಸದ ರಕೀಬುಲ್ ಹುಸೈನ್ ಮೇಲೆ ಅಪರಿಚಿತ ಜನರ ಗುಂಪೊಂದು ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ನಡೆಸಿದೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

ಧುಬ್ರಿ ಲೋಕಸಭಾ ಕ್ಷೇತ್ರದ ಸಂಸದರಾದ ಹುಸೈನ್ ಅವರು ದಾಳಿ ವೇಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳು (ಪಿಎಸ್‌ಒಗಳು) ಅವರನ್ನು ರಕ್ಷಿಸಿದ್ದಾರೆ.

ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲು ಸಂಸದ ಹುಸೈನ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ  ನಾಗಾಂವ್ ಜಿಲ್ಲೆಯ ರೂಪಾಹಿಹತ್‌ನ ನಟುನ್ ಬಝಾರ್‌ನಲ್ಲಿ ದಾಳಿ ನಡೆದಿದೆ.

ಹಲ್ಲೆಯ ವೈರಲ್ ವಿಡಿಯೋದಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ದುಷ್ಕರ್ಮಿಗಳ ಪೈಕಿ ಒಬ್ಬ ಸಂಸದ ಹುಸೈನ್ ಅವರಿಗೆ ಬ್ಯಾಟ್‌ನಿಂದ ಥಳಿಸಿ ಸ್ಥಳದಿಂದ ಪರಾರಿಯಾಗಿರುವುದು ಇದೆ. ದುಷ್ಕರ್ಮಿಗಳು ಹುಸೈನ್‌ ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳ ಮೇಲೂ ದಾಳಿ ಮಾಡಿದ್ದಾರೆ. ಈ ವೇಳೆ ಒಬ್ಬರು ಭದ್ರತಾ ಅಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.

ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಹೇಳಿದ್ದರೂ, ಭದ್ರತಾ ಲೋಪದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

“ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಸುಧಾರಣೆಯಾಗಿದೆ ಎಂದು ಮುಖ್ಯಮಂತ್ರಿ ವಿಧಾನಸಭೆಗೆ ವಿವರಿಸುತ್ತಾರೆ. ಆದರೆ, ಒಬ್ಬ ಸಂಸದ ಬೀದಿಯಲ್ಲಿ ಸುರಕ್ಷಿತವಾಗಿಲ್ಲ. ಒಬ್ಬ ಸಂಸದನ ಮೇಲೆ ಈ ರೀತಿ ದಾಳಿ ನಡೆಯಲು ಕಾರಣ ಏನು ಎಂಬುದನ್ನು ತನಿಖೆ ಮಾಡಬೇಕಾಗಿದೆ” ಎಂದು ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷ ಹಾಗೂ ಕಾಂಗ್ರೆಸ್ ನಾಯಕ ದೇಬಬ್ರತ ಸೈಕಿಯಾ ಹೇಳಿದ್ದಾರೆ.

“ಸಂಸದ ಹುಸೈನ್ ಅವರು ಸುರಕ್ಷಿತವಾಗಿದ್ದಾರೆ. ಅವರ ಮೇಲೆ ಗುಂಪೊಂದು ದಾಳಿ ಮಾಡಿದೆ. ಅವರ ಭದ್ರತಾ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ. ಆದಾಗ್ಯೂ, ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ” ಎಂದು ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಹರ್ಮೀತ್ ಸಿಂಗ್ ತಿಳಿಸಿದ್ದಾರೆ.

ರಕೀಬುಲ್ ಹುಸೈನ್ ಅವರು ಕಳೆದ ವರ್ಷದ (2024) ಸಾರ್ವತ್ರಿಕ ಚುನಾವಣೆಯಲ್ಲಿ ಧುಬ್ರಿ ಲೋಕಸಭಾ ಕ್ಷೇತ್ರದಿಂದ ದಾಖಲೆಯ 10 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಹುಸೈನ್ ಅವರು ಈ ಹಿಂದೆ ಐದು ಬಾರಿ ಪ್ರತಿನಿಧಿಸಿದ್ದ ಸಮಗುರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಗೆ ಅವರ ಮಗ ಸ್ಪರ್ಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ದಿಪ್ಲು ರಂಜನ್ ಶರ್ಮಾ ವಿರುದ್ಧ ಸೋತಿದ್ದಾರೆ.

ಕಳೆದ ವರ್ಷದ ನವೆಂಬರ್‌ನಲ್ಲಿ ನಡೆದ ಉಪಚುನಾವಣೆಗೂ ಮುನ್ನ ಕ್ಷೇತ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಹಿಂಸಾಚಾರ ಘಟನೆಗಳು ನಡೆದಿತ್ತು.

ಸರ್ಕಾರಿ ಪ್ರಾಯೋಜಿತ ಕೃತ್ಯ  

ಸಂಸದನ ಮೇಲೆ ನಡೆದ ದಾಳಿಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಕೈ ನಾಯಕರು, “ಇದು ಪ್ರಜಾಪ್ರಭುತ್ವದ ಕೊಲೆ. ಜಂಗಲ್ ರಾಜ್ ಮತ್ತು ಗೂಂಡಾ ರಾಜ್ ಇಲ್ಲಿ ಮೇಲುಗೈ ಸಾಧಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರು ಇಂದು (ಫೆ.21) ಅಸ್ಸಾಂ ವಿಧಾನಸಭಾ ಸಂಕೀರ್ಣದಲ್ಲಿ ಬಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆದ್ದಾರೆ. ಅಪರಾಧಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಸಂಸದನ ಮೇಲೆ ದಾಳಿ ನಡೆಯುವ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಪೊಲೀಸರು ಸರಿಯಾದ ಭದ್ರತಾ ವ್ಯವಸ್ಥೆಗಳನ್ನು ಮಾಡಿರಲಿಲ್ಲ. ಆ ಪ್ರದೇಶದ (ದಾಳಿ ನಡೆದ ಜಾಗ) ಈ ಹಿಂದೆಯೂ ಇದೇ ರೀತಿಯ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಇದು ಪ್ರಜಾಪ್ರಭುತ್ವದ ಕೊಲೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸ್ಥೈರ್ಯ ಕುಗ್ಗಿಸುವ ಪ್ರಯತ್ನ” ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಕಿಡಿಕಾರಿದ್ದಾರೆ.

ವಿಧಾನಸಭೆಯಲ್ಲಿ ಕೋಲಾಹಲ 

ಸಂಸದನ ಮೇಲೆ ನಡೆದ ದಾಳಿ ಇಂದು (ಫೆ.21) ಅಸ್ಸಾಂ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಈ ವಿಷಯವನ್ನು ಚರ್ಚಿಸಲು ಮಂಡಿಸಲಾದ ನಿಲುವಳಿ ಸೂಚನೆಗೆ ಅವಕಾಶ ನಿರಾಕರಿಸಿದ ಹಿನ್ನೆಲೆ ವಿರೋಧ ಪಕ್ಷ ಕಾಂಗ್ರೆಸ್‌ನ ಶಾಸಕರು ಗದ್ದಲದ ಉಂಟು ಮಾಡಿದರು. ಹಾಗಾಗಿ, ಸ್ಪೀಕರ್ ಬಿಸ್ವಜಿತ್ ಡೈಮರಿ ಮೊದಲ 30 ನಿಮಿಷಗಳಲ್ಲಿ ಎರಡು ಬಾರಿ ಸದನವನ್ನು ಮುಂದೂಡಿದರು.

ದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...